Homeಮುಖಪುಟಗಡಿಯಲ್ಲಿ ಕೆಣಕಿದರೆ ತಕ್ಕ ಶಾಸ್ತಿ ಮಾಡುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಗಡಿಯಲ್ಲಿ ಕೆಣಕಿದರೆ ತಕ್ಕ ಶಾಸ್ತಿ ಮಾಡುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ಮೋದಿ ಸೈನಿಕರ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿರುವುದರ ಹೊರತಾಗಿ, ಪಾಕಿಸ್ತಾನದ ಕಡೆಯಿಂದ ಈ ವರ್ಷ 4 ಸಾವಿರಕ್ಕೂ ಹೆಚ್ಚು ದಾಳಿ ನಡೆದಿದ್ದು, ಸುಮಾರು 40 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ 100 ಹೆಚ್ಚು ಜನರು ಗಾಯಗೊಂಡಿದ್ದಾರೆ.

- Advertisement -
- Advertisement -

ಸೈನಿಕರೊಂದಿಗೆ ದೀಪಾವಳಿ ಆಚರಿಸಲು ರಾಜಸ್ಥಾನದ ಜೈಸಲ್ಮೇರ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ “ಗಡಿಯಲ್ಲಿ ನಮ್ಮನ್ನು ಕೆಣಕಲು ಯಾರಾದರೂ ಯತ್ನಿಸಿದರೆ, ಅದಕ್ಕೆ ತಕ್ಕ ಪ್ರತ್ಯುತ್ತರ ದೊರಕುತ್ತದೆ” ಎಂದು ಹೇಳಿದ್ದಾರೆ. ನಿನ್ನೆಯಷ್ಟೇ ಉತ್ತರ ಜಮ್ಮು ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ಪಾಕಿಸ್ತಾನ ಸೈನ್ಯವು ಕದನ ವಿರಾಮ ಉಲ್ಲಂಘನೆ ಮಾಡಿದ್ದರಿಂದ ಐದು ಸೈನಿಕರು ಸೇರಿದಂತೆ ಹನ್ನೊಂದು ಜನರು ಸಾವನ್ನಪ್ಪಿದ ನಂತರ ಇದೆ ಮೊದಲ ಬಾರಿಗೆ ಹೇಳಿಕೆ ನೀಡಿದ್ದಾರೆ.

“ದೀಪಾವಳಿ ಹಬ್ಬವನ್ನು ನಾವು ನಮ್ಮ ಕುಟುಂಬ ಹಾಗೂ ನಮ್ಮವರೊಂದಿಗೆ ಆಚರಿಸುತ್ತೇವೆ. ಆದುದರಿಂದ ಪ್ರತಿ ವರ್ಷ ನಾನು ನಿಮ್ಮೆಲ್ಲರ ಜತೆ ಆಚರಿಸುತ್ತೇನೆ ಯಾಕೆಂದರೆ ನೀವೆಲ್ಲಾ ನನ್ನ ಸ್ವಂತ ಕುಟುಂಬ. ಇಂದು ನಾನು ನಿಮಗಾಗಿ ಸಿಹಿ ತಿಂಡಿ ತಂದಿದ್ದೇನೆ. ಈ ಸಿಹಿ ತಿಂಡಿ ಕೇವಲ ನನ್ನಿಂದಲ್ಲ, 130 ಕೋಟಿ ಭಾರತೀಯರಿಂದ” ಎಂದು ಹೇಳಿದ್ದಾರೆ.

ಪ್ರಧಾನಿ ನಿನ್ನೆ ಟ್ವೀಟ್ ಮಾಡಿ ಗಡಿಯಲ್ಲಿ ನಮ್ಮನ್ನು ರಕ್ಷಿಸುವವ ಸೈನಿಕರಿಗಾಗಿ ಹಣತೆಯನ್ನು ಬೆಳಗಿಸುವಂತೆ ಭಾರತೀಯರಲ್ಲಿ ಕೇಳಿಕೊಂಡಿದ್ದರು.

ಇದನ್ನೂ ಓದಿ: ಪಾಕಿಸ್ತಾನದ‌‌ ISI ಗೆ ಫೈಟರ್‌ ಜೆಟ್‌‌ಗಳ ರಹಸ್ಯ ಮಾಹಿತಿ ನೀಡುತ್ತಿದ್ದ ಏಜೆಂಟ್ ಬಂಧನ

ಈ ವರ್ಷ ಪ್ರಧಾನಿಯು ಸೈನಿಕರೊಂದಿಗೆ ನಡೆಸುವ ಎರಡನೇ ಸಂವಹನ ಇದಾಗಿದ್ದು, ಕಳೆದ ಜೂನ್‌ 14 ರಂದು ಗಾಲ್ವನ್ ಕಣಿವೆಯಲ್ಲಿ ನಡೆದ ಹಿಂಸಾಚಾರದಿಂದಾಗಿ ಭಾರತೀಯ ಸೈನ್ಯದ 20 ಸೈನಿಕರು ಸಾವನ್ನಪ್ಪಿದ ನಂತರ ಜುಲೈನಲ್ಲಿ ಲಡಾಖ್‌‌ನಲ್ಲಿ ಸೈನಿಕರನ್ನು ಭೇಟಿಯಾಗಿದ್ದರು. ಆದರೆ ಅಲ್ಲಿ ಚೀನಾದ ಹೆಸರನ್ನು ಸಹ ಉಲ್ಲೇಖಿಸದೆ  ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದ್ದರು.

ಇದು ಸೈನಿಕರೊಂದಿಗೆ ಪ್ರಧಾನ ಮಂತ್ರಿ ಆಚರಿಸುತ್ತಿರುವ ಏಳನೇ ದೀಪಾವಳಿಯಾಗಲಿದೆ; 2014 ರಲ್ಲಿ ಅವರ ಮೊದಲ ದೀಪಾವಳಿ ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ನಲ್ಲಿ ಆಚರಿಸಿದ್ದರು. ಕಳೆದ ವರ್ಷ ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಗೆ ದೀಪಾವಳಿ ಆಚರಿಸಲು ತೆರಳಿದ್ದರು.

ಪ್ರಧಾನಿ ಮೋದಿ ಸೈನಿಕರ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿರುವುದರ ಹೊರತಾಗಿಯೂ, ಪಾಕಿಸ್ತಾನದ ಕಡೆಯಿಂದ ಈ ವರ್ಷ 4 ಸಾವಿರಕ್ಕೂ ಹೆಚ್ಚು ದಾಳಿ ನಡೆದಿದೆ. ಇದರಿಂದಾಗಿ ಸುಮಾರು 40 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು 100 ಹೆಚ್ಚು ಜನರು ಗಾಯಗೊಂಡಿದ್ದಾರೆ. 2019 ರಲ್ಲಿ 3 ಸಾವಿರಕ್ಕು ಹೆಚ್ಚು ಬಾರಿ ಹಾಗೂ 2018 ರಲ್ಲಿ 1600 ಕ್ಕೂ ಹೆಚ್ಚು ಬಾರಿ ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ ಉದ್ವಿಗ್ನತೆ: ಮತ್ತೆ ಲಡಾಖ್ ಗಡಿ ಅತಿಕ್ರಮಿಸಿದ ಚೀನಾ ಪಡೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...