Homeಮುಖಪುಟಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ:...

ಈ ದೇಶದ ಪ್ರಧಾನಿ ಒಬ್ಬ ಹೇಡಿ, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಲಿ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂಬುದು ಕೂಡ ಗೊತ್ತಿಲ್ಲ ಎಂದು ಮುಖ್ಯಮಂತ್ರಿಯೊಬ್ಬರು ಹೇಳಿದ್ದಾರೆ, “ಅವರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ?” ಎಂದು ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಶ್ನೆ ಮಾಡಿದ್ದಾರೆ.

ಲೋಕಸಭೆಯಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿರುವ ಕ್ರಮ ವಿರೋಧಿಸಿ ರಾಜ್‌ಘಾಟ್‌ನಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಅಹೋರಾತ್ರಿ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಒಬ್ಬ ಹೇಡಿ ಎಂದು ಹೇಳಿದ್ದಾರೆ.

”ನೀವು ಸಂಸತ್ತಿನಲ್ಲಿ ನನ್ನ ಹುತಾತ್ಮ ತಂದೆಯನ್ನು ಅವಮಾನಿಸುತ್ತೀರಿ. ನೀವು ಅವರ ಮಗನನ್ನು ಮೀರ್ ಜಾಫರ್ ಎಂದು ಕರೆಯುತ್ತೀರಿ. ನೀವು ನನ್ನ ತಾಯಿಯನ್ನು ಅವಮಾನಿಸುತ್ತಿದ್ದೀರಿ. ನಿಮ್ಮ ಸಿಎಂ ಒಬ್ಬರು ರಾಹುಲ್ ಗಾಂಧಿಗೆ ಅವರ ತಂದೆ ಯಾರೆಂದು ಸಹ ತಿಳಿದಿಲ್ಲ ಎಂದು ಹೇಳುತ್ತಾರೆ”

”ಗಾಂಧಿ ಕುಟುಂಬದವರು ನೆಹರೂ ಸರ್‌ನೇಮ್ ಬಳಸಬೇಕು ಎಂದು ನಿಮ್ಮ ಪ್ರಧಾನಿ ಇಡೀ ಕುಟುಂಬವನ್ನು ಅವಮಾನಿಸುತ್ತಾರೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲ. ಯಾರೂ ನಿಮ್ಮನ್ನು ಸಂಸತ್ತಿನಿಂದ ಹೊರಗೆ ಕರೆದೊಯ್ಯುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಅಹೋರಾತ್ರಿ ಸತ್ಯಾಗ್ರಹ

”ನಾವು ದೀರ್ಘಕಾಲ ಮೌನವಾಗಿದ್ದೇವೆ ಎನ್ನುವ ಕಾರಣಕ್ಕೆ ಇದು ನಡೆಯುತ್ತಿದೆ. ನನ್ನ ಸಹೋದರ ಏನು ಹೇಳಿದರು? ಪ್ರಧಾನಿ ಮೋದಿ ಬಳಿ ಹೋಗಿ ಅಪ್ಪಿಕೊಂಡರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾವುದೇ ದ್ವೇಷವಿಲ್ಲ ಎಂದು ಅವರು ಹೇಳಿದರು. ಆದರೆ ನೀವು ನಮ್ಮ ಸಹೋದರನ ಮೇಲೆ ದ್ವೇಷ ಕಾರುತ್ತೀದ್ದೀರಿ” ಎಂದು ಹೇಳಿದರು.

”ನೀವು ನಮ್ಮನ್ನು ‘ಪರಿವಾರವಾದಿ’ ಎಂದು ಕರೆಯುತ್ತೀರಿ. ಹಾಗಾದರೆ ಭಗವಾನ್ ರಾಮ ಯಾರು? ಭಗವಾನ್ ರಾಮ ಮತ್ತು ಪಾಂಡವರು ತಮ್ಮ ಕುಟುಂಬದ ಪರವಾಗಿ ನಿಂತ ಪರಿವಾರವಾದಿಗಳೇ? ಹಾಗಾದರೆ ನಮ್ಮ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ ಎಂದು ನಾಚಿಕೆಪಡಬೇಕೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ನನ್ನ ಸಹೋದರ ಪ್ರಪಂಚದ ಎರಡು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಓದಿದ್ದಾನೆ, ನೀವು ಅವನ ಪದವಿಯನ್ನು ನೋಡಲಿಲ್ಲ, ಆದರೆ ಮಾಧ್ಯಮದ ಸಹಾಯದಿಂದ ಅವನನ್ನು ಪಪ್ಪು ಮಾಡಿದ್ದೀರಿ. ನಂತರ ಅವನು ಪಪ್ಪು ಅಲ್ಲ ಎಂದು ನೀವು ಕಂಡುಕೊಂಡಿದ್ದೀರಿ ಮತ್ತು ಲಕ್ಷಾಂತರ ಜನರು ಅವನೊಂದಿಗೆ ನಡೆಯುತ್ತಿದ್ದಾರೆ” ಎಂದರು.

”ನನ್ನ ಸಹೋದರನ ವಿರುದ್ಧ ಕೇಸ್ ದಾಖಲಿಸಿದ ವ್ಯಕ್ತಿ ಕಳೆದ ವರ್ಷ ತನ್ನ ಸ್ವಂತ ಪ್ರಕರಣಕ್ಕೆ ತಡೆ ತಂದಿದ್ದರು. ಯಾವಾಗ ರಾಹುಲ್ ಗಾಂಧಿ ಅವರು, ಅದಾನಿ ಕುರಿತು ಭಾಷಣ ಮಾಡಿದರೋ ಆಗ ಮತ್ತೆ ಆ ಪ್ರಕರಣವನ್ನು ಮರು ತೆರೆಯಲಾಯಿತು ಎಂದು ಪ್ರಿpm narendra modiಯಾಂಕಾ ಗಾಂಧಿ ಹೇಳಿದರು.

”ಈ ದೇಶದ ಪ್ರಧಾನಿ ಒಬ್ಬ ಹೇಡಿ. ಹೌದು, ನನ್ನ ವಿರುದ್ಧ ಕೇಸು ಹಾಕಿ ನನ್ನನ್ನೂ ಜೈಲಿಗೆ ಹಾಕಿ. ನನ್ನ ಸಹೋದರ ದೇಶದ ಹೆಮ್ಮೆ ಮತ್ತು ಈ ಪ್ರಧಾನಿ ಹೇಡಿ. ನಮ್ಮ ದೇಶವು ಹೆಮ್ಮೆಯ ರಾಜನನ್ನು ಸೋಲಿಸುವ ಸಂಪ್ರದಾಯವನ್ನು ಹೊಂದಿದೆ” ಎಂದು ಕಿಡಿಕಾರಿದ್ದಾರೆ.

”ಈ ದೇಶವು ಹೃದಯದಿಂದ ಮಾತನಾಡುತ್ತದೆ ಎಂದು ನನ್ನ ಕುಟುಂಬ ನನಗೆ ಕಲಿಸಿದೆ. ಆದರೆ ಇಂದು ಎಲ್ಲವೂ ವಿಭಿನ್ನವಾಗಿದೆ ಎಂದು ನನಗೆ ಅನಿಸುತ್ತಿದೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...