Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

- Advertisement -
- Advertisement -

ಪ್ರಧಾನಿಯ ಅನುಪಸ್ಥಿತಿಯಲ್ಲಿ ವಿರೋಧ ಪಕ್ಷದ ನಾಯಕ ಮಾತನಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ ಎಂದು ಕೇರಳ ಸಿಪಿಎಂ ರಾಜ್ಯಸಭಾ ಸಂಸದ ಡಾ. ಜಾನ್ ಬಿಟ್ಟಾಸ್ ಆರೋಪ ಮಾಡಿದ್ದಾರೆ.

ವಿಶೇಷ ಅಧಿವೇಶನದ ಸಂದರ್ಭದಲ್ಲಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರ ಭಾಷಣ ಈದೀಗ ವೈರಲ್‌ ಆಗಿದೆ. ತಮ್ಮ ಭಾಷಣದಲ್ಲಿ ಸಂವಿಧಾನ ಪೀಠಿಕೆಯ ಕುರಿತು ಮಾತನಾಡಿದ್ದ ಜಾನ್‌ ಬ್ರಿಟ್ಟಾಸ್‌, ”ಸಂವಿಧಾನದ ಪೀಠಿಕೆಯಲ್ಲಿ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಎಂದಿದೆ. ಜೊತೆಗೆ ನ್ಯಾಯದಾನ ಕುರಿತು ಬರೆಯಲಾಗಿದೆ. ನ್ಯಾಯದಾನ ಬಗ್ಗೆ ನೋಡುವುದಾದರೆ ನಾವು ಈಗ ಬುಲ್ಡೋಝರ್‌ ಲೋಕಕ್ಕೆ ತಲುಪಿದ್ದೇವೆ. ಅದೇ ಈಗಿನ ಪ್ರಕಾರ ಅದೇ ನ್ಯಾಯದಾನ ವ್ಯವಸ್ಥೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

”ಸಂವಿಧಾನದ ಪೀಠಿಕೆಯಲಿ ಪ್ರಜಾಪ್ರಭುತ್ವ ಎಂಬ ಪದವಿದೆ. ಸಂಸತ್ನಲ್ಲಿರುವ ಹೆಚ್ಚಿನ ಸದಸ್ಯರು ಪ್ರಜಾಪ್ರಭುತ್ವ ಎನ್ನುವುದು ಮೋದಿ ಪ್ರಭುತ್ವವಾಗಿ ಬದಲಾಗಿದೆ ಎನ್ನುವುದು ತಿಳಿದಿದ್ದಾರೆ. ಏಕೆಂದರೆ ಎಲ್ಲೆಡೆ ಪ್ರಧಾನಿ ಮೋದಿಯೇ ರಾರಾಜಿಸುತ್ತಿದ್ದಾರೆ” ಎಂದರು.

”ನಾನು ಸಂಸತ್ತನ್ನು ಹೊರಗಿನಿಂದ ನಿಂತು ನೋಡುತ್ತಿದ್ದೆ. ಈಗ ಈ ಸಂಸತ್ತಿನ ಭಾಗವಾಗಿದ್ದೇನೆ. ಸದಸ್ಯನಾಗಿ ಒಳಭಾಗದಲ್ಲಿ ಕುಳಿತು ನೋಡುತ್ತಿದ್ದೇನೆ. ಈ ಸದನದ ನಾಯಕ ಒಳ್ಳೆಯ ಮಾತುಗಾರ. ಆದರೆ ಅವರು ಜವಹರ್ ಲಾಲ್ ನೆಹರು ಅವರಂತ ಮಹಾನ್ ವ್ಯಕ್ತಿಗಳ ಹೆಸರನ್ನು ಬೇಕೆಂದೇ ಮರೆತಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಭಾಷಣದಲ್ಲಿ ಆ ಮರೆತ ಹೆಸರನ್ನು ನೆನಪಿಸುವ ಪ್ರಯತ್ನ ಮಾಡಿದ್ದಾರೆ” ಎಂದರು.

”20 ಕೋಟಿ ಅಲ್ಪಸಂಖ್ಯಾತರಿರುವ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ, ಮಾಧ್ಯಮಗಳಲ್ಲಿ ಅವರ ಪ್ರಾತಿನಿಧಿತ್ವ ಎಷ್ಟಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಸರ್ಕಾರ ಮೊಘಲರ ಬಗ್ಗೆ ಮಾತಾನಾಡುತ್ತದೆ. ಭಾರತೀಯರ ಬಗ್ಗೆ ಮಾತನಾಡುವುದಕ್ಕಿಂತ ಮೊಘಲರ ಬಗ್ಗೆ ಮಾತನಾಡುವುದು ಉತ್ತಮ. ಏಕೆಂದರೆ ಅದು ಅಕ್ಬರ್‌ನ ಸಂಸ್ಥಾನವಾಗಿರಲಿ, ಔರಂಗಜೇಬನದಾಗಿರಲಿ, ಅಲ್ಲಿ 50%ಕ್ಕಿಂತ ಹೆಚ್ಚಿನ ಸಚಿವರುಗಳು ಹಿಂದೂಗಳಿದ್ದರು. ಅಕ್ಬರ್‌ನ ಸಂಸ್ಥಾನದಲ್ಲಿದ್ದ ಬೀರಬಲ್ ಬಗ್ಗೆ ನಮಗೆಲ್ಲಾ ಗೊತ್ತಿದೆ. ಅತನೂ ಹಿಂದೂ ಆಗಿದ್ದ. ಈಗಿನ ಕೇಂದ್ರ ಸಚಿವ ಸಂಪುಟದಲ್ಲಿ ಒಬ್ಬರಾದರೂ ಅಲ್ಪಸಂಖ್ಯಾತರಿದ್ದಾರಾ?” ಎಂದು ಪ್ರಶ್ನಿಸಿದರು.

”ಪರಂಪರೆಯನ್ನು ನೋಡುವುದಾದರೆ, ನೆಹರೂ ಸರ್ಕಾರ ಮಾದರಿ ಸರ್ಕಾರವಾಗಿತ್ತು. ಅಲ್ಲಿ ಸಮಾಜದ ಪ್ರತೀ ವರ್ಗಕ್ಕೂ ಪ್ರತಿನಿಧಿತ್ವ ಇತ್ತು. ಮೌಲಾನಾ ಆಝಾದ್, ಶಾಮ್ ಪ್ರಸಾದ್ ಮುಖರ್ಜಿಯವರೂ ಆ ಸಂಪುಟದಲಿದ್ದರು. ಮೌಲಾನಾ ಆಝಾದ್ ಅವರು ಜುಮಾ ಮಸೀದಿಯ ಮೆಟ್ಟಿಲಲ್ಲಿ ನಿಂತು, ಇದು ನಮ್ಮ ದೇಶ. ಯಾರೂ ಇಲ್ಲಿಂದ ಹೊರಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಸಹೋದರತ್ವ ಅಥವಾ ಭಾತೃತ್ವ ಪದದ ಈಗಿನ ಹೊಸ ಬಳಕೆಯೇನು ಗೊತ್ತೇ? ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ಯಾರು ಏನೇ ಮಾತನಾಡಿದರೂ ಬರುವ ಕೊನೆಯ ಪದ ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ರಾಷ್ಟ್ರದ್ರೋಹ ಪದವನ್ನೂ ತಪ್ಪಾಗಿ ಅರ್ಥೈಸಲಾಗಿದೆ. ಈ ದೇಶದ ಬಗ್ಗೆ ನಿಮಗೆಷ್ಟು ದೇಶಭಕ್ತಿಯಿದೆಯೋ, ನಮಗೂ ಅಷ್ಟೇ ಇದೆ” ಎಂದು ಸಂಸದರು ಖಾರವಾಗಿ ನುಡಿದರು.

”ಸಾರ್ವಭೌಮತ್ವ ಎನ್ನುವುದು ಟ್ರಂಪ್ – ಬೈಡೆನ್ ನಂತಹಾ ನಾಯಕರನ್ನು ಕರೆಸಿ ಹೊಗಳುವುದು ಎನ್ನುವಂತಾಗಿದೆ. ನಮ್ಮಲ್ಲೇ ಇರುವ ನೆಹರುವನ್ನು ನೀವು ಮರೆತಿದ್ದೀರಿ. ಸಮಾಜವಾದ ಎನ್ನುವುದು ಅದಾನಿವಾದ ಆಗಿದೆ. ಈ ದೇಶದಲ್ಲಿ ಹಲವು ಜನರಿಗೆ ರಿಪಬ್ಲಿಕ್ (ಗಣರಾಜ್ಯ) ಎಂದರೆ ಅರ್ನಬ್ ಗೋಸ್ವಾಮಿ ಎಂಬಂತಾಗಿದೆ. ಇದು ಈ ದೇಶದ ಈಗಿನ ವ್ಯವಸ್ಥೆ” ಎಂದು ವ್ಯಂಗ್ಯವಾಡಿದರು.

”ಪ್ರಧಾನಿ ಕಚೇರಿಯಲ್ಲಿ ಕೂತ ಒಬ್ಬ ವ್ಯಕ್ತಿ ಈ ಸಂವಿಧಾನ ನಿರುಪಯುಕ್ತ. ಇದು ಕೇವಲ 17 ವರ್ಷ ಬಳಸಲು ಯೋಗ್ಯ. ನನಗೆ ಸಮಾಜವಾದ ಮತ್ತು ಜಾತ್ಯಾತೀತತೆ ಎಂಬ ಪದದ ಅರ್ಥಗಳೇ ಗೊತ್ತಿಲ್ಲ ಎನ್ನುತ್ತಾನೆ. ಅದೇ ವ್ಯಕ್ತಿ ಪ್ರಧಾನಿಯ ಆರ್ಥಿಕ ಸಲಹೆಗಾರ. ಆತನಿಗೆ ಹಾಗೆ ಹೇಳಲು ಅಷ್ಟೊಂದು ಧೈರ್ಯ ಇದೆಯೇ? ಯಾರಿಗಾದರೂ ಸಂಪುಟ ದರ್ಜೆಯ ಸಚಿವರಿಗೆ ಆತನಿಗೆ ಬಾಯಿ ಮುಚ್ಚು ಎಂದು ಹೇಳುವ ಧೈರ್ಯ ಇದೆಯೇ? ಯಾರಾದರೂ ಹೇಳಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ‘ನಗರ ನಕ್ಸಲ್ ಯಾರು? ಅವರ ಬಗ್ಗೆ ವಿವರ ನೀಡಿ..’: ಪ್ರಧಾನಿ ಹೇಳಿಕೆ ಕುರಿತು ಗೃಹ ಸಚಿವಾಲಯಕ್ಕೆ ಸಾಕೇತ್ ಗೋಖಲೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...