Homeಮುಖಪುಟ'ರಾಜಸ್ಥಾನದ ನಾಟಕಕ್ಕೆ ಅಂತ್ಯ ಹಾಡಿ': ಪಿಎಂ ಮೋದಿಗೆ ಗೆಹ್ಲೋಟ್ ಒತ್ತಾಯ

‘ರಾಜಸ್ಥಾನದ ನಾಟಕಕ್ಕೆ ಅಂತ್ಯ ಹಾಡಿ’: ಪಿಎಂ ಮೋದಿಗೆ ಗೆಹ್ಲೋಟ್ ಒತ್ತಾಯ

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರವನ್ನು ಉರುಳಿಸುವ ಬಿಜೆಪಿಯ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಕೊನೆಗಾಣಿಸಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.

“ಮೋದಿಜಿ ದೇಶದ ಪ್ರಧಾನ ಮಂತ್ರಿ. ದೇಶದ ಜನರು ಅವರಿಗೆ ದೇಶವನ್ನು ಮುನ್ನೆಡೆಸಲು ಎರಡು ಬಾರಿ ಅವಕಾಶ ನೀಡಿದ್ದಾರೆ. ಅವರು ಜನರನ್ನು ಚಪ್ಪಾಳೆ ತಟ್ಟುವಂತೆ ಮಾಡಿದರು, ಪಾತ್ರೆಗಳನ್ನು ಬಡಿಯುವಂತೆ ಮಾಡಿದರು. ಜನರು ಅವನನ್ನು ನಂಬಿದ್ದರು. ಇದು ಒಂದು ದೊಡ್ಡ ವಿಷಯ. ಮೋದಿಯವರು ರಾಜಸ್ಥಾನದ ನಾಟಕಕ್ಕೆ ಅಂತ್ಯ ಹಾಡಬೇಕು. ಬಿಜೆಪಿಯು ಅಸೆಂಬ್ಲಿ ಅಧಿವೇಶನಕ್ಕೆ ಮುಂಚಿತವಾಗಿ ಕುದುರೆ ವ್ಯಾಪಾರದ ದರವನ್ನು ಹೆಚ್ಚಿಸಿದೆ. ಈ ನಾಟಕ ಯಾವುದು?” ಎಂದು ಗೆಹ್ಲೋಟ್ ಪ್ರಶ್ನಿಸಿದ್ದಾರೆ.

ಮಾಯಾವತಿಯವರು ಸಿಬಿಐ ಮತ್ತು ಇಡಿ ಒತ್ತಡದಲ್ಲಿದ್ದಾರೆ. ರಾಜ್ಯದ ಬಿಎಸ್ಪಿ ಶಾಸಕರು ಕಾನೂನಿನ ಪ್ರಕಾರ ಕಾಂಗ್ರೆಸ್‌ನಲ್ಲಿ ವಿಲೀನಗೊಂಡರು. ರಾಜ್ಯಸಭೆಯಲ್ಲಿ 4 ಟಿಡಿಪಿ ಸಂಸದರು ಬಿಜೆಪಿಯೊಂದಿಗೆ ವಿಲೀನಗೊಂಡಾಗ ಯಾರೂ ಅದನ್ನು ಪ್ರಶ್ನಿಸಲಿಲ್ಲ, ಈಗೇಕೆ ಪ್ರಶ್ನೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಸಂಜೀವಿನಿ ಕೋಆಪರೇಟಿವ್ ಸೊಸೈಟಿ ಹಗರಣದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಹೆಸರು ಬಂದಿದೆ. ನ್ಯಾಯಾಲಯವು ಈ ವಿಷಯದಲ್ಲಿ ನಿರ್ದೇಶನ ನೀಡಿದೆ. ನೈತಿಕ ಆಧಾರದ ಮೇಲೆ ಅವರು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸದನದಲ್ಲಿ ಭಾಗವಹಿಸುತ್ತೇವೆ

ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕರಿಗೆ ವಿಪ್ ನೀಡಿದರೆ ಆಗಸ್ಟ್ 14ರಂದು ನಡೆಯಲಿರುವ ವಿಧಾನಸಭೆ ಅಧಿವೇಶನಕ್ಕೆ ಹಾಜರಾಗುತ್ತೇವೆ ಎಂದು ಬಂಡಾಯ ಶಾಸಕರೊಬ್ಬರು ಹೇಳಿದ್ದಾರೆ ಎನ್ನಲಾಗಿದೆ.

ನಾವು ಸಚಿನ್ ಪೈಲಟ್ ಜೊತೆಗಿದ್ದೇವೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ. ನಾವು ಕಾಂಗ್ರೆಸ್ ಪಕ್ಷವನ್ನು ತೊರೆಯುವ ಬಗ್ಗೆ ಯಾವುತ್ತೂ ಮಾತನಾಡುವುದಿಲ್ಲ. ಕಾಂಗ್ರೆಸ್ ವಿಪ್ ನೀಡಿದ್ದರೆ ನಾವು ವಿಧಾನಸಭೆ ಅಧಿವೇಶನಕ್ಕೆ ಖಂಡಿತವಾಗಿ ಭಾಗವಹಿಸುತ್ತೇವೆ. ನಾವು ನಮ್ಮ ಧ್ವನಿಯನ್ನು ಸದನದಲ್ಲಿ ಎತ್ತುತ್ತೇವೆ ಎಂದು ಅವರು ಹೇಳಿದ್ದಾರೆ.

‘ನಾವು ನಾಯಕತ್ವ ಬದಲಾವಣೆ ಬಯಸುತ್ತಿದ್ದೇವೆ. ರಾಜಸ್ಥಾನ ಮುಖ್ಯಮಂತ್ರಿ ನಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ. ನಮ್ಮ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ನಮಗೂ ಆತ್ಮಗೌರವ ಇದೆ. ಗೆಹ್ಲೋಟ್ ತನ್ನ ಕುಟುಂಬದ ಸದಸ್ಯರನ್ನೇ ನಿಂದಿಸಿದ್ದಾರೆ. ಈ ಸಮಯದಲ್ಲಿ ನಾವು ಬಿಜೆಪಿ ಬಗ್ಗೆ ಮಾತನಾಡುವುದಿಲ್ಲ. ಕಾಂಗ್ರೆಸ್ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಬಂಡಾಯ ಕಾಂಗ್ರೆಸ್‌ ಶಾಸಕರು ತಿಳಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ ನಡೆಸಿ

ಕೋವಿಡ್‌ ಪರಿಸ್ಥಿತಿ ಕುರಿತು ಈ ಹಿಂದೆ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸ್‌ ನಡೆಸಿ ಬಹಳ ಸಮಯವಾಗಿದೆ. ಕೊನೆಯದಾಗಿ ಅವರು ಜೂನ್ 17 ರಂದು ಮುಖ್ಯಮಂತ್ರಿಗಳೊಡನೆ ಮಾತನಾಡಿದ್ದರು. ಹಾಗಾಗಿ ಕೂಡಲೇ ವಿಡಿಯೋ ಕಾನ್ಫರೆನ್ಸ್‌ ನಡೆಸಲು ಅವರಿಗೆ ಪತ್ರ ಬರೆಯುತ್ತಿದ್ದೇನೆ. ವಿಡಿಯೋ ಕಾನ್ಫರೆನ್ಸ್‌ ಎರಡು ದಿನಗಳವರೆಗೆ ನಡೆದರೆ ಒಳ್ಳೆಯದು. ಆಗ ಪ್ರತಿಯೊಬ್ಬ ಸಿಎಂಗೆ ಮಾತನಾಡಲು ಅವಕಾಶ ಸಿಗುತ್ತದೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಸಭೆಯನ್ನು ಒಂದು ದಿನ ಮಾತ್ರ ನಡೆಸಿದರೆ, ಅರ್ಧದಷ್ಟು ಜನರು ಮಾತ್ರ ಮಾತನಾಡಲು ಸಾಧ್ಯವಾಗುತ್ತದೆ. ಅರ್ಧದಷ್ಟು ಜನರು ಮಾತನಾಡಲು ಸಾಧ್ಯವಾಗುವುದಿಲ್ಲ. ನಾವು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲು ಬಯಸುತ್ತೇವೆ. ಆ ರಾಜ್ಯಗಳಲ್ಲಿನ ಪರಿಸ್ಥಿತಿ ಏನು ಮತ್ತು ಅವರಿಗೆ ಕೇಂದ್ರದಿಂದ ಏನು ಬೇಕು ಎಂಬುದರ ಕುರಿತು ಅವರ ಪ್ರತಿಕ್ರಿಯೆಯನ್ನು ಪಡೆಯಲು ನಾವು ಬಯಸುತ್ತೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ; ಬಿಜೆಪಿ ವಿಲೀನ ಮಾಡಿದ್ರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೆ?: ಅಶೋಕ್ ಗೆಹ್ಲೋಟ್ ಪ್ರಶ್ನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...