Homeಮುಖಪುಟದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ದೇಶದ ಅನ್ನದಾತ ರೈತರು ರಸ್ತೆಯಲ್ಲಿ.. ದೇಶದ ಪ್ರಧಾನಿ ಮೋದಿ ಅದಾನಿ-ಅಂಬಾನಿ ಮನೆ ಬಾಗಿಲಿನಲ್ಲಿ..." ಎಂದು ವೀರ ಕನ್ನಡಿಗ ಎಂಬುವವರು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

“ರಸ್ತೆಯಲ್ಲಿ ರೈತ, ಇಟಲಿಯಲ್ಲಿ ರಾಹುಲ್” ಎಂಬ ಶೀರ್ಷಿಕೆಯಲ್ಲಿ ಕನ್ನಡದ ಸುವರ್ಣ ಟಿವಿಯಲ್ಲಿ ಕಾರ್ಯಕ್ರಮ ಪ್ರಸಾರ ಮಾಡಿದ ಅಜಿತ್ ಹನುಮಕ್ಕನವರ್ ಮತ್ತು ಕನ್ನಡಪ್ರಭ ಪತ್ರಿಕೆಯಲ್ಲಿ ಲೇಖನ ಬರೆದ ಪ್ರಶಾಂತ್ ನಾತು ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ದೇಶದ್ರ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ? ನೇರವಾಗಿ ಮೋದಿಯನ್ನು ಪ್ರಶ್ನಿಸಲಾಗದೆ ವಿರೋಧಪಕ್ಷಗಳನ್ನು ಗುರುಮಾಡುವ ಗೋದಿ ಮೀಡಿಯಾ ನೀವು ಎಂಬ ಟೀಕೆ ಕೇಳಿಬಂದಿದೆ.

ರೈತರು ಜಿಯೋ ಸಿಮ್ ತಿರಸ್ಕರಿಸಲು ಕರೆ ನೀಡಿದಾಗ, ದೆಹಲಿಯಲ್ಲಿ ರೈತರ ಹೋರಾಟ ಆರಂಭವಾದಾಗಿನಿಂದಲೂ ಈ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ರೈತರ ವಿರುದ್ಧವೇ ಲೇಖನಗಳು ಬರೆಸುತ್ತಿವೆ. ಆದರೆ ಈಗ ಕೃಷಿ ಕಾಯ್ದೆಗಳನ್ನು ತಂದಿರುವುದು ನರೇಂದ್ರ ಮೋದಿ, ರೈತರು ಹೋರಾಡುತ್ತಿರುವುದು ಮೋದಿ ಸರ್ಕಾರದ ವಿರುದ್ಧ. ಹೀಗಿರುವಾಗ ಮೋದಿಯನ್ನು ಗುರಿಮಾಡಲು ಧೈರ್ಯವಿಲ್ಲದ ಈ ಪತ್ರಿಕೆಗಳು ರಾಹುಲ್‌ ಗಾಂಧಿಯನ್ನು ಗುರಿಮಾಡಿರುವುದು ಜಾಲತಾಣಿಗರ ಆಕ್ರೋಶವನ್ನು ಹೆಚ್ಚು ಮಾಡಿದೆ.

“ಇದನ್ನು ಅವರು ಸುಮ್ಮನೆ ಮಾಡ್ತಿಲ್ಲಾ ಪೊಲಿಟಿಕಲ್ ಹಿಕ್ ಮತ್ ಇಟ್ಕೊಂಡೆ ಮಾಡುವುದು. ಅಧಿಕಾರದಲ್ಲಿರುವವರನ್ನು ಕೇಳದೆ, ಅಧಿಕಾರದಲ್ಲಿರದ ರಾಹುಲ್ ನನ್ನು ಕೇಳುವುದು. ವಿರೋಧ ಪಕ್ಷಗಳ ಬಗ್ಗೆ ಅಪಪ್ರಚಾರ ಮಾಡುವುದು, ರಾಜಕೀಯ ವರ್ಚಸ್ಸು ಬೆಳೆಯದಂತೆ ಮಾಡುವುದು. ಬಿಜೆಪಿಯ ದೊಂಬಿ, ಅವೈಜ್ಞಾನಿಕ ಆಡಳಿತ ಪ್ರಜೆಗಳಿಗೆ ಗೊತ್ತಾಗದಂತೆ ಮಾಡುತ್ತಾ ಇಡೀ ದೇಶವನ್ನು ಖಾಸಗಿ ವ್ಯಕ್ತಿಗಳ ಕೈಗೆ ಅಡವಿಡುವುದು! ಇದು ಪತ್ರಿಕೋದ್ಯಮವಲ್ಲ,ದೇಶದ ತಲೆ ಹೊಡೆಯುವ ಕೆಲಸ” ಎಂದು ಕಾಂತರಾಜು ಕೆ ಗೊಲ್ಲರಹಟ್ಟಿಯವರು ಕಿಡಿಕಾರಿದ್ದಾರೆ.

ಈತನಿಗೆ ನಿಜವಾಗಿಯೂ ಪತ್ರಿಕಾಧರ್ಮ, ಸಾಮಾಜಿಕ ಕಾಳಜಿ ಎಂದರೆ ಏನೆಂದು ಗೊತ್ತಿದ್ದರೆ, ವೃತ್ತಿಯ ವಿಚಾರದಲ್ಲಿ ಯಾವುದೇ ಪಂಥದ ಪಕ್ಷಪಾತಿ ಅಲ್ಲದೇ ಇರುತ್ತಿದ್ದರೆ ಈ ಅಂಕಣದ ಹೆಡ್ಡಿಂಗ್ ‘ರಸ್ತೆಯಲ್ಲಿ ರೈತ ಮನೆಯಲ್ಲಿ ಮೋದಿ’ ಹೀಗೆ ಇರಬೇಕಿತ್ತು ಎಂದು ಪತ್ರಕರ್ತೆ ಹೇಮಾವತಿ ವೆಂಕಟ್ ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯ ರಸ್ತೆಯಲ್ಲಿ ನೂರಾರು ಕಿಲೋಮೀಟರ್ ನಡಿಗೆಯಲ್ಲಿ ಸಾಗುತ್ತಿದ್ದ ಕಾರ್ಮಿಕರನ್ನು ರಾಹುಲ್ ಗಾಂಧಿ ಮಾತನಾಡಿಸಿದರೆ ಅದು ನಾಟಕ, ಕಾರ್ಮಿಕರಿಗೆ ಊರಿಗೆ ತೆರಳಲು ಬಸ್ ವ್ಯವಸ್ಥೆ ಮಾಡಿದರೆ ಗಿಮಿಕ್,
ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲು ಹೋದರೆ ಅದು ರಾಜಕೀಯ. ಇಟಲಿಗೆ ಹೋದರೆ ಪಲಾಯನ ಎಂದು ಬೊಬ್ಬೆ ಹೊಡೆಯುವವರು ಇದೇ ಪತ್ರಕರ್ತರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರೈತ ರಸ್ತೆಯಲ್ಲಿರುವಾಗ ವಾರಣಾಸಿಯಲ್ಲಿ ದೀಪಾವಳಿ, ಆರ್ಕೆಸ್ಟ್ರಾ, ಕುಣಿತ ಎಲ್ಲ ಬೇಕಿತ್ತಾ? ಹೊಸ ಸಂಸತ್ತಿಗೆ ಭೂಮಿ ಪೂಜೆ ಮಾಡುವ ಅರ್ಜಂಟ್ ಏನಿತ್ತು? ಈ ತುರ್ತು ಸಂದರ್ಭದಲ್ಲಿ ಚಳಿಗಾಲದ ಅಧಿವೇಶನ ರದ್ದು ಪಡಿಸಿದ್ದು ಯಾಕೆ ಎಂದು ಒಬ್ಬರಾದರೂ ಅಂಕಣ ಬರೆದ್ರಾ? ಯಾಕೆ ಬಿಜೆಪಿ ಬೆಂಬಲಿಗರಾದ ಮಾತ್ರಕ್ಕೆ ಸರ್ಕಾರದ ವಿಲಕ್ಷಣ ನಡವಳಿಕೆ ಪ್ರಶ್ನೆ ಮಾಡಬಾರದೇ? ಈ ನಾತು ಅವರಿಗೆ ಈ ಅಂಕಣ ಬರೆಯುವ ಅಗತ್ಯ ಏನಿತ್ತು? ರಾಹುಲ್ ಪ್ರಧಾನಿಯೇ, ಗೃಹಮಂತ್ರಿಯೇ, ಕೃಷಿ ಸಚಿವರೇ? ಕನಿಷ್ಠ ಕಾಮನ್ ಸೆನ್ಸ್ ಬೇಡ್ವಾ!
ಈಗ ರಾಹುಲ್ ಏನು ಮಾಡಬೇಕಿತ್ತು; ಸರ್ಕಾರ ಅಗೆಯುವ ರಸ್ತೆ ಪಕ್ಕ ಕಾವಲು‌ ಕಾಯಬೇಕಿತ್ತಾ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿಗೆ ಧಿಕ್ಕಾರ
ತೊಲಗಲಿ ತೊಲಗಲಿ ರಾಹುಲ್ ಗಾಂಧಿ ತೊಲಗಲಿ
ಡೌನ್ ಡೌನ್ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಕೊಡಲಿ !! ಎಂದು ವಕೀಲರಾದ ಜಗನ್ನಾಥ್ ರಾಮಸ್ವಾಮಿಯವರು ವ್ಯಂಗ್ಯವಾಡಿದ್ದಾರೆ.

ಪ್ರತಿಭಟನಾ ನಿರತ ರೈತರನ್ನು ಖಾಲಿಸ್ತಾನಿ ಉಗ್ರರು, ಅವರನ್ನು ಬೆಂಬಲಿಸುತ್ತಿರುವವರೆಲ್ಲ ದೇಶದ್ರೋಹಿ ಅರ್ಬನ್ ನಕ್ಸಲ್‌ಗಳು ಎಂದೆಲ್ಲ ಸಂಭೋದಿಸಿದ್ದು ಇದೆ ಸುವರ್ಣ ಚಾನಲ್‌ನ ಅಜಿತ್ ಹನುಮಕ್ಕ ಮತ್ತು ಪ್ರಶಾಂತ್ ನಾತು ಅಲ್ಲವೇ? ಕ್ರಿಮಿ ಕೀಟಗಳಂತೆಯೂ ಕಾಲ ಕಸದಂತೆ ಅನ್ನದಾತನ ಚಳುವಳಿಯನ್ನು ಹೀಯಾಳಿಸಿದ ಇವರ ಕಣ್ಣಿಗೆ ಇಂದು ದೆಹಲಿ ಪ್ರತಿಭಟನಾ ನಿರತರು ನೈಜ ರೈತರಾಗಿ ಕಾಣಿಸಿತ್ತಿರುವುದು ಪರಮಾಶ್ಚರ್ಯ! ಎಂದು ದೀಪಕ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

“ದೇಶದ ಅನ್ನದಾತ ರೈತರು ರಸ್ತೆಯಲ್ಲಿ.. ದೇಶದ ಪ್ರಧಾನಿ ಮೋದಿ ಅದಾನಿ-ಅಂಬಾನಿ ಮನೆ ಬಾಗಿಲಿನಲ್ಲಿ…” ಎಂದು ಕನ್ನಡಿಗ ವೀರ ಕನ್ನಡಿಗ ಎಂಬುವವರು ವ್ಯಂಗ್ಯವಾಡಿದ್ದಾರೆ.

ರೈತರು ರಸ್ತೆಗಿಳಿಯುವಂತೆ ಮಾಡಿದ್ದು ಯಾರು? ಪ್ರಧಾನಿ ಮೋದಿಯವರು. ರೈತ ವಿರೋಧಿ ಕೃಷಿ ಕಾಯ್ದೆ ತರುತ್ತಿರುವವರು ಯಾರು ? ಪ್ರಧಾನಿ ಮೋದಿಯವರು….. ಚಳಿ,ಮಳೆ,ಗಾಳಿಯನ್ನದೆ ರಸ್ತೆಯಲ್ಲಿ ಕುಳಿತು ಪ್ರತಿಭಟಿಸುತ್ತಿರುವ ರೈತರ ಜೊತೆ ಮಾತಾಡಲು ಅಂಜುವ ನರೇಂದ್ರ ಮೋದಿಯವರು ಪ್ರಧಾನಿ ನಿವಾಸದಲ್ಲಿ ಬೆಚ್ಚಗಿದ್ದಾರೆ!! ಈ ಮಾಧ್ಯಮಗಳು ಮತ್ತು ಪತ್ರಕರ್ತರು ಪ್ರಶ್ನಿಸಬೇಕಾಗಿರುವುದು ಯಾರನ್ನು? ಪ್ರಧಾನಿ ಮೋದಿಯವರನ್ನು….ಆದರೆ…..? ನಾತ ಮತ್ತು ಅಜಿತ್ ನ ಅವತಾರಗಳ ನೋಡಿದ್ಮೇಲೆ ಅರ್ಥವಾಯ್ತು….ಗುಲಾಮಿ ಸಂತತಿ ಇನ್ನೂ ಜೀವಂತವಾಗಿದೆ ಅಂತ!! ಎಂದು ಓದು ಸಿದ್ದೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರು ಜಿಯೋ ಸಿಮ್ ತಿರಸ್ಕರಿಸಲು ಕರೆ ಕೊಟ್ಟಾಗ ಅಜಿತ್ ಹನುಮಕ್ಕನವರ್ ಅಂಬಾನಿ ಪರ ಬ್ಯಾಟಿಂಗ್ ಮಾಡಿ ಟೀಕೆಗೊಳಗಾಗಿದ್ದರು. ಈ ಹಿಂದೆಯೂ ಸಹ ಪೆಟ್ರೋಲ್ ದರ ಹೆಚ್ಚಾದಾಗ ಮೋದಿ ಹೆಸರೆತ್ತದೆ ವರದಿ ಮಾಡಿದ್ದರು. ಅವರು ಸಂಪೂರ್ಣ ಬಿಜೆಪಿ ಪರವಾಗಿ ವರದಿ ಮಾಡುವುದರಿಂದ ರೊಚ್ಚಿಗೆದ್ದ ನೆಟ್ಟಿಗರು ಈ ಹಿಂದೆ ‘ಅಜಿತ್ ಬಿಜೆಪಿ ಏಜೆಂಟ್’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ರೆಂಡ್ ಮಾಡಿದ್ದರು.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...