Homeರಾಷ್ಟ್ರೀಯಭಾರತ್ ಜೋಡೋಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ!; ಮೇಧಾ ಪಾಟ್ಕರ್‌ ಜೊತೆ ನಡೆದಿದ್ದಕ್ಕೆ ಆಕ್ಷೇಪ

ಭಾರತ್ ಜೋಡೋಗೆ ಪ್ರಧಾನಿ ಮೊದಲ ಪ್ರತಿಕ್ರಿಯೆ!; ಮೇಧಾ ಪಾಟ್ಕರ್‌ ಜೊತೆ ನಡೆದಿದ್ದಕ್ಕೆ ಆಕ್ಷೇಪ

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯಲ್ಲಿ ದೇಶದ ಖ್ಯಾತ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಅವರೊಂದಿಗೆ ಹೆಜ್ಜೆ ಹಾಕಿದ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರ್ಮದಾ ಅಣೆಕಟ್ಟು ಯೋಜನೆಯ ವಿರುದ್ಧ ಮೇಧಾ ಪಾಟ್ಕರ್‌ ಭಾರಿ ಹೋರಾಟ ಸಂಘಟಿಸಿದ್ದರು. ಈ ಯೋಜನೆಯನ್ನು ಪ್ರಧಾನಿ ಮೋದಿ ಗುಜರಾತ್‌ನ ಜೀವಸೆಲೆ ಎಂದು ಬಣ್ಣಿಸಿದ್ದಾರೆ.

ಗುಜರಾತ್‌ ಚುನಾವಣೆಗೆ ಮುಂಚಿತವಾಗಿ ರಾಜ್ಯದ ರಾಜ್‌ಕೋಟ್ ಜಿಲ್ಲೆಯಲ್ಲಿ ನಡೆದ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಮೂರು ದಶಕಗಳವರೆಗೆ ನರ್ಮದಾ ಅಣೆಕಟ್ಟು ಯೋಜನೆಯನ್ನು ಸ್ಥಗಿತಗೊಳಿಸಿದ ಮಹಿಳೆಯೊಂದಿಗೆ ಕಾಂಗ್ರೆಸ್ ಮುಖಂಡರೊಬ್ಬರು ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನರ್ಮದಾ ನದಿಯ ಮೇಲೆ ಸರ್ದಾರ್ ಸರೋವರ್ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಮೂರು ದಶಕಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದಕ್ಕೆ ಕಾರಣ ಮೇಧಾ ಪಟ್ಕರ್ ಸೇರಿದಂತೆ ಇತರ ಹೋರಾಟಗಾರರು ಉಂಟು ಮಾಡಿದ ಕಾನೂನು ಅಡೆತಡೆಗಳಾಗಿವೆ” ಎಂದು ಪ್ರಧಾನಿ ಹೇಳಿದ್ದಾರೆ. ಇಷ್ಟೆ ಅಲ್ಲದೆ ಮೇಧಾ ಪಾಟ್ಕರ್‌ ಅವರು ಗುಜರಾತ್‌ ರಾಜ್ಯವನ್ನು ಅಪಖ್ಯಾತಿ ಗೋಳಿಸಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ವಿರಾಮ: ಗುಜರಾತ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ

“ಕಾಂಗ್ರೆಸ್ ನಿಮ್ಮ ಬಳಿಗೆ ಮತಕ್ಕಾಗಿ ಬಂದಾಗ, ‘ನರ್ಮದಾ ಅಣೆಕಟ್ಟಿನ ವಿರುದ್ಧ ಇದ್ದವರ ಹೆಗಲ ಮೇಲೆ ಕೈ ಇಟ್ಟುಕೊಂಡು ನೀವು ಪಾದಯಾತ್ರೆಯನ್ನು ಮಾಡುತ್ತೀರಿ’ ಕೇಳಿ” ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಪ್ರಸ್ತುತ ಮಹಾರಾಷ್ಟ್ರದ ಮೂಲಕ ಹಾದುಹೋಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಯ ವೇಳೆ ಈ ವಾರದ ಆರಂಭದಲ್ಲಿ ಮೇಧಾ ಪಟ್ಕರ್ ಸೇರಿಕೊಂಡಿದ್ದರು.

2017 ರಲ್ಲಿ ಉದ್ಘಾಟನೆಯಾದ ಗುಜರಾತ್‌ನ ‘ಸರ್ದಾರ್ ಸರೋವರ್ ಅಣೆಕಟ್ಟು’ ವಿರುದ್ಧ ಮೇಧಾ ಪಟ್ಕರ್ ಅವರು ‘ನರ್ಮದಾ ಬಚಾವೊ ಆಂದೋಲನ್’ ಎಂಬ ಬೃಹತ್ ಅಭಿಯಾನವನ್ನೆ ನಡೆಸಿದ್ದರು. ಈ ಅಣೆಕಟ್ಟಿನಿಂದಾಗಿ ಸಾವಿರಾರು ಬುಡಕಟ್ಟು ಕುಟುಂಬಗಳ ಜೀವನ ಕಷ್ಟಕ್ಕೆ ಒಳಗಾಗುತ್ತದೆ ಎಂದು ಅವರ ಪ್ರತಿಪಾದಿಸಿದ್ದರು. ಇದನ್ನು ಬಿಜೆಪಿ ನಿರಂತರವಾಗಿ ಟೀಕಿಸುತ್ತಿದೆ.

“ಮೇಧಾ ಪಾಟ್ಕರ್‌ ಅವರು ನರ್ಮದಾ ವಿರೋಧಿ, ಗುಜರಾತ್ ವಿರೋಧಿ ಮತ್ತು ಸೌರಾಷ್ಟ್ರ ವಿರೋಧಿಯಾಗಿದ್ದಾರೆ. ಅವರು ನರ್ಮದಾ ಅಣೆಕಟ್ಟಿನ ನಿರ್ಮಾಣವನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದ್ದಲ್ಲದೆ, ಸೌರಾಷ್ಟ್ರದ ಜನರಿಗೆ ನೀರಿನ ಬಳಕೆಯನ್ನು ವಿರೋಧಿಸಿದರು” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಹೇಳಿದ್ದರು.

“ಇಂತಹ ಜನರು ರಾಹುಲ್ ಗಾಂಧಿ ಜೊತೆಗೆ ಸೇರಿದರೆ, ಅದು ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ನಡ್ಡಾ ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ದ್ವೇಷ ರಾಜಕಾರಣಕ್ಕೆ ಎದುರಾಗಿ ಬಿರುಸಿನ ನಡಿಗೆ

ಗುಜರಾತಿಗಳಿಗೆ ನೀರನ್ನು ನಿರಾಕರಿಸಿದವರ ಜೊತೆಗೆ ಕಾಂಗ್ರೆಸ್ ಸಂಸದ ಕೈಜೋಡಿಸಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ರಾಹುಲ್‌ ಗಾಂಧಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

“ಮೇಧಾ ಪಟ್ಕರ್ ಅವರಿಗೆ ಯಾತ್ರೆಯಲ್ಲಿ ಮುಖ್ಯ ಸ್ಥಾನವನ್ನು ನೀಡುವ ಮೂಲಕ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಗುಜರಾತ್ ಮತ್ತು ಗುಜರಾತಿಗಳ ಬಗ್ಗೆ ಮತ್ತೆ ತಮ್ಮ ದ್ವೇಷವನ್ನು ತೋರಿಸಿದ್ದಾರೆ. ದಶಕಗಳ ಕಾಲ ಗುಜರಾತಿಗಳಿಗೆ ನೀರನ್ನು ನಿರಾಕರಿಸಿದ ಜನರೊಂದಿಗೆ ಅವರು ಕೈಜೋಡಿಸಿದ್ದಾರೆ. ಗುಜರಾತ್ ಇದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.

ಗುಜರಾತ್‌ನಲ್ಲಿ ಚುನಾವಣೆ ಘೋಷಣೆಯಾಗಿದ್ದು, ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 2017 ನಲ್ಲಿ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಹೇಳಿದರೆ ಎಲ್ಲಿ ಉದ್ಯೋಗ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...