Homeಮುಖಪುಟಸೂರ್ಯ ನಮಸ್ಕಾರದಿಂದ ಸೋಲಿಸುತ್ತೇನೆ : ರಾಹುಲ್ ಗಾಂಧಿಯನ್ನು"ಟ್ಯೂಬ್ಲೈಟ್"ಎಂದು ಕುಟುಕಿದ ಪ್ರಧಾನಿ

ಸೂರ್ಯ ನಮಸ್ಕಾರದಿಂದ ಸೋಲಿಸುತ್ತೇನೆ : ರಾಹುಲ್ ಗಾಂಧಿಯನ್ನು”ಟ್ಯೂಬ್ಲೈಟ್”ಎಂದು ಕುಟುಕಿದ ಪ್ರಧಾನಿ

- Advertisement -
- Advertisement -

ಆರು ತಿಂಗಳಿನಿಂದ ಸೂರ್ಯ ನಮಸ್ಕಾರ ಮಾಡಿ ನನಗೆ ಹೊಡೆಯಲು ಬರುವವರ ವಿರುದ್ಧ ನಾನು ತಯಾರಾಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.

ದೆಹಲಿ ಚುನಾವಣೆಗೆ ಪ್ರಚಾರ ಮಾಡುವಾಗ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯಲ್ಲಿ: “ನೀವು ನೋಡುತ್ತಿರಿ ಈಗ ಭಾಷಣಗಳನ್ನು ಮಾಡುತ್ತಿರುವ ನರೇಂದ್ರ ಮೋದಿ ಇನ್ನು ಆರು-ಏಳು ತಿಂಗಳಲ್ಲಿ ತಮ್ಮ ಮನೆಯಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಯುವಭಾರತ ಅವರನ್ನು ಕೋಲುಗಳಿಂದ ಸೋಲಿಸುತ್ತದೆ. ಯುವಕರಿಗೆ ಉದ್ಯೋಗ ನೀಡದಿದ್ದರೆ, ಭಾರತ ಮುಂದೆ ಚಲಿಸಲು ಸಾಧ್ಯವಿಲ್ಲ , ಇದು ಪ್ರಧಾನಿಗೆ ಅರ್ಥವಾಗುವಂತೆ ಅವರು ಮಾಡುತ್ತಾರೆ” ಎಂದಿದ್ದರು.

ಇದಕ್ಕೆ ಇಂದು ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ “70 ವರ್ಷಗಳಲ್ಲಿ ಯಾವುದೇ ಕಾಂಗ್ರೆಸ್ ಮುಖಂಡರು ಸ್ವಾವಲಂಬಿಗಳಾಗಿಲ್ಲ. ಒಬ್ಬ ನಾಯಕನ ಮಾತನ್ನು ನಾನು ಕೇಳಿದ್ದೇನೆ ಅವರು ನಾವು ಆರು ತಿಂಗಳಲ್ಲಿ ಮೋದಿಯನ್ನು ಕೋಲಿನಿಂದ ಹೊಡೆಯುತ್ತೇವೆ ಎಂದಿದ್ದಾರೆ. ಇದು ಕಷ್ಟಕರ ಎಂದು ನಾನು ಹೇಳಬಲ್ಲೆ, ಅದನ್ನು ಮಾಡಲು ಅವರಿಗೆ ಆರು ತಿಂಗಳುಗಳ ತಯಾರಿ ಬೇಕಾಗುತ್ತವೆ. ಆದರೆ ನಾನು ಆ ಆರು ತಿಂಗಳಲ್ಲಿ ಹೆಚ್ಚು ಸೂರ್ಯ ನಮಸ್ಕಾರ ಮಾಡಿ ಅದನ್ನು ಎದುರಿಸಲು ಸಿದ್ಧನಾಗಿದ್ದೇನೆ… ಕಳೆದ 20 ವರ್ಷಗಳಲ್ಲಿ ನಾನು ಯಾವ ರೀತಿಯ ನಿಂದನೆಗಳಿಗೆ ಒಳಗಾಗಿದ್ದೇನೆಂದರೆ ಈಗ ನಾನು ಗಾಲಿ-ಪ್ರೂಫ್ (ನಿಂದನೆ-ನಿರೋಧಕ) ಮತ್ತು ದಂಡಾ-ಪ್ರೂಫ್ (ಸ್ಟಿಕ್-ಪ್ರೂಫ್) ಆಗಿದ್ದೇನೆ” ಎಂದರು.

ಈ ಮಧ್ಯೆ ರಾಹುಲ್ ಗಾಂಧಿ ಮಧ್ಯಪ್ರವೇಶಿಸಲು ಏಳುತ್ತಿದ್ದಂತೆ “ನಾನು 30-40 ನಿಮಿಷಗಳ ಕಾಲ ಮಾತನಾಡುತ್ತಿದ್ದೇನೆ ಆದರೆ ಕರೆಂಟ್ ತಲುಪಲು ಬಹಳ ಸಮಯ ತೆಗೆದುಕೊಂಡಿತು. ಸಾಧಾರಣವಾಗಿ ‘ಟ್ಯೂಬ್ಲೈಟ್’ ಹೀಗೆ ಇರುತ್ತವೆ” ಎಂದು ವ್ಯಂಗ್ಯವಾಗಿ ಕುಟುಕಿದರು. “ನನಗೆ ಒಂದು ರೀತಿಯಲ್ಲಿ ಮುಂಗಡ ನೋಟಿಸ್ ನೀಡಲಾಗಿದೆ ಅದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ” ಎಂದೂ ಹೇಳಿದರು.

ರಾಹುಲ್ ಗಾಂಧಿಯನ್ನು ಟ್ಯೂಬ್ಲೈಟ್ ಗೆ ಹೋಲಿಸಿದ್ದಕ್ಕೆ ಪ್ರತಿಕ್ರಿಯಿಸುವಂತೆ ವರದಿಗಾರರು ಕೇಳಿದಾಗ “ದೇಶದ ಮುಂದೆ ಇರುವ ದೊಡ್ಡ ಸಮಸ್ಯೆ ನಿರುದ್ಯೋಗ ಆದರೆ ಪ್ರಧಾನಿ ಮೋದಿ ಈ ಬಗ್ಗೆ ಏನೂ ಹೇಳಿಲ್ಲ. ಸಮಸ್ಯೆಯಿಂದ ಬೇರೆಡೆಗೆ ತಿರುಗುವುದು ಪ್ರಧಾನ ಮಂತ್ರಿಯ ಶೈಲಿಯಾಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...