Homeರಾಷ್ಟ್ರೀಯಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

ಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಾಲ್ಯದ ಸಮಯದಲ್ಲಿ ‘ಭಾರಿ ಧೈರ್ಯವಂತರಾಗಿದ್ದರು’ ಎಂದು ನಿರೂಪಿಸಲು ತಮಿಳುನಾಡಿನ ಖಾಸಗಿ ಶಾಲೆಯೊಂದು ಅವರ ‘ಮೊಸಳೆ ಕತೆ’ಯನ್ನು ತನ್ನ ಪಠ್ಯಪುಸ್ತಕದಲ್ಲಿ ಸೇರಿಸಿಕೊಂಡಿದೆ ಎಂದು ‘ಈಟಿವಿ ಭಾರತ್‌’ ವರದಿ ಮಾಡಿದೆ. ಪ್ರಧಾನಿಯ ‘ಮೊಸಳೆ ಕತೆ’ಯು 1ನೇ ತರಗತಿಯ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆದಿದ್ದು, ಅದರ ಚಿತ್ರವೂ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

2019 ರಲ್ಲಿ ಡಿಸ್ಕವರಿ ಚಾನೆಲ್‌ನ ಜನಪ್ರಿಯ ಕಾರ್ಯಕ್ರಮ ‘ಮ್ಯಾನ್ ವರ್ಸಸ್ ವೈಲ್ಡ್’ ನಲ್ಲಿ ಪ್ರಧಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಕಾರ್ಯಕ್ರಮ ನಡೆಸಿಕೊಡುವ ಬೇರ್‌ ಗ್ರಿಲ್ಸ್‌ ಜೊತೆಗೆ ಮಾತನಾಡುತ್ತಾ, ತಾನು ಚಿಕ್ಕ ಹುಡುಗನಾಗಿದ್ದಾಗ ಮೊಸಳೆ ಮರಿಯೊಂದನ್ನು ಮನೆಗೆ ತಂದಿದ್ದಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಳದಲ್ಲಿ ಸ್ನಾನ ಮಾಡುತ್ತಿದ್ದಾಗ ಮೊಸಳೆ ಮರಿಯೊಂದನ್ನು ನೋಡಿ ಅದನ್ನು ಮನೆಗೆ ತಂದಿದ್ದೆ. ಆದರೆ ತಾಯಿ, “ಪಾಪ, ಅದನ್ನು ಮತ್ತೆ ಕೆರೆಗೆ ಹಾಕಬೇಕು” ಎಂದು ತನಗೆ ಬೈದಿದ್ದರು ಎಂದು ಪ್ರಧಾನಿ ಮೋದಿ ಅವರು ಬೇರ್‌‌ ಗ್ರಿಲ್ಸ್‌ಗೆ ಹೇಳಿದ್ದರು.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪ್ರಧಾನಿ ಮೋದಿ ಅವರು ಹೇಳಿರುವ ಈ ಘಟನೆಯನ್ನು ತಮಿಳುನಾಡಿನ ಶಾಲೆಯು ಪಠ್ಯವನ್ನಾಗಿಸಿದೆ. ‘ಬಾರ್‍ರಿ ಓಬ್ರಿಯನ್’ ಮತ್ತು ‘ಫೈರ್‌ಫ್ಲೈ ಪ್ರಕಾಶನ’ಗಳ ‘ಮೌಲ್ಯ ಶಿಕ್ಷಣ’ದ 1 ನೇ ತರಗತಿಯ ಪುಸ್ತಕವು ಮೊಸಳೆಯ ಕತೆಯ ಭಾಗವನ್ನು ಅಳವಡಿಸಿ, ಪ್ರಧಾನಿ ಮೋದಿ ತನ್ನ ಬಾಲ್ಯದಲ್ಲಿ ಭಾರಿ ‘ಧೈರ್ಯ’ವಂತಾಗಿದ್ದರು ಎಂಬ ಬಗ್ಗೆ ಹೇಳಿದೆ.

ಶಾಲೆಯ ಪಠ್ಯಪುಸ್ತಕದಲ್ಲಿ,“ನರೇಂದ್ರ ದಾಮೋದರದಾಸ್ ಮೋದಿ ಅವರು ಭಾರತದ 14 ನೇ ಮತ್ತು ಈಗಿನ ಪ್ರಧಾನಿಯಾಗಿದ್ದಾರೆ. ಅವರು ತಮ್ಮ ಬಾಲ್ಯದಲ್ಲಿ ಎಷ್ಟು ಧೈರ್ಯಶಾಲಿಯಾಗಿದ್ದರು ಎಂದರೆ, ಒಮ್ಮೆ ಅವರು ಮೊಸಳೆಯನ್ನು ಹಿಡಿದು ಮನೆಗೆ ತಂದರು” ಎಂದು ಘಟನೆಯನ್ನು ಉಲ್ಲೇಖಿಸಿ ಬರೆಯಲಾಗಿದೆ. ಇಷ್ಟೆ ಅಲ್ಲದೆ, ಪುಸ್ತಕವು ‘ಮಾನಿಟರ್’ ಪದದ ಬಳಕೆಯನ್ನು ಕಲಿಸುತ್ತಾ, “ಪ್ರಧಾನಿ ಇಡೀ ದೇಶದ ‘ಮಾನಿಟರ್‌’ ಇದ್ದಂತೆ” ಎಂದು ಬರೆಯಲಾಗಿದೆ.

ಪ್ರಧಾನಿ ಮೋದಿಯ ಬಾಲ್ಯದ ಘಟನೆಗಳ ಕತೆಗಳನ್ನು ಹೇಳುವ ಹಲವು ಪುಸ್ತಕಗಳು ಈಗಾಗಲೇ ಪ್ರಕಟಗೊಂಡಿದೆ. ರಾನಡೆ ಪ್ರಕಾಶನ ಮತ್ತು ಬ್ಲೂ ಸ್ನೇಲ್ ಅನಿಮೇಷನ್‌ನ ‘ಬಾಲ್ ನರೇಂದ್ರ – ಚೈಲ್ಡ್‌ಹುಡ್ ಸ್ಟೋರೀಸ್ ಆಫ್ ನರೇಂದ್ರ ಮೋದಿ’ ಎಂಬ ಕಾಮಿಕ್ ಪುಸ್ತಕವು ಪ್ರಧಾನಿ ಮೋದಿ ಭಾರಿ ‘ಧೈರ್ಯವಂತ’ ಆಗಿದ್ದರು ಎಂಬುವುದನ್ನು ವಿವರಿಸುವ ಹಲವು ಕಥೆಗಳನ್ನು ಹೇಳುತ್ತದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

ಇದೇ ಸರಣಿಯ ಒಂದು ಕಥೆಯು, “ಗುಜರಾತ್‌ನ ಮೊಸಳೆಗಳಿಂದ ತುಂಬಿರುವ ಸರೋವರದಲ್ಲಿ ಈಜುತ್ತಿದ್ದಾಗ ಮೊಸಳೆಯೊಂದು ಮೋದಿಯ ಮೇಲೆ ದಾಳಿ ಮಾಡಿತು. ಆಗ ಅವರು 8 ನೇ ತರಗತಿಯಲ್ಲಿದ್ದರು. ಈ ದಾಳಿಯಿಂದಾಗಿ ಅವರ ಕಾಲಿಗೆ ಒಂಬತ್ತು ಹೊಲಿಗೆಗಳನ್ನು ಹಾಕಲಾಗಿತ್ತು” ಎಂದು ಉಲ್ಲೇಖಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 😂😂😂😂😂😂😂😂😂😂😂 ನನಗೆ ಯಾರಾದ್ರೂ ದಯವಿಟ್ಟು ಹೇಳುವಿರಾ ದೇಶದ ಯಾವ ಕೆರೆಯಲ್ಲಿ ಮೊಸಳೆಗಳು ಇರುತ್ತವೆ ಅಥವಾ ಇದ್ದವು ಅಂತ 🤦‍♂️🤦‍♂️🤦‍♂️ ಕರ್ಮ ಕರ್ಮ. ಇತ್ತೀಚಿನ ದಿನಗಳಲ್ಲಿ ಹಳ್ಳಿಯ ಕೆರೆಗಳಲ್ಲಿ ಮೀನು ಸಾಕಾಣಿಕೆ ನೋಡತಿದೀವಿ,ಇದೆ 20.,30 ವರ್ಷದ ಹಿಂದಿನ ದಿನಗಳಲ್ಲಿ ಕೆರೆಗಳಲ್ಲಿ ಬರಿ ದನಕರುಗಳಿಗೆ, ಮನುಷ್ಯನಿಗೆ ಸ್ನಾನ, ಬಟ್ಟೆ ತೊಳಿಯೋಕೆ ಅಷ್ಟೇ ಸೀಮಿತ ಕೆಲವು ಕಡೆ ಕುಡಿಯೋಕು ಉಪಯೋಗಿಸುತ್ತಿದ್ದು ಉದಾಹರಣೆ ಇದೆ… ಆದ್ರೆ ಇಲ್ಲಿ ಕೆರೆಯಲ್ಲಿ ಮೊಸಳೆ ಇತ್ತು ಅಂದ್ರೆ ಈ ಅಪ್ರತಿಮ ಎದೆಗಾರಿಕೆ ಮೆಚ್ಚುಲೇಬೇಕು ಅಲ್ವಾ ಸುಳ್ಳು (ಅ)ಸೂರರೇ 🤣🤣🤣🤣ದಯವಿಟ್ಟು ಕ್ಷಮಿಸಿ ನಂಗೆ ಬೇರೆ ಜಾಗದಿಂದ ನಗಬೇಕು ಅನಸ್ತಿದೆ 🙏🙏🙏

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...