HomeಮುಖಪುಟIPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಮೋದಿ ಸಂವಾದ: ಮುಂದುವರಿದ ಡಿಸ್‌ಲೈಕ್ಸ್ ಸುರಿಮಳೆ

ಬಿಜೆಪಿ ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಇಂದಿನ ಮೋದಿಯವರ ಮಾತುಗಳನ್ನು ನೇರಪ್ರಸಾರ ಮಾಡಿದರೂ ಸಹ ಲೈಕ್ಸ್‌, ಡಿಸ್‌ಲೈಕ್ಸ್‌ ಗಳ ಸಂಖ್ಯೆ ಎಷ್ಟು ಎಂದು ತೋರಿಸದಂತೆ ತಡೆಹಿಡಿಯಲಾಗಿದೆ.

- Advertisement -
- Advertisement -

IPS‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಸಂವಾದ ನಡೆಸಿದ್ದಾರೆ. ಆದರೆ ನರೇಂದ್ರ ಮೋದಿಯವರ ಯೂಟ್ಯೂಬ್‌ನಲ್ಲಿನ ನೇರ ಪ್ರಸಾರದ ವಿಡಿಯೋಗೆ ಲೈಕ್‌ಗಳಿಗಿಂತ ಡಿಸ್‌ಲೈಕ್ಸ್‌ಗಳ ಸಂಖ್ಯೆ ಹೆಚ್ಚಾಗಿದ್ದು ಮತ್ತೊಮ್ಮೆ ಪ್ರಧಾನಿಗಳನ್ನು ಮುಜುಗರಕ್ಕೀಡುಮಾಡಿದೆ.

ಈ ವರದಿ ಬರೆಯುವ ವೇಳೆಗೆ 20,000 ಲೈಕ್ಸ್‌ ಇದ್ದರೆ 24,000 ಡಿಸ್‌ಲೈಕ್ಸ್‌ ದಾಖಲಾಗಿವೆ. ಮೊನ್ನೆ ಮನ್‌ ಕಿ ಬಾತ್ ಕಾರ್ಯಕ್ರಮಕ್ಕೆ ಹತ್ತು ಲಕ್ಷಕ್ಕೂ ಡಿಸ್‌ಲೈಕ್ಸ್‌ಗಳು ದಾಖಲಾಗಿ ದೊಡ್ಡ ಚರ್ಚೆ ಎಬ್ಬಿಸಿದ್ದವು.

ಡಿಸ್‌ಲೈಕ್ಸ್ ತೋರಿಸದಂತೆ ತಡೆದ ಬಿಜೆಪಿ

ಇನ್ನು ಬಿಜೆಪಿ ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಇಂದಿನ ಮೋದಿಯವರ ಮಾತುಗಳನ್ನು ನೇರಪ್ರಸಾರ ಮಾಡಿದರೂ ಸಹ ಲೈಕ್ಸ್‌, ಡಿಸ್‌ಲೈಕ್ಸ್‌ ಗಳ ಸಂಖ್ಯೆ ಎಷ್ಟು ಎಂದು ತೋರಿಸದಂತೆ ತಡೆಹಿಡಿಯಲಾಗಿದೆ. ಅಲ್ಲಿಯೂ ನಿಸ್ಸಂದೇಹವಾಗಿ ಡಿಸ್‌ಲೈಕ್‌ಗಳ ಸಂಖ್ಯೆ ಹೆಚ್ಚಾಗಿರಲಿದ್ದು ಅದನ್ನು ತೋರ್ಪಡಿಸಬಾರದೆಂದು ಅವುಗಳ ಸಂಖ್ಯೆ ಕಾಣದಂತೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಒತ್ತಡದಲ್ಲಿ ಕಾರ್ಯನಿರ್ವಹಿಸುವ ಐಪಿಎಸ್ ಅಧಿಕಾರಿಳ ಒತ್ತಡವನ್ನು ನಿವಾರಿಸಲು ಯೋಗ ಮತ್ತು ಪ್ರಾಣಾಯಾಮಗಳು ಉತ್ತಮ ಮಾರ್ಗಗಳಾಗಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಹೈದರಾಬಾದ್‌ನ ಸರ್ದಾರ್‌ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಶುಕ್ರವಾರ(ಸೆ.4) ಪ್ರಧಾನಿ ಮೋದಿ ವಿಡಿಯೊ ಸಂವಾದ ನಡೆಸಿದರು.

ತರಬೇತಿ ಮುಗಿಸಿದ ಯುವ ಐಪಿಎಸ್ ಅಧಿಕಾರಿಗಳೊಂದಿಗೆ ದೆಹಲಿಯಲ್ಲಿ ಪ್ರತಿ ವರ್ಷ ಸಂವಾದ ನಡೆಸುತ್ತಿದೆ. ಆದರೆ ಕೊರೊನಾದಿಂದಾಗಿ ಈ ಬಾರಿ ಸಾಧ್ಯವಾಗಿಲ್ಲ. ಖಂಡಿತ ಒಮ್ಮೆ ನಿಮ್ಮೆಲ್ಲರನ್ನೂ ಭೇಟಿಯಾಗುತ್ತೆ ಎಂದರು.

ಕೊರೋನಾ ಸಂಕಷ್ಟದ ಸಮಯದಲ್ಲಿ ಜನರು ಪೊಲೀಸರ ಮಾನವೀಯತೆಯನ್ನು ಕಂಡಿದ್ದಾರೆ. ಹೀಗೆ ಜಮ್ಮು-ಕಾಶ್ಮೀರದ ಯುವಕರು ಭಯೋತ್ಪಾದನೆಗೆ ತೆರಳದಂತೆ ಅಲ್ಲಿನ ತಾಯಂದಿರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಪ್ರಧಾನಿ ಸಲಹೆ ನೀಡಿದರು.

ಆದರೆ ಇತ್ತಿಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿಯವರ ಪ್ರಖ್ಯಾತಿ ಕಡಿಮೆಯಾಗುತ್ತಿರುವ ಬಗ್ಗೆ, ಡಿಸ್‌ಲೈಕ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವ ಬಗ್ಗೆ ದೊಡ್ಡ ಸುದ್ದಿಯಾಗಿತ್ತು. ಇಂದು ಕೂಡ ಡಿಸ್‌ಲೈಕ್‌ಗಳ ಸಮರ ಮುಂದುವರೆದಿದೆ. ಪ್ರಧಾನಿ ಮೋದಿಯವರ ಇಂದಿನ ವಿಡಿಯೋ ಕೂಡ 24 ಸಾವಿರ ಡಿಸ್‌ಲೈಕ್‌ಗಳನ್ನು ಪಡೆದಿದ್ದು, ಹೆಚ್ಚಾಗುತ್ತಲೇ ಇದೆ.


ಇದನ್ನೂ ಓದಿ:10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....