Homeರಾಷ್ಟ್ರೀಯಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

ಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಾಲ್ಯದ ಸಮಯದಲ್ಲಿ ‘ಭಾರಿ ಧೈರ್ಯವಂತರಾಗಿದ್ದರು’ ಎಂದು ನಿರೂಪಿಸಲು ತಮಿಳುನಾಡಿನ ಖಾಸಗಿ ಶಾಲೆಯೊಂದು ಅವರ ‘ಮೊಸಳೆ ಕತೆ’ಯನ್ನು ತನ್ನ ಪಠ್ಯಪುಸ್ತಕದಲ್ಲಿ ಸೇರಿಸಿಕೊಂಡಿದೆ ಎಂದು ‘ಈಟಿವಿ ಭಾರತ್‌’ ವರದಿ ಮಾಡಿದೆ. ಪ್ರಧಾನಿಯ ‘ಮೊಸಳೆ ಕತೆ’ಯು 1ನೇ ತರಗತಿಯ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆದಿದ್ದು, ಅದರ ಚಿತ್ರವೂ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

2019 ರಲ್ಲಿ ಡಿಸ್ಕವರಿ ಚಾನೆಲ್‌ನ ಜನಪ್ರಿಯ ಕಾರ್ಯಕ್ರಮ ‘ಮ್ಯಾನ್ ವರ್ಸಸ್ ವೈಲ್ಡ್’ ನಲ್ಲಿ ಪ್ರಧಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಕಾರ್ಯಕ್ರಮ ನಡೆಸಿಕೊಡುವ ಬೇರ್‌ ಗ್ರಿಲ್ಸ್‌ ಜೊತೆಗೆ ಮಾತನಾಡುತ್ತಾ, ತಾನು ಚಿಕ್ಕ ಹುಡುಗನಾಗಿದ್ದಾಗ ಮೊಸಳೆ ಮರಿಯೊಂದನ್ನು ಮನೆಗೆ ತಂದಿದ್ದಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಳದಲ್ಲಿ ಸ್ನಾನ ಮಾಡುತ್ತಿದ್ದಾಗ ಮೊಸಳೆ ಮರಿಯೊಂದನ್ನು ನೋಡಿ ಅದನ್ನು ಮನೆಗೆ ತಂದಿದ್ದೆ. ಆದರೆ ತಾಯಿ, “ಪಾಪ, ಅದನ್ನು ಮತ್ತೆ ಕೆರೆಗೆ ಹಾಕಬೇಕು” ಎಂದು ತನಗೆ ಬೈದಿದ್ದರು ಎಂದು ಪ್ರಧಾನಿ ಮೋದಿ ಅವರು ಬೇರ್‌‌ ಗ್ರಿಲ್ಸ್‌ಗೆ ಹೇಳಿದ್ದರು.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪ್ರಧಾನಿ ಮೋದಿ ಅವರು ಹೇಳಿರುವ ಈ ಘಟನೆಯನ್ನು ತಮಿಳುನಾಡಿನ ಶಾಲೆಯು ಪಠ್ಯವನ್ನಾಗಿಸಿದೆ. ‘ಬಾರ್‍ರಿ ಓಬ್ರಿಯನ್’ ಮತ್ತು ‘ಫೈರ್‌ಫ್ಲೈ ಪ್ರಕಾಶನ’ಗಳ ‘ಮೌಲ್ಯ ಶಿಕ್ಷಣ’ದ 1 ನೇ ತರಗತಿಯ ಪುಸ್ತಕವು ಮೊಸಳೆಯ ಕತೆಯ ಭಾಗವನ್ನು ಅಳವಡಿಸಿ, ಪ್ರಧಾನಿ ಮೋದಿ ತನ್ನ ಬಾಲ್ಯದಲ್ಲಿ ಭಾರಿ ‘ಧೈರ್ಯ’ವಂತಾಗಿದ್ದರು ಎಂಬ ಬಗ್ಗೆ ಹೇಳಿದೆ.

ಶಾಲೆಯ ಪಠ್ಯಪುಸ್ತಕದಲ್ಲಿ,“ನರೇಂದ್ರ ದಾಮೋದರದಾಸ್ ಮೋದಿ ಅವರು ಭಾರತದ 14 ನೇ ಮತ್ತು ಈಗಿನ ಪ್ರಧಾನಿಯಾಗಿದ್ದಾರೆ. ಅವರು ತಮ್ಮ ಬಾಲ್ಯದಲ್ಲಿ ಎಷ್ಟು ಧೈರ್ಯಶಾಲಿಯಾಗಿದ್ದರು ಎಂದರೆ, ಒಮ್ಮೆ ಅವರು ಮೊಸಳೆಯನ್ನು ಹಿಡಿದು ಮನೆಗೆ ತಂದರು” ಎಂದು ಘಟನೆಯನ್ನು ಉಲ್ಲೇಖಿಸಿ ಬರೆಯಲಾಗಿದೆ. ಇಷ್ಟೆ ಅಲ್ಲದೆ, ಪುಸ್ತಕವು ‘ಮಾನಿಟರ್’ ಪದದ ಬಳಕೆಯನ್ನು ಕಲಿಸುತ್ತಾ, “ಪ್ರಧಾನಿ ಇಡೀ ದೇಶದ ‘ಮಾನಿಟರ್‌’ ಇದ್ದಂತೆ” ಎಂದು ಬರೆಯಲಾಗಿದೆ.

ಪ್ರಧಾನಿ ಮೋದಿಯ ಬಾಲ್ಯದ ಘಟನೆಗಳ ಕತೆಗಳನ್ನು ಹೇಳುವ ಹಲವು ಪುಸ್ತಕಗಳು ಈಗಾಗಲೇ ಪ್ರಕಟಗೊಂಡಿದೆ. ರಾನಡೆ ಪ್ರಕಾಶನ ಮತ್ತು ಬ್ಲೂ ಸ್ನೇಲ್ ಅನಿಮೇಷನ್‌ನ ‘ಬಾಲ್ ನರೇಂದ್ರ – ಚೈಲ್ಡ್‌ಹುಡ್ ಸ್ಟೋರೀಸ್ ಆಫ್ ನರೇಂದ್ರ ಮೋದಿ’ ಎಂಬ ಕಾಮಿಕ್ ಪುಸ್ತಕವು ಪ್ರಧಾನಿ ಮೋದಿ ಭಾರಿ ‘ಧೈರ್ಯವಂತ’ ಆಗಿದ್ದರು ಎಂಬುವುದನ್ನು ವಿವರಿಸುವ ಹಲವು ಕಥೆಗಳನ್ನು ಹೇಳುತ್ತದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

ಇದೇ ಸರಣಿಯ ಒಂದು ಕಥೆಯು, “ಗುಜರಾತ್‌ನ ಮೊಸಳೆಗಳಿಂದ ತುಂಬಿರುವ ಸರೋವರದಲ್ಲಿ ಈಜುತ್ತಿದ್ದಾಗ ಮೊಸಳೆಯೊಂದು ಮೋದಿಯ ಮೇಲೆ ದಾಳಿ ಮಾಡಿತು. ಆಗ ಅವರು 8 ನೇ ತರಗತಿಯಲ್ಲಿದ್ದರು. ಈ ದಾಳಿಯಿಂದಾಗಿ ಅವರ ಕಾಲಿಗೆ ಒಂಬತ್ತು ಹೊಲಿಗೆಗಳನ್ನು ಹಾಕಲಾಗಿತ್ತು” ಎಂದು ಉಲ್ಲೇಖಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 😂😂😂😂😂😂😂😂😂😂😂 ನನಗೆ ಯಾರಾದ್ರೂ ದಯವಿಟ್ಟು ಹೇಳುವಿರಾ ದೇಶದ ಯಾವ ಕೆರೆಯಲ್ಲಿ ಮೊಸಳೆಗಳು ಇರುತ್ತವೆ ಅಥವಾ ಇದ್ದವು ಅಂತ 🤦‍♂️🤦‍♂️🤦‍♂️ ಕರ್ಮ ಕರ್ಮ. ಇತ್ತೀಚಿನ ದಿನಗಳಲ್ಲಿ ಹಳ್ಳಿಯ ಕೆರೆಗಳಲ್ಲಿ ಮೀನು ಸಾಕಾಣಿಕೆ ನೋಡತಿದೀವಿ,ಇದೆ 20.,30 ವರ್ಷದ ಹಿಂದಿನ ದಿನಗಳಲ್ಲಿ ಕೆರೆಗಳಲ್ಲಿ ಬರಿ ದನಕರುಗಳಿಗೆ, ಮನುಷ್ಯನಿಗೆ ಸ್ನಾನ, ಬಟ್ಟೆ ತೊಳಿಯೋಕೆ ಅಷ್ಟೇ ಸೀಮಿತ ಕೆಲವು ಕಡೆ ಕುಡಿಯೋಕು ಉಪಯೋಗಿಸುತ್ತಿದ್ದು ಉದಾಹರಣೆ ಇದೆ… ಆದ್ರೆ ಇಲ್ಲಿ ಕೆರೆಯಲ್ಲಿ ಮೊಸಳೆ ಇತ್ತು ಅಂದ್ರೆ ಈ ಅಪ್ರತಿಮ ಎದೆಗಾರಿಕೆ ಮೆಚ್ಚುಲೇಬೇಕು ಅಲ್ವಾ ಸುಳ್ಳು (ಅ)ಸೂರರೇ 🤣🤣🤣🤣ದಯವಿಟ್ಟು ಕ್ಷಮಿಸಿ ನಂಗೆ ಬೇರೆ ಜಾಗದಿಂದ ನಗಬೇಕು ಅನಸ್ತಿದೆ 🙏🙏🙏

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...