Homeಮುಖಪುಟ‘ಆದಿಮ ಆವಾಸಸ್ಥಾನ': ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

‘ಆದಿಮ ಆವಾಸಸ್ಥಾನ’: ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸಲು ಸರ್ಕಾರಕ್ಕೆ ಸೂಚಿಸುವಂತೆ ಆಗ್ರಹಿಸಿದ ಪತ್ರ

- Advertisement -
- Advertisement -

ಗ್ರೇಟ್ ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡುವಂತೆ 87 ಮಾಜಿ ಅಧಿಕಾರಿಗಳ ಗುಂಪು ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ. ಈ ಯೋಜನೆಯು ಸ್ಥಳೀಯ ಸಮುದಾಯಗಳ ಭವಿಷ್ಯದ ಮೇಲೆ ಮತ್ತು ದ್ವೀಪದ ಪರಿಸರ ವ್ಯವಸ್ಥೆಯ ಬಗ್ಗೆ ಗಂಭೀರ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಅಡಿಯಲ್ಲಿ ಬರುವ ನೀತಿ ಆಯೋಗದ ನಿರ್ದೇಶನದ ಪ್ರಕಾರ, 35,000 ಕೋಟಿ ರೂಪಾಯಿಗಳ ಗ್ರೇಟ್ ನಿಕೋಬಾರ್ ಯೋಜನೆಯು 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯಲ್ಲಿ 130 ಚದರ ಕಿಮೀ ಪ್ರಾಥಮಿಕ ಅರಣ್ಯ ಸೇರಿದಂತೆ ಟ್ರಾನ್ಸ್-ಶಿಪ್‌ಮೆಂಟ್ ಬಂದರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರ, ಟೌನ್‌ಶಿಪ್ ಮತ್ತು  ಪ್ರವಾಸೋದ್ಯಮ ಮೂಲಸೌಕರ್ಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ. ನವೆಂಬರ್ 4 ರಂದು ಅಂತಿಮ ಪರಿಸರ ಅನುಮತಿಯನ್ನು ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಸರ್ಕಾರವು ದೇಶದ ಅತ್ಯಂತ ಪ್ರಾಚೀನ ಆವಾಸಸ್ಥಾನಗಳಲ್ಲಿ ಒಂದನ್ನು ನಾಶಮಾಡಲು ಸಿದ್ಧವಾಗಿದೆ. ಇದು ವಿವಿಧ ಅಪರೂಪದ ಮತ್ತು ಸ್ಥಳೀಯ ಪ್ರಭೇದಗಳಿಗೆ ನೆಲೆಯಾಗಿದೆ. ಜೊತೆಗೆ ಅತ್ಯಂತ ದುರ್ಬಲ ಬುಡಕಟ್ಟು ಸಮುದಾಯವಾದ ಗ್ರೇಟ್ ನಿಕೋಬಾರ್‌ನ ಶಾಂಪೆನ್ಸ್‌ನ ನೆಲೆಯಾಗಿದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. .

ಶಾಂಪೆನ್ ಬುಡಕಟ್ಟು ಸಮುದಾಯವನ್ನು ಸರ್ಕಾರವು “ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪು” ಎಂದು ಪಟ್ಟಿಮಾಡಿದೆ. ಈ ಸಮುದಾಯವು ಕೃಷಿ-ಪೂರ್ವ ಮಟ್ಟದ ತಂತ್ರಜ್ಞಾನ, ಕಡಿಮೆ ಮಟ್ಟದ ಸಾಕ್ಷರತೆ ಮತ್ತು ಕ್ಷೀಣಿಸುತ್ತಿರುವ ಅಥವಾ ನಿಶ್ಚಲವಾಗಿರುವ ಜನಸಂಖ್ಯೆಯಿಂದ ಕೂಡಿದೆ. ಶಾಂಪೆನ್ಸ್‌ ಸಮುದಾಯದ ಪ್ರದೇಶಕ್ಕೆ ಹೊರಗಿನವರು ಪದೇ ಪದೇ ಆಕ್ರಮಣ ಮಾಡಿದ್ದಾರೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು  ಹೇಳಿದ್ದಾರೆ.

“ಪರಿಶಿಷ್ಟ ಬುಡಕಟ್ಟುಗಳ ರಾಷ್ಟ್ರೀಯ ಆಯೋಗಕ್ಕೆ ಈ ವಿಷಯದ ಬಗ್ಗೆ ತಿಳಿದಿದೆ. ಜೊತೆಗೆ ಅಂತಹ ಹೇರಿಕೆಗಳನ್ನು ತಡೆಯಲು ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯ ಬಗ್ಗೆ ಗಮನ ಹರಿಸುವ ಬದಲು, ಸರ್ಕಾರವು ಈಗ ಆ ಸಮುದಾಯದ ಮೇಲೆ ದೊಡ್ಡ ಹೇರಿಕೆಯನ್ನು ಮಾಡಲು ಸಿದ್ಧವಾಗಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರೇಟ್ ನಿಕೋಬಾರ್‌ನ ಸುಮಾರು 853 ಚದರ ಕಿ.ಮೀ ಪ್ರದೇಶವನ್ನು ಅಂಡಮಾನ್ ಮತ್ತು ನಿಕೋಬಾರ್ ಪ್ರೊಟೆಕ್ಷನ್ ಆಫ್ ಅಬೊರಿಜಿನಲ್ ಟ್ರೈಬ್ಸ್ ರೆಗ್ಯುಲೇಶನ್-1956 ರ ಅಡಿಯಲ್ಲಿ, ‘ಬುಡಕಟ್ಟು ಮೀಸಲು’ ಎಂದು ಗೊತ್ತುಪಡಿಸಲಾಗಿದೆ. ಈ ಭೂಮಿ ಸಮುದಾಯದ ವಿಶೇಷ ಬಳಕೆಗೆ ಮೀಸಲಾಗಿದೆ ಮತ್ತು ಈ ಪ್ರದೇಶಕ್ಕೆ ಆಡಳಿತದ ಸ್ಪಷ್ಟ ಅನುಮತಿಯಿಲ್ಲದೆ ಪ್ರವೇಶಿಸಲು ಸಾಧ್ಯವಿಲ್ಲ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಹರ್ಯಾಣದಲ್ಲಿ ಪರಿಹಾರ ಅರಣ್ಯೀಕರಣ ಸೇರಿದಂತೆ ಕೆಲವು ಷರತ್ತುಗಳೊಂದಿಗೆ ನೀಡಿದ ಪರಿಸರ ಮತ್ತು ಕರಾವಳಿ ನಿಯಂತ್ರಣ ವಲಯದ ಅನುಮತಿಯ ಬಗ್ಗೆ ಕೂಡಾ ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದ ಅರಣ್ಯ ಸಂರಕ್ಷಣಾ ಕಾನೂನಿನ ಅಡಿಯಲ್ಲಿ, ಅಭಿವೃದ್ಧಿ ಅಥವಾ ಕೈಗಾರಿಕಾ ಯೋಜನೆಗಳಿಗಾಗಿ ಅರಣ್ಯಗಳನ್ನು ತೆರವುಗೊಳಿಸುವಾಗ, ಪರಿಸರ ನಷ್ಟವನ್ನು ಸರಿದೂಗಿಸಲು ಅರಣ್ಯೇತರ ಭೂಮಿಯ ಸಮಾನ ಪ್ರದೇಶದಲ್ಲಿ ಮರಗಳನ್ನು ನೆಡಬೇಕಾಗಿದೆ.

“ಗ್ರೇಟ್ ನಿಕೋಬಾರ್‌ನ ಪ್ರಾಚೀನ ಕಾಡುಗಳನ್ನು ಹರಿಯಾಣದಲ್ಲಿ ನೆಡುವ ಕಾಡುಗಳೊಂದಿಗೆ ಬದಲಾಯಿಸುವ ಕಲ್ಪನೆಯು ದೊಡ್ಡ ದುರಂತವಾಗಿದ್ದು, ಹಾಸ್ಯಾಸ್ಪದವಾಗಿದೆ. ಗ್ರೇಟ್‌ ನಿಕೋಬಾರ್‌ನ ಸುಮಾರು 13,075 ಎಕರೆ ಶ್ರೀಮಂತ, ನಿತ್ಯಹರಿದ್ವರ್ಣ, ಮಳೆಕಾಡುಗಳು ಅಸಾಧಾರಣ ಸಸ್ಯ ಮತ್ತು ಪ್ರಾಣಿ ಪ್ರಭೇದಗಳಿಂದ ತುಂಬಿವೆ. ಅದನ್ನು ಹರಿಯಾಣದ ಒಣ ಪ್ರದೇಶವಾದ ಅರಾವಳಿ ಬೆಟ್ಟಗಳಲ್ಲಿ ಹೊಸದಾಗಿ ನೆಟ್ಟು ಮರಗಳಿಗೆ ಪರಿಹಾರವನ್ನು ನೀಡಲಾಗುತ್ತದೆ” ಎಂದು ಪತ್ರದಲ್ಲಿ ಆಶ್ಚರ್ಯವ್ಯಕ್ತಪಡಿಸಲಾಗಿದೆ.

ಪತ್ರದಲ್ಲಿ, ಮಾಜಿ ಚುನಾವಣಾ ಆಯುಕ್ತ ಎಸ್‌.ವೈ. ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಭಾರತೀಯ ಆಡಳಿತ ಸೇವೆಗಳ ಮಾಜಿ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ಅರುಣಾ ರಾಯ್ ಸೇರಿದಂತೆ ಅನೇಕ ನಿವೃತ್ತ ನಾಗರಿಕ ಅಧಿಕಾರಿಗಳು ಸಹಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...