Homeಮುಖಪುಟಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ಇನ್ನು ರೋಜ್‌ಗಾರ್ ದೊ (ಉದ್ಯೋಗ ಕೊಡಿ) ಎಂಬ ಕಮೆಂಟ್‌ಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಅಧಿಕೃತ ಚಾನೆಲ್‌ನಲ್ಲಿ ಕಾಮೆಂಟ್‌ಗಳನ್ನು ಬ್ಲಾಕ್ ಮಾಡಲಾಗಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿದ್ದು, ವಿಡಿಯೋಗಳಿಗೆ ಡಿಸ್‌ಲೈಕ್‌ಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಈ ಬಾರಿಯ ಆಗಸ್ಟ್ 30ರ ಮನ್ ಕಿ ಬಾತ್‌ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿ ಹತ್ತುಲಕ್ಷಕ್ಕೂ ಡಿಸ್‌ಲೈಕ್ ಗಳಿಸಿ, ದಾಖಲೆ ಬರೆದಿತ್ತು. ಅಲ್ಲಿಂದಿಚೀಗೆ ಮೋದಿಯವರ ಯಾವ ವಿಡಿಯೋ ಸಹ ಬಿಡದ ಜಾಲತಾಣಿಗರು ಡಿಸ್‌ಲೈಕ್‌ ಸುರಿಮಳೆ ಮುಂದುವರೆಸಿದ್ದಾರೆ.

ಇಂದು ರಾಜಸ್ತಾನದ ಜೈಪುರದಲ್ಲಿ ನಡೆದ ಪತ್ರಿಕಾ ಗೇಟ್ ಉದ್ಘಾಟನಾ ಕಾರ್ಯಕ್ರಮದ ವಿಡಿಯೋ ಕೂಡ ಲೈಕ್‌ಗಳಿಗಿಂತ ಅತಿ ಹೆಚ್ಚು ಡಿಸ್‌ಲೈಕ್‌ಗಳನ್ನು ಪಡೆಯುತ್ತಾ ಸಾಗಿದೆ. ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ  ಯೂಟ್ಯೂಬ್ ಚಾನೆಲ್ ಮತ್ತು ಭಾರತೀಯ ಜನತಾ ಪಾರ್ಟಿಯ ಚಾನೆಲ್‌ಗಳಲ್ಲಿ ಈ ವಿಡಿಯೋಗೆ ಡಿಸ್‌ಲೈಕ್‌ಗಳು ಯಥೇಚ್ಚವಾಗಿ ಹರಿದುಬಂದಿವೆ.

ಇನ್ನು ರೋಜ್‌ಗಾರ್ ದೊ (ಉದ್ಯೋಗ ಕೊಡಿ) ಎಂಬ ಕಮೆಂಟ್‌ಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಅಧಿಕೃತ ಚಾನೆಲ್‌ನಲ್ಲಿ ಕಾಮೆಂಟ್‌ಗಳನ್ನು ಬ್ಲಾಕ್ ಮಾಡಲಾಗಿದೆ.

PC: Youtube

ಇದನ್ನೂ ಓದಿ: ಭಾರತೀಯರು ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಿದ್ದು ಏನನ್ನು? : ಆಗಸ್ಟ್‌ ತಿಂಗಳ ಮಾಹಿತಿ

ಭಾರತೀಯ ಜನತಾ ಪಾರ್ಟಿ ಚಾನೆಲ್‌ನಲ್ಲಿ ಮಾತ್ರ ಕಾಮೆಂಟ್ ಮಾಡಬಹುದಾಗಿದೆ. ಈ ಚಾನೆಲ್‌ನಲ್ಲಿ ಈ ಬರಹ ಬರೆಯುವ ಹೊತ್ತಿಗೆ ಲೈಕ್‌ಗಳ ಸಂಕ್ಯೆ 2.2ಸಾವಿರ ಇದ್ದರೆ  5.7 ಸಾವಿರ ಡಿಸ್‌ಲೈಕ್‌ಗಳಿವೆ. ಇಲ್ಲಿ ಕಾಮೆಂಟ್ ಮಾಡುತ್ತಿರುವವರೆಲ್ಲಾ ಉದ್ಯೋಗಕ್ಕಾಗಿ ಆಗ್ರಹಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಹೈದರಾಬಾದ್‌ನ ಸರ್ದಾರ್‌ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಿ ನಡೆಸಿದ್ದ ವಿಡಿಯೋ ಸಂವಾದಕ್ಕೂ ಡಿಸ್‌ಲೈಕ್‌ಗಳ ಸುರಿಮಳೆ ಸುರಿದಿತ್ತು. ಆ ವಿಡಿಯೋಗೆ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಚಾನೆಲ್‌ನನಲ್ಲಿ ಡಿಸ್‌ಲೈಕ್‌ಗಳು ಕಾಣಿಸದಂತೆ ಮಾಡಲಾಗಿತ್ತು.

ಯುವ ಸಮೂಹ ಉದ್ಯೋಗಕ್ಕಾಗಿ ಈ ರೀತಿಯಲ್ಲೂ ಪ್ರತಿಭಟನೆ ಶುರು ಮಾಡಿದ್ದಾರೆ. ಸ್ಟೂಡೆಂಟ್ಸ್ ಡಿಸ್‌ಲೈಕ್ ಮೋದಿ ಎಂಬ ಅಭಿಯಾನ ಶುರುಮಾಡಿದ್ದೇವೆ. ಸದ್ಯ ಅತಿ ಹೆಚ್ಚು ಡಿಸ್‌ಲೈಕ್‌ಗಳನ್ನು ಹೊಂದಿರುವ  ವಿಡಿಯೋಗಳು ಅಂದರೆ ಅವು ಪ್ರಧಾನಿಯವರದ್ದು. ಯುವಜನತೆ ಯೋಚಿಸುತ್ತಿದ್ದಾರೆ. ಹಾಗಾಗೀ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ಪ್ರತಿರೋಧ ಒಡ್ಡುತ್ತಿದ್ದಾರೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.


ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...