Homeಕರ್ನಾಟಕಫೆ.27ರಂದು ಪ್ರಧಾನಿ ಮೋದಿ ಕರ್ನಾಟಕ ಭೇಟಿ: ಪರೀಕ್ಷೆ ಮೂಂದೂಡಿಕೆ

ಫೆ.27ರಂದು ಪ್ರಧಾನಿ ಮೋದಿ ಕರ್ನಾಟಕ ಭೇಟಿ: ಪರೀಕ್ಷೆ ಮೂಂದೂಡಿಕೆ

ಶಿವಮೊಗ್ಗದ ಪ್ರಧಾನಿ ಕಾರ್ಯಕ್ರಮದ ಕುರ್ಚಿ ತುಂಬಿಸಲು ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಕರೆಸಲು ಆದೇಶಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27 ರಂದು ಬೆಳಗಾವಿ ನಗರಕ್ಕೆ ಭೇಟಿ ನೀಡುತ್ತಿರುವ ಕಾರಣದಿಂದ ಅಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸೋಮವಾರ ಮೋದಿಯವರು ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಸುಮಾರು 8 ಕಿ.ಮೀನಷ್ಟು ದೂರ ಬಿಜೆಪಿ ಪಕ್ಷದ ಪರ ರೋಡ್ ಶೋ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ಹಾಗಾಗಿ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಕಷ್ಟ ಎಂದು ಭಾವಿಸಿ ಮಾರ್ಚ್ 06ನೇ ತಾರೀಖಿಗೆ ಮುಂಡಲಾಗಿದೆ.

ಈ ಕುರಿತು ಬೆಳಗಾವಿಯ ವಡಂಗಾವಿಯಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿಯಲ್ಲಿ ರೋಡ್ ಶೋ ಮುಗಿಸಿ ನಂತರ ಶಿವಮೊಗ್ಗದಲ್ಲಿನ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿದೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. “ಪ್ರಧಾನಿ ಹೇಳುವುದು “ಪರೀಕ್ಷಾ ಪೇ ಚರ್ಚಾ” ಮಾಡುವುದು “ಪರೀಕ್ಷಾ ಮೇ ಆಕ್ರಮಣ್”!! ಪ್ರಧಾನಿಯ ರೋಡ್ ಶೋಗಾಗಿ ಪ್ರಥಮ ಪಿಯುಸಿಯ ಪರೀಕ್ಷೆಗಳನ್ನು ಮುಂದೂಡಿದ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ” ಎಂದು ಕಿಡಿಕಾರಿದೆ.

ಮುಂದುವರಿದು “ಗಾಂಪರ ಗುಂಪಾದ ಬಿಜೆಪಿಗೆ ತಿಳಿದಿರುವುದು ಕಮಿಷನ್ ಲೂಟಿಯೇ ಹೊರತು ಶಿಕ್ಷಣದ ಮಹತ್ವವಲ್ಲ. ಶಿವಮೊಗ್ಗದ ಪ್ರಧಾನಿ ಕಾರ್ಯಕ್ರಮದ ಕುರ್ಚಿ ತುಂಬಿಸಲು ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಕರೆಸಲು ಆದೇಶಿಸಿದೆ. ಬೆಳಗಾವಿಯಲ್ಲಿ ಪಿಯುಸಿ ಪರೀಕ್ಷೆಯನ್ನೇ ಮುಂದೂಡಿದೆ. ಪ್ರಧಾನಿಯ ಶೋಕಿಗಾಗಿ ವಿದ್ಯಾರ್ಥಿಗಳ ಭವಿಷ್ಯ ಬಲಿ ಕೊಡುವುದು ನಾಚಿಕೆಗೇಡು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿಯವರ ಭೇಟಿ ಮತ್ತು ಚುನಾವಣಾ ಪ್ರಚಾರಗಳನ್ನು ಆಯೋಜಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯವರು ಚಿಕ್ಕ ಪುಟ್ಟ ಅಭಿವೃದ್ದಿ ಕೆಲಸಗಳಿಗೆಲ್ಲ ಪ್ರಧಾನಿ ಬಂದು ಉದ್ಘಾಟನೆ ಮಾಡಲಾಗುವುದಿಲ್ಲ. ನನ್ನನ್ನು ಪ್ರಧಾನಿ ಮಾಡಿದ್ದ ಇಂತಹ ಕೆಲಸ ಮಾಡಲಿಕ್ಕಲ್ಲ ಎಂದು ಭಾಷಣದಲ್ಲಿ ಹೇಳಿದ್ದರು. ಆದರೆ ಈಗ ಚುನಾವಣೆ ಇರುವ ರಾಜ್ಯಗಳಿಗೆ ಪದೇ ಪದೇ ಭೇಟಿ ನೀಡುತ್ತಿದ್ದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡುತ್ತಿದ್ದಾರೆ. ಅವರು ನುಡಿದಂತೆ ನಡೆದಿಲ್ಲ, ಅವರು ‘ಆಷಾಡಭೂತಿತನದ ಪಿತಾಮಹ’ ಎಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬರುತ್ತಿವೆ.

ಇದನ್ನೂ ಓದಿ; ಸಂಸತ್ ಬಜೆಟ್ ಅಧಿವೇಶನದಲ್ಲಿ ಸಂಸದೆ ಮೊಹುವಾ ಮೊಯಿತ್ರಾ ಅವರ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...