Homeಮುಖಪುಟ‘ಆದಿಮ ಆವಾಸಸ್ಥಾನ': ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

‘ಆದಿಮ ಆವಾಸಸ್ಥಾನ’: ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸಲು ಸರ್ಕಾರಕ್ಕೆ ಸೂಚಿಸುವಂತೆ ಆಗ್ರಹಿಸಿದ ಪತ್ರ

- Advertisement -
- Advertisement -

ಗ್ರೇಟ್ ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡುವಂತೆ 87 ಮಾಜಿ ಅಧಿಕಾರಿಗಳ ಗುಂಪು ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ. ಈ ಯೋಜನೆಯು ಸ್ಥಳೀಯ ಸಮುದಾಯಗಳ ಭವಿಷ್ಯದ ಮೇಲೆ ಮತ್ತು ದ್ವೀಪದ ಪರಿಸರ ವ್ಯವಸ್ಥೆಯ ಬಗ್ಗೆ ಗಂಭೀರ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಅಡಿಯಲ್ಲಿ ಬರುವ ನೀತಿ ಆಯೋಗದ ನಿರ್ದೇಶನದ ಪ್ರಕಾರ, 35,000 ಕೋಟಿ ರೂಪಾಯಿಗಳ ಗ್ರೇಟ್ ನಿಕೋಬಾರ್ ಯೋಜನೆಯು 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯಲ್ಲಿ 130 ಚದರ ಕಿಮೀ ಪ್ರಾಥಮಿಕ ಅರಣ್ಯ ಸೇರಿದಂತೆ ಟ್ರಾನ್ಸ್-ಶಿಪ್‌ಮೆಂಟ್ ಬಂದರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರ, ಟೌನ್‌ಶಿಪ್ ಮತ್ತು  ಪ್ರವಾಸೋದ್ಯಮ ಮೂಲಸೌಕರ್ಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ. ನವೆಂಬರ್ 4 ರಂದು ಅಂತಿಮ ಪರಿಸರ ಅನುಮತಿಯನ್ನು ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಸರ್ಕಾರವು ದೇಶದ ಅತ್ಯಂತ ಪ್ರಾಚೀನ ಆವಾಸಸ್ಥಾನಗಳಲ್ಲಿ ಒಂದನ್ನು ನಾಶಮಾಡಲು ಸಿದ್ಧವಾಗಿದೆ. ಇದು ವಿವಿಧ ಅಪರೂಪದ ಮತ್ತು ಸ್ಥಳೀಯ ಪ್ರಭೇದಗಳಿಗೆ ನೆಲೆಯಾಗಿದೆ. ಜೊತೆಗೆ ಅತ್ಯಂತ ದುರ್ಬಲ ಬುಡಕಟ್ಟು ಸಮುದಾಯವಾದ ಗ್ರೇಟ್ ನಿಕೋಬಾರ್‌ನ ಶಾಂಪೆನ್ಸ್‌ನ ನೆಲೆಯಾಗಿದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. .

ಶಾಂಪೆನ್ ಬುಡಕಟ್ಟು ಸಮುದಾಯವನ್ನು ಸರ್ಕಾರವು “ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪು” ಎಂದು ಪಟ್ಟಿಮಾಡಿದೆ. ಈ ಸಮುದಾಯವು ಕೃಷಿ-ಪೂರ್ವ ಮಟ್ಟದ ತಂತ್ರಜ್ಞಾನ, ಕಡಿಮೆ ಮಟ್ಟದ ಸಾಕ್ಷರತೆ ಮತ್ತು ಕ್ಷೀಣಿಸುತ್ತಿರುವ ಅಥವಾ ನಿಶ್ಚಲವಾಗಿರುವ ಜನಸಂಖ್ಯೆಯಿಂದ ಕೂಡಿದೆ. ಶಾಂಪೆನ್ಸ್‌ ಸಮುದಾಯದ ಪ್ರದೇಶಕ್ಕೆ ಹೊರಗಿನವರು ಪದೇ ಪದೇ ಆಕ್ರಮಣ ಮಾಡಿದ್ದಾರೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು  ಹೇಳಿದ್ದಾರೆ.

“ಪರಿಶಿಷ್ಟ ಬುಡಕಟ್ಟುಗಳ ರಾಷ್ಟ್ರೀಯ ಆಯೋಗಕ್ಕೆ ಈ ವಿಷಯದ ಬಗ್ಗೆ ತಿಳಿದಿದೆ. ಜೊತೆಗೆ ಅಂತಹ ಹೇರಿಕೆಗಳನ್ನು ತಡೆಯಲು ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯ ಬಗ್ಗೆ ಗಮನ ಹರಿಸುವ ಬದಲು, ಸರ್ಕಾರವು ಈಗ ಆ ಸಮುದಾಯದ ಮೇಲೆ ದೊಡ್ಡ ಹೇರಿಕೆಯನ್ನು ಮಾಡಲು ಸಿದ್ಧವಾಗಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರೇಟ್ ನಿಕೋಬಾರ್‌ನ ಸುಮಾರು 853 ಚದರ ಕಿ.ಮೀ ಪ್ರದೇಶವನ್ನು ಅಂಡಮಾನ್ ಮತ್ತು ನಿಕೋಬಾರ್ ಪ್ರೊಟೆಕ್ಷನ್ ಆಫ್ ಅಬೊರಿಜಿನಲ್ ಟ್ರೈಬ್ಸ್ ರೆಗ್ಯುಲೇಶನ್-1956 ರ ಅಡಿಯಲ್ಲಿ, ‘ಬುಡಕಟ್ಟು ಮೀಸಲು’ ಎಂದು ಗೊತ್ತುಪಡಿಸಲಾಗಿದೆ. ಈ ಭೂಮಿ ಸಮುದಾಯದ ವಿಶೇಷ ಬಳಕೆಗೆ ಮೀಸಲಾಗಿದೆ ಮತ್ತು ಈ ಪ್ರದೇಶಕ್ಕೆ ಆಡಳಿತದ ಸ್ಪಷ್ಟ ಅನುಮತಿಯಿಲ್ಲದೆ ಪ್ರವೇಶಿಸಲು ಸಾಧ್ಯವಿಲ್ಲ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಹರ್ಯಾಣದಲ್ಲಿ ಪರಿಹಾರ ಅರಣ್ಯೀಕರಣ ಸೇರಿದಂತೆ ಕೆಲವು ಷರತ್ತುಗಳೊಂದಿಗೆ ನೀಡಿದ ಪರಿಸರ ಮತ್ತು ಕರಾವಳಿ ನಿಯಂತ್ರಣ ವಲಯದ ಅನುಮತಿಯ ಬಗ್ಗೆ ಕೂಡಾ ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದ ಅರಣ್ಯ ಸಂರಕ್ಷಣಾ ಕಾನೂನಿನ ಅಡಿಯಲ್ಲಿ, ಅಭಿವೃದ್ಧಿ ಅಥವಾ ಕೈಗಾರಿಕಾ ಯೋಜನೆಗಳಿಗಾಗಿ ಅರಣ್ಯಗಳನ್ನು ತೆರವುಗೊಳಿಸುವಾಗ, ಪರಿಸರ ನಷ್ಟವನ್ನು ಸರಿದೂಗಿಸಲು ಅರಣ್ಯೇತರ ಭೂಮಿಯ ಸಮಾನ ಪ್ರದೇಶದಲ್ಲಿ ಮರಗಳನ್ನು ನೆಡಬೇಕಾಗಿದೆ.

“ಗ್ರೇಟ್ ನಿಕೋಬಾರ್‌ನ ಪ್ರಾಚೀನ ಕಾಡುಗಳನ್ನು ಹರಿಯಾಣದಲ್ಲಿ ನೆಡುವ ಕಾಡುಗಳೊಂದಿಗೆ ಬದಲಾಯಿಸುವ ಕಲ್ಪನೆಯು ದೊಡ್ಡ ದುರಂತವಾಗಿದ್ದು, ಹಾಸ್ಯಾಸ್ಪದವಾಗಿದೆ. ಗ್ರೇಟ್‌ ನಿಕೋಬಾರ್‌ನ ಸುಮಾರು 13,075 ಎಕರೆ ಶ್ರೀಮಂತ, ನಿತ್ಯಹರಿದ್ವರ್ಣ, ಮಳೆಕಾಡುಗಳು ಅಸಾಧಾರಣ ಸಸ್ಯ ಮತ್ತು ಪ್ರಾಣಿ ಪ್ರಭೇದಗಳಿಂದ ತುಂಬಿವೆ. ಅದನ್ನು ಹರಿಯಾಣದ ಒಣ ಪ್ರದೇಶವಾದ ಅರಾವಳಿ ಬೆಟ್ಟಗಳಲ್ಲಿ ಹೊಸದಾಗಿ ನೆಟ್ಟು ಮರಗಳಿಗೆ ಪರಿಹಾರವನ್ನು ನೀಡಲಾಗುತ್ತದೆ” ಎಂದು ಪತ್ರದಲ್ಲಿ ಆಶ್ಚರ್ಯವ್ಯಕ್ತಪಡಿಸಲಾಗಿದೆ.

ಪತ್ರದಲ್ಲಿ, ಮಾಜಿ ಚುನಾವಣಾ ಆಯುಕ್ತ ಎಸ್‌.ವೈ. ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಭಾರತೀಯ ಆಡಳಿತ ಸೇವೆಗಳ ಮಾಜಿ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ಅರುಣಾ ರಾಯ್ ಸೇರಿದಂತೆ ಅನೇಕ ನಿವೃತ್ತ ನಾಗರಿಕ ಅಧಿಕಾರಿಗಳು ಸಹಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...