Homeಮುಖಪುಟದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ಒಕ್ಕೂಟ ಸರ್ಕಾರವು ವ್ಯಾಕ್ಸಿನೇಷನ್‌ ನೀತಿಯ ಬದಲಾವಣೆ ಮಾಡಿದ್ದಕ್ಕೆ ಕಾಂಗ್ರೆಸ್‌ ಸುಪ್ರೀಂಕೋರ್ಟ್‌ಗೆ ಧನ್ಯವಾದ ಸಲ್ಲಿಸಿದೆ.

- Advertisement -
- Advertisement -

ಕೊರೊನಾ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು. ತಮ್ಮ ಭಾಷಣದಲ್ಲಿ ವ್ಯಾಕ್ಸಿನ್ ಬಗ್ಗೆಯೆ ಹೆಚ್ಚಾಗಿ ಉಲ್ಲೇಖಿಸಿದ ಅವರು, ಕೊರೊನಾ ವಿರುದ್ದ ಹೋರಾಟಡಲು ಒಕ್ಕೂಟ ಸರ್ಕಾರವು ಯುದ್ದೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ವ್ಯಾಕ್ಸಿನ್ ಪ್ರಕ್ರಿಯೆಯನ್ನು ಇನ್ನು ಮುಂದೆ ಕೇಂದ್ರ ಸರ್ಕಾರವೆ ನಡೆಸುತ್ತದೆ ಹಾಗೂ ರಾಜ್ಯಗಳಿಗೆ ಜೂನ್ 21 ರಿಂದ ಉಚಿತ ವ್ಯಾಕ್ಸಿನ್‌ ನೀಡುವುದಾಗಿ ಅವರು ಎಂದು ತಮ್ಮ ಭಾಷಣದಲ್ಲಿ ಘೋಷಿಸಿದ್ದಾರೆ.

ಪ್ರಧಾನಿ ಭಾಷಣ ಮಾಡುತ್ತಿದ್ದಂತೆ ಹಲವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಅವುಗಳಲ್ಲಿ ಆಯ್ದವು ಇಲ್ಲಿದೆ.

ಕ್ರುಶಿಕ ಎವಿ ಅವರು, “ನಿಮ್ಮ ಮಾತುಗಳು ನಮಗೆಲ್ಲಿ ಅರ್ಥವಾಗಬೇಕು, ನಮಗೆ ಅರ್ಥವಾಗದ ಯಾವುದೋ ನುಡಿಯಲ್ಲಿದೆ. ಅಡಿಬರಹ ಇಲ್ಲ, ಮಾತಿನ ಡಬ್ಬಿಂಗ್ ಇಲ್ಲ, ಕಡೆಪಕ್ಷ ಮಾತುಗಳ ಅನುವಾದದ ಪಿಡಿಎಫ್ ಕೂಡ ಇಲ್ಲ. ಕೇವಲ ಅಭಿನಯ ಮಾತ್ರ ಕಾಣೋದು. ಹಿಂದಿ ಹೇರಿಕೆ ನಿಲ್ಲಿಸಿ ಕನ್ನಡದಲ್ಲಿ ಮಾಹಿತಿ ಕೊಡಿ. ಪ್ರಧಾನಿ ಕಚೇರಿ ಪೂರ್ತಿ ದೇವನಾಗರಿಯಲ್ಲಿ ಟ್ವಿಟ್ ಮಾಡ್ತಿದೆ. ಹಿಂದಿ ಹೇರಿಕೆ ನಿಲ್ಲಿಸಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಆಲ್ಟ್‌ನ್ಯೂಸ್‌ ಸಂಪಾದಕ ಪ್ರತೀಕ್ ಸಿನ್ಹಾ, ಅವರು ಪ್ರಧಾನಿಯ ಮೂವತ್ತು ನಿಮಿಷದ ಭಾಷಣದಲ್ಲಿ ಏನಿತ್ತು ಎಂಬುದನ್ನು ನಾಲ್ಕು ಅಂಶ ಪಟ್ಟಿ ಮಾಡಿ ಸಂಕ್ಷಿಪ್ತವಾಗಿ ತಿಳಿಸಿದ್ದಾರೆ. ಅವರ ಟ್ವೀಟ್‌ನಲ್ಲಿ, “1. ಕೇಂದ್ರ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. 2. ರಾಜ್ಯಗಳು ವಿಫಲವಾಗಿವೆ. 3. ವ್ಯಾಕ್ಸಿನೇಷನ್ ನೀತಿಯ ಯು-ಟರ್ನ್. 4. ಲಸಿಕೆಗಳ ಬಗ್ಗೆ ವದಂತಿ ಹಬ್ಬಿಸಿದ್ದಕ್ಕಾಗಿ ರಾಮದೇವ್ ಮೇಲೆ ಪರೋಕ್ಷ ದಾಳಿ” ಎಂದು ಹೇಳಿದ್ದಾರೆ.

ಕನ್ನಡ ಪರ ಹೋರಾಟಗಾರ ಅರುಣ್ ಜಾವಗಲ್‌, “ಇದು ಹಿಂದಿ ಭಾಷಿಕ ನಾಗರೀಕರಿಗೆ ಮಾತ್ರ ಸಂಬಂಧಿಸಿದ ವಿಚಾರವೆ ನರೇಂದ್ರ ಮೋದಿಯವರೆ?” ಎಂದು ಹಿಂದಿ ಹೇರಿಕೆಯ ವಿರುದ್ದ ಮಾತನಾಡಿದ್ದಾರೆ.

ಪ್ರಶಾಂತ್ ಭೂಷಣ್ ಅವರು, ವ್ಯಂಗ್ಯಚಿತ್ರಕಾರ ಮಂಜುಲ್ ಅವರ ವ್ಯಂಗ್ಯ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ಕೊರೊನಾ ಎರಡನೆ ಅಲೆ ಬರುವ ಹೊತ್ತಿಗೆ ಹಾಗೂ ಹೆಚ್ಚುತ್ತಿರುವಾಗ ಪ್ರಧಾನಿ ಅಡಗಿ ಕೂತಿದ್ದರು. ಸೋಂಕು ಇಳಿಕೆಯಾಗುತ್ತಿದ್ದಂತೆ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಲು ಬರುತ್ತಾರೆ ಎಂಬಂತೆ ಚಿತ್ರಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌, “ ‘ಇಲ್ಲ’ ಎನ್ನುವುದಕ್ಕಿಂತ ತಡವಾಗಿ ಆದರೂ ಒಳ್ಳೆಯದೆ. ಕೇಂದ್ರ ಸರ್ಕಾರ ಲಸಿಕೆಯ ಜವಾಬ್ದಾರಿ‌ ಹೊತ್ತಿರುವುದು ಸ್ವಾಗತಾರ್ಹ. ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಳ್ಳಲು ಒತ್ತಾಯಿಸಿದ ಮಾನ್ಯ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು. ಲಸಿಕೆಗಳ ಸಮಾನ ವಿತರಣೆಯ ಕುರಿತು ಕರ್ನಾಟಕ ಸರ್ಕಾರ ಗಮನ ಹರಿಸಬೇಕಿದೆ” ಎಂದು ಹೇಳಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಸುಪ್ರೀಂಕೋರ್ಟ್‌ಗೆ ಧನ್ಯವಾದ ಸಲ್ಲಿಸಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ, “18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲ ಪ್ರಜೆಗಳಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ. ಘನತೆವೆತ್ತ ಸುಪ್ರೀಮ್ ಕೋರ್ಟ್‌ಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ. ಜೊತೆಗೆ ಕೇಂದ್ರಕ್ಕೆ ವ್ಯಾಕ್ಸಿನೇಷನ್‌ ವಿಷಯದಲ್ಲಿ ಕಿವಿಹಿಂಡಿರುವ ಪತ್ರಿಕಾ ವರದಿಯನ್ನೂ ಅವರು ತಮ್ಮ ಟ್ವೀಟ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, “ಜೂನ್ 21 ರಿಂದ ಕೋವಿಡ್ -19 ಲಸಿಕೆಯನ್ನು ರಾಜ್ಯಗಳಿಗೆ ಉಚಿತವಾಗಿ ನೀಡಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯು ಈ ಸಮಯದಲ್ಲಿ ಅತ್ಯಂತ ಸೂಕ್ತವಾದ ಪ್ರತಿಕ್ರಿಯೆಯಾಗಿದೆ. ನಮ್ಮ ಮನವಿಗೆ ಪ್ರಧಾನ ಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ನನಗೆ ಸಂತೋಷವಾಗಿದೆ” ಎಂದು ಹೇಳಿದ್ದಾರೆ. ಕೇರಳ ಮುಖ್ಯಮಂತ್ರಿಯು ವ್ಯಾಕ್ಸೀನ್ ಉಚಿತವಾಗಿ ನೀಡಬೇಕು ಎಂದು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಖ್ಯಾತ ವ್ಯಂಗ್ಯ ಚಿತ್ರಕಾರ ಸತೀಶ್‌ ಆಚಾರ್ಯ ಅವರು, ಪಂಜರದೊಳಗಿನ ಗಿಳಿಯೊಂದು ಸೂಜಿ ಚುಚ್ಚಿದಾಗ, “ಸರಿ, ರಾಷ್ಟ್ರೀಯ ವ್ಯಾಕ್ಸಿನ್ ನೀತಿ” ಎಂದು ಧ್ವನಿಯೊಂದು ಹೇಳುವಂತೆ ಚಿತ್ರಿಸಿದ್ದಾರೆ. ಒಕ್ಕೂಟ ಸರ್ಕಾರಕ್ಕೆ ವ್ಯಾಕ್ಸಿನ್ ನೀತಿಯ ಬಗ್ಗೆ ಸುಪ್ರೀಂಕೋರ್ಟ್ ಕಿವಿಹಿಂಡಿರುವ ಪತ್ರಿಕಾ ವರದಿಯೊಂದರ ತಲೆ ಬರಹವನ್ನು ಚಿತ್ರದಲ್ಲಿ ಬರೆಯಲಾಗಿದೆ.

ಆಕಾಶ್ ಕುಮಾರ್ ಅವರು, “ಸರ್‌, ಬರೀ ಭಾಷಣಗಾರಿಗೆ ಬಂದ್ ಮಾಡಿ. ನೀವು ಏನೂ ಮಾಡಿಲ್ಲ. ಈಗ ನೀವು ರಾಜೀನಾಮೆ ಕೊಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ರೀಸ್ಥಿ ಅವರು, “ಮೋದಿಯವರೆ ನಿಮ್ಮ ಜೊತೆ ಯೋಗಿ ಅವರು ಯಾಕೆ ಹೀಗೆ ಮಾಡಿದರು” ಎಂದು ಉತ್ತರ ಪ್ರದೇಶ ಬಿಜೆಪಿಯ ಟ್ವಿಟರ್‌ನ ಕವರ್‌ ಫೋಟೋ ಹಾಕಿದ್ದಾರೆ. ಇತ್ತೀಚೆಗಿನ ಬೆಳವಣಿಗೆಯಂತೆ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸಂಬಂಧ ಹಳಸಿದ್ದು, ಯುಪಿ ಬಿಜೆಪಿಯ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿನ ಕವರ್‌ ಚಿತ್ರಗಳಲ್ಲಿ ಮೋದಿಯ ಚಿತ್ರವನ್ನು ಬಳಸಿಕೊಂಡಿಲ್ಲ. ಇದು ಬಿಜೆಪಿಯ ಆಂತರಿಕ ಕಚ್ಚಾಟವನ್ನು ಬಹಿರಂಗ ಪಡಿಸಿತ್ತು

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಊರು ಕೊಳ್ಳೆ ಹೊಡೆದ ಮೇಲೆ, ದಡ್ಡಿ ಬಾಗಿಲು ಮುಚ್ಚಲು ಬಂದನೆ ಈವಪ್ಪ?

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...