Homeಮುಖಪುಟಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ:...

ಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂಬುದು ಕೂಡ ಗೊತ್ತಿಲ್ಲ ಎಂದು ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ, “ಅವರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ?” ಎಂದು ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಲೋಕಸಭೆಯಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿರುವ ಕ್ರಮ ವಿರೋಧಿಸಿ ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಒಬ್ಬ ಹೇಡಿ ಎಂದು ಹೇಳಿದ್ದಾರೆ.

”ನೀವು ಸಂಸತ್ತಿನಲ್ಲಿ ನನ್ನ ಹುತಾತ್ಮ ತಂದೆಯನ್ನು ಅವಮಾನಿಸುತ್ತೀರಿ. ನೀವು ಅವರ ಮಗನನ್ನು ಮೀರ್ ಜಾಫರ್ ಎಂದು ಕರೆಯುತ್ತೀರಿ. ನೀವು ನನ್ನ ತಾಯಿಯನ್ನು ಅವಮಾನಿಸುತ್ತಿದ್ದೀರಿ. ನಿಮ್ಮ ಸಿಎಂ ಒಬ್ಬರು ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂದು ಸಹ ತಿಳಿದಿಲ್ಲ ಎಂದು ಹೇಳುತ್ತಾರೆ”

”ಗಾಂಧಿ ಕುಟುಂಬದವರು ನೆಹರೂ ಸರ್‌ನೇಮ್ ಬಳಸಬೇಕು ಎಂದು ನಿಮ್ಮ ಪ್ರಧಾನಿ ಇಡೀ ಕುಟುಂಬವನ್ನು ಅವಮಾನಿಸುತ್ತಾರೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಯಾರೂ ನಿಮ್ಮನ್ನು ಸಂಸತ್ತಿನಿಂದ ಹೊರಗೆ ಕರೆದೊಯ್ಯುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

”ನಾವು ದೀರ್ಘಕಾಲ ಮೌನವಾಗಿದ್ದೇವೆ ಎನ್ನುವ ಕಾರಣಕ್ಕೆ ಇದು ನಡೆಯುತ್ತಿದೆ. ನನ್ನ ಸಹೋದರ ಏನು ಹೇಳಿದರು? ಪ್ರಧಾನಿ ಮೋದಿ ಬಳಿ ಹೋಗಿ ಅಪ್ಪಿಕೊಂಡರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾವುದೇ ದ್ವೇಷವಿಲ್ಲ ಎಂದು ಅವರು ಹೇಳಿದರು. ಆದರೆ ನೀವು ನಮ್ಮ ಸಹೋದರನ ಮೇಲೆ ದ್ವೇಷ ಕಾರುತ್ತೀದ್ದೀರಿ” ಎಂದು ಹೇಳಿದರು.

”ನೀವು ನಮ್ಮನ್ನು ‘ಪರಿವಾರವಾದಿ’ ಎಂದು ಕರೆಯುತ್ತೀರಿ. ಹಾಗಾದರೆ ಭಗವಾನ್ ರಾಮ ಯಾರು? ಭಗವಾನ್ ರಾಮ ಮತ್ತು ಪಾಂಡವರು ತಮ್ಮ ಕುಟುಂಬದ ಪರವಾಗಿ ನಿಂತ ಪರಿವಾರವಾದಿಗಳೇ? ಹಾಗಾದರೆ ನಮ್ಮ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ ಎಂದು ನಾಚಿಕೆಪಡಬೇಕೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ನನ್ನ ಸಹೋದರ ಪ್ರಪಂಚದ ಎರಡು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ್ದಾನೆ, ನೀವು ಅವನ ಪದವಿಯನ್ನು ನೋಡಲಿಲ್ಲ, ಆದರೆ ಮಾಧ್ಯಮದ ಸಹಾಯದಿಂದ ಅವನನ್ನು ಪಪ್ಪು ಮಾಡಿದ್ದೀರಿ. ನಂತರ ಅವನು ಪಪ್ಪು ಅಲ್ಲ ಎಂದು ನೀವು ಕಂಡುಕೊಂಡಿದ್ದೀರಿ ಮತ್ತು ಲಕ್ಷಾಂತರ ಜನರು ಅವನೊಂದಿಗೆ ನಡೆಯುತ್ತಿದ್ದಾರೆ” ಎಂದರು.

”ನನ್ನ ಸಹೋದರನ ವಿರುದ್ಧ ಕೇಸ್ ದಾಖಲಿಸಿದ ವ್ಯಕ್ತಿ ಕಳೆದ ವರ್ಷ ತನ್ನ ಸ್ವಂತ ಪ್ರಕರಣಕ್ಕೆ ತಡೆ ತಂದಿದ್ದರು. ಯಾವಾಗ ರಾಹುಲ್ ಗಾಂಧಿ ಅವರು, ಅದಾನಿ ಕುರಿತು ಭಾಷಣ ಮಾಡಿದರೋ ಆಗ ಮತ್ತೆ ಆ ಪ್ರಕರಣವನ್ನು ಮರು ತೆರೆಯಲಾಯಿತು ಎಂದು ಪ್ರಿpm narendra modiಯಾಂಕಾ ಗಾಂಧಿ ಹೇಳಿದರು.

”ಈ ದೇಶದ ಪ್ರಧಾನಿ ಒಬ್ಬ ಹೇಡಿ. ಹೌದು, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಿ. ನನ್ನ ಸಹೋದರ ದೇಶದ ಹೆಮ್ಮೆ ಮತ್ತು ಈ ಪ್ರಧಾನಿ ಹೇಡಿ. ನಮ್ಮ ದೇಶವು ಹೆಮ್ಮೆಯ ರಾಜನನ್ನು ಸೋಲಿಸುವ ಸಂಪ್ರದಾಯವನ್ನು ಹೊಂದಿದೆ” ಎಂದು ಕಿಡಿಕಾರಿದ್ದಾರೆ.

”ಈ ದೇಶವು ಹೃದಯದಿಂದ ಮಾತನಾಡುತ್ತದೆ ಎಂದು ನನ್ನ ಕುಟುಂಬ ನನಗೆ ಕಲಿಸಿದೆ. ಆದರೆ ಇಂದು ಎಲ್ಲವೂ ವಿಭಿನ್ನವಾಗಿದೆ ಎಂದು ನನಗೆ ಅನಿಸುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...