Homeಮುಖಪುಟದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ಒಕ್ಕೂಟ ಸರ್ಕಾರವು ವ್ಯಾಕ್ಸಿನೇಷನ್‌ ನೀತಿಯ ಬದಲಾವಣೆ ಮಾಡಿದ್ದಕ್ಕೆ ಕಾಂಗ್ರೆಸ್‌ ಸುಪ್ರೀಂಕೋರ್ಟ್‌ಗೆ ಧನ್ಯವಾದ ಸಲ್ಲಿಸಿದೆ.

- Advertisement -
- Advertisement -

ಕೊರೊನಾ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು. ತಮ್ಮ ಭಾಷಣದಲ್ಲಿ ವ್ಯಾಕ್ಸಿನ್ ಬಗ್ಗೆಯೆ ಹೆಚ್ಚಾಗಿ ಉಲ್ಲೇಖಿಸಿದ ಅವರು, ಕೊರೊನಾ ವಿರುದ್ದ ಹೋರಾಟಡಲು ಒಕ್ಕೂಟ ಸರ್ಕಾರವು ಯುದ್ದೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ವ್ಯಾಕ್ಸಿನ್ ಪ್ರಕ್ರಿಯೆಯನ್ನು ಇನ್ನು ಮುಂದೆ ಕೇಂದ್ರ ಸರ್ಕಾರವೆ ನಡೆಸುತ್ತದೆ ಹಾಗೂ ರಾಜ್ಯಗಳಿಗೆ ಜೂನ್ 21 ರಿಂದ ಉಚಿತ ವ್ಯಾಕ್ಸಿನ್‌ ನೀಡುವುದಾಗಿ ಅವರು ಎಂದು ತಮ್ಮ ಭಾಷಣದಲ್ಲಿ ಘೋಷಿಸಿದ್ದಾರೆ.

ಪ್ರಧಾನಿ ಭಾಷಣ ಮಾಡುತ್ತಿದ್ದಂತೆ ಹಲವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಅವುಗಳಲ್ಲಿ ಆಯ್ದವು ಇಲ್ಲಿದೆ.

ಕ್ರುಶಿಕ ಎವಿ ಅವರು, “ನಿಮ್ಮ ಮಾತುಗಳು ನಮಗೆಲ್ಲಿ ಅರ್ಥವಾಗಬೇಕು, ನಮಗೆ ಅರ್ಥವಾಗದ ಯಾವುದೋ ನುಡಿಯಲ್ಲಿದೆ. ಅಡಿಬರಹ ಇಲ್ಲ, ಮಾತಿನ ಡಬ್ಬಿಂಗ್ ಇಲ್ಲ, ಕಡೆಪಕ್ಷ ಮಾತುಗಳ ಅನುವಾದದ ಪಿಡಿಎಫ್ ಕೂಡ ಇಲ್ಲ. ಕೇವಲ ಅಭಿನಯ ಮಾತ್ರ ಕಾಣೋದು. ಹಿಂದಿ ಹೇರಿಕೆ ನಿಲ್ಲಿಸಿ ಕನ್ನಡದಲ್ಲಿ ಮಾಹಿತಿ ಕೊಡಿ. ಪ್ರಧಾನಿ ಕಚೇರಿ ಪೂರ್ತಿ ದೇವನಾಗರಿಯಲ್ಲಿ ಟ್ವಿಟ್ ಮಾಡ್ತಿದೆ. ಹಿಂದಿ ಹೇರಿಕೆ ನಿಲ್ಲಿಸಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಆಲ್ಟ್‌ನ್ಯೂಸ್‌ ಸಂಪಾದಕ ಪ್ರತೀಕ್ ಸಿನ್ಹಾ, ಅವರು ಪ್ರಧಾನಿಯ ಮೂವತ್ತು ನಿಮಿಷದ ಭಾಷಣದಲ್ಲಿ ಏನಿತ್ತು ಎಂಬುದನ್ನು ನಾಲ್ಕು ಅಂಶ ಪಟ್ಟಿ ಮಾಡಿ ಸಂಕ್ಷಿಪ್ತವಾಗಿ ತಿಳಿಸಿದ್ದಾರೆ. ಅವರ ಟ್ವೀಟ್‌ನಲ್ಲಿ, “1. ಕೇಂದ್ರ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. 2. ರಾಜ್ಯಗಳು ವಿಫಲವಾಗಿವೆ. 3. ವ್ಯಾಕ್ಸಿನೇಷನ್ ನೀತಿಯ ಯು-ಟರ್ನ್. 4. ಲಸಿಕೆಗಳ ಬಗ್ಗೆ ವದಂತಿ ಹಬ್ಬಿಸಿದ್ದಕ್ಕಾಗಿ ರಾಮದೇವ್ ಮೇಲೆ ಪರೋಕ್ಷ ದಾಳಿ” ಎಂದು ಹೇಳಿದ್ದಾರೆ.

ಕನ್ನಡ ಪರ ಹೋರಾಟಗಾರ ಅರುಣ್ ಜಾವಗಲ್‌, “ಇದು ಹಿಂದಿ ಭಾಷಿಕ ನಾಗರೀಕರಿಗೆ ಮಾತ್ರ ಸಂಬಂಧಿಸಿದ ವಿಚಾರವೆ ನರೇಂದ್ರ ಮೋದಿಯವರೆ?” ಎಂದು ಹಿಂದಿ ಹೇರಿಕೆಯ ವಿರುದ್ದ ಮಾತನಾಡಿದ್ದಾರೆ.

ಪ್ರಶಾಂತ್ ಭೂಷಣ್ ಅವರು, ವ್ಯಂಗ್ಯಚಿತ್ರಕಾರ ಮಂಜುಲ್ ಅವರ ವ್ಯಂಗ್ಯ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ಕೊರೊನಾ ಎರಡನೆ ಅಲೆ ಬರುವ ಹೊತ್ತಿಗೆ ಹಾಗೂ ಹೆಚ್ಚುತ್ತಿರುವಾಗ ಪ್ರಧಾನಿ ಅಡಗಿ ಕೂತಿದ್ದರು. ಸೋಂಕು ಇಳಿಕೆಯಾಗುತ್ತಿದ್ದಂತೆ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಲು ಬರುತ್ತಾರೆ ಎಂಬಂತೆ ಚಿತ್ರಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌, “ ‘ಇಲ್ಲ’ ಎನ್ನುವುದಕ್ಕಿಂತ ತಡವಾಗಿ ಆದರೂ ಒಳ್ಳೆಯದೆ. ಕೇಂದ್ರ ಸರ್ಕಾರ ಲಸಿಕೆಯ ಜವಾಬ್ದಾರಿ‌ ಹೊತ್ತಿರುವುದು ಸ್ವಾಗತಾರ್ಹ. ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಳ್ಳಲು ಒತ್ತಾಯಿಸಿದ ಮಾನ್ಯ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು. ಲಸಿಕೆಗಳ ಸಮಾನ ವಿತರಣೆಯ ಕುರಿತು ಕರ್ನಾಟಕ ಸರ್ಕಾರ ಗಮನ ಹರಿಸಬೇಕಿದೆ” ಎಂದು ಹೇಳಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಸುಪ್ರೀಂಕೋರ್ಟ್‌ಗೆ ಧನ್ಯವಾದ ಸಲ್ಲಿಸಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ, “18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲ ಪ್ರಜೆಗಳಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ. ಘನತೆವೆತ್ತ ಸುಪ್ರೀಮ್ ಕೋರ್ಟ್‌ಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ. ಜೊತೆಗೆ ಕೇಂದ್ರಕ್ಕೆ ವ್ಯಾಕ್ಸಿನೇಷನ್‌ ವಿಷಯದಲ್ಲಿ ಕಿವಿಹಿಂಡಿರುವ ಪತ್ರಿಕಾ ವರದಿಯನ್ನೂ ಅವರು ತಮ್ಮ ಟ್ವೀಟ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, “ಜೂನ್ 21 ರಿಂದ ಕೋವಿಡ್ -19 ಲಸಿಕೆಯನ್ನು ರಾಜ್ಯಗಳಿಗೆ ಉಚಿತವಾಗಿ ನೀಡಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯು ಈ ಸಮಯದಲ್ಲಿ ಅತ್ಯಂತ ಸೂಕ್ತವಾದ ಪ್ರತಿಕ್ರಿಯೆಯಾಗಿದೆ. ನಮ್ಮ ಮನವಿಗೆ ಪ್ರಧಾನ ಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ನನಗೆ ಸಂತೋಷವಾಗಿದೆ” ಎಂದು ಹೇಳಿದ್ದಾರೆ. ಕೇರಳ ಮುಖ್ಯಮಂತ್ರಿಯು ವ್ಯಾಕ್ಸೀನ್ ಉಚಿತವಾಗಿ ನೀಡಬೇಕು ಎಂದು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಖ್ಯಾತ ವ್ಯಂಗ್ಯ ಚಿತ್ರಕಾರ ಸತೀಶ್‌ ಆಚಾರ್ಯ ಅವರು, ಪಂಜರದೊಳಗಿನ ಗಿಳಿಯೊಂದು ಸೂಜಿ ಚುಚ್ಚಿದಾಗ, “ಸರಿ, ರಾಷ್ಟ್ರೀಯ ವ್ಯಾಕ್ಸಿನ್ ನೀತಿ” ಎಂದು ಧ್ವನಿಯೊಂದು ಹೇಳುವಂತೆ ಚಿತ್ರಿಸಿದ್ದಾರೆ. ಒಕ್ಕೂಟ ಸರ್ಕಾರಕ್ಕೆ ವ್ಯಾಕ್ಸಿನ್ ನೀತಿಯ ಬಗ್ಗೆ ಸುಪ್ರೀಂಕೋರ್ಟ್ ಕಿವಿಹಿಂಡಿರುವ ಪತ್ರಿಕಾ ವರದಿಯೊಂದರ ತಲೆ ಬರಹವನ್ನು ಚಿತ್ರದಲ್ಲಿ ಬರೆಯಲಾಗಿದೆ.

ಆಕಾಶ್ ಕುಮಾರ್ ಅವರು, “ಸರ್‌, ಬರೀ ಭಾಷಣಗಾರಿಗೆ ಬಂದ್ ಮಾಡಿ. ನೀವು ಏನೂ ಮಾಡಿಲ್ಲ. ಈಗ ನೀವು ರಾಜೀನಾಮೆ ಕೊಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ರೀಸ್ಥಿ ಅವರು, “ಮೋದಿಯವರೆ ನಿಮ್ಮ ಜೊತೆ ಯೋಗಿ ಅವರು ಯಾಕೆ ಹೀಗೆ ಮಾಡಿದರು” ಎಂದು ಉತ್ತರ ಪ್ರದೇಶ ಬಿಜೆಪಿಯ ಟ್ವಿಟರ್‌ನ ಕವರ್‌ ಫೋಟೋ ಹಾಕಿದ್ದಾರೆ. ಇತ್ತೀಚೆಗಿನ ಬೆಳವಣಿಗೆಯಂತೆ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸಂಬಂಧ ಹಳಸಿದ್ದು, ಯುಪಿ ಬಿಜೆಪಿಯ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿನ ಕವರ್‌ ಚಿತ್ರಗಳಲ್ಲಿ ಮೋದಿಯ ಚಿತ್ರವನ್ನು ಬಳಸಿಕೊಂಡಿಲ್ಲ. ಇದು ಬಿಜೆಪಿಯ ಆಂತರಿಕ ಕಚ್ಚಾಟವನ್ನು ಬಹಿರಂಗ ಪಡಿಸಿತ್ತು

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಊರು ಕೊಳ್ಳೆ ಹೊಡೆದ ಮೇಲೆ, ದಡ್ಡಿ ಬಾಗಿಲು ಮುಚ್ಚಲು ಬಂದನೆ ಈವಪ್ಪ?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...