Homeಮುಖಪುಟಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮೋದಿ ಅಮೇರಿಕಾಕ್ಕೆ ಹೋಗಿ ಟ್ರಂಪ್‌ಗೂ ಪ್ರಚಾರ ಮಾಡಬಹುದು,ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಆಗಲ್ಲ. ಯಾಕೆಂದರೆ ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

- Advertisement -
- Advertisement -

ಕೇರಳದಲ್ಲಿ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎಡಪಕ್ಷಗಳ ಮೈತ್ರಿಕೂಟವಾದ ಎಲ್‌ಡಿಎಫ್‌, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಹಾಗೂ ಬಿಜೆಪಿ ನೇತತ್ವದ ಎನ್‌ಡಿಎ ಈಗಾಗಲೇ ಚುನಾವಣಾ ಪ್ರಚಾರವನ್ನು ಭರ್ಜರಿಯಾಗಿ ನಡೆಸುತ್ತಿದೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಕೇರಳಕ್ಕೆ ತೆರಳಿದ್ದು ಪಾಲಕ್ಕಾಡ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿ ಕೇರಳದಿಂದ, ತಮಿಳುನಾಡಿಗೆ ತೆರಳುತ್ತಿದ್ದು, ಟ್ವಿಟ್ಟರ್‌ನಲ್ಲಿ ‘ವಾಪಾಸು ಹೋಗಿ ಮೋದಿ’, ‘ವಾಪಾಸು ಹೋಗಿ ಸ್ಯಾಡಿಸ್ಟ್‌ ಮೋದಿ’, ‘ವಾಪಾಸು ಹೋಗಿ ಫ್ಯಾಸಿಸ್ಟ್‌ ಮೋದಿ’ ಎಂದು ಟ್ರೆಂಡ್ ಪ್ರಾರಂಭವಾಗಿದೆ. #GoBackSadistModi,#GoBackFascistModi, #GoBackModi ಎಂದು ಟ್ವಿಟರ್‌‌ನಲ್ಲಿ ಟ್ರೆಂಡ್ ಆಗಿದೆ. #GoBackModi ಟ್ವಿಟರ್‌ನ ಟ್ರೆಂಡ್‌ನ ಒಂದನೆ ಸ್ಥಾನದಲ್ಲಿದೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಪ್ರಧಾನಿ ಮೋದಿ ಕೇರಳದ ಪಾಲಕ್ಕಾಡ್‌‌ನಲ್ಲಿ ಮಾತನಾಡಿ, “ಯುಡಿಎಫ್ ಮತ್ತು ಎಲ್‌ಡಿಎಫ್‌‌ ಮ್ಯಾಚ್‌ ಪಿಕ್ಸ್‌‌ಅನ್ನು ಕೇರಳ ಈ ಬಾರಿ ತಿರಸ್ಕರಿಸಲಿದೆ” ಎಂದು ಹೇಳಿದ್ದಾರೆ. ಇದೀಗ ಅವರು ತಮಿಳುನಾಡಿಗೆ ತೆರಳಲಿದ್ದಾರೆ.

ಚಿನ್ನಸರವಣ ಅವರು, “ಅಮೇರಿಕಾದಲ್ಲಿ ಟ್ರಂಪ್‌ಗೂ ಮೋದಿ ಪ್ರಚಾರ ಮಾಡಬಹುದು. ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ. ಕಾರಣ ತಮಿಳುನಾಡಿನ ಜನರು ಮೋದಿಯ ಮೇಲೆ ಕೋಪಗೊಂಡಿದ್ದಾರೆ. ಅದು ಅವರು ನೀಡುವ ಮತಗಳ ಮೇಲೆ ಪರಿಣಾಮ ಬೀರುತ್ತಾರೆ. 56 ಇಂಚು ವ್ಯರ್ಥವಾಯಿತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳ ಮುಖ್ಯಮಂತ್ರಿ ಮತ್ತು ಪ್ರಧಾನಿ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಕಾಂಗ್ರೆಸ್

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಯಾವುದೆ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ಬರಿಕಾಲಲ್ಲೇ ಸಾವಿರಾರು ಕಿ.ಮೀ ವರೆಗೂ ನಡೆದುಕೊಂಡು ಹೊರಟಿದ್ದ ವಲಸೆ ಕಾರ್ಮಿಕರು ರೈಲು ಅಫಘಾತಕ್ಕೀಡಾಗಿ ಮೃತಪಟ್ಟಿದ್ದರು. ಈ ಸಮಯದಲ್ಲಿ ಮೃತಪಟ್ಟ ಕಾರ್ಮಿಕರು ದಾರಿಯಲ್ಲಿ ತಿನ್ನಲು ಕೊಂಡೊಯ್ದಿದ್ದ ರೊಟ್ಟಿಗಳು ರೈಲಿನ ಹಳಿಗಳಲ್ಲಿ ಅನಾಥವಾಗಿ ಬಿದ್ದಿರುವ ಹೃದಯ ವಿದ್ರಾವಕ ಚಿತ್ರವೊಂದು ಭಾರಿ ಆಕ್ರೋಶವನ್ನು ಹುಟ್ಟುಹಾಕಿತ್ತು. ಆ ಚಿತ್ರವನ್ನು ಸರಣಿ ಎಂಬವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಯಾವತ್ತೂ ಮರೆಯುವುದಿಲ್ಲ, ಯಾವತ್ತೂ ಕ್ಷಮಿಸಲ್ಲ” ಎಂದು ಬರೆದಿದ್ದಾರೆ.

ಬೃಜ್ ಮೋಹನ್‌ ಅವರು, “ಪ್ರತಿ ಬಾರಿಯೂ ಮೋದಿ ತಮಿಳುನಾಡಿಗೆ ಕಾಲಿಡಲು ಯೋಜಿಸಿದಾಗ, ಜನರು #GoBackModi ಹೇಳುವ ಪ್ರವೃತ್ತಿಯನ್ನು ಕಡ್ಡಾಯಗೊಳಿಸಿದ್ದಾರೆ. ಒಂದು ವಿಷಯ ಸ್ಪಷ್ಟವಾಗಿದೆ, ಬಿಜೆಪಿ ಮತ್ತು ಮೋದಿಗೆ ತಮಿಳುನಾಡಿ‌ನಲ್ಲಿ ಸ್ಥಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ನಿತ್ಯಾ ಶ್ರೀ ಅವರು, “ತಮಿಳುನಾಡು ಇನ್ನೊಂದು ಉತ್ತರ ಪ್ರದೇಶ ಆಗುವುದು ನಮಗೆ ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅಬ್ದುಲ್ ಬಾಸಿತ್ ಅವರು, “ಫ್ಯಾಸಿಸ್ಟರು ತಮ್ಮ ತಲೆಯ ಮೇಲೆ ಕೊಂಬುಗಳನ್ನು ಹೊಂದಿಲ್ಲ!” ಎಂದು ಹಿಟ್ಲರ್‌ ಪ್ರಧಾನಿ ಮೋದಿಯನ್ನು ಎತ್ತಿ ಹಿಡಿದಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಸೈಮನ್ ರಾಜ್ ಅವರು, ‘ಹಿಂದಿ ಬೇಕಿಲ್ಲ, ಹೊಸ ಶಿಕ್ಷಣ ನೀತಿ ಬೇಕಿಲ್ಲ, ನೀಟ್ ಬೇಕಿಲ್ಲ, ಸಿಎಎ ಬೇಕಿಲ್ಲ, ಅದೇ ರೀತಿ ಬಿಜೆಪಿಯು ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...