Homeಮುಖಪುಟದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ಒಕ್ಕೂಟ ಸರ್ಕಾರವು ವ್ಯಾಕ್ಸಿನೇಷನ್‌ ನೀತಿಯ ಬದಲಾವಣೆ ಮಾಡಿದ್ದಕ್ಕೆ ಕಾಂಗ್ರೆಸ್‌ ಸುಪ್ರೀಂಕೋರ್ಟ್‌ಗೆ ಧನ್ಯವಾದ ಸಲ್ಲಿಸಿದೆ.

- Advertisement -
- Advertisement -

ಕೊರೊನಾ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಸೋಮವಾರ ಮಾತನಾಡಿದರು. ತಮ್ಮ ಭಾಷಣದಲ್ಲಿ ವ್ಯಾಕ್ಸಿನ್ ಬಗ್ಗೆಯೆ ಹೆಚ್ಚಾಗಿ ಉಲ್ಲೇಖಿಸಿದ ಅವರು, ಕೊರೊನಾ ವಿರುದ್ದ ಹೋರಾಟಡಲು ಒಕ್ಕೂಟ ಸರ್ಕಾರವು ಯುದ್ದೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ವ್ಯಾಕ್ಸಿನ್ ಪ್ರಕ್ರಿಯೆಯನ್ನು ಇನ್ನು ಮುಂದೆ ಕೇಂದ್ರ ಸರ್ಕಾರವೆ ನಡೆಸುತ್ತದೆ ಹಾಗೂ ರಾಜ್ಯಗಳಿಗೆ ಜೂನ್ 21 ರಿಂದ ಉಚಿತ ವ್ಯಾಕ್ಸಿನ್‌ ನೀಡುವುದಾಗಿ ಅವರು ಎಂದು ತಮ್ಮ ಭಾಷಣದಲ್ಲಿ ಘೋಷಿಸಿದ್ದಾರೆ.

ಪ್ರಧಾನಿ ಭಾಷಣ ಮಾಡುತ್ತಿದ್ದಂತೆ ಹಲವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಅವುಗಳಲ್ಲಿ ಆಯ್ದವು ಇಲ್ಲಿದೆ.

ಕ್ರುಶಿಕ ಎವಿ ಅವರು, “ನಿಮ್ಮ ಮಾತುಗಳು ನಮಗೆಲ್ಲಿ ಅರ್ಥವಾಗಬೇಕು, ನಮಗೆ ಅರ್ಥವಾಗದ ಯಾವುದೋ ನುಡಿಯಲ್ಲಿದೆ. ಅಡಿಬರಹ ಇಲ್ಲ, ಮಾತಿನ ಡಬ್ಬಿಂಗ್ ಇಲ್ಲ, ಕಡೆಪಕ್ಷ ಮಾತುಗಳ ಅನುವಾದದ ಪಿಡಿಎಫ್ ಕೂಡ ಇಲ್ಲ. ಕೇವಲ ಅಭಿನಯ ಮಾತ್ರ ಕಾಣೋದು. ಹಿಂದಿ ಹೇರಿಕೆ ನಿಲ್ಲಿಸಿ ಕನ್ನಡದಲ್ಲಿ ಮಾಹಿತಿ ಕೊಡಿ. ಪ್ರಧಾನಿ ಕಚೇರಿ ಪೂರ್ತಿ ದೇವನಾಗರಿಯಲ್ಲಿ ಟ್ವಿಟ್ ಮಾಡ್ತಿದೆ. ಹಿಂದಿ ಹೇರಿಕೆ ನಿಲ್ಲಿಸಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಆಲ್ಟ್‌ನ್ಯೂಸ್‌ ಸಂಪಾದಕ ಪ್ರತೀಕ್ ಸಿನ್ಹಾ, ಅವರು ಪ್ರಧಾನಿಯ ಮೂವತ್ತು ನಿಮಿಷದ ಭಾಷಣದಲ್ಲಿ ಏನಿತ್ತು ಎಂಬುದನ್ನು ನಾಲ್ಕು ಅಂಶ ಪಟ್ಟಿ ಮಾಡಿ ಸಂಕ್ಷಿಪ್ತವಾಗಿ ತಿಳಿಸಿದ್ದಾರೆ. ಅವರ ಟ್ವೀಟ್‌ನಲ್ಲಿ, “1. ಕೇಂದ್ರ ಸರ್ಕಾರ ಯಾವುದೇ ತಪ್ಪು ಮಾಡಿಲ್ಲ. 2. ರಾಜ್ಯಗಳು ವಿಫಲವಾಗಿವೆ. 3. ವ್ಯಾಕ್ಸಿನೇಷನ್ ನೀತಿಯ ಯು-ಟರ್ನ್. 4. ಲಸಿಕೆಗಳ ಬಗ್ಗೆ ವದಂತಿ ಹಬ್ಬಿಸಿದ್ದಕ್ಕಾಗಿ ರಾಮದೇವ್ ಮೇಲೆ ಪರೋಕ್ಷ ದಾಳಿ” ಎಂದು ಹೇಳಿದ್ದಾರೆ.

ಕನ್ನಡ ಪರ ಹೋರಾಟಗಾರ ಅರುಣ್ ಜಾವಗಲ್‌, “ಇದು ಹಿಂದಿ ಭಾಷಿಕ ನಾಗರೀಕರಿಗೆ ಮಾತ್ರ ಸಂಬಂಧಿಸಿದ ವಿಚಾರವೆ ನರೇಂದ್ರ ಮೋದಿಯವರೆ?” ಎಂದು ಹಿಂದಿ ಹೇರಿಕೆಯ ವಿರುದ್ದ ಮಾತನಾಡಿದ್ದಾರೆ.

ಪ್ರಶಾಂತ್ ಭೂಷಣ್ ಅವರು, ವ್ಯಂಗ್ಯಚಿತ್ರಕಾರ ಮಂಜುಲ್ ಅವರ ವ್ಯಂಗ್ಯ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ಕೊರೊನಾ ಎರಡನೆ ಅಲೆ ಬರುವ ಹೊತ್ತಿಗೆ ಹಾಗೂ ಹೆಚ್ಚುತ್ತಿರುವಾಗ ಪ್ರಧಾನಿ ಅಡಗಿ ಕೂತಿದ್ದರು. ಸೋಂಕು ಇಳಿಕೆಯಾಗುತ್ತಿದ್ದಂತೆ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಲು ಬರುತ್ತಾರೆ ಎಂಬಂತೆ ಚಿತ್ರಿಸಲಾಗಿದೆ.

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌, “ ‘ಇಲ್ಲ’ ಎನ್ನುವುದಕ್ಕಿಂತ ತಡವಾಗಿ ಆದರೂ ಒಳ್ಳೆಯದೆ. ಕೇಂದ್ರ ಸರ್ಕಾರ ಲಸಿಕೆಯ ಜವಾಬ್ದಾರಿ‌ ಹೊತ್ತಿರುವುದು ಸ್ವಾಗತಾರ್ಹ. ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಳ್ಳಲು ಒತ್ತಾಯಿಸಿದ ಮಾನ್ಯ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು. ಲಸಿಕೆಗಳ ಸಮಾನ ವಿತರಣೆಯ ಕುರಿತು ಕರ್ನಾಟಕ ಸರ್ಕಾರ ಗಮನ ಹರಿಸಬೇಕಿದೆ” ಎಂದು ಹೇಳಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಸುಪ್ರೀಂಕೋರ್ಟ್‌ಗೆ ಧನ್ಯವಾದ ಸಲ್ಲಿಸಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ, “18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲ ಪ್ರಜೆಗಳಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ. ಘನತೆವೆತ್ತ ಸುಪ್ರೀಮ್ ಕೋರ್ಟ್‌ಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ. ಜೊತೆಗೆ ಕೇಂದ್ರಕ್ಕೆ ವ್ಯಾಕ್ಸಿನೇಷನ್‌ ವಿಷಯದಲ್ಲಿ ಕಿವಿಹಿಂಡಿರುವ ಪತ್ರಿಕಾ ವರದಿಯನ್ನೂ ಅವರು ತಮ್ಮ ಟ್ವೀಟ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, “ಜೂನ್ 21 ರಿಂದ ಕೋವಿಡ್ -19 ಲಸಿಕೆಯನ್ನು ರಾಜ್ಯಗಳಿಗೆ ಉಚಿತವಾಗಿ ನೀಡಲಾಗುವುದು ಎಂಬ ಪ್ರಧಾನ ಮಂತ್ರಿಯ ಘೋಷಣೆಯು ಈ ಸಮಯದಲ್ಲಿ ಅತ್ಯಂತ ಸೂಕ್ತವಾದ ಪ್ರತಿಕ್ರಿಯೆಯಾಗಿದೆ. ನಮ್ಮ ಮನವಿಗೆ ಪ್ರಧಾನ ಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ನನಗೆ ಸಂತೋಷವಾಗಿದೆ” ಎಂದು ಹೇಳಿದ್ದಾರೆ. ಕೇರಳ ಮುಖ್ಯಮಂತ್ರಿಯು ವ್ಯಾಕ್ಸೀನ್ ಉಚಿತವಾಗಿ ನೀಡಬೇಕು ಎಂದು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಖ್ಯಾತ ವ್ಯಂಗ್ಯ ಚಿತ್ರಕಾರ ಸತೀಶ್‌ ಆಚಾರ್ಯ ಅವರು, ಪಂಜರದೊಳಗಿನ ಗಿಳಿಯೊಂದು ಸೂಜಿ ಚುಚ್ಚಿದಾಗ, “ಸರಿ, ರಾಷ್ಟ್ರೀಯ ವ್ಯಾಕ್ಸಿನ್ ನೀತಿ” ಎಂದು ಧ್ವನಿಯೊಂದು ಹೇಳುವಂತೆ ಚಿತ್ರಿಸಿದ್ದಾರೆ. ಒಕ್ಕೂಟ ಸರ್ಕಾರಕ್ಕೆ ವ್ಯಾಕ್ಸಿನ್ ನೀತಿಯ ಬಗ್ಗೆ ಸುಪ್ರೀಂಕೋರ್ಟ್ ಕಿವಿಹಿಂಡಿರುವ ಪತ್ರಿಕಾ ವರದಿಯೊಂದರ ತಲೆ ಬರಹವನ್ನು ಚಿತ್ರದಲ್ಲಿ ಬರೆಯಲಾಗಿದೆ.

ಆಕಾಶ್ ಕುಮಾರ್ ಅವರು, “ಸರ್‌, ಬರೀ ಭಾಷಣಗಾರಿಗೆ ಬಂದ್ ಮಾಡಿ. ನೀವು ಏನೂ ಮಾಡಿಲ್ಲ. ಈಗ ನೀವು ರಾಜೀನಾಮೆ ಕೊಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ರೀಸ್ಥಿ ಅವರು, “ಮೋದಿಯವರೆ ನಿಮ್ಮ ಜೊತೆ ಯೋಗಿ ಅವರು ಯಾಕೆ ಹೀಗೆ ಮಾಡಿದರು” ಎಂದು ಉತ್ತರ ಪ್ರದೇಶ ಬಿಜೆಪಿಯ ಟ್ವಿಟರ್‌ನ ಕವರ್‌ ಫೋಟೋ ಹಾಕಿದ್ದಾರೆ. ಇತ್ತೀಚೆಗಿನ ಬೆಳವಣಿಗೆಯಂತೆ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸಂಬಂಧ ಹಳಸಿದ್ದು, ಯುಪಿ ಬಿಜೆಪಿಯ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿನ ಕವರ್‌ ಚಿತ್ರಗಳಲ್ಲಿ ಮೋದಿಯ ಚಿತ್ರವನ್ನು ಬಳಸಿಕೊಂಡಿಲ್ಲ. ಇದು ಬಿಜೆಪಿಯ ಆಂತರಿಕ ಕಚ್ಚಾಟವನ್ನು ಬಹಿರಂಗ ಪಡಿಸಿತ್ತು

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಊರು ಕೊಳ್ಳೆ ಹೊಡೆದ ಮೇಲೆ, ದಡ್ಡಿ ಬಾಗಿಲು ಮುಚ್ಚಲು ಬಂದನೆ ಈವಪ್ಪ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...