Homeಮುಖಪುಟಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ಇನ್ನು ರೋಜ್‌ಗಾರ್ ದೊ (ಉದ್ಯೋಗ ಕೊಡಿ) ಎಂಬ ಕಮೆಂಟ್‌ಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಅಧಿಕೃತ ಚಾನೆಲ್‌ನಲ್ಲಿ ಕಾಮೆಂಟ್‌ಗಳನ್ನು ಬ್ಲಾಕ್ ಮಾಡಲಾಗಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿದ್ದು, ವಿಡಿಯೋಗಳಿಗೆ ಡಿಸ್‌ಲೈಕ್‌ಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಈ ಬಾರಿಯ ಆಗಸ್ಟ್ 30ರ ಮನ್ ಕಿ ಬಾತ್‌ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿ ಹತ್ತುಲಕ್ಷಕ್ಕೂ ಡಿಸ್‌ಲೈಕ್ ಗಳಿಸಿ, ದಾಖಲೆ ಬರೆದಿತ್ತು. ಅಲ್ಲಿಂದಿಚೀಗೆ ಮೋದಿಯವರ ಯಾವ ವಿಡಿಯೋ ಸಹ ಬಿಡದ ಜಾಲತಾಣಿಗರು ಡಿಸ್‌ಲೈಕ್‌ ಸುರಿಮಳೆ ಮುಂದುವರೆಸಿದ್ದಾರೆ.

ಇಂದು ರಾಜಸ್ತಾನದ ಜೈಪುರದಲ್ಲಿ ನಡೆದ ಪತ್ರಿಕಾ ಗೇಟ್ ಉದ್ಘಾಟನಾ ಕಾರ್ಯಕ್ರಮದ ವಿಡಿಯೋ ಕೂಡ ಲೈಕ್‌ಗಳಿಗಿಂತ ಅತಿ ಹೆಚ್ಚು ಡಿಸ್‌ಲೈಕ್‌ಗಳನ್ನು ಪಡೆಯುತ್ತಾ ಸಾಗಿದೆ. ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ  ಯೂಟ್ಯೂಬ್ ಚಾನೆಲ್ ಮತ್ತು ಭಾರತೀಯ ಜನತಾ ಪಾರ್ಟಿಯ ಚಾನೆಲ್‌ಗಳಲ್ಲಿ ಈ ವಿಡಿಯೋಗೆ ಡಿಸ್‌ಲೈಕ್‌ಗಳು ಯಥೇಚ್ಚವಾಗಿ ಹರಿದುಬಂದಿವೆ.

ಇನ್ನು ರೋಜ್‌ಗಾರ್ ದೊ (ಉದ್ಯೋಗ ಕೊಡಿ) ಎಂಬ ಕಮೆಂಟ್‌ಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಅಧಿಕೃತ ಚಾನೆಲ್‌ನಲ್ಲಿ ಕಾಮೆಂಟ್‌ಗಳನ್ನು ಬ್ಲಾಕ್ ಮಾಡಲಾಗಿದೆ.

PC: Youtube

ಇದನ್ನೂ ಓದಿ: ಭಾರತೀಯರು ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಿದ್ದು ಏನನ್ನು? : ಆಗಸ್ಟ್‌ ತಿಂಗಳ ಮಾಹಿತಿ

ಭಾರತೀಯ ಜನತಾ ಪಾರ್ಟಿ ಚಾನೆಲ್‌ನಲ್ಲಿ ಮಾತ್ರ ಕಾಮೆಂಟ್ ಮಾಡಬಹುದಾಗಿದೆ. ಈ ಚಾನೆಲ್‌ನಲ್ಲಿ ಈ ಬರಹ ಬರೆಯುವ ಹೊತ್ತಿಗೆ ಲೈಕ್‌ಗಳ ಸಂಕ್ಯೆ 2.2ಸಾವಿರ ಇದ್ದರೆ  5.7 ಸಾವಿರ ಡಿಸ್‌ಲೈಕ್‌ಗಳಿವೆ. ಇಲ್ಲಿ ಕಾಮೆಂಟ್ ಮಾಡುತ್ತಿರುವವರೆಲ್ಲಾ ಉದ್ಯೋಗಕ್ಕಾಗಿ ಆಗ್ರಹಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಹೈದರಾಬಾದ್‌ನ ಸರ್ದಾರ್‌ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಿ ನಡೆಸಿದ್ದ ವಿಡಿಯೋ ಸಂವಾದಕ್ಕೂ ಡಿಸ್‌ಲೈಕ್‌ಗಳ ಸುರಿಮಳೆ ಸುರಿದಿತ್ತು. ಆ ವಿಡಿಯೋಗೆ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಚಾನೆಲ್‌ನನಲ್ಲಿ ಡಿಸ್‌ಲೈಕ್‌ಗಳು ಕಾಣಿಸದಂತೆ ಮಾಡಲಾಗಿತ್ತು.

ಯುವ ಸಮೂಹ ಉದ್ಯೋಗಕ್ಕಾಗಿ ಈ ರೀತಿಯಲ್ಲೂ ಪ್ರತಿಭಟನೆ ಶುರು ಮಾಡಿದ್ದಾರೆ. ಸ್ಟೂಡೆಂಟ್ಸ್ ಡಿಸ್‌ಲೈಕ್ ಮೋದಿ ಎಂಬ ಅಭಿಯಾನ ಶುರುಮಾಡಿದ್ದೇವೆ. ಸದ್ಯ ಅತಿ ಹೆಚ್ಚು ಡಿಸ್‌ಲೈಕ್‌ಗಳನ್ನು ಹೊಂದಿರುವ  ವಿಡಿಯೋಗಳು ಅಂದರೆ ಅವು ಪ್ರಧಾನಿಯವರದ್ದು. ಯುವಜನತೆ ಯೋಚಿಸುತ್ತಿದ್ದಾರೆ. ಹಾಗಾಗೀ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ಪ್ರತಿರೋಧ ಒಡ್ಡುತ್ತಿದ್ದಾರೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.


ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...