Homeಮುಖಪುಟಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ಇನ್ನು ರೋಜ್‌ಗಾರ್ ದೊ (ಉದ್ಯೋಗ ಕೊಡಿ) ಎಂಬ ಕಮೆಂಟ್‌ಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಅಧಿಕೃತ ಚಾನೆಲ್‌ನಲ್ಲಿ ಕಾಮೆಂಟ್‌ಗಳನ್ನು ಬ್ಲಾಕ್ ಮಾಡಲಾಗಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿದ್ದು, ವಿಡಿಯೋಗಳಿಗೆ ಡಿಸ್‌ಲೈಕ್‌ಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಈ ಬಾರಿಯ ಆಗಸ್ಟ್ 30ರ ಮನ್ ಕಿ ಬಾತ್‌ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿ ಹತ್ತುಲಕ್ಷಕ್ಕೂ ಡಿಸ್‌ಲೈಕ್ ಗಳಿಸಿ, ದಾಖಲೆ ಬರೆದಿತ್ತು. ಅಲ್ಲಿಂದಿಚೀಗೆ ಮೋದಿಯವರ ಯಾವ ವಿಡಿಯೋ ಸಹ ಬಿಡದ ಜಾಲತಾಣಿಗರು ಡಿಸ್‌ಲೈಕ್‌ ಸುರಿಮಳೆ ಮುಂದುವರೆಸಿದ್ದಾರೆ.

ಇಂದು ರಾಜಸ್ತಾನದ ಜೈಪುರದಲ್ಲಿ ನಡೆದ ಪತ್ರಿಕಾ ಗೇಟ್ ಉದ್ಘಾಟನಾ ಕಾರ್ಯಕ್ರಮದ ವಿಡಿಯೋ ಕೂಡ ಲೈಕ್‌ಗಳಿಗಿಂತ ಅತಿ ಹೆಚ್ಚು ಡಿಸ್‌ಲೈಕ್‌ಗಳನ್ನು ಪಡೆಯುತ್ತಾ ಸಾಗಿದೆ. ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ  ಯೂಟ್ಯೂಬ್ ಚಾನೆಲ್ ಮತ್ತು ಭಾರತೀಯ ಜನತಾ ಪಾರ್ಟಿಯ ಚಾನೆಲ್‌ಗಳಲ್ಲಿ ಈ ವಿಡಿಯೋಗೆ ಡಿಸ್‌ಲೈಕ್‌ಗಳು ಯಥೇಚ್ಚವಾಗಿ ಹರಿದುಬಂದಿವೆ.

ಇನ್ನು ರೋಜ್‌ಗಾರ್ ದೊ (ಉದ್ಯೋಗ ಕೊಡಿ) ಎಂಬ ಕಮೆಂಟ್‌ಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಅಧಿಕೃತ ಚಾನೆಲ್‌ನಲ್ಲಿ ಕಾಮೆಂಟ್‌ಗಳನ್ನು ಬ್ಲಾಕ್ ಮಾಡಲಾಗಿದೆ.

PC: Youtube

ಇದನ್ನೂ ಓದಿ: ಭಾರತೀಯರು ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಿದ್ದು ಏನನ್ನು? : ಆಗಸ್ಟ್‌ ತಿಂಗಳ ಮಾಹಿತಿ

ಭಾರತೀಯ ಜನತಾ ಪಾರ್ಟಿ ಚಾನೆಲ್‌ನಲ್ಲಿ ಮಾತ್ರ ಕಾಮೆಂಟ್ ಮಾಡಬಹುದಾಗಿದೆ. ಈ ಚಾನೆಲ್‌ನಲ್ಲಿ ಈ ಬರಹ ಬರೆಯುವ ಹೊತ್ತಿಗೆ ಲೈಕ್‌ಗಳ ಸಂಕ್ಯೆ 2.2ಸಾವಿರ ಇದ್ದರೆ  5.7 ಸಾವಿರ ಡಿಸ್‌ಲೈಕ್‌ಗಳಿವೆ. ಇಲ್ಲಿ ಕಾಮೆಂಟ್ ಮಾಡುತ್ತಿರುವವರೆಲ್ಲಾ ಉದ್ಯೋಗಕ್ಕಾಗಿ ಆಗ್ರಹಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಹೈದರಾಬಾದ್‌ನ ಸರ್ದಾರ್‌ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್‌ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಿ ನಡೆಸಿದ್ದ ವಿಡಿಯೋ ಸಂವಾದಕ್ಕೂ ಡಿಸ್‌ಲೈಕ್‌ಗಳ ಸುರಿಮಳೆ ಸುರಿದಿತ್ತು. ಆ ವಿಡಿಯೋಗೆ ಭಾರತೀಯ ಜನತಾ ಪಾರ್ಟಿಯ ಅಧಿಕೃತ ಚಾನೆಲ್‌ನನಲ್ಲಿ ಡಿಸ್‌ಲೈಕ್‌ಗಳು ಕಾಣಿಸದಂತೆ ಮಾಡಲಾಗಿತ್ತು.

ಯುವ ಸಮೂಹ ಉದ್ಯೋಗಕ್ಕಾಗಿ ಈ ರೀತಿಯಲ್ಲೂ ಪ್ರತಿಭಟನೆ ಶುರು ಮಾಡಿದ್ದಾರೆ. ಸ್ಟೂಡೆಂಟ್ಸ್ ಡಿಸ್‌ಲೈಕ್ ಮೋದಿ ಎಂಬ ಅಭಿಯಾನ ಶುರುಮಾಡಿದ್ದೇವೆ. ಸದ್ಯ ಅತಿ ಹೆಚ್ಚು ಡಿಸ್‌ಲೈಕ್‌ಗಳನ್ನು ಹೊಂದಿರುವ  ವಿಡಿಯೋಗಳು ಅಂದರೆ ಅವು ಪ್ರಧಾನಿಯವರದ್ದು. ಯುವಜನತೆ ಯೋಚಿಸುತ್ತಿದ್ದಾರೆ. ಹಾಗಾಗೀ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ಪ್ರತಿರೋಧ ಒಡ್ಡುತ್ತಿದ್ದಾರೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.


ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...