Homeಮುಖಪುಟ2.44 ಲಕ್ಷ ಅನುಯಾಯಿಗಳಿರುವ 'ವಿಬೋ ಆಪ್' ಅನ್ನು ಡಿಲೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ

2.44 ಲಕ್ಷ ಅನುಯಾಯಿಗಳಿರುವ ‘ವಿಬೋ ಆಪ್’ ಅನ್ನು ಡಿಲೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಇದು ವೈಯಕ್ತಿಕವಾಗಿ ಹಾಗೂ ಆರ್ಥಿಕವಾಗಿ ಚೀನಾಗೆ ಗಡಿಯ ವಿಚಾರದಲ್ಲಿ ಕಠಿಣ ಸಂದೇಶವಾಗಿದೆ ಎಂದು ಬಿಜೆಪಿಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅಭಿಪ್ರಾಯ ಪಟ್ಟಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ 59 ಚೀನೀ ಆ್ಯಪ್‌ಗಳನ್ನು ಭಾರತ ನಿಷೇಧಿಸಿದ್ದರಿಂದ ಸುಮಾರು 2.44 ಲಕ್ಷ ಅನುಯಾಯಿಗಳನ್ನು ಹೊಂದಿರುವ ಚೀನಾದ ಸಾಮಾಜಿಕ ಜಾಲತಾಣ ವೀಬೊ ಆಪ್ ನಲ್ಲಿನ ತಮ್ಮ ಖಾತೆಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಡಿಲೀಟ್ ಮಾಡಿದ್ದಾರೆ.

59 ಚೈನೀಸ್ ಆ್ಯಪ್‌ಗಳ ನಿಷೇಧವನ್ನು ದೇಶ ಘೋಷಿಸಿದ ಕ್ಷಣದಿಂದ ಮೋದಿ ವೀಬೊ ಆಪ್ ತೊರೆಯಲು ನಿರ್ಧರಿಸಿದ್ದಾರೆ ಎಂದು ವಿಶ್ವಾಸಾರ್ಹ ಸರ್ಕಾರಿ ಮೂಲಗಳು ಐಎಎನ್‌ಎಸ್‌ಗೆ ತಿಳಿಸಿವೆ.

“59 ಚೀನೀ ಆ್ಯಪ್‌ಗಳನ್ನು ನಿಷೇಧಿಸಲು ಸರ್ಕಾರ ಕ್ರಮ ಕೈಗೊಂಡದ್ದರಿಂದ, ಪ್ರಧಾನಿ ಮೋದಿ ಚೀನಾದ ಸಾಮಾಜಿಕ ಜಾಲತಾಣ ವೇದಿಕೆ ವೀಬೊದಿಂದ ನಿರ್ಗಮಿಸುತ್ತಾರೆ. ಇದು ಆರ್ಥಿಕವಾಗಿ ಹಾಗೂ ವೈಯಕ್ತಿಕವಾಗಿ ಗಡಿಯ ವಿಚಾರದಲ್ಲಿ ಕಠಿಣ ಸಂದೇಶವಾಗಿದೆ” ಎಂದು ಬಿಜೆಪಿಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅಭಿಪ್ರಾಯ ಪಟ್ಟಿದ್ದಾರೆ.

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಫೋಟೋಗಳನ್ನು ಹೊಂದಿದ್ದ ಎರಡು ಪೋಸ್ಟ್‌ಗಳು ಸೇರಿದಂತೆ ಪ್ರಧಾನ ಮಂತ್ರಿ ವೀಬೊ ಖಾತೆಯ ಮೇಲಿನ ಎಲ್ಲಾ ಪೋಸ್ಟ್‌ಗಳು, ಚಿತ್ರಗಳು ಮತ್ತು ಕಾಮೆಂಟ್‌ಗಳನ್ನು ಅಳಿಸಲಾಗಿದೆ.

ಕಳೆದ ತಿಂಗಳು, ಸರ್ಕಾರದ ನಿಯಂತ್ರಣ ಮತ್ತು ಸೆನ್ಸಾರ್‌ಶಿಪ್‌ಗೆ ಹೆಸರುವಾಸಿಯಾದ ಚೀನಾದ ಸಾಮಾಜಿಕ ಮಾಧ್ಯಮ ವೇದಿಕೆಗಳು ನರೇಂದ್ರ ಮೋದಿಯವರ ಭಾಷಣ ಮತ್ತು ಗಡಿ ಸಾಲಿನಲ್ಲಿ ಭಾರತದ ಅಧಿಕೃತ ಹೇಳಿಕೆಗಳನ್ನು ತೆಗೆದುಹಾಕಿದೆ. ದೇಶದ ಗಡಿ ಪರಿಸ್ಥಿತಿಯ ಬಗ್ಗೆ ಮೋದಿಯವರ ಜೂನ್ 18 ರ ಹೇಳಿಕೆಗಳು ಸೋಷಿಯಲ್ ಮೀಡಿಯಾ ಅಪ್ಲಿಕೇಶನ್ ವೀಚಾಟ್‌ನಲ್ಲಿ ಬಳಕೆದಾರರಿಗೆ ನೀಡಲು ಆಗಲಿಲ್ಲ.

ಪೂರ್ವ ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಹಿಂಸಾಚಾರ ನಡೆದು 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಧಾನ ಮಂತ್ರಿ ಖುದ್ದಾಗಿ ಹೇಳಿದ್ದಾರೆ. ಚೀನಾದ ಮಾತ್ರ ಇನ್ನೂ ಎಷ್ಟು ಸಾವುನೋವುಗಳಾಗಿವೆ ಎಂದು ಬಹಿರಂಗಪಡಿಸಿಲ್ಲ.

ಗಡಿ ವಿಚಾರವನ್ನು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಅವರ ಹೇಳಿಕೆಯನ್ನು ಕೂಡಾ ಅಧಿಕೃತ ವೀಚಾಟ್ ಖಾತೆಯಿಂದ ತೆಗೆದುಹಾಕಲಾಗಿದೆ.

ಸಂದೇಶವನ್ನು ಅಳಿಸಿದ ನಂತರ WeChat ನಲ್ಲಿ “ಈ ವಿಷಯವು ನಮ್ಮ ನಿಯಮಗಳನ್ನು ಉಲ್ಲಂಘಿಸುವ ಕಾರಣ ಅದನ್ನು ವೀಕ್ಷಿಸಲು ಸಾಧ್ಯವಿಲ್ಲ.” ಎಂದು ಬರೆಯಲಾಗಿದೆ

2015 ರಲ್ಲಿ ಚೀನಾ ಭೇಟಿಗೆ ಮುಂಚಿತವಾಗಿ, ಮೋದಿಯವರು ವೀಬೊದಲ್ಲಿ ಖಾತೆಯನ್ನು ತೆರೆದರು, ಇದನ್ನು ಚೀನಾದ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಆಗಿದ್ದು, ಟ್ವಿಟರ್‌ಗೆ ಸಮಾನವೆಂದು ಪರಿಗಣಿಸಲಾಗಿದೆ.


ಓದಿ: ಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...