Homeಮುಖಪುಟ'ರಾಜಸ್ಥಾನದ ನಾಟಕಕ್ಕೆ ಅಂತ್ಯ ಹಾಡಿ': ಪಿಎಂ ಮೋದಿಗೆ ಗೆಹ್ಲೋಟ್ ಒತ್ತಾಯ

‘ರಾಜಸ್ಥಾನದ ನಾಟಕಕ್ಕೆ ಅಂತ್ಯ ಹಾಡಿ’: ಪಿಎಂ ಮೋದಿಗೆ ಗೆಹ್ಲೋಟ್ ಒತ್ತಾಯ

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರವನ್ನು ಉರುಳಿಸುವ ಬಿಜೆಪಿಯ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಕೊನೆಗಾಣಿಸಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.

“ಮೋದಿಜಿ ದೇಶದ ಪ್ರಧಾನ ಮಂತ್ರಿ. ದೇಶದ ಜನರು ಅವರಿಗೆ ದೇಶವನ್ನು ಮುನ್ನೆಡೆಸಲು ಎರಡು ಬಾರಿ ಅವಕಾಶ ನೀಡಿದ್ದಾರೆ. ಅವರು ಜನರನ್ನು ಚಪ್ಪಾಳೆ ತಟ್ಟುವಂತೆ ಮಾಡಿದರು, ಪಾತ್ರೆಗಳನ್ನು ಬಡಿಯುವಂತೆ ಮಾಡಿದರು. ಜನರು ಅವನನ್ನು ನಂಬಿದ್ದರು. ಇದು ಒಂದು ದೊಡ್ಡ ವಿಷಯ. ಮೋದಿಯವರು ರಾಜಸ್ಥಾನದ ನಾಟಕಕ್ಕೆ ಅಂತ್ಯ ಹಾಡಬೇಕು. ಬಿಜೆಪಿಯು ಅಸೆಂಬ್ಲಿ ಅಧಿವೇಶನಕ್ಕೆ ಮುಂಚಿತವಾಗಿ ಕುದುರೆ ವ್ಯಾಪಾರದ ದರವನ್ನು ಹೆಚ್ಚಿಸಿದೆ. ಈ ನಾಟಕ ಯಾವುದು?” ಎಂದು ಗೆಹ್ಲೋಟ್ ಪ್ರಶ್ನಿಸಿದ್ದಾರೆ.

ಮಾಯಾವತಿಯವರು ಸಿಬಿಐ ಮತ್ತು ಇಡಿ ಒತ್ತಡದಲ್ಲಿದ್ದಾರೆ. ರಾಜ್ಯದ ಬಿಎಸ್ಪಿ ಶಾಸಕರು ಕಾನೂನಿನ ಪ್ರಕಾರ ಕಾಂಗ್ರೆಸ್‌ನಲ್ಲಿ ವಿಲೀನಗೊಂಡರು. ರಾಜ್ಯಸಭೆಯಲ್ಲಿ 4 ಟಿಡಿಪಿ ಸಂಸದರು ಬಿಜೆಪಿಯೊಂದಿಗೆ ವಿಲೀನಗೊಂಡಾಗ ಯಾರೂ ಅದನ್ನು ಪ್ರಶ್ನಿಸಲಿಲ್ಲ, ಈಗೇಕೆ ಪ್ರಶ್ನೆ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಸಂಜೀವಿನಿ ಕೋಆಪರೇಟಿವ್ ಸೊಸೈಟಿ ಹಗರಣದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಹೆಸರು ಬಂದಿದೆ. ನ್ಯಾಯಾಲಯವು ಈ ವಿಷಯದಲ್ಲಿ ನಿರ್ದೇಶನ ನೀಡಿದೆ. ನೈತಿಕ ಆಧಾರದ ಮೇಲೆ ಅವರು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸದನದಲ್ಲಿ ಭಾಗವಹಿಸುತ್ತೇವೆ

ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕರಿಗೆ ವಿಪ್ ನೀಡಿದರೆ ಆಗಸ್ಟ್ 14ರಂದು ನಡೆಯಲಿರುವ ವಿಧಾನಸಭೆ ಅಧಿವೇಶನಕ್ಕೆ ಹಾಜರಾಗುತ್ತೇವೆ ಎಂದು ಬಂಡಾಯ ಶಾಸಕರೊಬ್ಬರು ಹೇಳಿದ್ದಾರೆ ಎನ್ನಲಾಗಿದೆ.

ನಾವು ಸಚಿನ್ ಪೈಲಟ್ ಜೊತೆಗಿದ್ದೇವೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ. ನಾವು ಕಾಂಗ್ರೆಸ್ ಪಕ್ಷವನ್ನು ತೊರೆಯುವ ಬಗ್ಗೆ ಯಾವುತ್ತೂ ಮಾತನಾಡುವುದಿಲ್ಲ. ಕಾಂಗ್ರೆಸ್ ವಿಪ್ ನೀಡಿದ್ದರೆ ನಾವು ವಿಧಾನಸಭೆ ಅಧಿವೇಶನಕ್ಕೆ ಖಂಡಿತವಾಗಿ ಭಾಗವಹಿಸುತ್ತೇವೆ. ನಾವು ನಮ್ಮ ಧ್ವನಿಯನ್ನು ಸದನದಲ್ಲಿ ಎತ್ತುತ್ತೇವೆ ಎಂದು ಅವರು ಹೇಳಿದ್ದಾರೆ.

‘ನಾವು ನಾಯಕತ್ವ ಬದಲಾವಣೆ ಬಯಸುತ್ತಿದ್ದೇವೆ. ರಾಜಸ್ಥಾನ ಮುಖ್ಯಮಂತ್ರಿ ನಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ. ನಮ್ಮ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ನಮಗೂ ಆತ್ಮಗೌರವ ಇದೆ. ಗೆಹ್ಲೋಟ್ ತನ್ನ ಕುಟುಂಬದ ಸದಸ್ಯರನ್ನೇ ನಿಂದಿಸಿದ್ದಾರೆ. ಈ ಸಮಯದಲ್ಲಿ ನಾವು ಬಿಜೆಪಿ ಬಗ್ಗೆ ಮಾತನಾಡುವುದಿಲ್ಲ. ಕಾಂಗ್ರೆಸ್ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಬಂಡಾಯ ಕಾಂಗ್ರೆಸ್‌ ಶಾಸಕರು ತಿಳಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ ನಡೆಸಿ

ಕೋವಿಡ್‌ ಪರಿಸ್ಥಿತಿ ಕುರಿತು ಈ ಹಿಂದೆ ಪ್ರಧಾನಮಂತ್ರಿಯವರು ವಿಡಿಯೋ ಕಾನ್ಫರೆನ್ಸ್‌ ನಡೆಸಿ ಬಹಳ ಸಮಯವಾಗಿದೆ. ಕೊನೆಯದಾಗಿ ಅವರು ಜೂನ್ 17 ರಂದು ಮುಖ್ಯಮಂತ್ರಿಗಳೊಡನೆ ಮಾತನಾಡಿದ್ದರು. ಹಾಗಾಗಿ ಕೂಡಲೇ ವಿಡಿಯೋ ಕಾನ್ಫರೆನ್ಸ್‌ ನಡೆಸಲು ಅವರಿಗೆ ಪತ್ರ ಬರೆಯುತ್ತಿದ್ದೇನೆ. ವಿಡಿಯೋ ಕಾನ್ಫರೆನ್ಸ್‌ ಎರಡು ದಿನಗಳವರೆಗೆ ನಡೆದರೆ ಒಳ್ಳೆಯದು. ಆಗ ಪ್ರತಿಯೊಬ್ಬ ಸಿಎಂಗೆ ಮಾತನಾಡಲು ಅವಕಾಶ ಸಿಗುತ್ತದೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಸಭೆಯನ್ನು ಒಂದು ದಿನ ಮಾತ್ರ ನಡೆಸಿದರೆ, ಅರ್ಧದಷ್ಟು ಜನರು ಮಾತ್ರ ಮಾತನಾಡಲು ಸಾಧ್ಯವಾಗುತ್ತದೆ. ಅರ್ಧದಷ್ಟು ಜನರು ಮಾತನಾಡಲು ಸಾಧ್ಯವಾಗುವುದಿಲ್ಲ. ನಾವು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲು ಬಯಸುತ್ತೇವೆ. ಆ ರಾಜ್ಯಗಳಲ್ಲಿನ ಪರಿಸ್ಥಿತಿ ಏನು ಮತ್ತು ಅವರಿಗೆ ಕೇಂದ್ರದಿಂದ ಏನು ಬೇಕು ಎಂಬುದರ ಕುರಿತು ಅವರ ಪ್ರತಿಕ್ರಿಯೆಯನ್ನು ಪಡೆಯಲು ನಾವು ಬಯಸುತ್ತೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ; ಬಿಜೆಪಿ ವಿಲೀನ ಮಾಡಿದ್ರೆ ಸರಿ, ಕಾಂಗ್ರೆಸ್ ಮಾಡಿದರೆ ತಪ್ಪೆ?: ಅಶೋಕ್ ಗೆಹ್ಲೋಟ್ ಪ್ರಶ್ನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...