Homeಮುಖಪುಟಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ:...

ಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂಬುದು ಕೂಡ ಗೊತ್ತಿಲ್ಲ ಎಂದು ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ, “ಅವರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ?” ಎಂದು ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಲೋಕಸಭೆಯಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿರುವ ಕ್ರಮ ವಿರೋಧಿಸಿ ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಒಬ್ಬ ಹೇಡಿ ಎಂದು ಹೇಳಿದ್ದಾರೆ.

”ನೀವು ಸಂಸತ್ತಿನಲ್ಲಿ ನನ್ನ ಹುತಾತ್ಮ ತಂದೆಯನ್ನು ಅವಮಾನಿಸುತ್ತೀರಿ. ನೀವು ಅವರ ಮಗನನ್ನು ಮೀರ್ ಜಾಫರ್ ಎಂದು ಕರೆಯುತ್ತೀರಿ. ನೀವು ನನ್ನ ತಾಯಿಯನ್ನು ಅವಮಾನಿಸುತ್ತಿದ್ದೀರಿ. ನಿಮ್ಮ ಸಿಎಂ ಒಬ್ಬರು ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂದು ಸಹ ತಿಳಿದಿಲ್ಲ ಎಂದು ಹೇಳುತ್ತಾರೆ”

”ಗಾಂಧಿ ಕುಟುಂಬದವರು ನೆಹರೂ ಸರ್‌ನೇಮ್ ಬಳಸಬೇಕು ಎಂದು ನಿಮ್ಮ ಪ್ರಧಾನಿ ಇಡೀ ಕುಟುಂಬವನ್ನು ಅವಮಾನಿಸುತ್ತಾರೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಯಾರೂ ನಿಮ್ಮನ್ನು ಸಂಸತ್ತಿನಿಂದ ಹೊರಗೆ ಕರೆದೊಯ್ಯುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

”ನಾವು ದೀರ್ಘಕಾಲ ಮೌನವಾಗಿದ್ದೇವೆ ಎನ್ನುವ ಕಾರಣಕ್ಕೆ ಇದು ನಡೆಯುತ್ತಿದೆ. ನನ್ನ ಸಹೋದರ ಏನು ಹೇಳಿದರು? ಪ್ರಧಾನಿ ಮೋದಿ ಬಳಿ ಹೋಗಿ ಅಪ್ಪಿಕೊಂಡರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾವುದೇ ದ್ವೇಷವಿಲ್ಲ ಎಂದು ಅವರು ಹೇಳಿದರು. ಆದರೆ ನೀವು ನಮ್ಮ ಸಹೋದರನ ಮೇಲೆ ದ್ವೇಷ ಕಾರುತ್ತೀದ್ದೀರಿ” ಎಂದು ಹೇಳಿದರು.

”ನೀವು ನಮ್ಮನ್ನು ‘ಪರಿವಾರವಾದಿ’ ಎಂದು ಕರೆಯುತ್ತೀರಿ. ಹಾಗಾದರೆ ಭಗವಾನ್ ರಾಮ ಯಾರು? ಭಗವಾನ್ ರಾಮ ಮತ್ತು ಪಾಂಡವರು ತಮ್ಮ ಕುಟುಂಬದ ಪರವಾಗಿ ನಿಂತ ಪರಿವಾರವಾದಿಗಳೇ? ಹಾಗಾದರೆ ನಮ್ಮ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ ಎಂದು ನಾಚಿಕೆಪಡಬೇಕೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ನನ್ನ ಸಹೋದರ ಪ್ರಪಂಚದ ಎರಡು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ್ದಾನೆ, ನೀವು ಅವನ ಪದವಿಯನ್ನು ನೋಡಲಿಲ್ಲ, ಆದರೆ ಮಾಧ್ಯಮದ ಸಹಾಯದಿಂದ ಅವನನ್ನು ಪಪ್ಪು ಮಾಡಿದ್ದೀರಿ. ನಂತರ ಅವನು ಪಪ್ಪು ಅಲ್ಲ ಎಂದು ನೀವು ಕಂಡುಕೊಂಡಿದ್ದೀರಿ ಮತ್ತು ಲಕ್ಷಾಂತರ ಜನರು ಅವನೊಂದಿಗೆ ನಡೆಯುತ್ತಿದ್ದಾರೆ” ಎಂದರು.

”ನನ್ನ ಸಹೋದರನ ವಿರುದ್ಧ ಕೇಸ್ ದಾಖಲಿಸಿದ ವ್ಯಕ್ತಿ ಕಳೆದ ವರ್ಷ ತನ್ನ ಸ್ವಂತ ಪ್ರಕರಣಕ್ಕೆ ತಡೆ ತಂದಿದ್ದರು. ಯಾವಾಗ ರಾಹುಲ್ ಗಾಂಧಿ ಅವರು, ಅದಾನಿ ಕುರಿತು ಭಾಷಣ ಮಾಡಿದರೋ ಆಗ ಮತ್ತೆ ಆ ಪ್ರಕರಣವನ್ನು ಮರು ತೆರೆಯಲಾಯಿತು ಎಂದು ಪ್ರಿpm narendra modiಯಾಂಕಾ ಗಾಂಧಿ ಹೇಳಿದರು.

”ಈ ದೇಶದ ಪ್ರಧಾನಿ ಒಬ್ಬ ಹೇಡಿ. ಹೌದು, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಿ. ನನ್ನ ಸಹೋದರ ದೇಶದ ಹೆಮ್ಮೆ ಮತ್ತು ಈ ಪ್ರಧಾನಿ ಹೇಡಿ. ನಮ್ಮ ದೇಶವು ಹೆಮ್ಮೆಯ ರಾಜನನ್ನು ಸೋಲಿಸುವ ಸಂಪ್ರದಾಯವನ್ನು ಹೊಂದಿದೆ” ಎಂದು ಕಿಡಿಕಾರಿದ್ದಾರೆ.

”ಈ ದೇಶವು ಹೃದಯದಿಂದ ಮಾತನಾಡುತ್ತದೆ ಎಂದು ನನ್ನ ಕುಟುಂಬ ನನಗೆ ಕಲಿಸಿದೆ. ಆದರೆ ಇಂದು ಎಲ್ಲವೂ ವಿಭಿನ್ನವಾಗಿದೆ ಎಂದು ನನಗೆ ಅನಿಸುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...