Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ: ಸಂಸದ ಡಾ ಜಾನ್ ಬಿಟ್ಟಾಸ್

- Advertisement -
- Advertisement -

ಪ್ರಧಾನಿಯ ಅನುಪಸ್ಥಿತಿಯಲ್ಲಿ ವಿರೋಧ ಪಕ್ಷದ ನಾಯಕ ಮಾತನಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರ ಭಾಗವಹಿಸುವಿಕೆ ಕೇವಲ 0.001% ಮಾತ್ರ ಎಂದು ಕೇರಳ ಸಿಪಿಎಂ ರಾಜ್ಯಸಭಾ ಸಂಸದ ಡಾ. ಜಾನ್ ಬಿಟ್ಟಾಸ್ ಆರೋಪ ಮಾಡಿದ್ದಾರೆ.

ವಿಶೇಷ ಅಧಿವೇಶನದ ಸಂದರ್ಭದಲ್ಲಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಅವರ ಭಾಷಣ ಈದೀಗ ವೈರಲ್‌ ಆಗಿದೆ. ತಮ್ಮ ಭಾಷಣದಲ್ಲಿ ಸಂವಿಧಾನ ಪೀಠಿಕೆಯ ಕುರಿತು ಮಾತನಾಡಿದ್ದ ಜಾನ್‌ ಬ್ರಿಟ್ಟಾಸ್‌, ”ಸಂವಿಧಾನದ ಪೀಠಿಕೆಯಲ್ಲಿ ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಎಂದಿದೆ. ಜೊತೆಗೆ ನ್ಯಾಯದಾನ ಕುರಿತು ಬರೆಯಲಾಗಿದೆ. ನ್ಯಾಯದಾನ ಬಗ್ಗೆ ನೋಡುವುದಾದರೆ ನಾವು ಈಗ ಬುಲ್ಡೋಝರ್‌ ಲೋಕಕ್ಕೆ ತಲುಪಿದ್ದೇವೆ. ಅದೇ ಈಗಿನ ಪ್ರಕಾರ ಅದೇ ನ್ಯಾಯದಾನ ವ್ಯವಸ್ಥೆ” ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

”ಸಂವಿಧಾನದ ಪೀಠಿಕೆಯಲಿ ಪ್ರಜಾಪ್ರಭುತ್ವ ಎಂಬ ಪದವಿದೆ. ಸಂಸತ್ನಲ್ಲಿರುವ ಹೆಚ್ಚಿನ ಸದಸ್ಯರು ಪ್ರಜಾಪ್ರಭುತ್ವ ಎನ್ನುವುದು ಮೋದಿ ಪ್ರಭುತ್ವವಾಗಿ ಬದಲಾಗಿದೆ ಎನ್ನುವುದು ತಿಳಿದಿದ್ದಾರೆ. ಏಕೆಂದರೆ ಎಲ್ಲೆಡೆ ಪ್ರಧಾನಿ ಮೋದಿಯೇ ರಾರಾಜಿಸುತ್ತಿದ್ದಾರೆ” ಎಂದರು.

”ನಾನು ಸಂಸತ್ತನ್ನು ಹೊರಗಿನಿಂದ ನಿಂತು ನೋಡುತ್ತಿದ್ದೆ. ಈಗ ಈ ಸಂಸತ್ತಿನ ಭಾಗವಾಗಿದ್ದೇನೆ. ಸದಸ್ಯನಾಗಿ ಒಳಭಾಗದಲ್ಲಿ ಕುಳಿತು ನೋಡುತ್ತಿದ್ದೇನೆ. ಈ ಸದನದ ನಾಯಕ ಒಳ್ಳೆಯ ಮಾತುಗಾರ. ಆದರೆ ಅವರು ಜವಹರ್ ಲಾಲ್ ನೆಹರು ಅವರಂತ ಮಹಾನ್ ವ್ಯಕ್ತಿಗಳ ಹೆಸರನ್ನು ಬೇಕೆಂದೇ ಮರೆತಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಭಾಷಣದಲ್ಲಿ ಆ ಮರೆತ ಹೆಸರನ್ನು ನೆನಪಿಸುವ ಪ್ರಯತ್ನ ಮಾಡಿದ್ದಾರೆ” ಎಂದರು.

”20 ಕೋಟಿ ಅಲ್ಪಸಂಖ್ಯಾತರಿರುವ ಈ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ, ಮಾಧ್ಯಮಗಳಲ್ಲಿ ಅವರ ಪ್ರಾತಿನಿಧಿತ್ವ ಎಷ್ಟಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಸರ್ಕಾರ ಮೊಘಲರ ಬಗ್ಗೆ ಮಾತಾನಾಡುತ್ತದೆ. ಭಾರತೀಯರ ಬಗ್ಗೆ ಮಾತನಾಡುವುದಕ್ಕಿಂತ ಮೊಘಲರ ಬಗ್ಗೆ ಮಾತನಾಡುವುದು ಉತ್ತಮ. ಏಕೆಂದರೆ ಅದು ಅಕ್ಬರ್‌ನ ಸಂಸ್ಥಾನವಾಗಿರಲಿ, ಔರಂಗಜೇಬನದಾಗಿರಲಿ, ಅಲ್ಲಿ 50%ಕ್ಕಿಂತ ಹೆಚ್ಚಿನ ಸಚಿವರುಗಳು ಹಿಂದೂಗಳಿದ್ದರು. ಅಕ್ಬರ್‌ನ ಸಂಸ್ಥಾನದಲ್ಲಿದ್ದ ಬೀರಬಲ್ ಬಗ್ಗೆ ನಮಗೆಲ್ಲಾ ಗೊತ್ತಿದೆ. ಅತನೂ ಹಿಂದೂ ಆಗಿದ್ದ. ಈಗಿನ ಕೇಂದ್ರ ಸಚಿವ ಸಂಪುಟದಲ್ಲಿ ಒಬ್ಬರಾದರೂ ಅಲ್ಪಸಂಖ್ಯಾತರಿದ್ದಾರಾ?” ಎಂದು ಪ್ರಶ್ನಿಸಿದರು.

”ಪರಂಪರೆಯನ್ನು ನೋಡುವುದಾದರೆ, ನೆಹರೂ ಸರ್ಕಾರ ಮಾದರಿ ಸರ್ಕಾರವಾಗಿತ್ತು. ಅಲ್ಲಿ ಸಮಾಜದ ಪ್ರತೀ ವರ್ಗಕ್ಕೂ ಪ್ರತಿನಿಧಿತ್ವ ಇತ್ತು. ಮೌಲಾನಾ ಆಝಾದ್, ಶಾಮ್ ಪ್ರಸಾದ್ ಮುಖರ್ಜಿಯವರೂ ಆ ಸಂಪುಟದಲಿದ್ದರು. ಮೌಲಾನಾ ಆಝಾದ್ ಅವರು ಜುಮಾ ಮಸೀದಿಯ ಮೆಟ್ಟಿಲಲ್ಲಿ ನಿಂತು, ಇದು ನಮ್ಮ ದೇಶ. ಯಾರೂ ಇಲ್ಲಿಂದ ಹೊರಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಸಹೋದರತ್ವ ಅಥವಾ ಭಾತೃತ್ವ ಪದದ ಈಗಿನ ಹೊಸ ಬಳಕೆಯೇನು ಗೊತ್ತೇ? ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ಯಾರು ಏನೇ ಮಾತನಾಡಿದರೂ ಬರುವ ಕೊನೆಯ ಪದ ಪಾಕಿಸ್ತಾನಕ್ಕೆ ಹೋಗಿ ಎನ್ನುವುದು. ರಾಷ್ಟ್ರದ್ರೋಹ ಪದವನ್ನೂ ತಪ್ಪಾಗಿ ಅರ್ಥೈಸಲಾಗಿದೆ. ಈ ದೇಶದ ಬಗ್ಗೆ ನಿಮಗೆಷ್ಟು ದೇಶಭಕ್ತಿಯಿದೆಯೋ, ನಮಗೂ ಅಷ್ಟೇ ಇದೆ” ಎಂದು ಸಂಸದರು ಖಾರವಾಗಿ ನುಡಿದರು.

”ಸಾರ್ವಭೌಮತ್ವ ಎನ್ನುವುದು ಟ್ರಂಪ್ – ಬೈಡೆನ್ ನಂತಹಾ ನಾಯಕರನ್ನು ಕರೆಸಿ ಹೊಗಳುವುದು ಎನ್ನುವಂತಾಗಿದೆ. ನಮ್ಮಲ್ಲೇ ಇರುವ ನೆಹರುವನ್ನು ನೀವು ಮರೆತಿದ್ದೀರಿ. ಸಮಾಜವಾದ ಎನ್ನುವುದು ಅದಾನಿವಾದ ಆಗಿದೆ. ಈ ದೇಶದಲ್ಲಿ ಹಲವು ಜನರಿಗೆ ರಿಪಬ್ಲಿಕ್ (ಗಣರಾಜ್ಯ) ಎಂದರೆ ಅರ್ನಬ್ ಗೋಸ್ವಾಮಿ ಎಂಬಂತಾಗಿದೆ. ಇದು ಈ ದೇಶದ ಈಗಿನ ವ್ಯವಸ್ಥೆ” ಎಂದು ವ್ಯಂಗ್ಯವಾಡಿದರು.

”ಪ್ರಧಾನಿ ಕಚೇರಿಯಲ್ಲಿ ಕೂತ ಒಬ್ಬ ವ್ಯಕ್ತಿ ಈ ಸಂವಿಧಾನ ನಿರುಪಯುಕ್ತ. ಇದು ಕೇವಲ 17 ವರ್ಷ ಬಳಸಲು ಯೋಗ್ಯ. ನನಗೆ ಸಮಾಜವಾದ ಮತ್ತು ಜಾತ್ಯಾತೀತತೆ ಎಂಬ ಪದದ ಅರ್ಥಗಳೇ ಗೊತ್ತಿಲ್ಲ ಎನ್ನುತ್ತಾನೆ. ಅದೇ ವ್ಯಕ್ತಿ ಪ್ರಧಾನಿಯ ಆರ್ಥಿಕ ಸಲಹೆಗಾರ. ಆತನಿಗೆ ಹಾಗೆ ಹೇಳಲು ಅಷ್ಟೊಂದು ಧೈರ್ಯ ಇದೆಯೇ? ಯಾರಿಗಾದರೂ ಸಂಪುಟ ದರ್ಜೆಯ ಸಚಿವರಿಗೆ ಆತನಿಗೆ ಬಾಯಿ ಮುಚ್ಚು ಎಂದು ಹೇಳುವ ಧೈರ್ಯ ಇದೆಯೇ? ಯಾರಾದರೂ ಹೇಳಿದ್ದಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ‘ನಗರ ನಕ್ಸಲ್ ಯಾರು? ಅವರ ಬಗ್ಗೆ ವಿವರ ನೀಡಿ..’: ಪ್ರಧಾನಿ ಹೇಳಿಕೆ ಕುರಿತು ಗೃಹ ಸಚಿವಾಲಯಕ್ಕೆ ಸಾಕೇತ್ ಗೋಖಲೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...