Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

- Advertisement -
- Advertisement -

ಪ್ರಧಾನಿಯ ಅನುಪಸ್ಥಿತಿಯಲ್ಲಿ ವಿರೋಧ ಪಕ್ಷದ ನಾಯಕ ಮಾತನಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ ಎಂದು ಕೇರಳ ಸಿಪಿಎಂ ರಾಜ್ಯಸಭಾ ಸಂಸದ ಡಾ. ಜಾನ್ ಬಿಟ್ಟಾಸ್ ಆರೋಪ ಮಾಡಿದ್ದಾರೆ.

ವಿಶೇಷ ಅಧಿವೇಶನದ ಸಂದರ್ಭದಲ್ಲಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರ ಭಾಷಣ ಈದೀಗ ವೈರಲ್‌ ಆಗಿದೆ. ತಮ್ಮ ಭಾಷಣದಲ್ಲಿ ಸಂವಿಧಾನ ಪೀಠಿಕೆಯ ಕುರಿತು ಮಾತನಾಡಿದ್ದ ಜಾನ್‌ ಬ್ರಿಟ್ಟಾಸ್‌, ”ಸಂವಿಧಾನದ ಪೀಠಿಕೆಯಲ್ಲಿ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಎಂದಿದೆ. ಜೊತೆಗೆ ನ್ಯಾಯದಾನ ಕುರಿತು ಬರೆಯಲಾಗಿದೆ. ನ್ಯಾಯದಾನ ಬಗ್ಗೆ ನೋಡುವುದಾದರೆ ನಾವು ಈಗ ಬುಲ್ಡೋಝರ್‌ ಲೋಕಕ್ಕೆ ತಲುಪಿದ್ದೇವೆ. ಅದೇ ಈಗಿನ ಪ್ರಕಾರ ಅದೇ ನ್ಯಾಯದಾನ ವ್ಯವಸ್ಥೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

”ಸಂವಿಧಾನದ ಪೀಠಿಕೆಯಲಿ ಪ್ರಜಾಪ್ರಭುತ್ವ ಎಂಬ ಪದವಿದೆ. ಸಂಸತ್ನಲ್ಲಿರುವ ಹೆಚ್ಚಿನ ಸದಸ್ಯರು ಪ್ರಜಾಪ್ರಭುತ್ವ ಎನ್ನುವುದು ಮೋದಿ ಪ್ರಭುತ್ವವಾಗಿ ಬದಲಾಗಿದೆ ಎನ್ನುವುದು ತಿಳಿದಿದ್ದಾರೆ. ಏಕೆಂದರೆ ಎಲ್ಲೆಡೆ ಪ್ರಧಾನಿ ಮೋದಿಯೇ ರಾರಾಜಿಸುತ್ತಿದ್ದಾರೆ” ಎಂದರು.

”ನಾನು ಸಂಸತ್ತನ್ನು ಹೊರಗಿನಿಂದ ನಿಂತು ನೋಡುತ್ತಿದ್ದೆ. ಈಗ ಈ ಸಂಸತ್ತಿನ ಭಾಗವಾಗಿದ್ದೇನೆ. ಸದಸ್ಯನಾಗಿ ಒಳಭಾಗದಲ್ಲಿ ಕುಳಿತು ನೋಡುತ್ತಿದ್ದೇನೆ. ಈ ಸದನದ ನಾಯಕ ಒಳ್ಳೆಯ ಮಾತುಗಾರ. ಆದರೆ ಅವರು ಜವಹರ್ ಲಾಲ್ ನೆಹರು ಅವರಂತ ಮಹಾನ್ ವ್ಯಕ್ತಿಗಳ ಹೆಸರನ್ನು ಬೇಕೆಂದೇ ಮರೆತಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಭಾಷಣದಲ್ಲಿ ಆ ಮರೆತ ಹೆಸರನ್ನು ನೆನಪಿಸುವ ಪ್ರಯತ್ನ ಮಾಡಿದ್ದಾರೆ” ಎಂದರು.

”20 ಕೋಟಿ ಅಲ್ಪಸಂಖ್ಯಾತರಿರುವ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ, ಮಾಧ್ಯಮಗಳಲ್ಲಿ ಅವರ ಪ್ರಾತಿನಿಧಿತ್ವ ಎಷ್ಟಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಸರ್ಕಾರ ಮೊಘಲರ ಬಗ್ಗೆ ಮಾತಾನಾಡುತ್ತದೆ. ಭಾರತೀಯರ ಬಗ್ಗೆ ಮಾತನಾಡುವುದಕ್ಕಿಂತ ಮೊಘಲರ ಬಗ್ಗೆ ಮಾತನಾಡುವುದು ಉತ್ತಮ. ಏಕೆಂದರೆ ಅದು ಅಕ್ಬರ್‌ನ ಸಂಸ್ಥಾನವಾಗಿರಲಿ, ಔರಂಗಜೇಬನದಾಗಿರಲಿ, ಅಲ್ಲಿ 50%ಕ್ಕಿಂತ ಹೆಚ್ಚಿನ ಸಚಿವರುಗಳು ಹಿಂದೂಗಳಿದ್ದರು. ಅಕ್ಬರ್‌ನ ಸಂಸ್ಥಾನದಲ್ಲಿದ್ದ ಬೀರಬಲ್ ಬಗ್ಗೆ ನಮಗೆಲ್ಲಾ ಗೊತ್ತಿದೆ. ಅತನೂ ಹಿಂದೂ ಆಗಿದ್ದ. ಈಗಿನ ಕೇಂದ್ರ ಸಚಿವ ಸಂಪುಟದಲ್ಲಿ ಒಬ್ಬರಾದರೂ ಅಲ್ಪಸಂಖ್ಯಾತರಿದ್ದಾರಾ?” ಎಂದು ಪ್ರಶ್ನಿಸಿದರು.

”ಪರಂಪರೆಯನ್ನು ನೋಡುವುದಾದರೆ, ನೆಹರೂ ಸರ್ಕಾರ ಮಾದರಿ ಸರ್ಕಾರವಾಗಿತ್ತು. ಅಲ್ಲಿ ಸಮಾಜದ ಪ್ರತೀ ವರ್ಗಕ್ಕೂ ಪ್ರತಿನಿಧಿತ್ವ ಇತ್ತು. ಮೌಲಾನಾ ಆಝಾದ್, ಶಾಮ್ ಪ್ರಸಾದ್ ಮುಖರ್ಜಿಯವರೂ ಆ ಸಂಪುಟದಲಿದ್ದರು. ಮೌಲಾನಾ ಆಝಾದ್ ಅವರು ಜುಮಾ ಮಸೀದಿಯ ಮೆಟ್ಟಿಲಲ್ಲಿ ನಿಂತು, ಇದು ನಮ್ಮ ದೇಶ. ಯಾರೂ ಇಲ್ಲಿಂದ ಹೊರಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಸಹೋದರತ್ವ ಅಥವಾ ಭಾತೃತ್ವ ಪದದ ಈಗಿನ ಹೊಸ ಬಳಕೆಯೇನು ಗೊತ್ತೇ? ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ಯಾರು ಏನೇ ಮಾತನಾಡಿದರೂ ಬರುವ ಕೊನೆಯ ಪದ ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ರಾಷ್ಟ್ರದ್ರೋಹ ಪದವನ್ನೂ ತಪ್ಪಾಗಿ ಅರ್ಥೈಸಲಾಗಿದೆ. ಈ ದೇಶದ ಬಗ್ಗೆ ನಿಮಗೆಷ್ಟು ದೇಶಭಕ್ತಿಯಿದೆಯೋ, ನಮಗೂ ಅಷ್ಟೇ ಇದೆ” ಎಂದು ಸಂಸದರು ಖಾರವಾಗಿ ನುಡಿದರು.

”ಸಾರ್ವಭೌಮತ್ವ ಎನ್ನುವುದು ಟ್ರಂಪ್ – ಬೈಡೆನ್ ನಂತಹಾ ನಾಯಕರನ್ನು ಕರೆಸಿ ಹೊಗಳುವುದು ಎನ್ನುವಂತಾಗಿದೆ. ನಮ್ಮಲ್ಲೇ ಇರುವ ನೆಹರುವನ್ನು ನೀವು ಮರೆತಿದ್ದೀರಿ. ಸಮಾಜವಾದ ಎನ್ನುವುದು ಅದಾನಿವಾದ ಆಗಿದೆ. ಈ ದೇಶದಲ್ಲಿ ಹಲವು ಜನರಿಗೆ ರಿಪಬ್ಲಿಕ್ (ಗಣರಾಜ್ಯ) ಎಂದರೆ ಅರ್ನಬ್ ಗೋಸ್ವಾಮಿ ಎಂಬಂತಾಗಿದೆ. ಇದು ಈ ದೇಶದ ಈಗಿನ ವ್ಯವಸ್ಥೆ” ಎಂದು ವ್ಯಂಗ್ಯವಾಡಿದರು.

”ಪ್ರಧಾನಿ ಕಚೇರಿಯಲ್ಲಿ ಕೂತ ಒಬ್ಬ ವ್ಯಕ್ತಿ ಈ ಸಂವಿಧಾನ ನಿರುಪಯುಕ್ತ. ಇದು ಕೇವಲ 17 ವರ್ಷ ಬಳಸಲು ಯೋಗ್ಯ. ನನಗೆ ಸಮಾಜವಾದ ಮತ್ತು ಜಾತ್ಯಾತೀತತೆ ಎಂಬ ಪದದ ಅರ್ಥಗಳೇ ಗೊತ್ತಿಲ್ಲ ಎನ್ನುತ್ತಾನೆ. ಅದೇ ವ್ಯಕ್ತಿ ಪ್ರಧಾನಿಯ ಆರ್ಥಿಕ ಸಲಹೆಗಾರ. ಆತನಿಗೆ ಹಾಗೆ ಹೇಳಲು ಅಷ್ಟೊಂದು ಧೈರ್ಯ ಇದೆಯೇ? ಯಾರಿಗಾದರೂ ಸಂಪುಟ ದರ್ಜೆಯ ಸಚಿವರಿಗೆ ಆತನಿಗೆ ಬಾಯಿ ಮುಚ್ಚು ಎಂದು ಹೇಳುವ ಧೈರ್ಯ ಇದೆಯೇ? ಯಾರಾದರೂ ಹೇಳಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ‘ನಗರ ನಕ್ಸಲ್ ಯಾರು? ಅವರ ಬಗ್ಗೆ ವಿವರ ನೀಡಿ..’: ಪ್ರಧಾನಿ ಹೇಳಿಕೆ ಕುರಿತು ಗೃಹ ಸಚಿವಾಲಯಕ್ಕೆ ಸಾಕೇತ್ ಗೋಖಲೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...