Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

- Advertisement -
- Advertisement -

ಪ್ರಧಾನಿಯ ಅನುಪಸ್ಥಿತಿಯಲ್ಲಿ ವಿರೋಧ ಪಕ್ಷದ ನಾಯಕ ಮಾತನಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ ಎಂದು ಕೇರಳ ಸಿಪಿಎಂ ರಾಜ್ಯಸಭಾ ಸಂಸದ ಡಾ. ಜಾನ್ ಬಿಟ್ಟಾಸ್ ಆರೋಪ ಮಾಡಿದ್ದಾರೆ.

ವಿಶೇಷ ಅಧಿವೇಶನದ ಸಂದರ್ಭದಲ್ಲಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರ ಭಾಷಣ ಈದೀಗ ವೈರಲ್‌ ಆಗಿದೆ. ತಮ್ಮ ಭಾಷಣದಲ್ಲಿ ಸಂವಿಧಾನ ಪೀಠಿಕೆಯ ಕುರಿತು ಮಾತನಾಡಿದ್ದ ಜಾನ್‌ ಬ್ರಿಟ್ಟಾಸ್‌, ”ಸಂವಿಧಾನದ ಪೀಠಿಕೆಯಲ್ಲಿ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಎಂದಿದೆ. ಜೊತೆಗೆ ನ್ಯಾಯದಾನ ಕುರಿತು ಬರೆಯಲಾಗಿದೆ. ನ್ಯಾಯದಾನ ಬಗ್ಗೆ ನೋಡುವುದಾದರೆ ನಾವು ಈಗ ಬುಲ್ಡೋಝರ್‌ ಲೋಕಕ್ಕೆ ತಲುಪಿದ್ದೇವೆ. ಅದೇ ಈಗಿನ ಪ್ರಕಾರ ಅದೇ ನ್ಯಾಯದಾನ ವ್ಯವಸ್ಥೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

”ಸಂವಿಧಾನದ ಪೀಠಿಕೆಯಲಿ ಪ್ರಜಾಪ್ರಭುತ್ವ ಎಂಬ ಪದವಿದೆ. ಸಂಸತ್ನಲ್ಲಿರುವ ಹೆಚ್ಚಿನ ಸದಸ್ಯರು ಪ್ರಜಾಪ್ರಭುತ್ವ ಎನ್ನುವುದು ಮೋದಿ ಪ್ರಭುತ್ವವಾಗಿ ಬದಲಾಗಿದೆ ಎನ್ನುವುದು ತಿಳಿದಿದ್ದಾರೆ. ಏಕೆಂದರೆ ಎಲ್ಲೆಡೆ ಪ್ರಧಾನಿ ಮೋದಿಯೇ ರಾರಾಜಿಸುತ್ತಿದ್ದಾರೆ” ಎಂದರು.

”ನಾನು ಸಂಸತ್ತನ್ನು ಹೊರಗಿನಿಂದ ನಿಂತು ನೋಡುತ್ತಿದ್ದೆ. ಈಗ ಈ ಸಂಸತ್ತಿನ ಭಾಗವಾಗಿದ್ದೇನೆ. ಸದಸ್ಯನಾಗಿ ಒಳಭಾಗದಲ್ಲಿ ಕುಳಿತು ನೋಡುತ್ತಿದ್ದೇನೆ. ಈ ಸದನದ ನಾಯಕ ಒಳ್ಳೆಯ ಮಾತುಗಾರ. ಆದರೆ ಅವರು ಜವಹರ್ ಲಾಲ್ ನೆಹರು ಅವರಂತ ಮಹಾನ್ ವ್ಯಕ್ತಿಗಳ ಹೆಸರನ್ನು ಬೇಕೆಂದೇ ಮರೆತಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಭಾಷಣದಲ್ಲಿ ಆ ಮರೆತ ಹೆಸರನ್ನು ನೆನಪಿಸುವ ಪ್ರಯತ್ನ ಮಾಡಿದ್ದಾರೆ” ಎಂದರು.

”20 ಕೋಟಿ ಅಲ್ಪಸಂಖ್ಯಾತರಿರುವ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ, ಮಾಧ್ಯಮಗಳಲ್ಲಿ ಅವರ ಪ್ರಾತಿನಿಧಿತ್ವ ಎಷ್ಟಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಸರ್ಕಾರ ಮೊಘಲರ ಬಗ್ಗೆ ಮಾತಾನಾಡುತ್ತದೆ. ಭಾರತೀಯರ ಬಗ್ಗೆ ಮಾತನಾಡುವುದಕ್ಕಿಂತ ಮೊಘಲರ ಬಗ್ಗೆ ಮಾತನಾಡುವುದು ಉತ್ತಮ. ಏಕೆಂದರೆ ಅದು ಅಕ್ಬರ್‌ನ ಸಂಸ್ಥಾನವಾಗಿರಲಿ, ಔರಂಗಜೇಬನದಾಗಿರಲಿ, ಅಲ್ಲಿ 50%ಕ್ಕಿಂತ ಹೆಚ್ಚಿನ ಸಚಿವರುಗಳು ಹಿಂದೂಗಳಿದ್ದರು. ಅಕ್ಬರ್‌ನ ಸಂಸ್ಥಾನದಲ್ಲಿದ್ದ ಬೀರಬಲ್ ಬಗ್ಗೆ ನಮಗೆಲ್ಲಾ ಗೊತ್ತಿದೆ. ಅತನೂ ಹಿಂದೂ ಆಗಿದ್ದ. ಈಗಿನ ಕೇಂದ್ರ ಸಚಿವ ಸಂಪುಟದಲ್ಲಿ ಒಬ್ಬರಾದರೂ ಅಲ್ಪಸಂಖ್ಯಾತರಿದ್ದಾರಾ?” ಎಂದು ಪ್ರಶ್ನಿಸಿದರು.

”ಪರಂಪರೆಯನ್ನು ನೋಡುವುದಾದರೆ, ನೆಹರೂ ಸರ್ಕಾರ ಮಾದರಿ ಸರ್ಕಾರವಾಗಿತ್ತು. ಅಲ್ಲಿ ಸಮಾಜದ ಪ್ರತೀ ವರ್ಗಕ್ಕೂ ಪ್ರತಿನಿಧಿತ್ವ ಇತ್ತು. ಮೌಲಾನಾ ಆಝಾದ್, ಶಾಮ್ ಪ್ರಸಾದ್ ಮುಖರ್ಜಿಯವರೂ ಆ ಸಂಪುಟದಲಿದ್ದರು. ಮೌಲಾನಾ ಆಝಾದ್ ಅವರು ಜುಮಾ ಮಸೀದಿಯ ಮೆಟ್ಟಿಲಲ್ಲಿ ನಿಂತು, ಇದು ನಮ್ಮ ದೇಶ. ಯಾರೂ ಇಲ್ಲಿಂದ ಹೊರಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಸಹೋದರತ್ವ ಅಥವಾ ಭಾತೃತ್ವ ಪದದ ಈಗಿನ ಹೊಸ ಬಳಕೆಯೇನು ಗೊತ್ತೇ? ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ಯಾರು ಏನೇ ಮಾತನಾಡಿದರೂ ಬರುವ ಕೊನೆಯ ಪದ ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ರಾಷ್ಟ್ರದ್ರೋಹ ಪದವನ್ನೂ ತಪ್ಪಾಗಿ ಅರ್ಥೈಸಲಾಗಿದೆ. ಈ ದೇಶದ ಬಗ್ಗೆ ನಿಮಗೆಷ್ಟು ದೇಶಭಕ್ತಿಯಿದೆಯೋ, ನಮಗೂ ಅಷ್ಟೇ ಇದೆ” ಎಂದು ಸಂಸದರು ಖಾರವಾಗಿ ನುಡಿದರು.

”ಸಾರ್ವಭೌಮತ್ವ ಎನ್ನುವುದು ಟ್ರಂಪ್ – ಬೈಡೆನ್ ನಂತಹಾ ನಾಯಕರನ್ನು ಕರೆಸಿ ಹೊಗಳುವುದು ಎನ್ನುವಂತಾಗಿದೆ. ನಮ್ಮಲ್ಲೇ ಇರುವ ನೆಹರುವನ್ನು ನೀವು ಮರೆತಿದ್ದೀರಿ. ಸಮಾಜವಾದ ಎನ್ನುವುದು ಅದಾನಿವಾದ ಆಗಿದೆ. ಈ ದೇಶದಲ್ಲಿ ಹಲವು ಜನರಿಗೆ ರಿಪಬ್ಲಿಕ್ (ಗಣರಾಜ್ಯ) ಎಂದರೆ ಅರ್ನಬ್ ಗೋಸ್ವಾಮಿ ಎಂಬಂತಾಗಿದೆ. ಇದು ಈ ದೇಶದ ಈಗಿನ ವ್ಯವಸ್ಥೆ” ಎಂದು ವ್ಯಂಗ್ಯವಾಡಿದರು.

”ಪ್ರಧಾನಿ ಕಚೇರಿಯಲ್ಲಿ ಕೂತ ಒಬ್ಬ ವ್ಯಕ್ತಿ ಈ ಸಂವಿಧಾನ ನಿರುಪಯುಕ್ತ. ಇದು ಕೇವಲ 17 ವರ್ಷ ಬಳಸಲು ಯೋಗ್ಯ. ನನಗೆ ಸಮಾಜವಾದ ಮತ್ತು ಜಾತ್ಯಾತೀತತೆ ಎಂಬ ಪದದ ಅರ್ಥಗಳೇ ಗೊತ್ತಿಲ್ಲ ಎನ್ನುತ್ತಾನೆ. ಅದೇ ವ್ಯಕ್ತಿ ಪ್ರಧಾನಿಯ ಆರ್ಥಿಕ ಸಲಹೆಗಾರ. ಆತನಿಗೆ ಹಾಗೆ ಹೇಳಲು ಅಷ್ಟೊಂದು ಧೈರ್ಯ ಇದೆಯೇ? ಯಾರಿಗಾದರೂ ಸಂಪುಟ ದರ್ಜೆಯ ಸಚಿವರಿಗೆ ಆತನಿಗೆ ಬಾಯಿ ಮುಚ್ಚು ಎಂದು ಹೇಳುವ ಧೈರ್ಯ ಇದೆಯೇ? ಯಾರಾದರೂ ಹೇಳಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ‘ನಗರ ನಕ್ಸಲ್ ಯಾರು? ಅವರ ಬಗ್ಗೆ ವಿವರ ನೀಡಿ..’: ಪ್ರಧಾನಿ ಹೇಳಿಕೆ ಕುರಿತು ಗೃಹ ಸಚಿವಾಲಯಕ್ಕೆ ಸಾಕೇತ್ ಗೋಖಲೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...