Homeಮುಖಪುಟಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮೋದಿ ಅಮೇರಿಕಾಕ್ಕೆ ಹೋಗಿ ಟ್ರಂಪ್‌ಗೂ ಪ್ರಚಾರ ಮಾಡಬಹುದು,ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಆಗಲ್ಲ. ಯಾಕೆಂದರೆ ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

- Advertisement -
- Advertisement -

ಕೇರಳದಲ್ಲಿ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎಡಪಕ್ಷಗಳ ಮೈತ್ರಿಕೂಟವಾದ ಎಲ್‌ಡಿಎಫ್‌, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಹಾಗೂ ಬಿಜೆಪಿ ನೇತತ್ವದ ಎನ್‌ಡಿಎ ಈಗಾಗಲೇ ಚುನಾವಣಾ ಪ್ರಚಾರವನ್ನು ಭರ್ಜರಿಯಾಗಿ ನಡೆಸುತ್ತಿದೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಕೇರಳಕ್ಕೆ ತೆರಳಿದ್ದು ಪಾಲಕ್ಕಾಡ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿ ಕೇರಳದಿಂದ, ತಮಿಳುನಾಡಿಗೆ ತೆರಳುತ್ತಿದ್ದು, ಟ್ವಿಟ್ಟರ್‌ನಲ್ಲಿ ‘ವಾಪಾಸು ಹೋಗಿ ಮೋದಿ’, ‘ವಾಪಾಸು ಹೋಗಿ ಸ್ಯಾಡಿಸ್ಟ್‌ ಮೋದಿ’, ‘ವಾಪಾಸು ಹೋಗಿ ಫ್ಯಾಸಿಸ್ಟ್‌ ಮೋದಿ’ ಎಂದು ಟ್ರೆಂಡ್ ಪ್ರಾರಂಭವಾಗಿದೆ. #GoBackSadistModi,#GoBackFascistModi, #GoBackModi ಎಂದು ಟ್ವಿಟರ್‌‌ನಲ್ಲಿ ಟ್ರೆಂಡ್ ಆಗಿದೆ. #GoBackModi ಟ್ವಿಟರ್‌ನ ಟ್ರೆಂಡ್‌ನ ಒಂದನೆ ಸ್ಥಾನದಲ್ಲಿದೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಪ್ರಧಾನಿ ಮೋದಿ ಕೇರಳದ ಪಾಲಕ್ಕಾಡ್‌‌ನಲ್ಲಿ ಮಾತನಾಡಿ, “ಯುಡಿಎಫ್ ಮತ್ತು ಎಲ್‌ಡಿಎಫ್‌‌ ಮ್ಯಾಚ್‌ ಪಿಕ್ಸ್‌‌ಅನ್ನು ಕೇರಳ ಈ ಬಾರಿ ತಿರಸ್ಕರಿಸಲಿದೆ” ಎಂದು ಹೇಳಿದ್ದಾರೆ. ಇದೀಗ ಅವರು ತಮಿಳುನಾಡಿಗೆ ತೆರಳಲಿದ್ದಾರೆ.

ಚಿನ್ನಸರವಣ ಅವರು, “ಅಮೇರಿಕಾದಲ್ಲಿ ಟ್ರಂಪ್‌ಗೂ ಮೋದಿ ಪ್ರಚಾರ ಮಾಡಬಹುದು. ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ. ಕಾರಣ ತಮಿಳುನಾಡಿನ ಜನರು ಮೋದಿಯ ಮೇಲೆ ಕೋಪಗೊಂಡಿದ್ದಾರೆ. ಅದು ಅವರು ನೀಡುವ ಮತಗಳ ಮೇಲೆ ಪರಿಣಾಮ ಬೀರುತ್ತಾರೆ. 56 ಇಂಚು ವ್ಯರ್ಥವಾಯಿತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳ ಮುಖ್ಯಮಂತ್ರಿ ಮತ್ತು ಪ್ರಧಾನಿ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಕಾಂಗ್ರೆಸ್

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಯಾವುದೆ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ಬರಿಕಾಲಲ್ಲೇ ಸಾವಿರಾರು ಕಿ.ಮೀ ವರೆಗೂ ನಡೆದುಕೊಂಡು ಹೊರಟಿದ್ದ ವಲಸೆ ಕಾರ್ಮಿಕರು ರೈಲು ಅಫಘಾತಕ್ಕೀಡಾಗಿ ಮೃತಪಟ್ಟಿದ್ದರು. ಈ ಸಮಯದಲ್ಲಿ ಮೃತಪಟ್ಟ ಕಾರ್ಮಿಕರು ದಾರಿಯಲ್ಲಿ ತಿನ್ನಲು ಕೊಂಡೊಯ್ದಿದ್ದ ರೊಟ್ಟಿಗಳು ರೈಲಿನ ಹಳಿಗಳಲ್ಲಿ ಅನಾಥವಾಗಿ ಬಿದ್ದಿರುವ ಹೃದಯ ವಿದ್ರಾವಕ ಚಿತ್ರವೊಂದು ಭಾರಿ ಆಕ್ರೋಶವನ್ನು ಹುಟ್ಟುಹಾಕಿತ್ತು. ಆ ಚಿತ್ರವನ್ನು ಸರಣಿ ಎಂಬವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಯಾವತ್ತೂ ಮರೆಯುವುದಿಲ್ಲ, ಯಾವತ್ತೂ ಕ್ಷಮಿಸಲ್ಲ” ಎಂದು ಬರೆದಿದ್ದಾರೆ.

ಬೃಜ್ ಮೋಹನ್‌ ಅವರು, “ಪ್ರತಿ ಬಾರಿಯೂ ಮೋದಿ ತಮಿಳುನಾಡಿಗೆ ಕಾಲಿಡಲು ಯೋಜಿಸಿದಾಗ, ಜನರು #GoBackModi ಹೇಳುವ ಪ್ರವೃತ್ತಿಯನ್ನು ಕಡ್ಡಾಯಗೊಳಿಸಿದ್ದಾರೆ. ಒಂದು ವಿಷಯ ಸ್ಪಷ್ಟವಾಗಿದೆ, ಬಿಜೆಪಿ ಮತ್ತು ಮೋದಿಗೆ ತಮಿಳುನಾಡಿ‌ನಲ್ಲಿ ಸ್ಥಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ನಿತ್ಯಾ ಶ್ರೀ ಅವರು, “ತಮಿಳುನಾಡು ಇನ್ನೊಂದು ಉತ್ತರ ಪ್ರದೇಶ ಆಗುವುದು ನಮಗೆ ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅಬ್ದುಲ್ ಬಾಸಿತ್ ಅವರು, “ಫ್ಯಾಸಿಸ್ಟರು ತಮ್ಮ ತಲೆಯ ಮೇಲೆ ಕೊಂಬುಗಳನ್ನು ಹೊಂದಿಲ್ಲ!” ಎಂದು ಹಿಟ್ಲರ್‌ ಪ್ರಧಾನಿ ಮೋದಿಯನ್ನು ಎತ್ತಿ ಹಿಡಿದಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಸೈಮನ್ ರಾಜ್ ಅವರು, ‘ಹಿಂದಿ ಬೇಕಿಲ್ಲ, ಹೊಸ ಶಿಕ್ಷಣ ನೀತಿ ಬೇಕಿಲ್ಲ, ನೀಟ್ ಬೇಕಿಲ್ಲ, ಸಿಎಎ ಬೇಕಿಲ್ಲ, ಅದೇ ರೀತಿ ಬಿಜೆಪಿಯು ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...