Homeಮುಖಪುಟಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

- Advertisement -
- Advertisement -

ಕೇಂದ್ರ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜನರಲ್ಲಿ ಅಸಮಾಧಾನ ಮನೆ ಮಾಡಿದೆ. ಜನರು ಕೇಂದ್ರ ಸರ್ಕಾರದ ವೈಫಲ್ಯದಿಂದ ಆಕ್ರೋಶಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ನಡೆಯುತ್ತಿರುವ ಕೇಂದ್ರ ಸಚಿವ ಸಂಪುಟ ಸಭೆಯು ಮಹತ್ವ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ನಿರ್ವಹಣೆಯ ಕುರಿತು ಮಂತ್ರಿಗಳ ಮೌಲ್ಯಮಾಪನ ನಡೆಸಿದ್ದಾರೆ. ಕೇಂದ್ರದ ಹಲವು ಮಂತ್ರಿಗಳ ಕಾರ್ಯವೈಖರಿ ಪ್ರಧಾನಿಗಳಿಗೆ ಸಮಾಧಾನವನ್ನು ತಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಧಾನ ಮಂತ್ರಿಗಳ ಕಾರ್ಯಾಲಯವು ಕೇಂದ್ರದ ಕೆಲವು ಮಂತ್ರಿಗಳ ಕೆಲಸದ ಕುರಿತು ಕಳೆದ ವಾರ ಮೌಲ್ಯಮಾಪನವನ್ನು ನಡೆಸಿದೆ. ಈ ಸಂದರ್ಭದಲ್ಲಿ ಹಲವು ಪ್ರಶ್ನೆಗಳನ್ನು ಮಂತ್ರಿಗಳಿಗೆ ಕೇಳಲಾಗಿದ್ದು ಕೆಲವರು ಉತ್ತರಿಸಿಲ್ಲ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.

ಕೃಷಿ ಮಂತ್ರಿ ನರೇಂದ್ರ ಸಿಂಗ್‌ ತೋಮರ್‌, ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ, ವಿದೇಶಾಂಗ ಮಂತ್ರಿ ಎಸ್‌. ಜೈಶಂಕರ್‌, ಪೆಟ್ರೋಲಿಯಂ ಮಂತ್ರಿ ಧರ್ಮೇಂದ್ರ ಪ್ರಧಾನ್‌, ಮೀನುಗಾರಿಕೆ ಮತ್ತು ಪಶು ಸಂಗೋಪನೆ ಸಚಿವ ಗಿರಿರಾಜ್‌ ಸಿಂಗ್‌, ಐಟಿ ಮಿನಿಸ್ಟರ್‌ ರವಿ ಶಂಕರ್‌ ಪ್ರಸಾದ್‌, ಆರೋಗ್ಯ ಮಂತ್ರಿ ಹರ್ಷವರ್ಧನ್ ಅವರ ಕಾರ್ಯ ನಿರ್ವಹಣೆಯನ್ನು ಪ್ರಧಾನಿಗಳು ಮೌಲ್ಯ ಮಾಪನ ಮಾಡಿದ್ದರೆನ್ನಲಾಗಿದೆ. ಈ ಮಂತ್ರಿಗಳ ಜೊತೆ ಪ್ರಧಾನಿಗಳು ನೇರವಾಗಿ ಸಮಾಲೋಚನ ಸಭೆಗಳನ್ನು ನಡೆಸಿದ್ದಾರೆ.

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಷ್ಟು ಸಚಿವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ್ದೀರೆಂದು ಕೇಳಿದ್ದಾರೆ. ಹಾಗೇ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಯಾವ ಪ್ರಯತ್ನಗಳನ್ನು ಮಾಡುತ್ತಿದ್ದೀರಿ ಎಂದು ಕೂಡ ಪ್ರಧಾನಿ ತಮ್ಮ ಸಹುದ್ಯೋಗಿಗಳನ್ನು ಪ್ರಶ್ನಿಸಿದ್ದಾರೆ. ಮುಖ್ಯವಾಗಿ ವ್ಯಾಕ್ಸಿನೇಶನ್‌ ಗೆ ಸಂಬಂಧಿಸಿದಂತೆ ವ್ಯಾಕ್ಸೀನ್‌ ಪೂರೈಕೆ ಮತ್ತು ಬೇಡಿಕೆ ಅಂತರ ಕಡಿಮೆ ಮಾಡಲು ಯಾವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಏಂದು ಪ್ರಧಾನಿಗಳು ಕೇಂದ್ರ ಮಂತ್ರಿಗಳನ್ನು ಪ್ರಶ್ನಿಸಿದ್ದಾರೆನ್ನಲಾಗುತ್ತಿದೆ.

ಕೇಂದ್ರ ಸರ್ಕಾರದ ಇಲಾಖೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಮಾಡಬೇಕು. ಜನರನ್ನು ಸರ್ಕಾರ ತಲುಪಬೇಕು ಎಂದು ಪ್ರಧಾನಿಗಳು ಕಳೆದ ವಾರ ನಡೆದ ಈ ವಿಮರ್ಶ ಸಭೆಯಲ್ಲಿ ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ ಎಂದು ಸರ್ಕಾರದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇನ್ನು ತಮ್ಮ ಸರ್ಕಾರದ ಮೇಲಿನ ಜನಾಕ್ರೋಶವನ್ನು ತಣಿಸಲು ಬಿಜೆಪಿ ದೇಶಾದ್ಯಂತ ಪ್ರಚಾರ ಸಭೆ ನಡೆಸಲು ತೀರ್ಮಾನಿಸಿದೆ. ಮನೆ ಮನೆಗೆ ತೆರಳಿಗೆ ಕೊರೊನಾ ನಿರ್ವಹಣೆಗ ತಾವು ಮಾಡಿದ ಕೆಲಸಗಳನ್ನು ಪ್ರಚಾರಕ್ಕೆ ತರುವಂತೆ ನಿರ್ಧರಿಸಲಾಗಿದೆ.


ಇದನ್ನೂ ಓದಿ : ಆನೆಗಳಾಯಿತು, ಈಗ ಚಿರತೆಗಳ ಸರದಿ : ಮೈಸೂರಿನಲ್ಲಿ ವನ್ಯ ಪ್ರಾಣಿಗಳಿಗೆ ವಿಷ ಪ್ರಾಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...