Homeಕರ್ನಾಟಕಪ್ರಧಾನಿ ಮೋದಿಯವರೇ ನೀವೊಬ್ಬರು ‘ಫ್ಯಾಸಿಸ್ಟ್‌‌’: ಕಾರ್ಮಿಕ ನಾಯಕಿ ಎಸ್‌. ವರಲಕ್ಷ್ಮಿ

ಪ್ರಧಾನಿ ಮೋದಿಯವರೇ ನೀವೊಬ್ಬರು ‘ಫ್ಯಾಸಿಸ್ಟ್‌‌’: ಕಾರ್ಮಿಕ ನಾಯಕಿ ಎಸ್‌. ವರಲಕ್ಷ್ಮಿ

- Advertisement -
- Advertisement -

‘ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮಿ ಅವರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದರು.

‘ಭಾರತ್‌ ಬಂದ್‌’ ಪ್ರಯುಕ್ತ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಅವರು, “ದೇಶಕ್ಕೆ ಅನ್ನ ನೀಡುವ ರೈತರು, ಸುಮಾರು ಒಂದು ವರ್ಷದಿಂದ ದೆಹಲಿಯ ಹೆದ್ದಾರಿಗಳಲ್ಲೇ ತಮ್ಮ ಮನೆಯನ್ನಾಗಿ ಮಾಡಿಕೊಂಡು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ನಡೆಸುತ್ತಿದ್ದಾರೆ. ಅದಕ್ಕಾಗಿ ದೇಶದ ಭಾಗಶಃ ಎಲ್ಲಾ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿದೆ” ಎಂದರು.

ಇದನ್ನೂ ಓದಿ: ಮುಖ್ಯಮಂತ್ರಿ ಬೊಮ್ಮಾಯಿ ‘ಕೇಶವ ಕೃಪಾ’ದ ಗುಲಾಮ: ಮಾವಳ್ಳಿ ಶಂಕರ್‌ ಆಕ್ರೋಶ

“ದೇಶದಲ್ಲಿ ನಡೆಯುತ್ತಿರುವ ಹೋರಾಟವು ದೇಶದ ಚರಿತ್ರೆಯಲ್ಲಿ ದಾಖಲು ಮಾಡಬೇಕಾದ ಹೋರಾಟವಾಗಿದೆ. ಇದು ರೈತನ ಸ್ವಾಭಿಮಾನ ಮತ್ತು ಸ್ವಾತಂತ್ಯ್ರವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟ. ಹಾಗಾಗಿಯೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವಂತಹ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ” ಎಂದು ಹೇಳಿದರು.

“ಸರ್ಕಾರ ಜಾರಿಗೆ ತಂದಿರುವ ನೀತಿಗಳನ್ನು ವಾಪಾಸು ಪಡೆಯುವ ತನಕವು, ನಮ್ಮ ಹೋರಾಟ ಮುಂದುವರೆಯಲಿದೆ. ಇದು ಯಾವುದೆ ಕಾರಣಕ್ಕೂ ನಿಲ್ಲಲ್ಲ ಎಂಬುವುದನ್ನು ನಾವು ಸಾರಿ ಸಾರಿ ಹೇಳುತ್ತಿದ್ದೇವೆ. ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಜನರ ಪ್ರವಾಗಿ ನಿಲ್ಲಬೇಕಿದ್ದ ಬಿಜೆಪಿ ಖಾಸಗಿ ಬಂಡವಾಳಶಾಹಿಗಳ, ಕಾರ್ಪೋರೇಟ್‌ಗಳ ಶಕ್ತಿಗಳ ಮತ್ತು ವಿದೇಶಿ ಬಂಡವಾಳಗಾರರ ಪರವಾಗಿ ನಿಲ್ಲುತ್ತಿದೆ” ಎಂದು ವರಲಕ್ಷ್ಮಿಅವರು ಕಿಡಿಕಾರಿದರು.

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿತ್ತು. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಇದನ್ನೂ ಓದಿ: ಮೋದಿ ಯುಎಸ್‌ ಭೇಟಿ – ‘ಮಾಧ್ಯಮಗಳು ಪ್ರಶ್ನೆ ಕೇಳಬಾರದೆಂದು ಮೊದಲೇ ತೀರ್ಮಾನವಾಗಿತ್ತು!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...