Homeಮುಖಪುಟ‘ಆದಿಮ ಆವಾಸಸ್ಥಾನ': ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

‘ಆದಿಮ ಆವಾಸಸ್ಥಾನ’: ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸಲು ಸರ್ಕಾರಕ್ಕೆ ಸೂಚಿಸುವಂತೆ ಆಗ್ರಹಿಸಿದ ಪತ್ರ

- Advertisement -
- Advertisement -

ಗ್ರೇಟ್ ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡುವಂತೆ 87 ಮಾಜಿ ಅಧಿಕಾರಿಗಳ ಗುಂಪು ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ. ಈ ಯೋಜನೆಯು ಸ್ಥಳೀಯ ಸಮುದಾಯಗಳ ಭವಿಷ್ಯದ ಮೇಲೆ ಮತ್ತು ದ್ವೀಪದ ಪರಿಸರ ವ್ಯವಸ್ಥೆಯ ಬಗ್ಗೆ ಗಂಭೀರ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಅಡಿಯಲ್ಲಿ ಬರುವ ನೀತಿ ಆಯೋಗದ ನಿರ್ದೇಶನದ ಪ್ರಕಾರ, 35,000 ಕೋಟಿ ರೂಪಾಯಿಗಳ ಗ್ರೇಟ್ ನಿಕೋಬಾರ್ ಯೋಜನೆಯು 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯಲ್ಲಿ 130 ಚದರ ಕಿಮೀ ಪ್ರಾಥಮಿಕ ಅರಣ್ಯ ಸೇರಿದಂತೆ ಟ್ರಾನ್ಸ್-ಶಿಪ್‌ಮೆಂಟ್ ಬಂದರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರ, ಟೌನ್‌ಶಿಪ್ ಮತ್ತು  ಪ್ರವಾಸೋದ್ಯಮ ಮೂಲಸೌಕರ್ಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ. ನವೆಂಬರ್ 4 ರಂದು ಅಂತಿಮ ಪರಿಸರ ಅನುಮತಿಯನ್ನು ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಸರ್ಕಾರವು ದೇಶದ ಅತ್ಯಂತ ಪ್ರಾಚೀನ ಆವಾಸಸ್ಥಾನಗಳಲ್ಲಿ ಒಂದನ್ನು ನಾಶಮಾಡಲು ಸಿದ್ಧವಾಗಿದೆ. ಇದು ವಿವಿಧ ಅಪರೂಪದ ಮತ್ತು ಸ್ಥಳೀಯ ಪ್ರಭೇದಗಳಿಗೆ ನೆಲೆಯಾಗಿದೆ. ಜೊತೆಗೆ ಅತ್ಯಂತ ದುರ್ಬಲ ಬುಡಕಟ್ಟು ಸಮುದಾಯವಾದ ಗ್ರೇಟ್ ನಿಕೋಬಾರ್‌ನ ಶಾಂಪೆನ್ಸ್‌ನ ನೆಲೆಯಾಗಿದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. .

ಶಾಂಪೆನ್ ಬುಡಕಟ್ಟು ಸಮುದಾಯವನ್ನು ಸರ್ಕಾರವು “ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪು” ಎಂದು ಪಟ್ಟಿಮಾಡಿದೆ. ಈ ಸಮುದಾಯವು ಕೃಷಿ-ಪೂರ್ವ ಮಟ್ಟದ ತಂತ್ರಜ್ಞಾನ, ಕಡಿಮೆ ಮಟ್ಟದ ಸಾಕ್ಷರತೆ ಮತ್ತು ಕ್ಷೀಣಿಸುತ್ತಿರುವ ಅಥವಾ ನಿಶ್ಚಲವಾಗಿರುವ ಜನಸಂಖ್ಯೆಯಿಂದ ಕೂಡಿದೆ. ಶಾಂಪೆನ್ಸ್‌ ಸಮುದಾಯದ ಪ್ರದೇಶಕ್ಕೆ ಹೊರಗಿನವರು ಪದೇ ಪದೇ ಆಕ್ರಮಣ ಮಾಡಿದ್ದಾರೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು  ಹೇಳಿದ್ದಾರೆ.

“ಪರಿಶಿಷ್ಟ ಬುಡಕಟ್ಟುಗಳ ರಾಷ್ಟ್ರೀಯ ಆಯೋಗಕ್ಕೆ ಈ ವಿಷಯದ ಬಗ್ಗೆ ತಿಳಿದಿದೆ. ಜೊತೆಗೆ ಅಂತಹ ಹೇರಿಕೆಗಳನ್ನು ತಡೆಯಲು ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯ ಬಗ್ಗೆ ಗಮನ ಹರಿಸುವ ಬದಲು, ಸರ್ಕಾರವು ಈಗ ಆ ಸಮುದಾಯದ ಮೇಲೆ ದೊಡ್ಡ ಹೇರಿಕೆಯನ್ನು ಮಾಡಲು ಸಿದ್ಧವಾಗಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರೇಟ್ ನಿಕೋಬಾರ್‌ನ ಸುಮಾರು 853 ಚದರ ಕಿ.ಮೀ ಪ್ರದೇಶವನ್ನು ಅಂಡಮಾನ್ ಮತ್ತು ನಿಕೋಬಾರ್ ಪ್ರೊಟೆಕ್ಷನ್ ಆಫ್ ಅಬೊರಿಜಿನಲ್ ಟ್ರೈಬ್ಸ್ ರೆಗ್ಯುಲೇಶನ್-1956 ರ ಅಡಿಯಲ್ಲಿ, ‘ಬುಡಕಟ್ಟು ಮೀಸಲು’ ಎಂದು ಗೊತ್ತುಪಡಿಸಲಾಗಿದೆ. ಈ ಭೂಮಿ ಸಮುದಾಯದ ವಿಶೇಷ ಬಳಕೆಗೆ ಮೀಸಲಾಗಿದೆ ಮತ್ತು ಈ ಪ್ರದೇಶಕ್ಕೆ ಆಡಳಿತದ ಸ್ಪಷ್ಟ ಅನುಮತಿಯಿಲ್ಲದೆ ಪ್ರವೇಶಿಸಲು ಸಾಧ್ಯವಿಲ್ಲ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಹರ್ಯಾಣದಲ್ಲಿ ಪರಿಹಾರ ಅರಣ್ಯೀಕರಣ ಸೇರಿದಂತೆ ಕೆಲವು ಷರತ್ತುಗಳೊಂದಿಗೆ ನೀಡಿದ ಪರಿಸರ ಮತ್ತು ಕರಾವಳಿ ನಿಯಂತ್ರಣ ವಲಯದ ಅನುಮತಿಯ ಬಗ್ಗೆ ಕೂಡಾ ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದ ಅರಣ್ಯ ಸಂರಕ್ಷಣಾ ಕಾನೂನಿನ ಅಡಿಯಲ್ಲಿ, ಅಭಿವೃದ್ಧಿ ಅಥವಾ ಕೈಗಾರಿಕಾ ಯೋಜನೆಗಳಿಗಾಗಿ ಅರಣ್ಯಗಳನ್ನು ತೆರವುಗೊಳಿಸುವಾಗ, ಪರಿಸರ ನಷ್ಟವನ್ನು ಸರಿದೂಗಿಸಲು ಅರಣ್ಯೇತರ ಭೂಮಿಯ ಸಮಾನ ಪ್ರದೇಶದಲ್ಲಿ ಮರಗಳನ್ನು ನೆಡಬೇಕಾಗಿದೆ.

“ಗ್ರೇಟ್ ನಿಕೋಬಾರ್‌ನ ಪ್ರಾಚೀನ ಕಾಡುಗಳನ್ನು ಹರಿಯಾಣದಲ್ಲಿ ನೆಡುವ ಕಾಡುಗಳೊಂದಿಗೆ ಬದಲಾಯಿಸುವ ಕಲ್ಪನೆಯು ದೊಡ್ಡ ದುರಂತವಾಗಿದ್ದು, ಹಾಸ್ಯಾಸ್ಪದವಾಗಿದೆ. ಗ್ರೇಟ್‌ ನಿಕೋಬಾರ್‌ನ ಸುಮಾರು 13,075 ಎಕರೆ ಶ್ರೀಮಂತ, ನಿತ್ಯಹರಿದ್ವರ್ಣ, ಮಳೆಕಾಡುಗಳು ಅಸಾಧಾರಣ ಸಸ್ಯ ಮತ್ತು ಪ್ರಾಣಿ ಪ್ರಭೇದಗಳಿಂದ ತುಂಬಿವೆ. ಅದನ್ನು ಹರಿಯಾಣದ ಒಣ ಪ್ರದೇಶವಾದ ಅರಾವಳಿ ಬೆಟ್ಟಗಳಲ್ಲಿ ಹೊಸದಾಗಿ ನೆಟ್ಟು ಮರಗಳಿಗೆ ಪರಿಹಾರವನ್ನು ನೀಡಲಾಗುತ್ತದೆ” ಎಂದು ಪತ್ರದಲ್ಲಿ ಆಶ್ಚರ್ಯವ್ಯಕ್ತಪಡಿಸಲಾಗಿದೆ.

ಪತ್ರದಲ್ಲಿ, ಮಾಜಿ ಚುನಾವಣಾ ಆಯುಕ್ತ ಎಸ್‌.ವೈ. ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಭಾರತೀಯ ಆಡಳಿತ ಸೇವೆಗಳ ಮಾಜಿ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ಅರುಣಾ ರಾಯ್ ಸೇರಿದಂತೆ ಅನೇಕ ನಿವೃತ್ತ ನಾಗರಿಕ ಅಧಿಕಾರಿಗಳು ಸಹಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...