Homeರಾಷ್ಟ್ರೀಯಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

ಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಬಾಲ್ಯದ ಸಮಯದಲ್ಲಿ ‘ಭಾರಿ ಧೈರ್ಯವಂತರಾಗಿದ್ದರು’ ಎಂದು ನಿರೂಪಿಸಲು ತಮಿಳುನಾಡಿನ ಖಾಸಗಿ ಶಾಲೆಯೊಂದು ಅವರ ‘ಮೊಸಳೆ ಕತೆ’ಯನ್ನು ತನ್ನ ಪಠ್ಯಪುಸ್ತಕದಲ್ಲಿ ಸೇರಿಸಿಕೊಂಡಿದೆ ಎಂದು ‘ಈಟಿವಿ ಭಾರತ್‌’ ವರದಿ ಮಾಡಿದೆ. ಪ್ರಧಾನಿಯ ‘ಮೊಸಳೆ ಕತೆ’ಯು 1ನೇ ತರಗತಿಯ ಪಠ್ಯಪುಸ್ತಕದಲ್ಲಿ ಸ್ಥಾನ ಪಡೆದಿದ್ದು, ಅದರ ಚಿತ್ರವೂ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

2019 ರಲ್ಲಿ ಡಿಸ್ಕವರಿ ಚಾನೆಲ್‌ನ ಜನಪ್ರಿಯ ಕಾರ್ಯಕ್ರಮ ‘ಮ್ಯಾನ್ ವರ್ಸಸ್ ವೈಲ್ಡ್’ ನಲ್ಲಿ ಪ್ರಧಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಕಾರ್ಯಕ್ರಮ ನಡೆಸಿಕೊಡುವ ಬೇರ್‌ ಗ್ರಿಲ್ಸ್‌ ಜೊತೆಗೆ ಮಾತನಾಡುತ್ತಾ, ತಾನು ಚಿಕ್ಕ ಹುಡುಗನಾಗಿದ್ದಾಗ ಮೊಸಳೆ ಮರಿಯೊಂದನ್ನು ಮನೆಗೆ ತಂದಿದ್ದಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಳದಲ್ಲಿ ಸ್ನಾನ ಮಾಡುತ್ತಿದ್ದಾಗ ಮೊಸಳೆ ಮರಿಯೊಂದನ್ನು ನೋಡಿ ಅದನ್ನು ಮನೆಗೆ ತಂದಿದ್ದೆ. ಆದರೆ ತಾಯಿ, “ಪಾಪ, ಅದನ್ನು ಮತ್ತೆ ಕೆರೆಗೆ ಹಾಕಬೇಕು” ಎಂದು ತನಗೆ ಬೈದಿದ್ದರು ಎಂದು ಪ್ರಧಾನಿ ಮೋದಿ ಅವರು ಬೇರ್‌‌ ಗ್ರಿಲ್ಸ್‌ಗೆ ಹೇಳಿದ್ದರು.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಪ್ರಧಾನಿ ಮೋದಿ ಅವರು ಹೇಳಿರುವ ಈ ಘಟನೆಯನ್ನು ತಮಿಳುನಾಡಿನ ಶಾಲೆಯು ಪಠ್ಯವನ್ನಾಗಿಸಿದೆ. ‘ಬಾರ್‍ರಿ ಓಬ್ರಿಯನ್’ ಮತ್ತು ‘ಫೈರ್‌ಫ್ಲೈ ಪ್ರಕಾಶನ’ಗಳ ‘ಮೌಲ್ಯ ಶಿಕ್ಷಣ’ದ 1 ನೇ ತರಗತಿಯ ಪುಸ್ತಕವು ಮೊಸಳೆಯ ಕತೆಯ ಭಾಗವನ್ನು ಅಳವಡಿಸಿ, ಪ್ರಧಾನಿ ಮೋದಿ ತನ್ನ ಬಾಲ್ಯದಲ್ಲಿ ಭಾರಿ ‘ಧೈರ್ಯ’ವಂತಾಗಿದ್ದರು ಎಂಬ ಬಗ್ಗೆ ಹೇಳಿದೆ.

ಶಾಲೆಯ ಪಠ್ಯಪುಸ್ತಕದಲ್ಲಿ,“ನರೇಂದ್ರ ದಾಮೋದರದಾಸ್ ಮೋದಿ ಅವರು ಭಾರತದ 14 ನೇ ಮತ್ತು ಈಗಿನ ಪ್ರಧಾನಿಯಾಗಿದ್ದಾರೆ. ಅವರು ತಮ್ಮ ಬಾಲ್ಯದಲ್ಲಿ ಎಷ್ಟು ಧೈರ್ಯಶಾಲಿಯಾಗಿದ್ದರು ಎಂದರೆ, ಒಮ್ಮೆ ಅವರು ಮೊಸಳೆಯನ್ನು ಹಿಡಿದು ಮನೆಗೆ ತಂದರು” ಎಂದು ಘಟನೆಯನ್ನು ಉಲ್ಲೇಖಿಸಿ ಬರೆಯಲಾಗಿದೆ. ಇಷ್ಟೆ ಅಲ್ಲದೆ, ಪುಸ್ತಕವು ‘ಮಾನಿಟರ್’ ಪದದ ಬಳಕೆಯನ್ನು ಕಲಿಸುತ್ತಾ, “ಪ್ರಧಾನಿ ಇಡೀ ದೇಶದ ‘ಮಾನಿಟರ್‌’ ಇದ್ದಂತೆ” ಎಂದು ಬರೆಯಲಾಗಿದೆ.

ಪ್ರಧಾನಿ ಮೋದಿಯ ಬಾಲ್ಯದ ಘಟನೆಗಳ ಕತೆಗಳನ್ನು ಹೇಳುವ ಹಲವು ಪುಸ್ತಕಗಳು ಈಗಾಗಲೇ ಪ್ರಕಟಗೊಂಡಿದೆ. ರಾನಡೆ ಪ್ರಕಾಶನ ಮತ್ತು ಬ್ಲೂ ಸ್ನೇಲ್ ಅನಿಮೇಷನ್‌ನ ‘ಬಾಲ್ ನರೇಂದ್ರ – ಚೈಲ್ಡ್‌ಹುಡ್ ಸ್ಟೋರೀಸ್ ಆಫ್ ನರೇಂದ್ರ ಮೋದಿ’ ಎಂಬ ಕಾಮಿಕ್ ಪುಸ್ತಕವು ಪ್ರಧಾನಿ ಮೋದಿ ಭಾರಿ ‘ಧೈರ್ಯವಂತ’ ಆಗಿದ್ದರು ಎಂಬುವುದನ್ನು ವಿವರಿಸುವ ಹಲವು ಕಥೆಗಳನ್ನು ಹೇಳುತ್ತದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

ಇದೇ ಸರಣಿಯ ಒಂದು ಕಥೆಯು, “ಗುಜರಾತ್‌ನ ಮೊಸಳೆಗಳಿಂದ ತುಂಬಿರುವ ಸರೋವರದಲ್ಲಿ ಈಜುತ್ತಿದ್ದಾಗ ಮೊಸಳೆಯೊಂದು ಮೋದಿಯ ಮೇಲೆ ದಾಳಿ ಮಾಡಿತು. ಆಗ ಅವರು 8 ನೇ ತರಗತಿಯಲ್ಲಿದ್ದರು. ಈ ದಾಳಿಯಿಂದಾಗಿ ಅವರ ಕಾಲಿಗೆ ಒಂಬತ್ತು ಹೊಲಿಗೆಗಳನ್ನು ಹಾಕಲಾಗಿತ್ತು” ಎಂದು ಉಲ್ಲೇಖಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 😂😂😂😂😂😂😂😂😂😂😂 ನನಗೆ ಯಾರಾದ್ರೂ ದಯವಿಟ್ಟು ಹೇಳುವಿರಾ ದೇಶದ ಯಾವ ಕೆರೆಯಲ್ಲಿ ಮೊಸಳೆಗಳು ಇರುತ್ತವೆ ಅಥವಾ ಇದ್ದವು ಅಂತ 🤦‍♂️🤦‍♂️🤦‍♂️ ಕರ್ಮ ಕರ್ಮ. ಇತ್ತೀಚಿನ ದಿನಗಳಲ್ಲಿ ಹಳ್ಳಿಯ ಕೆರೆಗಳಲ್ಲಿ ಮೀನು ಸಾಕಾಣಿಕೆ ನೋಡತಿದೀವಿ,ಇದೆ 20.,30 ವರ್ಷದ ಹಿಂದಿನ ದಿನಗಳಲ್ಲಿ ಕೆರೆಗಳಲ್ಲಿ ಬರಿ ದನಕರುಗಳಿಗೆ, ಮನುಷ್ಯನಿಗೆ ಸ್ನಾನ, ಬಟ್ಟೆ ತೊಳಿಯೋಕೆ ಅಷ್ಟೇ ಸೀಮಿತ ಕೆಲವು ಕಡೆ ಕುಡಿಯೋಕು ಉಪಯೋಗಿಸುತ್ತಿದ್ದು ಉದಾಹರಣೆ ಇದೆ… ಆದ್ರೆ ಇಲ್ಲಿ ಕೆರೆಯಲ್ಲಿ ಮೊಸಳೆ ಇತ್ತು ಅಂದ್ರೆ ಈ ಅಪ್ರತಿಮ ಎದೆಗಾರಿಕೆ ಮೆಚ್ಚುಲೇಬೇಕು ಅಲ್ವಾ ಸುಳ್ಳು (ಅ)ಸೂರರೇ 🤣🤣🤣🤣ದಯವಿಟ್ಟು ಕ್ಷಮಿಸಿ ನಂಗೆ ಬೇರೆ ಜಾಗದಿಂದ ನಗಬೇಕು ಅನಸ್ತಿದೆ 🙏🙏🙏

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...