Homeರಾಷ್ಟ್ರೀಯಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

ಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಾಲ್ಯದ ಸಮಯದಲ್ಲಿ ‘ಭಾರಿ ಧೈರ್ಯವಂತರಾಗಿದ್ದರು’ ಎಂದು ನಿರೂಪಿಸಲು ತಮಿಳುನಾಡಿನ ಖಾಸಗಿ ಶಾಲೆಯೊಂದು ಅವರ ‘ಮೊಸಳೆ ಕತೆ’ಯನ್ನು ತನ್ನ ಪಠ್ಯಪುಸ್ತಕದಲ್ಲಿ ಸೇರಿಸಿಕೊಂಡಿದೆ ಎಂದು ‘ಈಟಿವಿ ಭಾರತ್‌’ ವರದಿ ಮಾಡಿದೆ. ಪ್ರಧಾನಿಯ ‘ಮೊಸಳೆ ಕತೆ’ಯು 1ನೇ ತರಗತಿಯ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆದಿದ್ದು, ಅದರ ಚಿತ್ರವೂ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

2019 ರಲ್ಲಿ ಡಿಸ್ಕವರಿ ಚಾನೆಲ್‌ನ ಜನಪ್ರಿಯ ಕಾರ್ಯಕ್ರಮ ‘ಮ್ಯಾನ್ ವರ್ಸಸ್ ವೈಲ್ಡ್’ ನಲ್ಲಿ ಪ್ರಧಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಕಾರ್ಯಕ್ರಮ ನಡೆಸಿಕೊಡುವ ಬೇರ್‌ ಗ್ರಿಲ್ಸ್‌ ಜೊತೆಗೆ ಮಾತನಾಡುತ್ತಾ, ತಾನು ಚಿಕ್ಕ ಹುಡುಗನಾಗಿದ್ದಾಗ ಮೊಸಳೆ ಮರಿಯೊಂದನ್ನು ಮನೆಗೆ ತಂದಿದ್ದಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಳದಲ್ಲಿ ಸ್ನಾನ ಮಾಡುತ್ತಿದ್ದಾಗ ಮೊಸಳೆ ಮರಿಯೊಂದನ್ನು ನೋಡಿ ಅದನ್ನು ಮನೆಗೆ ತಂದಿದ್ದೆ. ಆದರೆ ತಾಯಿ, “ಪಾಪ, ಅದನ್ನು ಮತ್ತೆ ಕೆರೆಗೆ ಹಾಕಬೇಕು” ಎಂದು ತನಗೆ ಬೈದಿದ್ದರು ಎಂದು ಪ್ರಧಾನಿ ಮೋದಿ ಅವರು ಬೇರ್‌‌ ಗ್ರಿಲ್ಸ್‌ಗೆ ಹೇಳಿದ್ದರು.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪ್ರಧಾನಿ ಮೋದಿ ಅವರು ಹೇಳಿರುವ ಈ ಘಟನೆಯನ್ನು ತಮಿಳುನಾಡಿನ ಶಾಲೆಯು ಪಠ್ಯವನ್ನಾಗಿಸಿದೆ. ‘ಬಾರ್‍ರಿ ಓಬ್ರಿಯನ್’ ಮತ್ತು ‘ಫೈರ್‌ಫ್ಲೈ ಪ್ರಕಾಶನ’ಗಳ ‘ಮೌಲ್ಯ ಶಿಕ್ಷಣ’ದ 1 ನೇ ತರಗತಿಯ ಪುಸ್ತಕವು ಮೊಸಳೆಯ ಕತೆಯ ಭಾಗವನ್ನು ಅಳವಡಿಸಿ, ಪ್ರಧಾನಿ ಮೋದಿ ತನ್ನ ಬಾಲ್ಯದಲ್ಲಿ ಭಾರಿ ‘ಧೈರ್ಯ’ವಂತಾಗಿದ್ದರು ಎಂಬ ಬಗ್ಗೆ ಹೇಳಿದೆ.

ಶಾಲೆಯ ಪಠ್ಯಪುಸ್ತಕದಲ್ಲಿ,“ನರೇಂದ್ರ ದಾಮೋದರದಾಸ್ ಮೋದಿ ಅವರು ಭಾರತದ 14 ನೇ ಮತ್ತು ಈಗಿನ ಪ್ರಧಾನಿಯಾಗಿದ್ದಾರೆ. ಅವರು ತಮ್ಮ ಬಾಲ್ಯದಲ್ಲಿ ಎಷ್ಟು ಧೈರ್ಯಶಾಲಿಯಾಗಿದ್ದರು ಎಂದರೆ, ಒಮ್ಮೆ ಅವರು ಮೊಸಳೆಯನ್ನು ಹಿಡಿದು ಮನೆಗೆ ತಂದರು” ಎಂದು ಘಟನೆಯನ್ನು ಉಲ್ಲೇಖಿಸಿ ಬರೆಯಲಾಗಿದೆ. ಇಷ್ಟೆ ಅಲ್ಲದೆ, ಪುಸ್ತಕವು ‘ಮಾನಿಟರ್’ ಪದದ ಬಳಕೆಯನ್ನು ಕಲಿಸುತ್ತಾ, “ಪ್ರಧಾನಿ ಇಡೀ ದೇಶದ ‘ಮಾನಿಟರ್‌’ ಇದ್ದಂತೆ” ಎಂದು ಬರೆಯಲಾಗಿದೆ.

ಪ್ರಧಾನಿ ಮೋದಿಯ ಬಾಲ್ಯದ ಘಟನೆಗಳ ಕತೆಗಳನ್ನು ಹೇಳುವ ಹಲವು ಪುಸ್ತಕಗಳು ಈಗಾಗಲೇ ಪ್ರಕಟಗೊಂಡಿದೆ. ರಾನಡೆ ಪ್ರಕಾಶನ ಮತ್ತು ಬ್ಲೂ ಸ್ನೇಲ್ ಅನಿಮೇಷನ್‌ನ ‘ಬಾಲ್ ನರೇಂದ್ರ – ಚೈಲ್ಡ್‌ಹುಡ್ ಸ್ಟೋರೀಸ್ ಆಫ್ ನರೇಂದ್ರ ಮೋದಿ’ ಎಂಬ ಕಾಮಿಕ್ ಪುಸ್ತಕವು ಪ್ರಧಾನಿ ಮೋದಿ ಭಾರಿ ‘ಧೈರ್ಯವಂತ’ ಆಗಿದ್ದರು ಎಂಬುವುದನ್ನು ವಿವರಿಸುವ ಹಲವು ಕಥೆಗಳನ್ನು ಹೇಳುತ್ತದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

ಇದೇ ಸರಣಿಯ ಒಂದು ಕಥೆಯು, “ಗುಜರಾತ್‌ನ ಮೊಸಳೆಗಳಿಂದ ತುಂಬಿರುವ ಸರೋವರದಲ್ಲಿ ಈಜುತ್ತಿದ್ದಾಗ ಮೊಸಳೆಯೊಂದು ಮೋದಿಯ ಮೇಲೆ ದಾಳಿ ಮಾಡಿತು. ಆಗ ಅವರು 8 ನೇ ತರಗತಿಯಲ್ಲಿದ್ದರು. ಈ ದಾಳಿಯಿಂದಾಗಿ ಅವರ ಕಾಲಿಗೆ ಒಂಬತ್ತು ಹೊಲಿಗೆಗಳನ್ನು ಹಾಕಲಾಗಿತ್ತು” ಎಂದು ಉಲ್ಲೇಖಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 😂😂😂😂😂😂😂😂😂😂😂 ನನಗೆ ಯಾರಾದ್ರೂ ದಯವಿಟ್ಟು ಹೇಳುವಿರಾ ದೇಶದ ಯಾವ ಕೆರೆಯಲ್ಲಿ ಮೊಸಳೆಗಳು ಇರುತ್ತವೆ ಅಥವಾ ಇದ್ದವು ಅಂತ 🤦‍♂️🤦‍♂️🤦‍♂️ ಕರ್ಮ ಕರ್ಮ. ಇತ್ತೀಚಿನ ದಿನಗಳಲ್ಲಿ ಹಳ್ಳಿಯ ಕೆರೆಗಳಲ್ಲಿ ಮೀನು ಸಾಕಾಣಿಕೆ ನೋಡತಿದೀವಿ,ಇದೆ 20.,30 ವರ್ಷದ ಹಿಂದಿನ ದಿನಗಳಲ್ಲಿ ಕೆರೆಗಳಲ್ಲಿ ಬರಿ ದನಕರುಗಳಿಗೆ, ಮನುಷ್ಯನಿಗೆ ಸ್ನಾನ, ಬಟ್ಟೆ ತೊಳಿಯೋಕೆ ಅಷ್ಟೇ ಸೀಮಿತ ಕೆಲವು ಕಡೆ ಕುಡಿಯೋಕು ಉಪಯೋಗಿಸುತ್ತಿದ್ದು ಉದಾಹರಣೆ ಇದೆ… ಆದ್ರೆ ಇಲ್ಲಿ ಕೆರೆಯಲ್ಲಿ ಮೊಸಳೆ ಇತ್ತು ಅಂದ್ರೆ ಈ ಅಪ್ರತಿಮ ಎದೆಗಾರಿಕೆ ಮೆಚ್ಚುಲೇಬೇಕು ಅಲ್ವಾ ಸುಳ್ಳು (ಅ)ಸೂರರೇ 🤣🤣🤣🤣ದಯವಿಟ್ಟು ಕ್ಷಮಿಸಿ ನಂಗೆ ಬೇರೆ ಜಾಗದಿಂದ ನಗಬೇಕು ಅನಸ್ತಿದೆ 🙏🙏🙏

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....