Homeಮುಖಪುಟಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ:...

ಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂಬುದು ಕೂಡ ಗೊತ್ತಿಲ್ಲ ಎಂದು ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ, “ಅವರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ?” ಎಂದು ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಲೋಕಸಭೆಯಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿರುವ ಕ್ರಮ ವಿರೋಧಿಸಿ ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಒಬ್ಬ ಹೇಡಿ ಎಂದು ಹೇಳಿದ್ದಾರೆ.

”ನೀವು ಸಂಸತ್ತಿನಲ್ಲಿ ನನ್ನ ಹುತಾತ್ಮ ತಂದೆಯನ್ನು ಅವಮಾನಿಸುತ್ತೀರಿ. ನೀವು ಅವರ ಮಗನನ್ನು ಮೀರ್ ಜಾಫರ್ ಎಂದು ಕರೆಯುತ್ತೀರಿ. ನೀವು ನನ್ನ ತಾಯಿಯನ್ನು ಅವಮಾನಿಸುತ್ತಿದ್ದೀರಿ. ನಿಮ್ಮ ಸಿಎಂ ಒಬ್ಬರು ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂದು ಸಹ ತಿಳಿದಿಲ್ಲ ಎಂದು ಹೇಳುತ್ತಾರೆ”

”ಗಾಂಧಿ ಕುಟುಂಬದವರು ನೆಹರೂ ಸರ್‌ನೇಮ್ ಬಳಸಬೇಕು ಎಂದು ನಿಮ್ಮ ಪ್ರಧಾನಿ ಇಡೀ ಕುಟುಂಬವನ್ನು ಅವಮಾನಿಸುತ್ತಾರೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಯಾರೂ ನಿಮ್ಮನ್ನು ಸಂಸತ್ತಿನಿಂದ ಹೊರಗೆ ಕರೆದೊಯ್ಯುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

”ನಾವು ದೀರ್ಘಕಾಲ ಮೌನವಾಗಿದ್ದೇವೆ ಎನ್ನುವ ಕಾರಣಕ್ಕೆ ಇದು ನಡೆಯುತ್ತಿದೆ. ನನ್ನ ಸಹೋದರ ಏನು ಹೇಳಿದರು? ಪ್ರಧಾನಿ ಮೋದಿ ಬಳಿ ಹೋಗಿ ಅಪ್ಪಿಕೊಂಡರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾವುದೇ ದ್ವೇಷವಿಲ್ಲ ಎಂದು ಅವರು ಹೇಳಿದರು. ಆದರೆ ನೀವು ನಮ್ಮ ಸಹೋದರನ ಮೇಲೆ ದ್ವೇಷ ಕಾರುತ್ತೀದ್ದೀರಿ” ಎಂದು ಹೇಳಿದರು.

”ನೀವು ನಮ್ಮನ್ನು ‘ಪರಿವಾರವಾದಿ’ ಎಂದು ಕರೆಯುತ್ತೀರಿ. ಹಾಗಾದರೆ ಭಗವಾನ್ ರಾಮ ಯಾರು? ಭಗವಾನ್ ರಾಮ ಮತ್ತು ಪಾಂಡವರು ತಮ್ಮ ಕುಟುಂಬದ ಪರವಾಗಿ ನಿಂತ ಪರಿವಾರವಾದಿಗಳೇ? ಹಾಗಾದರೆ ನಮ್ಮ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ ಎಂದು ನಾಚಿಕೆಪಡಬೇಕೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ನನ್ನ ಸಹೋದರ ಪ್ರಪಂಚದ ಎರಡು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ್ದಾನೆ, ನೀವು ಅವನ ಪದವಿಯನ್ನು ನೋಡಲಿಲ್ಲ, ಆದರೆ ಮಾಧ್ಯಮದ ಸಹಾಯದಿಂದ ಅವನನ್ನು ಪಪ್ಪು ಮಾಡಿದ್ದೀರಿ. ನಂತರ ಅವನು ಪಪ್ಪು ಅಲ್ಲ ಎಂದು ನೀವು ಕಂಡುಕೊಂಡಿದ್ದೀರಿ ಮತ್ತು ಲಕ್ಷಾಂತರ ಜನರು ಅವನೊಂದಿಗೆ ನಡೆಯುತ್ತಿದ್ದಾರೆ” ಎಂದರು.

”ನನ್ನ ಸಹೋದರನ ವಿರುದ್ಧ ಕೇಸ್ ದಾಖಲಿಸಿದ ವ್ಯಕ್ತಿ ಕಳೆದ ವರ್ಷ ತನ್ನ ಸ್ವಂತ ಪ್ರಕರಣಕ್ಕೆ ತಡೆ ತಂದಿದ್ದರು. ಯಾವಾಗ ರಾಹುಲ್ ಗಾಂಧಿ ಅವರು, ಅದಾನಿ ಕುರಿತು ಭಾಷಣ ಮಾಡಿದರೋ ಆಗ ಮತ್ತೆ ಆ ಪ್ರಕರಣವನ್ನು ಮರು ತೆರೆಯಲಾಯಿತು ಎಂದು ಪ್ರಿpm narendra modiಯಾಂಕಾ ಗಾಂಧಿ ಹೇಳಿದರು.

”ಈ ದೇಶದ ಪ್ರಧಾನಿ ಒಬ್ಬ ಹೇಡಿ. ಹೌದು, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಿ. ನನ್ನ ಸಹೋದರ ದೇಶದ ಹೆಮ್ಮೆ ಮತ್ತು ಈ ಪ್ರಧಾನಿ ಹೇಡಿ. ನಮ್ಮ ದೇಶವು ಹೆಮ್ಮೆಯ ರಾಜನನ್ನು ಸೋಲಿಸುವ ಸಂಪ್ರದಾಯವನ್ನು ಹೊಂದಿದೆ” ಎಂದು ಕಿಡಿಕಾರಿದ್ದಾರೆ.

”ಈ ದೇಶವು ಹೃದಯದಿಂದ ಮಾತನಾಡುತ್ತದೆ ಎಂದು ನನ್ನ ಕುಟುಂಬ ನನಗೆ ಕಲಿಸಿದೆ. ಆದರೆ ಇಂದು ಎಲ್ಲವೂ ವಿಭಿನ್ನವಾಗಿದೆ ಎಂದು ನನಗೆ ಅನಿಸುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...