Homeಮುಖಪುಟ‘ಆದಿಮ ಆವಾಸಸ್ಥಾನ': ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

‘ಆದಿಮ ಆವಾಸಸ್ಥಾನ’: ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸಲು ಸರ್ಕಾರಕ್ಕೆ ಸೂಚಿಸುವಂತೆ ಆಗ್ರಹಿಸಿದ ಪತ್ರ

- Advertisement -
- Advertisement -

ಗ್ರೇಟ್ ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡುವಂತೆ 87 ಮಾಜಿ ಅಧಿಕಾರಿಗಳ ಗುಂಪು ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ. ಈ ಯೋಜನೆಯು ಸ್ಥಳೀಯ ಸಮುದಾಯಗಳ ಭವಿಷ್ಯದ ಮೇಲೆ ಮತ್ತು ದ್ವೀಪದ ಪರಿಸರ ವ್ಯವಸ್ಥೆಯ ಬಗ್ಗೆ ಗಂಭೀರ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಅಡಿಯಲ್ಲಿ ಬರುವ ನೀತಿ ಆಯೋಗದ ನಿರ್ದೇಶನದ ಪ್ರಕಾರ, 35,000 ಕೋಟಿ ರೂಪಾಯಿಗಳ ಗ್ರೇಟ್ ನಿಕೋಬಾರ್ ಯೋಜನೆಯು 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯಲ್ಲಿ 130 ಚದರ ಕಿಮೀ ಪ್ರಾಥಮಿಕ ಅರಣ್ಯ ಸೇರಿದಂತೆ ಟ್ರಾನ್ಸ್-ಶಿಪ್‌ಮೆಂಟ್ ಬಂದರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರ, ಟೌನ್‌ಶಿಪ್ ಮತ್ತು  ಪ್ರವಾಸೋದ್ಯಮ ಮೂಲಸೌಕರ್ಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ. ನವೆಂಬರ್ 4 ರಂದು ಅಂತಿಮ ಪರಿಸರ ಅನುಮತಿಯನ್ನು ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಸರ್ಕಾರವು ದೇಶದ ಅತ್ಯಂತ ಪ್ರಾಚೀನ ಆವಾಸಸ್ಥಾನಗಳಲ್ಲಿ ಒಂದನ್ನು ನಾಶಮಾಡಲು ಸಿದ್ಧವಾಗಿದೆ. ಇದು ವಿವಿಧ ಅಪರೂಪದ ಮತ್ತು ಸ್ಥಳೀಯ ಪ್ರಭೇದಗಳಿಗೆ ನೆಲೆಯಾಗಿದೆ. ಜೊತೆಗೆ ಅತ್ಯಂತ ದುರ್ಬಲ ಬುಡಕಟ್ಟು ಸಮುದಾಯವಾದ ಗ್ರೇಟ್ ನಿಕೋಬಾರ್‌ನ ಶಾಂಪೆನ್ಸ್‌ನ ನೆಲೆಯಾಗಿದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. .

ಶಾಂಪೆನ್ ಬುಡಕಟ್ಟು ಸಮುದಾಯವನ್ನು ಸರ್ಕಾರವು “ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪು” ಎಂದು ಪಟ್ಟಿಮಾಡಿದೆ. ಈ ಸಮುದಾಯವು ಕೃಷಿ-ಪೂರ್ವ ಮಟ್ಟದ ತಂತ್ರಜ್ಞಾನ, ಕಡಿಮೆ ಮಟ್ಟದ ಸಾಕ್ಷರತೆ ಮತ್ತು ಕ್ಷೀಣಿಸುತ್ತಿರುವ ಅಥವಾ ನಿಶ್ಚಲವಾಗಿರುವ ಜನಸಂಖ್ಯೆಯಿಂದ ಕೂಡಿದೆ. ಶಾಂಪೆನ್ಸ್‌ ಸಮುದಾಯದ ಪ್ರದೇಶಕ್ಕೆ ಹೊರಗಿನವರು ಪದೇ ಪದೇ ಆಕ್ರಮಣ ಮಾಡಿದ್ದಾರೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು  ಹೇಳಿದ್ದಾರೆ.

“ಪರಿಶಿಷ್ಟ ಬುಡಕಟ್ಟುಗಳ ರಾಷ್ಟ್ರೀಯ ಆಯೋಗಕ್ಕೆ ಈ ವಿಷಯದ ಬಗ್ಗೆ ತಿಳಿದಿದೆ. ಜೊತೆಗೆ ಅಂತಹ ಹೇರಿಕೆಗಳನ್ನು ತಡೆಯಲು ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯ ಬಗ್ಗೆ ಗಮನ ಹರಿಸುವ ಬದಲು, ಸರ್ಕಾರವು ಈಗ ಆ ಸಮುದಾಯದ ಮೇಲೆ ದೊಡ್ಡ ಹೇರಿಕೆಯನ್ನು ಮಾಡಲು ಸಿದ್ಧವಾಗಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರೇಟ್ ನಿಕೋಬಾರ್‌ನ ಸುಮಾರು 853 ಚದರ ಕಿ.ಮೀ ಪ್ರದೇಶವನ್ನು ಅಂಡಮಾನ್ ಮತ್ತು ನಿಕೋಬಾರ್ ಪ್ರೊಟೆಕ್ಷನ್ ಆಫ್ ಅಬೊರಿಜಿನಲ್ ಟ್ರೈಬ್ಸ್ ರೆಗ್ಯುಲೇಶನ್-1956 ರ ಅಡಿಯಲ್ಲಿ, ‘ಬುಡಕಟ್ಟು ಮೀಸಲು’ ಎಂದು ಗೊತ್ತುಪಡಿಸಲಾಗಿದೆ. ಈ ಭೂಮಿ ಸಮುದಾಯದ ವಿಶೇಷ ಬಳಕೆಗೆ ಮೀಸಲಾಗಿದೆ ಮತ್ತು ಈ ಪ್ರದೇಶಕ್ಕೆ ಆಡಳಿತದ ಸ್ಪಷ್ಟ ಅನುಮತಿಯಿಲ್ಲದೆ ಪ್ರವೇಶಿಸಲು ಸಾಧ್ಯವಿಲ್ಲ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಹರ್ಯಾಣದಲ್ಲಿ ಪರಿಹಾರ ಅರಣ್ಯೀಕರಣ ಸೇರಿದಂತೆ ಕೆಲವು ಷರತ್ತುಗಳೊಂದಿಗೆ ನೀಡಿದ ಪರಿಸರ ಮತ್ತು ಕರಾವಳಿ ನಿಯಂತ್ರಣ ವಲಯದ ಅನುಮತಿಯ ಬಗ್ಗೆ ಕೂಡಾ ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದ ಅರಣ್ಯ ಸಂರಕ್ಷಣಾ ಕಾನೂನಿನ ಅಡಿಯಲ್ಲಿ, ಅಭಿವೃದ್ಧಿ ಅಥವಾ ಕೈಗಾರಿಕಾ ಯೋಜನೆಗಳಿಗಾಗಿ ಅರಣ್ಯಗಳನ್ನು ತೆರವುಗೊಳಿಸುವಾಗ, ಪರಿಸರ ನಷ್ಟವನ್ನು ಸರಿದೂಗಿಸಲು ಅರಣ್ಯೇತರ ಭೂಮಿಯ ಸಮಾನ ಪ್ರದೇಶದಲ್ಲಿ ಮರಗಳನ್ನು ನೆಡಬೇಕಾಗಿದೆ.

“ಗ್ರೇಟ್ ನಿಕೋಬಾರ್‌ನ ಪ್ರಾಚೀನ ಕಾಡುಗಳನ್ನು ಹರಿಯಾಣದಲ್ಲಿ ನೆಡುವ ಕಾಡುಗಳೊಂದಿಗೆ ಬದಲಾಯಿಸುವ ಕಲ್ಪನೆಯು ದೊಡ್ಡ ದುರಂತವಾಗಿದ್ದು, ಹಾಸ್ಯಾಸ್ಪದವಾಗಿದೆ. ಗ್ರೇಟ್‌ ನಿಕೋಬಾರ್‌ನ ಸುಮಾರು 13,075 ಎಕರೆ ಶ್ರೀಮಂತ, ನಿತ್ಯಹರಿದ್ವರ್ಣ, ಮಳೆಕಾಡುಗಳು ಅಸಾಧಾರಣ ಸಸ್ಯ ಮತ್ತು ಪ್ರಾಣಿ ಪ್ರಭೇದಗಳಿಂದ ತುಂಬಿವೆ. ಅದನ್ನು ಹರಿಯಾಣದ ಒಣ ಪ್ರದೇಶವಾದ ಅರಾವಳಿ ಬೆಟ್ಟಗಳಲ್ಲಿ ಹೊಸದಾಗಿ ನೆಟ್ಟು ಮರಗಳಿಗೆ ಪರಿಹಾರವನ್ನು ನೀಡಲಾಗುತ್ತದೆ” ಎಂದು ಪತ್ರದಲ್ಲಿ ಆಶ್ಚರ್ಯವ್ಯಕ್ತಪಡಿಸಲಾಗಿದೆ.

ಪತ್ರದಲ್ಲಿ, ಮಾಜಿ ಚುನಾವಣಾ ಆಯುಕ್ತ ಎಸ್‌.ವೈ. ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಭಾರತೀಯ ಆಡಳಿತ ಸೇವೆಗಳ ಮಾಜಿ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ಅರುಣಾ ರಾಯ್ ಸೇರಿದಂತೆ ಅನೇಕ ನಿವೃತ್ತ ನಾಗರಿಕ ಅಧಿಕಾರಿಗಳು ಸಹಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...