Homeಮುಖಪುಟರ್‍ಯಾಲಿಯ ವೈಫಲ್ಯ ಮುಚ್ಚಿ ಹಾಕಲು ‘ಜೀವ ಬೆದರಿಕೆ’ ನೆಪ ಹೇಳುತ್ತಿರುವ ಪ್ರಧಾನಿ: ಸಂಯುಕ್ತ ಕಿಸಾನ್ ಮೋರ್ಚಾ

ರ್‍ಯಾಲಿಯ ವೈಫಲ್ಯ ಮುಚ್ಚಿ ಹಾಕಲು ‘ಜೀವ ಬೆದರಿಕೆ’ ನೆಪ ಹೇಳುತ್ತಿರುವ ಪ್ರಧಾನಿ: ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಪ್ರಧಾನಿ ಮೋದಿ ತಮ್ಮ ರ್‍ಯಾಲಿ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಪಂಜಾಬ್ ಹಾಗೂ ರೈತರ ಚಳುವಳಿಗೆ ಕೆಟ್ಟ ಹೆಸರು ತರಲು, ‘ಹೇಗೋ ತನ್ನ ಜೀವ ಉಳಿದಿದೆ’ ಎಂದು ಪಂಜಾಬ್‌ ಭದ್ರತಾ ಲೋಪವನ್ನು ಬಳಸುತ್ತಿದ್ದಾರೆ ಎಂದು ರೈತ ಹೋರಾಟದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಿಸಾನ್ ಮೋರ್ಚಾ, “ಜನವರಿ 5 ರಂದು ಪಂಜಾಬ್‌ಗೆ ಪ್ರಧಾನಿ ಭೇಟಿಯ ಸುದ್ದಿ ತಿಳಿದ ನಂತರ ಮೋರ್ಚಾದ ಸಂಯೋಜಿತ 10 ರೈತ ಸಂಘಟನೆಗಳು ಅಜಯ್ ಮಿಶ್ರಾ ತೇನಿ ಬಂಧನ ಮತ್ತು ಇತರ ಬೇಡಿಕೆಗಳಿಗಾಗಿ ಸಾಂಕೇತಿಕ ಪ್ರತಿಭಟನೆಯನ್ನು ಘೋಷಿಸಿದ್ದವು.

ಇದನ್ನೂ ಓದಿ: ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಈ ಉದ್ದೇಶಕ್ಕಾಗಿ, ಪಂಜಾಬ್‌ನಾದ್ಯಂತ ಗ್ರಾಮ ಮಟ್ಟದಲ್ಲಿ ಪ್ರತಿಭಟನೆಗಳು ಹಾಗೂ ಪ್ರತಿಕೃತಿ ದಹನದ ಕಾರ್ಯಕ್ರಮಗಳನ್ನು ಜನವರಿ 2 ರಂದು ಮತ್ತು ಜನವರಿ 5 ರಂದು ಜಿಲ್ಲಾ ಹಾಗೂ ತಹಸಿಲ್ ಕೇಂದ್ರಗಳಲ್ಲಿ ಘೋಷಿಸಲಾಯಿತ್ತು. ಆದರೆ ಪ್ರಧಾನಿಯ ಭೇಟಿಯನ್ನು ತಡೆಯುವ ಅಥವಾ ಅವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಯಾವುದೇ ಕಾರ್ಯಕ್ರಮಗಳಿರಲಿಲ್ಲ” ಎಂದು ಮೋರ್ಚಾ ಹೇಳಿದೆ.

“ಪೂರ್ವನಿರ್ಧರಿತ ವೇಳಾಪಟ್ಟಿಯಂತೆ, ಜನವರಿ 5 ರಂದು ಪಂಜಾಬ್‌ನ ಪ್ರತಿ ಜಿಲ್ಲೆ ಮತ್ತು ತಹಸಿಲ್ ಕೇಂದ್ರ ಕಚೇರಿಗಳಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲಾಯಿತು. ಫಿರೋಜ್‌ಪುರ ಜಿಲ್ಲಾ ಕೇಂದ್ರಕ್ಕೆ ತೆರಳದಂತೆ ಕೆಲ ರೈತರನ್ನು ಪೊಲೀಸರು ತಡೆದಾಗ ಹಲವು ಕಡೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಇವುಗಳಲ್ಲಿ ಪ್ರಧಾನಿಯವರ ಬೆಂಗಾವಲು ಪಡೆ ಬಂದು ನಿಲ್ಲಿಸಿ ಹಿಂತಿರುಗಿದ ಪೈರಾಯನ ಮೇಲ್ಸೇತುವೆಯೂ ಇತ್ತು. ಅಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಪ್ರಧಾನಿ ಬೆಂಗಾವಲು ಪಡೆ ಹಾದು ಹೋಗುತ್ತದೆ ಎಂಬ ಖಚಿತ ಮಾಹಿತಿ ಇರಲಿಲ್ಲ. ಪ್ರಧಾನಿ ವಾಪಸಾದ ಬಳಿಕ ಮಾಧ್ಯಮಗಳಿಂದ ಈ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

ಪ್ರತಿಭಟನಾ ನಿರತ ರೈತರು ಪ್ರಧಾನಿ ಬೆಂಗಾವಲು ಪಡೆ ಕಡೆಗೆ ಹೋಗಲು ಯಾವುದೇ ಪ್ರಯತ್ನವನ್ನೂ ಮಾಡಿಲ್ಲ ಎಂಬುದು ಹೊಸ ವಿಡಿಯೋದಿಂದ ಸ್ಪಷ್ಟವಾಗಿದೆ. ಬಿಜೆಪಿ ಧ್ವಜದೊಂದಿಗೆ ‘ನರೇಂದ್ರ ಮೋದಿ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಗುಂಪು ಮಾತ್ರ ಆ ಬೆಂಗಾವಲು ಪಡೆಯ ಬಳಿ ತಲುಪಿತ್ತು. ಆದ್ದರಿಂದ, ಪ್ರಧಾನಿಯ ಜೀವಕ್ಕೆ ಬೆದರಿಕೆ ಎಂಬುವುದು ಸಂಪೂರ್ಣವಾಗಿ ಸುಳ್ಳು ಎಂದು ಸ್ಪಷ್ಟವಾಗುತ್ತದೆ” ಎಂದು ಕಿಸಾನ್ ಮೋರ್ಚಾ ಹೇಳಿದೆ.

“ತನ್ನ ರ್‍ಯಾಲಿಯ ವೈಫಲ್ಯವನ್ನು ಮುಚ್ಚಿಹಾಕಲು, ಪ್ರಧಾನಿ ಪಂಜಾಬ್ ರಾಜ್ಯ ಮತ್ತು ರೈತರ ಚಳುವಳಿಗೆ ಕೆಟ್ಟ ಹೆಸರು ತರಲು ‘ಹೇಗೋ ತನ್ನ ಜೀವ ಉಳಿದಿದೆ’ ಎಂಬ ನೆಪವನ್ನು ಬಳಸಿದ್ದಾರೆ ಎಂಬುದು ಅತ್ಯಂತ ವಿಷಾದದ ಸಂಗತಿಯಾಗಿದೆ. ಅಜಯ್ ಮಿಶ್ರಾ ತೇನಿಯಂತಹ ಕ್ರಿಮಿನಲ್ ಗಳು ಮಂತ್ರಿಗಳಾಗುತ್ತಾ, ಸ್ವೇಚ್ಛೆಯಿಂದ ತಿರುಗಾಡುವವರಿಂದ ಮಾತ್ರ ರೈತರಿಗೆ ‘ಜೀವ ಬೆದರಿಕೆ’ ಎಂಬುದು ಇಡೀ ದೇಶಕ್ಕೆ ಗೊತ್ತು. ದೇಶದ ಪ್ರಧಾನಿಯವರು ತಮ್ಮ ಹುದ್ದೆಯ ಘನತೆಯನ್ನು ಗಮನದಲ್ಲಿಟ್ಟುಕೊಂಡು ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು” ಎಂದು ಸಂಯುಕ್ತ ಕಿಸಾನ್ ಮೋರ್ಚಾ ಕೇಳಿಕೊಂಡಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. You people are unfit to live on earth. Better quit India and go to Pakistan. Then you will learn about India. You people should be kicked out of India. Shame shame shame…..
    ……

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...