Homeಮುಖಪುಟಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮೋದಿ ಅಮೇರಿಕಾಕ್ಕೆ ಹೋಗಿ ಟ್ರಂಪ್‌ಗೂ ಪ್ರಚಾರ ಮಾಡಬಹುದು,ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಆಗಲ್ಲ. ಯಾಕೆಂದರೆ ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

- Advertisement -
- Advertisement -

ಕೇರಳದಲ್ಲಿ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎಡಪಕ್ಷಗಳ ಮೈತ್ರಿಕೂಟವಾದ ಎಲ್‌ಡಿಎಫ್‌, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಹಾಗೂ ಬಿಜೆಪಿ ನೇತತ್ವದ ಎನ್‌ಡಿಎ ಈಗಾಗಲೇ ಚುನಾವಣಾ ಪ್ರಚಾರವನ್ನು ಭರ್ಜರಿಯಾಗಿ ನಡೆಸುತ್ತಿದೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಕೇರಳಕ್ಕೆ ತೆರಳಿದ್ದು ಪಾಲಕ್ಕಾಡ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿ ಕೇರಳದಿಂದ, ತಮಿಳುನಾಡಿಗೆ ತೆರಳುತ್ತಿದ್ದು, ಟ್ವಿಟ್ಟರ್‌ನಲ್ಲಿ ‘ವಾಪಾಸು ಹೋಗಿ ಮೋದಿ’, ‘ವಾಪಾಸು ಹೋಗಿ ಸ್ಯಾಡಿಸ್ಟ್‌ ಮೋದಿ’, ‘ವಾಪಾಸು ಹೋಗಿ ಫ್ಯಾಸಿಸ್ಟ್‌ ಮೋದಿ’ ಎಂದು ಟ್ರೆಂಡ್ ಪ್ರಾರಂಭವಾಗಿದೆ. #GoBackSadistModi,#GoBackFascistModi, #GoBackModi ಎಂದು ಟ್ವಿಟರ್‌‌ನಲ್ಲಿ ಟ್ರೆಂಡ್ ಆಗಿದೆ. #GoBackModi ಟ್ವಿಟರ್‌ನ ಟ್ರೆಂಡ್‌ನ ಒಂದನೆ ಸ್ಥಾನದಲ್ಲಿದೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಪ್ರಧಾನಿ ಮೋದಿ ಕೇರಳದ ಪಾಲಕ್ಕಾಡ್‌‌ನಲ್ಲಿ ಮಾತನಾಡಿ, “ಯುಡಿಎಫ್ ಮತ್ತು ಎಲ್‌ಡಿಎಫ್‌‌ ಮ್ಯಾಚ್‌ ಪಿಕ್ಸ್‌‌ಅನ್ನು ಕೇರಳ ಈ ಬಾರಿ ತಿರಸ್ಕರಿಸಲಿದೆ” ಎಂದು ಹೇಳಿದ್ದಾರೆ. ಇದೀಗ ಅವರು ತಮಿಳುನಾಡಿಗೆ ತೆರಳಲಿದ್ದಾರೆ.

ಚಿನ್ನಸರವಣ ಅವರು, “ಅಮೇರಿಕಾದಲ್ಲಿ ಟ್ರಂಪ್‌ಗೂ ಮೋದಿ ಪ್ರಚಾರ ಮಾಡಬಹುದು. ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ. ಕಾರಣ ತಮಿಳುನಾಡಿನ ಜನರು ಮೋದಿಯ ಮೇಲೆ ಕೋಪಗೊಂಡಿದ್ದಾರೆ. ಅದು ಅವರು ನೀಡುವ ಮತಗಳ ಮೇಲೆ ಪರಿಣಾಮ ಬೀರುತ್ತಾರೆ. 56 ಇಂಚು ವ್ಯರ್ಥವಾಯಿತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳ ಮುಖ್ಯಮಂತ್ರಿ ಮತ್ತು ಪ್ರಧಾನಿ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಕಾಂಗ್ರೆಸ್

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಯಾವುದೆ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ಬರಿಕಾಲಲ್ಲೇ ಸಾವಿರಾರು ಕಿ.ಮೀ ವರೆಗೂ ನಡೆದುಕೊಂಡು ಹೊರಟಿದ್ದ ವಲಸೆ ಕಾರ್ಮಿಕರು ರೈಲು ಅಫಘಾತಕ್ಕೀಡಾಗಿ ಮೃತಪಟ್ಟಿದ್ದರು. ಈ ಸಮಯದಲ್ಲಿ ಮೃತಪಟ್ಟ ಕಾರ್ಮಿಕರು ದಾರಿಯಲ್ಲಿ ತಿನ್ನಲು ಕೊಂಡೊಯ್ದಿದ್ದ ರೊಟ್ಟಿಗಳು ರೈಲಿನ ಹಳಿಗಳಲ್ಲಿ ಅನಾಥವಾಗಿ ಬಿದ್ದಿರುವ ಹೃದಯ ವಿದ್ರಾವಕ ಚಿತ್ರವೊಂದು ಭಾರಿ ಆಕ್ರೋಶವನ್ನು ಹುಟ್ಟುಹಾಕಿತ್ತು. ಆ ಚಿತ್ರವನ್ನು ಸರಣಿ ಎಂಬವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಯಾವತ್ತೂ ಮರೆಯುವುದಿಲ್ಲ, ಯಾವತ್ತೂ ಕ್ಷಮಿಸಲ್ಲ” ಎಂದು ಬರೆದಿದ್ದಾರೆ.

ಬೃಜ್ ಮೋಹನ್‌ ಅವರು, “ಪ್ರತಿ ಬಾರಿಯೂ ಮೋದಿ ತಮಿಳುನಾಡಿಗೆ ಕಾಲಿಡಲು ಯೋಜಿಸಿದಾಗ, ಜನರು #GoBackModi ಹೇಳುವ ಪ್ರವೃತ್ತಿಯನ್ನು ಕಡ್ಡಾಯಗೊಳಿಸಿದ್ದಾರೆ. ಒಂದು ವಿಷಯ ಸ್ಪಷ್ಟವಾಗಿದೆ, ಬಿಜೆಪಿ ಮತ್ತು ಮೋದಿಗೆ ತಮಿಳುನಾಡಿ‌ನಲ್ಲಿ ಸ್ಥಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ನಿತ್ಯಾ ಶ್ರೀ ಅವರು, “ತಮಿಳುನಾಡು ಇನ್ನೊಂದು ಉತ್ತರ ಪ್ರದೇಶ ಆಗುವುದು ನಮಗೆ ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅಬ್ದುಲ್ ಬಾಸಿತ್ ಅವರು, “ಫ್ಯಾಸಿಸ್ಟರು ತಮ್ಮ ತಲೆಯ ಮೇಲೆ ಕೊಂಬುಗಳನ್ನು ಹೊಂದಿಲ್ಲ!” ಎಂದು ಹಿಟ್ಲರ್‌ ಪ್ರಧಾನಿ ಮೋದಿಯನ್ನು ಎತ್ತಿ ಹಿಡಿದಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಸೈಮನ್ ರಾಜ್ ಅವರು, ‘ಹಿಂದಿ ಬೇಕಿಲ್ಲ, ಹೊಸ ಶಿಕ್ಷಣ ನೀತಿ ಬೇಕಿಲ್ಲ, ನೀಟ್ ಬೇಕಿಲ್ಲ, ಸಿಎಎ ಬೇಕಿಲ್ಲ, ಅದೇ ರೀತಿ ಬಿಜೆಪಿಯು ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...