Homeಮುಖಪುಟಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮೋದಿ ಅಮೇರಿಕಾಕ್ಕೆ ಹೋಗಿ ಟ್ರಂಪ್‌ಗೂ ಪ್ರಚಾರ ಮಾಡಬಹುದು,ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಆಗಲ್ಲ. ಯಾಕೆಂದರೆ ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

- Advertisement -
- Advertisement -

ಕೇರಳದಲ್ಲಿ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎಡಪಕ್ಷಗಳ ಮೈತ್ರಿಕೂಟವಾದ ಎಲ್‌ಡಿಎಫ್‌, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಹಾಗೂ ಬಿಜೆಪಿ ನೇತತ್ವದ ಎನ್‌ಡಿಎ ಈಗಾಗಲೇ ಚುನಾವಣಾ ಪ್ರಚಾರವನ್ನು ಭರ್ಜರಿಯಾಗಿ ನಡೆಸುತ್ತಿದೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಕೇರಳಕ್ಕೆ ತೆರಳಿದ್ದು ಪಾಲಕ್ಕಾಡ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿ ಕೇರಳದಿಂದ, ತಮಿಳುನಾಡಿಗೆ ತೆರಳುತ್ತಿದ್ದು, ಟ್ವಿಟ್ಟರ್‌ನಲ್ಲಿ ‘ವಾಪಾಸು ಹೋಗಿ ಮೋದಿ’, ‘ವಾಪಾಸು ಹೋಗಿ ಸ್ಯಾಡಿಸ್ಟ್‌ ಮೋದಿ’, ‘ವಾಪಾಸು ಹೋಗಿ ಫ್ಯಾಸಿಸ್ಟ್‌ ಮೋದಿ’ ಎಂದು ಟ್ರೆಂಡ್ ಪ್ರಾರಂಭವಾಗಿದೆ. #GoBackSadistModi,#GoBackFascistModi, #GoBackModi ಎಂದು ಟ್ವಿಟರ್‌‌ನಲ್ಲಿ ಟ್ರೆಂಡ್ ಆಗಿದೆ. #GoBackModi ಟ್ವಿಟರ್‌ನ ಟ್ರೆಂಡ್‌ನ ಒಂದನೆ ಸ್ಥಾನದಲ್ಲಿದೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಪ್ರಧಾನಿ ಮೋದಿ ಕೇರಳದ ಪಾಲಕ್ಕಾಡ್‌‌ನಲ್ಲಿ ಮಾತನಾಡಿ, “ಯುಡಿಎಫ್ ಮತ್ತು ಎಲ್‌ಡಿಎಫ್‌‌ ಮ್ಯಾಚ್‌ ಪಿಕ್ಸ್‌‌ಅನ್ನು ಕೇರಳ ಈ ಬಾರಿ ತಿರಸ್ಕರಿಸಲಿದೆ” ಎಂದು ಹೇಳಿದ್ದಾರೆ. ಇದೀಗ ಅವರು ತಮಿಳುನಾಡಿಗೆ ತೆರಳಲಿದ್ದಾರೆ.

ಚಿನ್ನಸರವಣ ಅವರು, “ಅಮೇರಿಕಾದಲ್ಲಿ ಟ್ರಂಪ್‌ಗೂ ಮೋದಿ ಪ್ರಚಾರ ಮಾಡಬಹುದು. ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ. ಕಾರಣ ತಮಿಳುನಾಡಿನ ಜನರು ಮೋದಿಯ ಮೇಲೆ ಕೋಪಗೊಂಡಿದ್ದಾರೆ. ಅದು ಅವರು ನೀಡುವ ಮತಗಳ ಮೇಲೆ ಪರಿಣಾಮ ಬೀರುತ್ತಾರೆ. 56 ಇಂಚು ವ್ಯರ್ಥವಾಯಿತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳ ಮುಖ್ಯಮಂತ್ರಿ ಮತ್ತು ಪ್ರಧಾನಿ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಕಾಂಗ್ರೆಸ್

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಯಾವುದೆ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ಬರಿಕಾಲಲ್ಲೇ ಸಾವಿರಾರು ಕಿ.ಮೀ ವರೆಗೂ ನಡೆದುಕೊಂಡು ಹೊರಟಿದ್ದ ವಲಸೆ ಕಾರ್ಮಿಕರು ರೈಲು ಅಫಘಾತಕ್ಕೀಡಾಗಿ ಮೃತಪಟ್ಟಿದ್ದರು. ಈ ಸಮಯದಲ್ಲಿ ಮೃತಪಟ್ಟ ಕಾರ್ಮಿಕರು ದಾರಿಯಲ್ಲಿ ತಿನ್ನಲು ಕೊಂಡೊಯ್ದಿದ್ದ ರೊಟ್ಟಿಗಳು ರೈಲಿನ ಹಳಿಗಳಲ್ಲಿ ಅನಾಥವಾಗಿ ಬಿದ್ದಿರುವ ಹೃದಯ ವಿದ್ರಾವಕ ಚಿತ್ರವೊಂದು ಭಾರಿ ಆಕ್ರೋಶವನ್ನು ಹುಟ್ಟುಹಾಕಿತ್ತು. ಆ ಚಿತ್ರವನ್ನು ಸರಣಿ ಎಂಬವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಯಾವತ್ತೂ ಮರೆಯುವುದಿಲ್ಲ, ಯಾವತ್ತೂ ಕ್ಷಮಿಸಲ್ಲ” ಎಂದು ಬರೆದಿದ್ದಾರೆ.

ಬೃಜ್ ಮೋಹನ್‌ ಅವರು, “ಪ್ರತಿ ಬಾರಿಯೂ ಮೋದಿ ತಮಿಳುನಾಡಿಗೆ ಕಾಲಿಡಲು ಯೋಜಿಸಿದಾಗ, ಜನರು #GoBackModi ಹೇಳುವ ಪ್ರವೃತ್ತಿಯನ್ನು ಕಡ್ಡಾಯಗೊಳಿಸಿದ್ದಾರೆ. ಒಂದು ವಿಷಯ ಸ್ಪಷ್ಟವಾಗಿದೆ, ಬಿಜೆಪಿ ಮತ್ತು ಮೋದಿಗೆ ತಮಿಳುನಾಡಿ‌ನಲ್ಲಿ ಸ್ಥಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ನಿತ್ಯಾ ಶ್ರೀ ಅವರು, “ತಮಿಳುನಾಡು ಇನ್ನೊಂದು ಉತ್ತರ ಪ್ರದೇಶ ಆಗುವುದು ನಮಗೆ ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅಬ್ದುಲ್ ಬಾಸಿತ್ ಅವರು, “ಫ್ಯಾಸಿಸ್ಟರು ತಮ್ಮ ತಲೆಯ ಮೇಲೆ ಕೊಂಬುಗಳನ್ನು ಹೊಂದಿಲ್ಲ!” ಎಂದು ಹಿಟ್ಲರ್‌ ಪ್ರಧಾನಿ ಮೋದಿಯನ್ನು ಎತ್ತಿ ಹಿಡಿದಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಸೈಮನ್ ರಾಜ್ ಅವರು, ‘ಹಿಂದಿ ಬೇಕಿಲ್ಲ, ಹೊಸ ಶಿಕ್ಷಣ ನೀತಿ ಬೇಕಿಲ್ಲ, ನೀಟ್ ಬೇಕಿಲ್ಲ, ಸಿಎಎ ಬೇಕಿಲ್ಲ, ಅದೇ ರೀತಿ ಬಿಜೆಪಿಯು ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...