Homeಕರ್ನಾಟಕಫೆ.27ರಂದು ಪ್ರಧಾನಿ ಮೋದಿ ಕರ್ನಾಟಕ ಭೇಟಿ: ಪರೀಕ್ಷೆ ಮೂಂದೂಡಿಕೆ

ಫೆ.27ರಂದು ಪ್ರಧಾನಿ ಮೋದಿ ಕರ್ನಾಟಕ ಭೇಟಿ: ಪರೀಕ್ಷೆ ಮೂಂದೂಡಿಕೆ

ಶಿವಮೊಗ್ಗದ ಪ್ರಧಾನಿ ಕಾರ್ಯಕ್ರಮದ ಕುರ್ಚಿ ತುಂಬಿಸಲು ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಕರೆಸಲು ಆದೇಶಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27 ರಂದು ಬೆಳಗಾವಿ ನಗರಕ್ಕೆ ಭೇಟಿ ನೀಡುತ್ತಿರುವ ಕಾರಣದಿಂದ ಅಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಸೋಮವಾರ ಮೋದಿಯವರು ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಸುಮಾರು 8 ಕಿ.ಮೀನಷ್ಟು ದೂರ ಬಿಜೆಪಿ ಪಕ್ಷದ ಪರ ರೋಡ್ ಶೋ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ಹಾಗಾಗಿ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಕಷ್ಟ ಎಂದು ಭಾವಿಸಿ ಮಾರ್ಚ್ 06ನೇ ತಾರೀಖಿಗೆ ಮುಂಡಲಾಗಿದೆ.

ಈ ಕುರಿತು ಬೆಳಗಾವಿಯ ವಡಂಗಾವಿಯಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿಯಲ್ಲಿ ರೋಡ್ ಶೋ ಮುಗಿಸಿ ನಂತರ ಶಿವಮೊಗ್ಗದಲ್ಲಿನ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿದೆ.

ಮೋದಿ ಭೇಟಿ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. “ಪ್ರಧಾನಿ ಹೇಳುವುದು “ಪರೀಕ್ಷಾ ಪೇ ಚರ್ಚಾ” ಮಾಡುವುದು “ಪರೀಕ್ಷಾ ಮೇ ಆಕ್ರಮಣ್”!! ಪ್ರಧಾನಿಯ ರೋಡ್ ಶೋಗಾಗಿ ಪ್ರಥಮ ಪಿಯುಸಿಯ ಪರೀಕ್ಷೆಗಳನ್ನು ಮುಂದೂಡಿದ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ” ಎಂದು ಕಿಡಿಕಾರಿದೆ.

ಮುಂದುವರಿದು “ಗಾಂಪರ ಗುಂಪಾದ ಬಿಜೆಪಿಗೆ ತಿಳಿದಿರುವುದು ಕಮಿಷನ್ ಲೂಟಿಯೇ ಹೊರತು ಶಿಕ್ಷಣದ ಮಹತ್ವವಲ್ಲ. ಶಿವಮೊಗ್ಗದ ಪ್ರಧಾನಿ ಕಾರ್ಯಕ್ರಮದ ಕುರ್ಚಿ ತುಂಬಿಸಲು ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಕರೆಸಲು ಆದೇಶಿಸಿದೆ. ಬೆಳಗಾವಿಯಲ್ಲಿ ಪಿಯುಸಿ ಪರೀಕ್ಷೆಯನ್ನೇ ಮುಂದೂಡಿದೆ. ಪ್ರಧಾನಿಯ ಶೋಕಿಗಾಗಿ ವಿದ್ಯಾರ್ಥಿಗಳ ಭವಿಷ್ಯ ಬಲಿ ಕೊಡುವುದು ನಾಚಿಕೆಗೇಡು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ತಿಂಗಳು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿಯವರ ಭೇಟಿ ಮತ್ತು ಚುನಾವಣಾ ಪ್ರಚಾರಗಳನ್ನು ಆಯೋಜಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯವರು ಚಿಕ್ಕ ಪುಟ್ಟ ಅಭಿವೃದ್ದಿ ಕೆಲಸಗಳಿಗೆಲ್ಲ ಪ್ರಧಾನಿ ಬಂದು ಉದ್ಘಾಟನೆ ಮಾಡಲಾಗುವುದಿಲ್ಲ. ನನ್ನನ್ನು ಪ್ರಧಾನಿ ಮಾಡಿದ್ದ ಇಂತಹ ಕೆಲಸ ಮಾಡಲಿಕ್ಕಲ್ಲ ಎಂದು ಭಾಷಣದಲ್ಲಿ ಹೇಳಿದ್ದರು. ಆದರೆ ಈಗ ಚುನಾವಣೆ ಇರುವ ರಾಜ್ಯಗಳಿಗೆ ಪದೇ ಪದೇ ಭೇಟಿ ನೀಡುತ್ತಿದ್ದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡುತ್ತಿದ್ದಾರೆ. ಅವರು ನುಡಿದಂತೆ ನಡೆದಿಲ್ಲ, ಅವರು ‘ಆಷಾಡಭೂತಿತನದ ಪಿತಾಮಹ’ ಎಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬರುತ್ತಿವೆ.

ಇದನ್ನೂ ಓದಿ; ಸಂಸತ್ ಬಜೆಟ್ ಅಧಿವೇಶನದಲ್ಲಿ ಸಂಸದೆ ಮೊಹುವಾ ಮೊಯಿತ್ರಾ ಅವರ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...