Homeಮುಖಪುಟಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮೋದಿ ಅಮೇರಿಕಾಕ್ಕೆ ಹೋಗಿ ಟ್ರಂಪ್‌ಗೂ ಪ್ರಚಾರ ಮಾಡಬಹುದು,ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಆಗಲ್ಲ. ಯಾಕೆಂದರೆ ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

- Advertisement -
- Advertisement -

ಕೇರಳದಲ್ಲಿ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎಡಪಕ್ಷಗಳ ಮೈತ್ರಿಕೂಟವಾದ ಎಲ್‌ಡಿಎಫ್‌, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಹಾಗೂ ಬಿಜೆಪಿ ನೇತತ್ವದ ಎನ್‌ಡಿಎ ಈಗಾಗಲೇ ಚುನಾವಣಾ ಪ್ರಚಾರವನ್ನು ಭರ್ಜರಿಯಾಗಿ ನಡೆಸುತ್ತಿದೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಕೇರಳಕ್ಕೆ ತೆರಳಿದ್ದು ಪಾಲಕ್ಕಾಡ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿ ಕೇರಳದಿಂದ, ತಮಿಳುನಾಡಿಗೆ ತೆರಳುತ್ತಿದ್ದು, ಟ್ವಿಟ್ಟರ್‌ನಲ್ಲಿ ‘ವಾಪಾಸು ಹೋಗಿ ಮೋದಿ’, ‘ವಾಪಾಸು ಹೋಗಿ ಸ್ಯಾಡಿಸ್ಟ್‌ ಮೋದಿ’, ‘ವಾಪಾಸು ಹೋಗಿ ಫ್ಯಾಸಿಸ್ಟ್‌ ಮೋದಿ’ ಎಂದು ಟ್ರೆಂಡ್ ಪ್ರಾರಂಭವಾಗಿದೆ. #GoBackSadistModi,#GoBackFascistModi, #GoBackModi ಎಂದು ಟ್ವಿಟರ್‌‌ನಲ್ಲಿ ಟ್ರೆಂಡ್ ಆಗಿದೆ. #GoBackModi ಟ್ವಿಟರ್‌ನ ಟ್ರೆಂಡ್‌ನ ಒಂದನೆ ಸ್ಥಾನದಲ್ಲಿದೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಪ್ರಧಾನಿ ಮೋದಿ ಕೇರಳದ ಪಾಲಕ್ಕಾಡ್‌‌ನಲ್ಲಿ ಮಾತನಾಡಿ, “ಯುಡಿಎಫ್ ಮತ್ತು ಎಲ್‌ಡಿಎಫ್‌‌ ಮ್ಯಾಚ್‌ ಪಿಕ್ಸ್‌‌ಅನ್ನು ಕೇರಳ ಈ ಬಾರಿ ತಿರಸ್ಕರಿಸಲಿದೆ” ಎಂದು ಹೇಳಿದ್ದಾರೆ. ಇದೀಗ ಅವರು ತಮಿಳುನಾಡಿಗೆ ತೆರಳಲಿದ್ದಾರೆ.

ಚಿನ್ನಸರವಣ ಅವರು, “ಅಮೇರಿಕಾದಲ್ಲಿ ಟ್ರಂಪ್‌ಗೂ ಮೋದಿ ಪ್ರಚಾರ ಮಾಡಬಹುದು. ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ. ಕಾರಣ ತಮಿಳುನಾಡಿನ ಜನರು ಮೋದಿಯ ಮೇಲೆ ಕೋಪಗೊಂಡಿದ್ದಾರೆ. ಅದು ಅವರು ನೀಡುವ ಮತಗಳ ಮೇಲೆ ಪರಿಣಾಮ ಬೀರುತ್ತಾರೆ. 56 ಇಂಚು ವ್ಯರ್ಥವಾಯಿತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳ ಮುಖ್ಯಮಂತ್ರಿ ಮತ್ತು ಪ್ರಧಾನಿ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಕಾಂಗ್ರೆಸ್

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಯಾವುದೆ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ಬರಿಕಾಲಲ್ಲೇ ಸಾವಿರಾರು ಕಿ.ಮೀ ವರೆಗೂ ನಡೆದುಕೊಂಡು ಹೊರಟಿದ್ದ ವಲಸೆ ಕಾರ್ಮಿಕರು ರೈಲು ಅಫಘಾತಕ್ಕೀಡಾಗಿ ಮೃತಪಟ್ಟಿದ್ದರು. ಈ ಸಮಯದಲ್ಲಿ ಮೃತಪಟ್ಟ ಕಾರ್ಮಿಕರು ದಾರಿಯಲ್ಲಿ ತಿನ್ನಲು ಕೊಂಡೊಯ್ದಿದ್ದ ರೊಟ್ಟಿಗಳು ರೈಲಿನ ಹಳಿಗಳಲ್ಲಿ ಅನಾಥವಾಗಿ ಬಿದ್ದಿರುವ ಹೃದಯ ವಿದ್ರಾವಕ ಚಿತ್ರವೊಂದು ಭಾರಿ ಆಕ್ರೋಶವನ್ನು ಹುಟ್ಟುಹಾಕಿತ್ತು. ಆ ಚಿತ್ರವನ್ನು ಸರಣಿ ಎಂಬವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಯಾವತ್ತೂ ಮರೆಯುವುದಿಲ್ಲ, ಯಾವತ್ತೂ ಕ್ಷಮಿಸಲ್ಲ” ಎಂದು ಬರೆದಿದ್ದಾರೆ.

ಬೃಜ್ ಮೋಹನ್‌ ಅವರು, “ಪ್ರತಿ ಬಾರಿಯೂ ಮೋದಿ ತಮಿಳುನಾಡಿಗೆ ಕಾಲಿಡಲು ಯೋಜಿಸಿದಾಗ, ಜನರು #GoBackModi ಹೇಳುವ ಪ್ರವೃತ್ತಿಯನ್ನು ಕಡ್ಡಾಯಗೊಳಿಸಿದ್ದಾರೆ. ಒಂದು ವಿಷಯ ಸ್ಪಷ್ಟವಾಗಿದೆ, ಬಿಜೆಪಿ ಮತ್ತು ಮೋದಿಗೆ ತಮಿಳುನಾಡಿ‌ನಲ್ಲಿ ಸ್ಥಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ನಿತ್ಯಾ ಶ್ರೀ ಅವರು, “ತಮಿಳುನಾಡು ಇನ್ನೊಂದು ಉತ್ತರ ಪ್ರದೇಶ ಆಗುವುದು ನಮಗೆ ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅಬ್ದುಲ್ ಬಾಸಿತ್ ಅವರು, “ಫ್ಯಾಸಿಸ್ಟರು ತಮ್ಮ ತಲೆಯ ಮೇಲೆ ಕೊಂಬುಗಳನ್ನು ಹೊಂದಿಲ್ಲ!” ಎಂದು ಹಿಟ್ಲರ್‌ ಪ್ರಧಾನಿ ಮೋದಿಯನ್ನು ಎತ್ತಿ ಹಿಡಿದಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಸೈಮನ್ ರಾಜ್ ಅವರು, ‘ಹಿಂದಿ ಬೇಕಿಲ್ಲ, ಹೊಸ ಶಿಕ್ಷಣ ನೀತಿ ಬೇಕಿಲ್ಲ, ನೀಟ್ ಬೇಕಿಲ್ಲ, ಸಿಎಎ ಬೇಕಿಲ್ಲ, ಅದೇ ರೀತಿ ಬಿಜೆಪಿಯು ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...