Homeಮುಖಪುಟಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

- Advertisement -
- Advertisement -

ಕೇಂದ್ರ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜನರಲ್ಲಿ ಅಸಮಾಧಾನ ಮನೆ ಮಾಡಿದೆ. ಜನರು ಕೇಂದ್ರ ಸರ್ಕಾರದ ವೈಫಲ್ಯದಿಂದ ಆಕ್ರೋಶಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ನಡೆಯುತ್ತಿರುವ ಕೇಂದ್ರ ಸಚಿವ ಸಂಪುಟ ಸಭೆಯು ಮಹತ್ವ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ನಿರ್ವಹಣೆಯ ಕುರಿತು ಮಂತ್ರಿಗಳ ಮೌಲ್ಯಮಾಪನ ನಡೆಸಿದ್ದಾರೆ. ಕೇಂದ್ರದ ಹಲವು ಮಂತ್ರಿಗಳ ಕಾರ್ಯವೈಖರಿ ಪ್ರಧಾನಿಗಳಿಗೆ ಸಮಾಧಾನವನ್ನು ತಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಧಾನ ಮಂತ್ರಿಗಳ ಕಾರ್ಯಾಲಯವು ಕೇಂದ್ರದ ಕೆಲವು ಮಂತ್ರಿಗಳ ಕೆಲಸದ ಕುರಿತು ಕಳೆದ ವಾರ ಮೌಲ್ಯಮಾಪನವನ್ನು ನಡೆಸಿದೆ. ಈ ಸಂದರ್ಭದಲ್ಲಿ ಹಲವು ಪ್ರಶ್ನೆಗಳನ್ನು ಮಂತ್ರಿಗಳಿಗೆ ಕೇಳಲಾಗಿದ್ದು ಕೆಲವರು ಉತ್ತರಿಸಿಲ್ಲ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.

ಕೃಷಿ ಮಂತ್ರಿ ನರೇಂದ್ರ ಸಿಂಗ್‌ ತೋಮರ್‌, ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ, ವಿದೇಶಾಂಗ ಮಂತ್ರಿ ಎಸ್‌. ಜೈಶಂಕರ್‌, ಪೆಟ್ರೋಲಿಯಂ ಮಂತ್ರಿ ಧರ್ಮೇಂದ್ರ ಪ್ರಧಾನ್‌, ಮೀನುಗಾರಿಕೆ ಮತ್ತು ಪಶು ಸಂಗೋಪನೆ ಸಚಿವ ಗಿರಿರಾಜ್‌ ಸಿಂಗ್‌, ಐಟಿ ಮಿನಿಸ್ಟರ್‌ ರವಿ ಶಂಕರ್‌ ಪ್ರಸಾದ್‌, ಆರೋಗ್ಯ ಮಂತ್ರಿ ಹರ್ಷವರ್ಧನ್ ಅವರ ಕಾರ್ಯ ನಿರ್ವಹಣೆಯನ್ನು ಪ್ರಧಾನಿಗಳು ಮೌಲ್ಯ ಮಾಪನ ಮಾಡಿದ್ದರೆನ್ನಲಾಗಿದೆ. ಈ ಮಂತ್ರಿಗಳ ಜೊತೆ ಪ್ರಧಾನಿಗಳು ನೇರವಾಗಿ ಸಮಾಲೋಚನ ಸಭೆಗಳನ್ನು ನಡೆಸಿದ್ದಾರೆ.

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಷ್ಟು ಸಚಿವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ್ದೀರೆಂದು ಕೇಳಿದ್ದಾರೆ. ಹಾಗೇ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಯಾವ ಪ್ರಯತ್ನಗಳನ್ನು ಮಾಡುತ್ತಿದ್ದೀರಿ ಎಂದು ಕೂಡ ಪ್ರಧಾನಿ ತಮ್ಮ ಸಹುದ್ಯೋಗಿಗಳನ್ನು ಪ್ರಶ್ನಿಸಿದ್ದಾರೆ. ಮುಖ್ಯವಾಗಿ ವ್ಯಾಕ್ಸಿನೇಶನ್‌ ಗೆ ಸಂಬಂಧಿಸಿದಂತೆ ವ್ಯಾಕ್ಸೀನ್‌ ಪೂರೈಕೆ ಮತ್ತು ಬೇಡಿಕೆ ಅಂತರ ಕಡಿಮೆ ಮಾಡಲು ಯಾವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಏಂದು ಪ್ರಧಾನಿಗಳು ಕೇಂದ್ರ ಮಂತ್ರಿಗಳನ್ನು ಪ್ರಶ್ನಿಸಿದ್ದಾರೆನ್ನಲಾಗುತ್ತಿದೆ.

ಕೇಂದ್ರ ಸರ್ಕಾರದ ಇಲಾಖೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಮಾಡಬೇಕು. ಜನರನ್ನು ಸರ್ಕಾರ ತಲುಪಬೇಕು ಎಂದು ಪ್ರಧಾನಿಗಳು ಕಳೆದ ವಾರ ನಡೆದ ಈ ವಿಮರ್ಶ ಸಭೆಯಲ್ಲಿ ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ ಎಂದು ಸರ್ಕಾರದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇನ್ನು ತಮ್ಮ ಸರ್ಕಾರದ ಮೇಲಿನ ಜನಾಕ್ರೋಶವನ್ನು ತಣಿಸಲು ಬಿಜೆಪಿ ದೇಶಾದ್ಯಂತ ಪ್ರಚಾರ ಸಭೆ ನಡೆಸಲು ತೀರ್ಮಾನಿಸಿದೆ. ಮನೆ ಮನೆಗೆ ತೆರಳಿಗೆ ಕೊರೊನಾ ನಿರ್ವಹಣೆಗ ತಾವು ಮಾಡಿದ ಕೆಲಸಗಳನ್ನು ಪ್ರಚಾರಕ್ಕೆ ತರುವಂತೆ ನಿರ್ಧರಿಸಲಾಗಿದೆ.


ಇದನ್ನೂ ಓದಿ : ಆನೆಗಳಾಯಿತು, ಈಗ ಚಿರತೆಗಳ ಸರದಿ : ಮೈಸೂರಿನಲ್ಲಿ ವನ್ಯ ಪ್ರಾಣಿಗಳಿಗೆ ವಿಷ ಪ್ರಾಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....