Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

- Advertisement -
- Advertisement -

ಪ್ರಧಾನಿಯ ಅನುಪಸ್ಥಿತಿಯಲ್ಲಿ ವಿರೋಧ ಪಕ್ಷದ ನಾಯಕ ಮಾತನಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ ಎಂದು ಕೇರಳ ಸಿಪಿಎಂ ರಾಜ್ಯಸಭಾ ಸಂಸದ ಡಾ. ಜಾನ್ ಬಿಟ್ಟಾಸ್ ಆರೋಪ ಮಾಡಿದ್ದಾರೆ.

ವಿಶೇಷ ಅಧಿವೇಶನದ ಸಂದರ್ಭದಲ್ಲಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರ ಭಾಷಣ ಈದೀಗ ವೈರಲ್‌ ಆಗಿದೆ. ತಮ್ಮ ಭಾಷಣದಲ್ಲಿ ಸಂವಿಧಾನ ಪೀಠಿಕೆಯ ಕುರಿತು ಮಾತನಾಡಿದ್ದ ಜಾನ್‌ ಬ್ರಿಟ್ಟಾಸ್‌, ”ಸಂವಿಧಾನದ ಪೀಠಿಕೆಯಲ್ಲಿ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಎಂದಿದೆ. ಜೊತೆಗೆ ನ್ಯಾಯದಾನ ಕುರಿತು ಬರೆಯಲಾಗಿದೆ. ನ್ಯಾಯದಾನ ಬಗ್ಗೆ ನೋಡುವುದಾದರೆ ನಾವು ಈಗ ಬುಲ್ಡೋಝರ್‌ ಲೋಕಕ್ಕೆ ತಲುಪಿದ್ದೇವೆ. ಅದೇ ಈಗಿನ ಪ್ರಕಾರ ಅದೇ ನ್ಯಾಯದಾನ ವ್ಯವಸ್ಥೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

”ಸಂವಿಧಾನದ ಪೀಠಿಕೆಯಲಿ ಪ್ರಜಾಪ್ರಭುತ್ವ ಎಂಬ ಪದವಿದೆ. ಸಂಸತ್ನಲ್ಲಿರುವ ಹೆಚ್ಚಿನ ಸದಸ್ಯರು ಪ್ರಜಾಪ್ರಭುತ್ವ ಎನ್ನುವುದು ಮೋದಿ ಪ್ರಭುತ್ವವಾಗಿ ಬದಲಾಗಿದೆ ಎನ್ನುವುದು ತಿಳಿದಿದ್ದಾರೆ. ಏಕೆಂದರೆ ಎಲ್ಲೆಡೆ ಪ್ರಧಾನಿ ಮೋದಿಯೇ ರಾರಾಜಿಸುತ್ತಿದ್ದಾರೆ” ಎಂದರು.

”ನಾನು ಸಂಸತ್ತನ್ನು ಹೊರಗಿನಿಂದ ನಿಂತು ನೋಡುತ್ತಿದ್ದೆ. ಈಗ ಈ ಸಂಸತ್ತಿನ ಭಾಗವಾಗಿದ್ದೇನೆ. ಸದಸ್ಯನಾಗಿ ಒಳಭಾಗದಲ್ಲಿ ಕುಳಿತು ನೋಡುತ್ತಿದ್ದೇನೆ. ಈ ಸದನದ ನಾಯಕ ಒಳ್ಳೆಯ ಮಾತುಗಾರ. ಆದರೆ ಅವರು ಜವಹರ್ ಲಾಲ್ ನೆಹರು ಅವರಂತ ಮಹಾನ್ ವ್ಯಕ್ತಿಗಳ ಹೆಸರನ್ನು ಬೇಕೆಂದೇ ಮರೆತಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಭಾಷಣದಲ್ಲಿ ಆ ಮರೆತ ಹೆಸರನ್ನು ನೆನಪಿಸುವ ಪ್ರಯತ್ನ ಮಾಡಿದ್ದಾರೆ” ಎಂದರು.

”20 ಕೋಟಿ ಅಲ್ಪಸಂಖ್ಯಾತರಿರುವ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ, ಮಾಧ್ಯಮಗಳಲ್ಲಿ ಅವರ ಪ್ರಾತಿನಿಧಿತ್ವ ಎಷ್ಟಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಸರ್ಕಾರ ಮೊಘಲರ ಬಗ್ಗೆ ಮಾತಾನಾಡುತ್ತದೆ. ಭಾರತೀಯರ ಬಗ್ಗೆ ಮಾತನಾಡುವುದಕ್ಕಿಂತ ಮೊಘಲರ ಬಗ್ಗೆ ಮಾತನಾಡುವುದು ಉತ್ತಮ. ಏಕೆಂದರೆ ಅದು ಅಕ್ಬರ್‌ನ ಸಂಸ್ಥಾನವಾಗಿರಲಿ, ಔರಂಗಜೇಬನದಾಗಿರಲಿ, ಅಲ್ಲಿ 50%ಕ್ಕಿಂತ ಹೆಚ್ಚಿನ ಸಚಿವರುಗಳು ಹಿಂದೂಗಳಿದ್ದರು. ಅಕ್ಬರ್‌ನ ಸಂಸ್ಥಾನದಲ್ಲಿದ್ದ ಬೀರಬಲ್ ಬಗ್ಗೆ ನಮಗೆಲ್ಲಾ ಗೊತ್ತಿದೆ. ಅತನೂ ಹಿಂದೂ ಆಗಿದ್ದ. ಈಗಿನ ಕೇಂದ್ರ ಸಚಿವ ಸಂಪುಟದಲ್ಲಿ ಒಬ್ಬರಾದರೂ ಅಲ್ಪಸಂಖ್ಯಾತರಿದ್ದಾರಾ?” ಎಂದು ಪ್ರಶ್ನಿಸಿದರು.

”ಪರಂಪರೆಯನ್ನು ನೋಡುವುದಾದರೆ, ನೆಹರೂ ಸರ್ಕಾರ ಮಾದರಿ ಸರ್ಕಾರವಾಗಿತ್ತು. ಅಲ್ಲಿ ಸಮಾಜದ ಪ್ರತೀ ವರ್ಗಕ್ಕೂ ಪ್ರತಿನಿಧಿತ್ವ ಇತ್ತು. ಮೌಲಾನಾ ಆಝಾದ್, ಶಾಮ್ ಪ್ರಸಾದ್ ಮುಖರ್ಜಿಯವರೂ ಆ ಸಂಪುಟದಲಿದ್ದರು. ಮೌಲಾನಾ ಆಝಾದ್ ಅವರು ಜುಮಾ ಮಸೀದಿಯ ಮೆಟ್ಟಿಲಲ್ಲಿ ನಿಂತು, ಇದು ನಮ್ಮ ದೇಶ. ಯಾರೂ ಇಲ್ಲಿಂದ ಹೊರಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಸಹೋದರತ್ವ ಅಥವಾ ಭಾತೃತ್ವ ಪದದ ಈಗಿನ ಹೊಸ ಬಳಕೆಯೇನು ಗೊತ್ತೇ? ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ಯಾರು ಏನೇ ಮಾತನಾಡಿದರೂ ಬರುವ ಕೊನೆಯ ಪದ ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ರಾಷ್ಟ್ರದ್ರೋಹ ಪದವನ್ನೂ ತಪ್ಪಾಗಿ ಅರ್ಥೈಸಲಾಗಿದೆ. ಈ ದೇಶದ ಬಗ್ಗೆ ನಿಮಗೆಷ್ಟು ದೇಶಭಕ್ತಿಯಿದೆಯೋ, ನಮಗೂ ಅಷ್ಟೇ ಇದೆ” ಎಂದು ಸಂಸದರು ಖಾರವಾಗಿ ನುಡಿದರು.

”ಸಾರ್ವಭೌಮತ್ವ ಎನ್ನುವುದು ಟ್ರಂಪ್ – ಬೈಡೆನ್ ನಂತಹಾ ನಾಯಕರನ್ನು ಕರೆಸಿ ಹೊಗಳುವುದು ಎನ್ನುವಂತಾಗಿದೆ. ನಮ್ಮಲ್ಲೇ ಇರುವ ನೆಹರುವನ್ನು ನೀವು ಮರೆತಿದ್ದೀರಿ. ಸಮಾಜವಾದ ಎನ್ನುವುದು ಅದಾನಿವಾದ ಆಗಿದೆ. ಈ ದೇಶದಲ್ಲಿ ಹಲವು ಜನರಿಗೆ ರಿಪಬ್ಲಿಕ್ (ಗಣರಾಜ್ಯ) ಎಂದರೆ ಅರ್ನಬ್ ಗೋಸ್ವಾಮಿ ಎಂಬಂತಾಗಿದೆ. ಇದು ಈ ದೇಶದ ಈಗಿನ ವ್ಯವಸ್ಥೆ” ಎಂದು ವ್ಯಂಗ್ಯವಾಡಿದರು.

”ಪ್ರಧಾನಿ ಕಚೇರಿಯಲ್ಲಿ ಕೂತ ಒಬ್ಬ ವ್ಯಕ್ತಿ ಈ ಸಂವಿಧಾನ ನಿರುಪಯುಕ್ತ. ಇದು ಕೇವಲ 17 ವರ್ಷ ಬಳಸಲು ಯೋಗ್ಯ. ನನಗೆ ಸಮಾಜವಾದ ಮತ್ತು ಜಾತ್ಯಾತೀತತೆ ಎಂಬ ಪದದ ಅರ್ಥಗಳೇ ಗೊತ್ತಿಲ್ಲ ಎನ್ನುತ್ತಾನೆ. ಅದೇ ವ್ಯಕ್ತಿ ಪ್ರಧಾನಿಯ ಆರ್ಥಿಕ ಸಲಹೆಗಾರ. ಆತನಿಗೆ ಹಾಗೆ ಹೇಳಲು ಅಷ್ಟೊಂದು ಧೈರ್ಯ ಇದೆಯೇ? ಯಾರಿಗಾದರೂ ಸಂಪುಟ ದರ್ಜೆಯ ಸಚಿವರಿಗೆ ಆತನಿಗೆ ಬಾಯಿ ಮುಚ್ಚು ಎಂದು ಹೇಳುವ ಧೈರ್ಯ ಇದೆಯೇ? ಯಾರಾದರೂ ಹೇಳಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ‘ನಗರ ನಕ್ಸಲ್ ಯಾರು? ಅವರ ಬಗ್ಗೆ ವಿವರ ನೀಡಿ..’: ಪ್ರಧಾನಿ ಹೇಳಿಕೆ ಕುರಿತು ಗೃಹ ಸಚಿವಾಲಯಕ್ಕೆ ಸಾಕೇತ್ ಗೋಖಲೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...