Homeಮುಖಪುಟಸೂರ್ಯ ನಮಸ್ಕಾರದಿಂದ ಸೋಲಿಸುತ್ತೇನೆ : ರಾಹುಲ್ ಗಾಂಧಿಯನ್ನು"ಟ್ಯೂಬ್ಲೈಟ್"ಎಂದು ಕುಟುಕಿದ ಪ್ರಧಾನಿ

ಸೂರ್ಯ ನಮಸ್ಕಾರದಿಂದ ಸೋಲಿಸುತ್ತೇನೆ : ರಾಹುಲ್ ಗಾಂಧಿಯನ್ನು”ಟ್ಯೂಬ್ಲೈಟ್”ಎಂದು ಕುಟುಕಿದ ಪ್ರಧಾನಿ

- Advertisement -
- Advertisement -

ಆರು ತಿಂಗಳಿನಿಂದ ಸೂರ್ಯ ನಮಸ್ಕಾರ ಮಾಡಿ ನನಗೆ ಹೊಡೆಯಲು ಬರುವವರ ವಿರುದ್ಧ ನಾನು ತಯಾರಾಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.

ದೆಹಲಿ ಚುನಾವಣೆಗೆ ಪ್ರಚಾರ ಮಾಡುವಾಗ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯಲ್ಲಿ: “ನೀವು ನೋಡುತ್ತಿರಿ ಈಗ ಭಾಷಣಗಳನ್ನು ಮಾಡುತ್ತಿರುವ ನರೇಂದ್ರ ಮೋದಿ ಇನ್ನು ಆರು-ಏಳು ತಿಂಗಳಲ್ಲಿ ತಮ್ಮ ಮನೆಯಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಯುವಭಾರತ ಅವರನ್ನು ಕೋಲುಗಳಿಂದ ಸೋಲಿಸುತ್ತದೆ. ಯುವಕರಿಗೆ ಉದ್ಯೋಗ ನೀಡದಿದ್ದರೆ, ಭಾರತ ಮುಂದೆ ಚಲಿಸಲು ಸಾಧ್ಯವಿಲ್ಲ , ಇದು ಪ್ರಧಾನಿಗೆ ಅರ್ಥವಾಗುವಂತೆ ಅವರು ಮಾಡುತ್ತಾರೆ” ಎಂದಿದ್ದರು.

ಇದಕ್ಕೆ ಇಂದು ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ “70 ವರ್ಷಗಳಲ್ಲಿ ಯಾವುದೇ ಕಾಂಗ್ರೆಸ್ ಮುಖಂಡರು ಸ್ವಾವಲಂಬಿಗಳಾಗಿಲ್ಲ. ಒಬ್ಬ ನಾಯಕನ ಮಾತನ್ನು ನಾನು ಕೇಳಿದ್ದೇನೆ ಅವರು ನಾವು ಆರು ತಿಂಗಳಲ್ಲಿ ಮೋದಿಯನ್ನು ಕೋಲಿನಿಂದ ಹೊಡೆಯುತ್ತೇವೆ ಎಂದಿದ್ದಾರೆ. ಇದು ಕಷ್ಟಕರ ಎಂದು ನಾನು ಹೇಳಬಲ್ಲೆ, ಅದನ್ನು ಮಾಡಲು ಅವರಿಗೆ ಆರು ತಿಂಗಳುಗಳ ತಯಾರಿ ಬೇಕಾಗುತ್ತವೆ. ಆದರೆ ನಾನು ಆ ಆರು ತಿಂಗಳಲ್ಲಿ ಹೆಚ್ಚು ಸೂರ್ಯ ನಮಸ್ಕಾರ ಮಾಡಿ ಅದನ್ನು ಎದುರಿಸಲು ಸಿದ್ಧನಾಗಿದ್ದೇನೆ… ಕಳೆದ 20 ವರ್ಷಗಳಲ್ಲಿ ನಾನು ಯಾವ ರೀತಿಯ ನಿಂದನೆಗಳಿಗೆ ಒಳಗಾಗಿದ್ದೇನೆಂದರೆ ಈಗ ನಾನು ಗಾಲಿ-ಪ್ರೂಫ್ (ನಿಂದನೆ-ನಿರೋಧಕ) ಮತ್ತು ದಂಡಾ-ಪ್ರೂಫ್ (ಸ್ಟಿಕ್-ಪ್ರೂಫ್) ಆಗಿದ್ದೇನೆ” ಎಂದರು.

ಈ ಮಧ್ಯೆ ರಾಹುಲ್ ಗಾಂಧಿ ಮಧ್ಯಪ್ರವೇಶಿಸಲು ಏಳುತ್ತಿದ್ದಂತೆ “ನಾನು 30-40 ನಿಮಿಷಗಳ ಕಾಲ ಮಾತನಾಡುತ್ತಿದ್ದೇನೆ ಆದರೆ ಕರೆಂಟ್ ತಲುಪಲು ಬಹಳ ಸಮಯ ತೆಗೆದುಕೊಂಡಿತು. ಸಾಧಾರಣವಾಗಿ ‘ಟ್ಯೂಬ್ಲೈಟ್’ ಹೀಗೆ ಇರುತ್ತವೆ” ಎಂದು ವ್ಯಂಗ್ಯವಾಗಿ ಕುಟುಕಿದರು. “ನನಗೆ ಒಂದು ರೀತಿಯಲ್ಲಿ ಮುಂಗಡ ನೋಟಿಸ್ ನೀಡಲಾಗಿದೆ ಅದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ” ಎಂದೂ ಹೇಳಿದರು.

ರಾಹುಲ್ ಗಾಂಧಿಯನ್ನು ಟ್ಯೂಬ್ಲೈಟ್ ಗೆ ಹೋಲಿಸಿದ್ದಕ್ಕೆ ಪ್ರತಿಕ್ರಿಯಿಸುವಂತೆ ವರದಿಗಾರರು ಕೇಳಿದಾಗ “ದೇಶದ ಮುಂದೆ ಇರುವ ದೊಡ್ಡ ಸಮಸ್ಯೆ ನಿರುದ್ಯೋಗ ಆದರೆ ಪ್ರಧಾನಿ ಮೋದಿ ಈ ಬಗ್ಗೆ ಏನೂ ಹೇಳಿಲ್ಲ. ಸಮಸ್ಯೆಯಿಂದ ಬೇರೆಡೆಗೆ ತಿರುಗುವುದು ಪ್ರಧಾನ ಮಂತ್ರಿಯ ಶೈಲಿಯಾಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...