Homeಮುಖಪುಟರ್‍ಯಾಲಿಯ ವೈಫಲ್ಯ ಮುಚ್ಚಿ ಹಾಕಲು ‘ಜೀವ ಬೆದರಿಕೆ’ ನೆಪ ಹೇಳುತ್ತಿರುವ ಪ್ರಧಾನಿ: ಸಂಯುಕ್ತ ಕಿಸಾನ್ ಮೋರ್ಚಾ

ರ್‍ಯಾಲಿಯ ವೈಫಲ್ಯ ಮುಚ್ಚಿ ಹಾಕಲು ‘ಜೀವ ಬೆದರಿಕೆ’ ನೆಪ ಹೇಳುತ್ತಿರುವ ಪ್ರಧಾನಿ: ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಪ್ರಧಾನಿ ಮೋದಿ ತಮ್ಮ ರ್‍ಯಾಲಿ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಪಂಜಾಬ್ ಹಾಗೂ ರೈತರ ಚಳುವಳಿಗೆ ಕೆಟ್ಟ ಹೆಸರು ತರಲು, ‘ಹೇಗೋ ತನ್ನ ಜೀವ ಉಳಿದಿದೆ’ ಎಂದು ಪಂಜಾಬ್‌ ಭದ್ರತಾ ಲೋಪವನ್ನು ಬಳಸುತ್ತಿದ್ದಾರೆ ಎಂದು ರೈತ ಹೋರಾಟದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕಿಸಾನ್ ಮೋರ್ಚಾ, “ಜನವರಿ 5 ರಂದು ಪಂಜಾಬ್‌ಗೆ ಪ್ರಧಾನಿ ಭೇಟಿಯ ಸುದ್ದಿ ತಿಳಿದ ನಂತರ ಮೋರ್ಚಾದ ಸಂಯೋಜಿತ 10 ರೈತ ಸಂಘಟನೆಗಳು ಅಜಯ್ ಮಿಶ್ರಾ ತೇನಿ ಬಂಧನ ಮತ್ತು ಇತರ ಬೇಡಿಕೆಗಳಿಗಾಗಿ ಸಾಂಕೇತಿಕ ಪ್ರತಿಭಟನೆಯನ್ನು ಘೋಷಿಸಿದ್ದವು.

ಇದನ್ನೂ ಓದಿ: ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

ಈ ಉದ್ದೇಶಕ್ಕಾಗಿ, ಪಂಜಾಬ್‌ನಾದ್ಯಂತ ಗ್ರಾಮ ಮಟ್ಟದಲ್ಲಿ ಪ್ರತಿಭಟನೆಗಳು ಹಾಗೂ ಪ್ರತಿಕೃತಿ ದಹನದ ಕಾರ್ಯಕ್ರಮಗಳನ್ನು ಜನವರಿ 2 ರಂದು ಮತ್ತು ಜನವರಿ 5 ರಂದು ಜಿಲ್ಲಾ ಹಾಗೂ ತಹಸಿಲ್ ಕೇಂದ್ರಗಳಲ್ಲಿ ಘೋಷಿಸಲಾಯಿತ್ತು. ಆದರೆ ಪ್ರಧಾನಿಯ ಭೇಟಿಯನ್ನು ತಡೆಯುವ ಅಥವಾ ಅವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಯಾವುದೇ ಕಾರ್ಯಕ್ರಮಗಳಿರಲಿಲ್ಲ” ಎಂದು ಮೋರ್ಚಾ ಹೇಳಿದೆ.

“ಪೂರ್ವನಿರ್ಧರಿತ ವೇಳಾಪಟ್ಟಿಯಂತೆ, ಜನವರಿ 5 ರಂದು ಪಂಜಾಬ್‌ನ ಪ್ರತಿ ಜಿಲ್ಲೆ ಮತ್ತು ತಹಸಿಲ್ ಕೇಂದ್ರ ಕಚೇರಿಗಳಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲಾಯಿತು. ಫಿರೋಜ್‌ಪುರ ಜಿಲ್ಲಾ ಕೇಂದ್ರಕ್ಕೆ ತೆರಳದಂತೆ ಕೆಲ ರೈತರನ್ನು ಪೊಲೀಸರು ತಡೆದಾಗ ಹಲವು ಕಡೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಇವುಗಳಲ್ಲಿ ಪ್ರಧಾನಿಯವರ ಬೆಂಗಾವಲು ಪಡೆ ಬಂದು ನಿಲ್ಲಿಸಿ ಹಿಂತಿರುಗಿದ ಪೈರಾಯನ ಮೇಲ್ಸೇತುವೆಯೂ ಇತ್ತು. ಅಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಪ್ರಧಾನಿ ಬೆಂಗಾವಲು ಪಡೆ ಹಾದು ಹೋಗುತ್ತದೆ ಎಂಬ ಖಚಿತ ಮಾಹಿತಿ ಇರಲಿಲ್ಲ. ಪ್ರಧಾನಿ ವಾಪಸಾದ ಬಳಿಕ ಮಾಧ್ಯಮಗಳಿಂದ ಈ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

ಪ್ರತಿಭಟನಾ ನಿರತ ರೈತರು ಪ್ರಧಾನಿ ಬೆಂಗಾವಲು ಪಡೆ ಕಡೆಗೆ ಹೋಗಲು ಯಾವುದೇ ಪ್ರಯತ್ನವನ್ನೂ ಮಾಡಿಲ್ಲ ಎಂಬುದು ಹೊಸ ವಿಡಿಯೋದಿಂದ ಸ್ಪಷ್ಟವಾಗಿದೆ. ಬಿಜೆಪಿ ಧ್ವಜದೊಂದಿಗೆ ‘ನರೇಂದ್ರ ಮೋದಿ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಗುಂಪು ಮಾತ್ರ ಆ ಬೆಂಗಾವಲು ಪಡೆಯ ಬಳಿ ತಲುಪಿತ್ತು. ಆದ್ದರಿಂದ, ಪ್ರಧಾನಿಯ ಜೀವಕ್ಕೆ ಬೆದರಿಕೆ ಎಂಬುವುದು ಸಂಪೂರ್ಣವಾಗಿ ಸುಳ್ಳು ಎಂದು ಸ್ಪಷ್ಟವಾಗುತ್ತದೆ” ಎಂದು ಕಿಸಾನ್ ಮೋರ್ಚಾ ಹೇಳಿದೆ.

“ತನ್ನ ರ್‍ಯಾಲಿಯ ವೈಫಲ್ಯವನ್ನು ಮುಚ್ಚಿಹಾಕಲು, ಪ್ರಧಾನಿ ಪಂಜಾಬ್ ರಾಜ್ಯ ಮತ್ತು ರೈತರ ಚಳುವಳಿಗೆ ಕೆಟ್ಟ ಹೆಸರು ತರಲು ‘ಹೇಗೋ ತನ್ನ ಜೀವ ಉಳಿದಿದೆ’ ಎಂಬ ನೆಪವನ್ನು ಬಳಸಿದ್ದಾರೆ ಎಂಬುದು ಅತ್ಯಂತ ವಿಷಾದದ ಸಂಗತಿಯಾಗಿದೆ. ಅಜಯ್ ಮಿಶ್ರಾ ತೇನಿಯಂತಹ ಕ್ರಿಮಿನಲ್ ಗಳು ಮಂತ್ರಿಗಳಾಗುತ್ತಾ, ಸ್ವೇಚ್ಛೆಯಿಂದ ತಿರುಗಾಡುವವರಿಂದ ಮಾತ್ರ ರೈತರಿಗೆ ‘ಜೀವ ಬೆದರಿಕೆ’ ಎಂಬುದು ಇಡೀ ದೇಶಕ್ಕೆ ಗೊತ್ತು. ದೇಶದ ಪ್ರಧಾನಿಯವರು ತಮ್ಮ ಹುದ್ದೆಯ ಘನತೆಯನ್ನು ಗಮನದಲ್ಲಿಟ್ಟುಕೊಂಡು ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು” ಎಂದು ಸಂಯುಕ್ತ ಕಿಸಾನ್ ಮೋರ್ಚಾ ಕೇಳಿಕೊಂಡಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. You people are unfit to live on earth. Better quit India and go to Pakistan. Then you will learn about India. You people should be kicked out of India. Shame shame shame…..
    ……

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...