Homeಮುಖಪುಟ‘ಆದಿಮ ಆವಾಸಸ್ಥಾನ': ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

‘ಆದಿಮ ಆವಾಸಸ್ಥಾನ’: ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸಲು ಸರ್ಕಾರಕ್ಕೆ ಸೂಚಿಸುವಂತೆ ಆಗ್ರಹಿಸಿದ ಪತ್ರ

- Advertisement -
- Advertisement -

ಗ್ರೇಟ್ ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡುವಂತೆ 87 ಮಾಜಿ ಅಧಿಕಾರಿಗಳ ಗುಂಪು ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ. ಈ ಯೋಜನೆಯು ಸ್ಥಳೀಯ ಸಮುದಾಯಗಳ ಭವಿಷ್ಯದ ಮೇಲೆ ಮತ್ತು ದ್ವೀಪದ ಪರಿಸರ ವ್ಯವಸ್ಥೆಯ ಬಗ್ಗೆ ಗಂಭೀರ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಅಡಿಯಲ್ಲಿ ಬರುವ ನೀತಿ ಆಯೋಗದ ನಿರ್ದೇಶನದ ಪ್ರಕಾರ, 35,000 ಕೋಟಿ ರೂಪಾಯಿಗಳ ಗ್ರೇಟ್ ನಿಕೋಬಾರ್ ಯೋಜನೆಯು 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯಲ್ಲಿ 130 ಚದರ ಕಿಮೀ ಪ್ರಾಥಮಿಕ ಅರಣ್ಯ ಸೇರಿದಂತೆ ಟ್ರಾನ್ಸ್-ಶಿಪ್‌ಮೆಂಟ್ ಬಂದರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರ, ಟೌನ್‌ಶಿಪ್ ಮತ್ತು  ಪ್ರವಾಸೋದ್ಯಮ ಮೂಲಸೌಕರ್ಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ. ನವೆಂಬರ್ 4 ರಂದು ಅಂತಿಮ ಪರಿಸರ ಅನುಮತಿಯನ್ನು ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಸರ್ಕಾರವು ದೇಶದ ಅತ್ಯಂತ ಪ್ರಾಚೀನ ಆವಾಸಸ್ಥಾನಗಳಲ್ಲಿ ಒಂದನ್ನು ನಾಶಮಾಡಲು ಸಿದ್ಧವಾಗಿದೆ. ಇದು ವಿವಿಧ ಅಪರೂಪದ ಮತ್ತು ಸ್ಥಳೀಯ ಪ್ರಭೇದಗಳಿಗೆ ನೆಲೆಯಾಗಿದೆ. ಜೊತೆಗೆ ಅತ್ಯಂತ ದುರ್ಬಲ ಬುಡಕಟ್ಟು ಸಮುದಾಯವಾದ ಗ್ರೇಟ್ ನಿಕೋಬಾರ್‌ನ ಶಾಂಪೆನ್ಸ್‌ನ ನೆಲೆಯಾಗಿದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. .

ಶಾಂಪೆನ್ ಬುಡಕಟ್ಟು ಸಮುದಾಯವನ್ನು ಸರ್ಕಾರವು “ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪು” ಎಂದು ಪಟ್ಟಿಮಾಡಿದೆ. ಈ ಸಮುದಾಯವು ಕೃಷಿ-ಪೂರ್ವ ಮಟ್ಟದ ತಂತ್ರಜ್ಞಾನ, ಕಡಿಮೆ ಮಟ್ಟದ ಸಾಕ್ಷರತೆ ಮತ್ತು ಕ್ಷೀಣಿಸುತ್ತಿರುವ ಅಥವಾ ನಿಶ್ಚಲವಾಗಿರುವ ಜನಸಂಖ್ಯೆಯಿಂದ ಕೂಡಿದೆ. ಶಾಂಪೆನ್ಸ್‌ ಸಮುದಾಯದ ಪ್ರದೇಶಕ್ಕೆ ಹೊರಗಿನವರು ಪದೇ ಪದೇ ಆಕ್ರಮಣ ಮಾಡಿದ್ದಾರೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು  ಹೇಳಿದ್ದಾರೆ.

“ಪರಿಶಿಷ್ಟ ಬುಡಕಟ್ಟುಗಳ ರಾಷ್ಟ್ರೀಯ ಆಯೋಗಕ್ಕೆ ಈ ವಿಷಯದ ಬಗ್ಗೆ ತಿಳಿದಿದೆ. ಜೊತೆಗೆ ಅಂತಹ ಹೇರಿಕೆಗಳನ್ನು ತಡೆಯಲು ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯ ಬಗ್ಗೆ ಗಮನ ಹರಿಸುವ ಬದಲು, ಸರ್ಕಾರವು ಈಗ ಆ ಸಮುದಾಯದ ಮೇಲೆ ದೊಡ್ಡ ಹೇರಿಕೆಯನ್ನು ಮಾಡಲು ಸಿದ್ಧವಾಗಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರೇಟ್ ನಿಕೋಬಾರ್‌ನ ಸುಮಾರು 853 ಚದರ ಕಿ.ಮೀ ಪ್ರದೇಶವನ್ನು ಅಂಡಮಾನ್ ಮತ್ತು ನಿಕೋಬಾರ್ ಪ್ರೊಟೆಕ್ಷನ್ ಆಫ್ ಅಬೊರಿಜಿನಲ್ ಟ್ರೈಬ್ಸ್ ರೆಗ್ಯುಲೇಶನ್-1956 ರ ಅಡಿಯಲ್ಲಿ, ‘ಬುಡಕಟ್ಟು ಮೀಸಲು’ ಎಂದು ಗೊತ್ತುಪಡಿಸಲಾಗಿದೆ. ಈ ಭೂಮಿ ಸಮುದಾಯದ ವಿಶೇಷ ಬಳಕೆಗೆ ಮೀಸಲಾಗಿದೆ ಮತ್ತು ಈ ಪ್ರದೇಶಕ್ಕೆ ಆಡಳಿತದ ಸ್ಪಷ್ಟ ಅನುಮತಿಯಿಲ್ಲದೆ ಪ್ರವೇಶಿಸಲು ಸಾಧ್ಯವಿಲ್ಲ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಹರ್ಯಾಣದಲ್ಲಿ ಪರಿಹಾರ ಅರಣ್ಯೀಕರಣ ಸೇರಿದಂತೆ ಕೆಲವು ಷರತ್ತುಗಳೊಂದಿಗೆ ನೀಡಿದ ಪರಿಸರ ಮತ್ತು ಕರಾವಳಿ ನಿಯಂತ್ರಣ ವಲಯದ ಅನುಮತಿಯ ಬಗ್ಗೆ ಕೂಡಾ ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದ ಅರಣ್ಯ ಸಂರಕ್ಷಣಾ ಕಾನೂನಿನ ಅಡಿಯಲ್ಲಿ, ಅಭಿವೃದ್ಧಿ ಅಥವಾ ಕೈಗಾರಿಕಾ ಯೋಜನೆಗಳಿಗಾಗಿ ಅರಣ್ಯಗಳನ್ನು ತೆರವುಗೊಳಿಸುವಾಗ, ಪರಿಸರ ನಷ್ಟವನ್ನು ಸರಿದೂಗಿಸಲು ಅರಣ್ಯೇತರ ಭೂಮಿಯ ಸಮಾನ ಪ್ರದೇಶದಲ್ಲಿ ಮರಗಳನ್ನು ನೆಡಬೇಕಾಗಿದೆ.

“ಗ್ರೇಟ್ ನಿಕೋಬಾರ್‌ನ ಪ್ರಾಚೀನ ಕಾಡುಗಳನ್ನು ಹರಿಯಾಣದಲ್ಲಿ ನೆಡುವ ಕಾಡುಗಳೊಂದಿಗೆ ಬದಲಾಯಿಸುವ ಕಲ್ಪನೆಯು ದೊಡ್ಡ ದುರಂತವಾಗಿದ್ದು, ಹಾಸ್ಯಾಸ್ಪದವಾಗಿದೆ. ಗ್ರೇಟ್‌ ನಿಕೋಬಾರ್‌ನ ಸುಮಾರು 13,075 ಎಕರೆ ಶ್ರೀಮಂತ, ನಿತ್ಯಹರಿದ್ವರ್ಣ, ಮಳೆಕಾಡುಗಳು ಅಸಾಧಾರಣ ಸಸ್ಯ ಮತ್ತು ಪ್ರಾಣಿ ಪ್ರಭೇದಗಳಿಂದ ತುಂಬಿವೆ. ಅದನ್ನು ಹರಿಯಾಣದ ಒಣ ಪ್ರದೇಶವಾದ ಅರಾವಳಿ ಬೆಟ್ಟಗಳಲ್ಲಿ ಹೊಸದಾಗಿ ನೆಟ್ಟು ಮರಗಳಿಗೆ ಪರಿಹಾರವನ್ನು ನೀಡಲಾಗುತ್ತದೆ” ಎಂದು ಪತ್ರದಲ್ಲಿ ಆಶ್ಚರ್ಯವ್ಯಕ್ತಪಡಿಸಲಾಗಿದೆ.

ಪತ್ರದಲ್ಲಿ, ಮಾಜಿ ಚುನಾವಣಾ ಆಯುಕ್ತ ಎಸ್‌.ವೈ. ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಭಾರತೀಯ ಆಡಳಿತ ಸೇವೆಗಳ ಮಾಜಿ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ಅರುಣಾ ರಾಯ್ ಸೇರಿದಂತೆ ಅನೇಕ ನಿವೃತ್ತ ನಾಗರಿಕ ಅಧಿಕಾರಿಗಳು ಸಹಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...