Homeಮುಖಪುಟಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮೋದಿ ಅಮೇರಿಕಾಕ್ಕೆ ಹೋಗಿ ಟ್ರಂಪ್‌ಗೂ ಪ್ರಚಾರ ಮಾಡಬಹುದು,ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಆಗಲ್ಲ. ಯಾಕೆಂದರೆ ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

- Advertisement -
- Advertisement -

ಕೇರಳದಲ್ಲಿ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎಡಪಕ್ಷಗಳ ಮೈತ್ರಿಕೂಟವಾದ ಎಲ್‌ಡಿಎಫ್‌, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಹಾಗೂ ಬಿಜೆಪಿ ನೇತತ್ವದ ಎನ್‌ಡಿಎ ಈಗಾಗಲೇ ಚುನಾವಣಾ ಪ್ರಚಾರವನ್ನು ಭರ್ಜರಿಯಾಗಿ ನಡೆಸುತ್ತಿದೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಕೇರಳಕ್ಕೆ ತೆರಳಿದ್ದು ಪಾಲಕ್ಕಾಡ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿ ಕೇರಳದಿಂದ, ತಮಿಳುನಾಡಿಗೆ ತೆರಳುತ್ತಿದ್ದು, ಟ್ವಿಟ್ಟರ್‌ನಲ್ಲಿ ‘ವಾಪಾಸು ಹೋಗಿ ಮೋದಿ’, ‘ವಾಪಾಸು ಹೋಗಿ ಸ್ಯಾಡಿಸ್ಟ್‌ ಮೋದಿ’, ‘ವಾಪಾಸು ಹೋಗಿ ಫ್ಯಾಸಿಸ್ಟ್‌ ಮೋದಿ’ ಎಂದು ಟ್ರೆಂಡ್ ಪ್ರಾರಂಭವಾಗಿದೆ. #GoBackSadistModi,#GoBackFascistModi, #GoBackModi ಎಂದು ಟ್ವಿಟರ್‌‌ನಲ್ಲಿ ಟ್ರೆಂಡ್ ಆಗಿದೆ. #GoBackModi ಟ್ವಿಟರ್‌ನ ಟ್ರೆಂಡ್‌ನ ಒಂದನೆ ಸ್ಥಾನದಲ್ಲಿದೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಪ್ರಧಾನಿ ಮೋದಿ ಕೇರಳದ ಪಾಲಕ್ಕಾಡ್‌‌ನಲ್ಲಿ ಮಾತನಾಡಿ, “ಯುಡಿಎಫ್ ಮತ್ತು ಎಲ್‌ಡಿಎಫ್‌‌ ಮ್ಯಾಚ್‌ ಪಿಕ್ಸ್‌‌ಅನ್ನು ಕೇರಳ ಈ ಬಾರಿ ತಿರಸ್ಕರಿಸಲಿದೆ” ಎಂದು ಹೇಳಿದ್ದಾರೆ. ಇದೀಗ ಅವರು ತಮಿಳುನಾಡಿಗೆ ತೆರಳಲಿದ್ದಾರೆ.

ಚಿನ್ನಸರವಣ ಅವರು, “ಅಮೇರಿಕಾದಲ್ಲಿ ಟ್ರಂಪ್‌ಗೂ ಮೋದಿ ಪ್ರಚಾರ ಮಾಡಬಹುದು. ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ. ಕಾರಣ ತಮಿಳುನಾಡಿನ ಜನರು ಮೋದಿಯ ಮೇಲೆ ಕೋಪಗೊಂಡಿದ್ದಾರೆ. ಅದು ಅವರು ನೀಡುವ ಮತಗಳ ಮೇಲೆ ಪರಿಣಾಮ ಬೀರುತ್ತಾರೆ. 56 ಇಂಚು ವ್ಯರ್ಥವಾಯಿತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳ ಮುಖ್ಯಮಂತ್ರಿ ಮತ್ತು ಪ್ರಧಾನಿ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಕಾಂಗ್ರೆಸ್

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಯಾವುದೆ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ಬರಿಕಾಲಲ್ಲೇ ಸಾವಿರಾರು ಕಿ.ಮೀ ವರೆಗೂ ನಡೆದುಕೊಂಡು ಹೊರಟಿದ್ದ ವಲಸೆ ಕಾರ್ಮಿಕರು ರೈಲು ಅಫಘಾತಕ್ಕೀಡಾಗಿ ಮೃತಪಟ್ಟಿದ್ದರು. ಈ ಸಮಯದಲ್ಲಿ ಮೃತಪಟ್ಟ ಕಾರ್ಮಿಕರು ದಾರಿಯಲ್ಲಿ ತಿನ್ನಲು ಕೊಂಡೊಯ್ದಿದ್ದ ರೊಟ್ಟಿಗಳು ರೈಲಿನ ಹಳಿಗಳಲ್ಲಿ ಅನಾಥವಾಗಿ ಬಿದ್ದಿರುವ ಹೃದಯ ವಿದ್ರಾವಕ ಚಿತ್ರವೊಂದು ಭಾರಿ ಆಕ್ರೋಶವನ್ನು ಹುಟ್ಟುಹಾಕಿತ್ತು. ಆ ಚಿತ್ರವನ್ನು ಸರಣಿ ಎಂಬವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಯಾವತ್ತೂ ಮರೆಯುವುದಿಲ್ಲ, ಯಾವತ್ತೂ ಕ್ಷಮಿಸಲ್ಲ” ಎಂದು ಬರೆದಿದ್ದಾರೆ.

ಬೃಜ್ ಮೋಹನ್‌ ಅವರು, “ಪ್ರತಿ ಬಾರಿಯೂ ಮೋದಿ ತಮಿಳುನಾಡಿಗೆ ಕಾಲಿಡಲು ಯೋಜಿಸಿದಾಗ, ಜನರು #GoBackModi ಹೇಳುವ ಪ್ರವೃತ್ತಿಯನ್ನು ಕಡ್ಡಾಯಗೊಳಿಸಿದ್ದಾರೆ. ಒಂದು ವಿಷಯ ಸ್ಪಷ್ಟವಾಗಿದೆ, ಬಿಜೆಪಿ ಮತ್ತು ಮೋದಿಗೆ ತಮಿಳುನಾಡಿ‌ನಲ್ಲಿ ಸ್ಥಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ನಿತ್ಯಾ ಶ್ರೀ ಅವರು, “ತಮಿಳುನಾಡು ಇನ್ನೊಂದು ಉತ್ತರ ಪ್ರದೇಶ ಆಗುವುದು ನಮಗೆ ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅಬ್ದುಲ್ ಬಾಸಿತ್ ಅವರು, “ಫ್ಯಾಸಿಸ್ಟರು ತಮ್ಮ ತಲೆಯ ಮೇಲೆ ಕೊಂಬುಗಳನ್ನು ಹೊಂದಿಲ್ಲ!” ಎಂದು ಹಿಟ್ಲರ್‌ ಪ್ರಧಾನಿ ಮೋದಿಯನ್ನು ಎತ್ತಿ ಹಿಡಿದಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಸೈಮನ್ ರಾಜ್ ಅವರು, ‘ಹಿಂದಿ ಬೇಕಿಲ್ಲ, ಹೊಸ ಶಿಕ್ಷಣ ನೀತಿ ಬೇಕಿಲ್ಲ, ನೀಟ್ ಬೇಕಿಲ್ಲ, ಸಿಎಎ ಬೇಕಿಲ್ಲ, ಅದೇ ರೀತಿ ಬಿಜೆಪಿಯು ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...