Homeರಾಷ್ಟ್ರೀಯತ್ರಿವರ್ಣ ಧ್ವಜದ ಕುರಿತು ಪ್ರಧಾನಿ ಮೋದಿ ಟ್ವೀಟ್; ‘ಬೂಟಾಟಿಕೆ ಜಿಂದಾಬಾದ್!’ ಎಂದ ಕಾಂಗ್ರೆಸ್

ತ್ರಿವರ್ಣ ಧ್ವಜದ ಕುರಿತು ಪ್ರಧಾನಿ ಮೋದಿ ಟ್ವೀಟ್; ‘ಬೂಟಾಟಿಕೆ ಜಿಂದಾಬಾದ್!’ ಎಂದ ಕಾಂಗ್ರೆಸ್

- Advertisement -
- Advertisement -

ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಮತ್ತು ತ್ರಿವರ್ಣ ಧ್ವಜದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬರೆದುಕೊಂಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ‘ಹಿಪಾಕ್ರಸಿ ಜಿಂದಾಬಾದ್(ಬೂಟಾಟಿಕೆಗೆ ಜಯವಾಗಲಿ)’ ಎಂದು ವ್ಯಂಗ್ಯವಾಡಿದೆ.

ಆಗಸ್ಟ್ 13-15 ರ ನಡುವೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಅಥವಾ ಪ್ರದರ್ಶಿಸಲು ಭಾರತದ ಜನರಿಗೆ ಪ್ರಧಾನಿ ಮನವಿ ಮಾಡಿದ್ದಾರೆ. ಜವಾಹರಲಾಲ್‌ ನೆಹರು ಅವರು ಹಾರಿಸಿದ ಮೊದಲ ತ್ರಿವರ್ಣ ಧ್ವಜದ ಚಿತ್ರ ಮತ್ತು ತ್ರಿವರ್ಣವನ್ನು ರಾಷ್ಟ್ರಧ್ವಜವಾಗಿ ಅಳವಡಿಸಿಕೊಳ್ಳಲು ಕಾರಣವಾದ ಅಧಿಕೃತ ಸಂವಹನಗಳ ವಿವರಗಳನ್ನು ಪ್ರಧಾನಿ ಮೋದಿ ಬರೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಇಂದು ಜುಲೈ 22 ಆಗಿದ್ದು, ನಮ್ಮ ಇತಿಹಾಸದಲ್ಲಿ ವಿಶೇಷ ಪ್ರಸ್ತುತತೆಯನ್ನು ಹೊಂದಿದೆ. 1947 ರ ಈ ದಿನ ನಮ್ಮ ರಾಷ್ಟ್ರಧ್ವಜವನ್ನು ಅಳವಡಿಸಲಾಯಿತು. ನಮ್ಮ ತ್ರಿವರ್ಣ ಧ್ವಜಕ್ಕೆ ಸಂಬಂಧಿಸಿದ ಸಮಿತಿಯ ವಿವರಗಳು ಮತ್ತು ಪಂಡಿತ್ ನೆಹರು ಅವರು ಹಾರಿಸಿದ ಮೊದಲ ತ್ರಿವರ್ಣ ಧ್ವಜ ಸೇರಿದಂತೆ ಇತಿಹಾಸದಿಂದ ಕೆಲವು ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದೇನೆ” ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ನಾವು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿರುವಾಗ ಸ್ವತಂತ್ರ ಭಾರತಕ್ಕಾಗಿ ಧ್ವಜದ ಕನಸು ಕಂಡವರೆಲ್ಲರ ಅನುಸ್ಮರಣೀಯ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ನಾವು ನೆನಪಿಸಿಕೊಳ್ಳುತ್ತೇವೆ. ಅವರ ಆಶಯಗಳನ್ನು ಈಡೇರಿಸಲು ಮತ್ತು ಅವರ ಕನಸುಗಳ ಭಾರತವನ್ನು ನಿರ್ಮಿಸಲು ನಾವು ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಕೆಲವೆ ದಿನಗಳಲ್ಲಿ ಕುಸಿದ 15,000 ಕೋಟಿ ವೆಚ್ಚದ ಎಕ್ಸ್‌ಪ್ರೆಸ್ ವೇ!

ಪ್ರಧಾನಿ ಮೋದಿ ಅವರ ಸರಣಿ ಟ್ವೀಟ್‌ಗಳಿಗೆ ಕಾಂಗ್ರೆಸ್‌ನ ಹಿರಿಯ ನಾಯಕ, ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಅವರು ಕಟುವಾದ ಪ್ರತಿಕ್ರಿಯೆಯನ್ನು ನೀಡಿದ್ದು, “ಬೂಟಾಟಿಕೆ ಜಿಂದಾಬಾದ್!” ಎಂದು ಹೇಳಿದ್ದಾರೆ.

“ನಾಗ್ಪುರದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು 52 ವರ್ಷಗಳನ್ನು ತೆಗೆದುಕೊಂಡ ಸಂಘಟನೆಯಲ್ಲಿ ಪ್ರಚಾರಕರಾಗಿದ್ದವರು, ನೆಹರೂ ಅವರು ‘ಭಾರತದ ಸ್ವಾತಂತ್ರ್ಯದ ಉಡುಗೆ’ ಎಂದು ಬಣ್ಣಿಸಿದ ಖಾದಿಯಿಂದ ರಾಷ್ಟ್ರಧ್ವಜವನ್ನು ತಯಾರಿಸಿದವರ ಜೀವನೋಪಾಯವನ್ನು ನಾಶಪಡಿಸುತ್ತಿದ್ದಾರೆ” ಎಂದು ಜೈರಾಮ್ ರಮೇಶ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಭಾರತದ ಧ್ವಜ ಸಂಹಿತೆ-2002 ಅನ್ನು ಡಿಸೆಂಬರ್ 2021 ರಲ್ಲಿ ತಿದ್ದುಪಡಿ ಮಾಡಲಾಗಿದ್ದು, ಪಾಲಿಯೆಸ್ಟರ್ ಮತ್ತು ಯಂತ್ರ ನಿರ್ಮಿತ ಧ್ವಜಗಳನ್ನು ತಯಾರಿಸಲು ಮತ್ತು ಆಮದು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬಿಜೆಪಿಗೆ ಸ್ವಾತಂತ್ರ್ಯ ಹೋರಾಟ ಮತ್ತು ಅದರ ಚಿಹ್ನೆಗಳ ಬಗ್ಗೆ ಯಾವುದೇ ತಿಳುವಳಿಕೆ ಇಲ್ಲ ಎಂದು ಆರೋಪಿಸಿ ಕಾಂಗ್ರೆಸ್ ತಿದ್ದುಪಡಿಯನ್ನು ಹಿಂಪಡೆಯಲು ಒತ್ತಾಯಿಸುತ್ತಿದೆ.

ಇದನ್ನೂ ಓದಿ: ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

“ಯಂತ್ರ ನಿರ್ಮಿತ ಮತ್ತು ಆಮದುದಿನ ಪಾಲಿಯೆಸ್ಟರ್ ಧ್ವಜಗಳ ಆಮದು ಮಾಡಿಕೊಳ್ಳಲು ಅನುಮತಿ ನೀಡುವ ಮೂಲಕ ಪ್ರಧಾನಿ ಮೋದಿ ಅವರು ‘ಖಾದಿ’ಯ ಮೂಲತತ್ವ ಮತ್ತು ಮಹಾತ್ಮ ಗಾಂಧಿಯವರ ಪರಂಪರೆಯ ಮೇಲೆ ದಾಳಿ ಮಾಡಿದ್ದಾರೆ” ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಈ ತಿಂಗಳ ಆರಂಭದಲ್ಲಿ ಮೋದಿ ವಿರುದ್ಧ ಕಿಡಿ ಕಾರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....