Homeಮುಖಪುಟಸೂರ್ಯ ನಮಸ್ಕಾರದಿಂದ ಸೋಲಿಸುತ್ತೇನೆ : ರಾಹುಲ್ ಗಾಂಧಿಯನ್ನು"ಟ್ಯೂಬ್ಲೈಟ್"ಎಂದು ಕುಟುಕಿದ ಪ್ರಧಾನಿ

ಸೂರ್ಯ ನಮಸ್ಕಾರದಿಂದ ಸೋಲಿಸುತ್ತೇನೆ : ರಾಹುಲ್ ಗಾಂಧಿಯನ್ನು”ಟ್ಯೂಬ್ಲೈಟ್”ಎಂದು ಕುಟುಕಿದ ಪ್ರಧಾನಿ

- Advertisement -
- Advertisement -

ಆರು ತಿಂಗಳಿನಿಂದ ಸೂರ್ಯ ನಮಸ್ಕಾರ ಮಾಡಿ ನನಗೆ ಹೊಡೆಯಲು ಬರುವವರ ವಿರುದ್ಧ ನಾನು ತಯಾರಾಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.

ದೆಹಲಿ ಚುನಾವಣೆಗೆ ಪ್ರಚಾರ ಮಾಡುವಾಗ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯಲ್ಲಿ: “ನೀವು ನೋಡುತ್ತಿರಿ ಈಗ ಭಾಷಣಗಳನ್ನು ಮಾಡುತ್ತಿರುವ ನರೇಂದ್ರ ಮೋದಿ ಇನ್ನು ಆರು-ಏಳು ತಿಂಗಳಲ್ಲಿ ತಮ್ಮ ಮನೆಯಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಯುವಭಾರತ ಅವರನ್ನು ಕೋಲುಗಳಿಂದ ಸೋಲಿಸುತ್ತದೆ. ಯುವಕರಿಗೆ ಉದ್ಯೋಗ ನೀಡದಿದ್ದರೆ, ಭಾರತ ಮುಂದೆ ಚಲಿಸಲು ಸಾಧ್ಯವಿಲ್ಲ , ಇದು ಪ್ರಧಾನಿಗೆ ಅರ್ಥವಾಗುವಂತೆ ಅವರು ಮಾಡುತ್ತಾರೆ” ಎಂದಿದ್ದರು.

ಇದಕ್ಕೆ ಇಂದು ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ “70 ವರ್ಷಗಳಲ್ಲಿ ಯಾವುದೇ ಕಾಂಗ್ರೆಸ್ ಮುಖಂಡರು ಸ್ವಾವಲಂಬಿಗಳಾಗಿಲ್ಲ. ಒಬ್ಬ ನಾಯಕನ ಮಾತನ್ನು ನಾನು ಕೇಳಿದ್ದೇನೆ ಅವರು ನಾವು ಆರು ತಿಂಗಳಲ್ಲಿ ಮೋದಿಯನ್ನು ಕೋಲಿನಿಂದ ಹೊಡೆಯುತ್ತೇವೆ ಎಂದಿದ್ದಾರೆ. ಇದು ಕಷ್ಟಕರ ಎಂದು ನಾನು ಹೇಳಬಲ್ಲೆ, ಅದನ್ನು ಮಾಡಲು ಅವರಿಗೆ ಆರು ತಿಂಗಳುಗಳ ತಯಾರಿ ಬೇಕಾಗುತ್ತವೆ. ಆದರೆ ನಾನು ಆ ಆರು ತಿಂಗಳಲ್ಲಿ ಹೆಚ್ಚು ಸೂರ್ಯ ನಮಸ್ಕಾರ ಮಾಡಿ ಅದನ್ನು ಎದುರಿಸಲು ಸಿದ್ಧನಾಗಿದ್ದೇನೆ… ಕಳೆದ 20 ವರ್ಷಗಳಲ್ಲಿ ನಾನು ಯಾವ ರೀತಿಯ ನಿಂದನೆಗಳಿಗೆ ಒಳಗಾಗಿದ್ದೇನೆಂದರೆ ಈಗ ನಾನು ಗಾಲಿ-ಪ್ರೂಫ್ (ನಿಂದನೆ-ನಿರೋಧಕ) ಮತ್ತು ದಂಡಾ-ಪ್ರೂಫ್ (ಸ್ಟಿಕ್-ಪ್ರೂಫ್) ಆಗಿದ್ದೇನೆ” ಎಂದರು.

ಈ ಮಧ್ಯೆ ರಾಹುಲ್ ಗಾಂಧಿ ಮಧ್ಯಪ್ರವೇಶಿಸಲು ಏಳುತ್ತಿದ್ದಂತೆ “ನಾನು 30-40 ನಿಮಿಷಗಳ ಕಾಲ ಮಾತನಾಡುತ್ತಿದ್ದೇನೆ ಆದರೆ ಕರೆಂಟ್ ತಲುಪಲು ಬಹಳ ಸಮಯ ತೆಗೆದುಕೊಂಡಿತು. ಸಾಧಾರಣವಾಗಿ ‘ಟ್ಯೂಬ್ಲೈಟ್’ ಹೀಗೆ ಇರುತ್ತವೆ” ಎಂದು ವ್ಯಂಗ್ಯವಾಗಿ ಕುಟುಕಿದರು. “ನನಗೆ ಒಂದು ರೀತಿಯಲ್ಲಿ ಮುಂಗಡ ನೋಟಿಸ್ ನೀಡಲಾಗಿದೆ ಅದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ” ಎಂದೂ ಹೇಳಿದರು.

ರಾಹುಲ್ ಗಾಂಧಿಯನ್ನು ಟ್ಯೂಬ್ಲೈಟ್ ಗೆ ಹೋಲಿಸಿದ್ದಕ್ಕೆ ಪ್ರತಿಕ್ರಿಯಿಸುವಂತೆ ವರದಿಗಾರರು ಕೇಳಿದಾಗ “ದೇಶದ ಮುಂದೆ ಇರುವ ದೊಡ್ಡ ಸಮಸ್ಯೆ ನಿರುದ್ಯೋಗ ಆದರೆ ಪ್ರಧಾನಿ ಮೋದಿ ಈ ಬಗ್ಗೆ ಏನೂ ಹೇಳಿಲ್ಲ. ಸಮಸ್ಯೆಯಿಂದ ಬೇರೆಡೆಗೆ ತಿರುಗುವುದು ಪ್ರಧಾನ ಮಂತ್ರಿಯ ಶೈಲಿಯಾಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...