Homeಮುಖಪುಟ‘ಆದಿಮ ಆವಾಸಸ್ಥಾನ': ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

‘ಆದಿಮ ಆವಾಸಸ್ಥಾನ’: ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸಲು ಸರ್ಕಾರಕ್ಕೆ ಸೂಚಿಸುವಂತೆ ಆಗ್ರಹಿಸಿದ ಪತ್ರ

- Advertisement -
- Advertisement -

ಗ್ರೇಟ್ ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡುವಂತೆ 87 ಮಾಜಿ ಅಧಿಕಾರಿಗಳ ಗುಂಪು ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ. ಈ ಯೋಜನೆಯು ಸ್ಥಳೀಯ ಸಮುದಾಯಗಳ ಭವಿಷ್ಯದ ಮೇಲೆ ಮತ್ತು ದ್ವೀಪದ ಪರಿಸರ ವ್ಯವಸ್ಥೆಯ ಬಗ್ಗೆ ಗಂಭೀರ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಅಡಿಯಲ್ಲಿ ಬರುವ ನೀತಿ ಆಯೋಗದ ನಿರ್ದೇಶನದ ಪ್ರಕಾರ, 35,000 ಕೋಟಿ ರೂಪಾಯಿಗಳ ಗ್ರೇಟ್ ನಿಕೋಬಾರ್ ಯೋಜನೆಯು 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯಲ್ಲಿ 130 ಚದರ ಕಿಮೀ ಪ್ರಾಥಮಿಕ ಅರಣ್ಯ ಸೇರಿದಂತೆ ಟ್ರಾನ್ಸ್-ಶಿಪ್‌ಮೆಂಟ್ ಬಂದರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರ, ಟೌನ್‌ಶಿಪ್ ಮತ್ತು  ಪ್ರವಾಸೋದ್ಯಮ ಮೂಲಸೌಕರ್ಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ. ನವೆಂಬರ್ 4 ರಂದು ಅಂತಿಮ ಪರಿಸರ ಅನುಮತಿಯನ್ನು ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಸರ್ಕಾರವು ದೇಶದ ಅತ್ಯಂತ ಪ್ರಾಚೀನ ಆವಾಸಸ್ಥಾನಗಳಲ್ಲಿ ಒಂದನ್ನು ನಾಶಮಾಡಲು ಸಿದ್ಧವಾಗಿದೆ. ಇದು ವಿವಿಧ ಅಪರೂಪದ ಮತ್ತು ಸ್ಥಳೀಯ ಪ್ರಭೇದಗಳಿಗೆ ನೆಲೆಯಾಗಿದೆ. ಜೊತೆಗೆ ಅತ್ಯಂತ ದುರ್ಬಲ ಬುಡಕಟ್ಟು ಸಮುದಾಯವಾದ ಗ್ರೇಟ್ ನಿಕೋಬಾರ್‌ನ ಶಾಂಪೆನ್ಸ್‌ನ ನೆಲೆಯಾಗಿದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. .

ಶಾಂಪೆನ್ ಬುಡಕಟ್ಟು ಸಮುದಾಯವನ್ನು ಸರ್ಕಾರವು “ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪು” ಎಂದು ಪಟ್ಟಿಮಾಡಿದೆ. ಈ ಸಮುದಾಯವು ಕೃಷಿ-ಪೂರ್ವ ಮಟ್ಟದ ತಂತ್ರಜ್ಞಾನ, ಕಡಿಮೆ ಮಟ್ಟದ ಸಾಕ್ಷರತೆ ಮತ್ತು ಕ್ಷೀಣಿಸುತ್ತಿರುವ ಅಥವಾ ನಿಶ್ಚಲವಾಗಿರುವ ಜನಸಂಖ್ಯೆಯಿಂದ ಕೂಡಿದೆ. ಶಾಂಪೆನ್ಸ್‌ ಸಮುದಾಯದ ಪ್ರದೇಶಕ್ಕೆ ಹೊರಗಿನವರು ಪದೇ ಪದೇ ಆಕ್ರಮಣ ಮಾಡಿದ್ದಾರೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು  ಹೇಳಿದ್ದಾರೆ.

“ಪರಿಶಿಷ್ಟ ಬುಡಕಟ್ಟುಗಳ ರಾಷ್ಟ್ರೀಯ ಆಯೋಗಕ್ಕೆ ಈ ವಿಷಯದ ಬಗ್ಗೆ ತಿಳಿದಿದೆ. ಜೊತೆಗೆ ಅಂತಹ ಹೇರಿಕೆಗಳನ್ನು ತಡೆಯಲು ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯ ಬಗ್ಗೆ ಗಮನ ಹರಿಸುವ ಬದಲು, ಸರ್ಕಾರವು ಈಗ ಆ ಸಮುದಾಯದ ಮೇಲೆ ದೊಡ್ಡ ಹೇರಿಕೆಯನ್ನು ಮಾಡಲು ಸಿದ್ಧವಾಗಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರೇಟ್ ನಿಕೋಬಾರ್‌ನ ಸುಮಾರು 853 ಚದರ ಕಿ.ಮೀ ಪ್ರದೇಶವನ್ನು ಅಂಡಮಾನ್ ಮತ್ತು ನಿಕೋಬಾರ್ ಪ್ರೊಟೆಕ್ಷನ್ ಆಫ್ ಅಬೊರಿಜಿನಲ್ ಟ್ರೈಬ್ಸ್ ರೆಗ್ಯುಲೇಶನ್-1956 ರ ಅಡಿಯಲ್ಲಿ, ‘ಬುಡಕಟ್ಟು ಮೀಸಲು’ ಎಂದು ಗೊತ್ತುಪಡಿಸಲಾಗಿದೆ. ಈ ಭೂಮಿ ಸಮುದಾಯದ ವಿಶೇಷ ಬಳಕೆಗೆ ಮೀಸಲಾಗಿದೆ ಮತ್ತು ಈ ಪ್ರದೇಶಕ್ಕೆ ಆಡಳಿತದ ಸ್ಪಷ್ಟ ಅನುಮತಿಯಿಲ್ಲದೆ ಪ್ರವೇಶಿಸಲು ಸಾಧ್ಯವಿಲ್ಲ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಹರ್ಯಾಣದಲ್ಲಿ ಪರಿಹಾರ ಅರಣ್ಯೀಕರಣ ಸೇರಿದಂತೆ ಕೆಲವು ಷರತ್ತುಗಳೊಂದಿಗೆ ನೀಡಿದ ಪರಿಸರ ಮತ್ತು ಕರಾವಳಿ ನಿಯಂತ್ರಣ ವಲಯದ ಅನುಮತಿಯ ಬಗ್ಗೆ ಕೂಡಾ ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದ ಅರಣ್ಯ ಸಂರಕ್ಷಣಾ ಕಾನೂನಿನ ಅಡಿಯಲ್ಲಿ, ಅಭಿವೃದ್ಧಿ ಅಥವಾ ಕೈಗಾರಿಕಾ ಯೋಜನೆಗಳಿಗಾಗಿ ಅರಣ್ಯಗಳನ್ನು ತೆರವುಗೊಳಿಸುವಾಗ, ಪರಿಸರ ನಷ್ಟವನ್ನು ಸರಿದೂಗಿಸಲು ಅರಣ್ಯೇತರ ಭೂಮಿಯ ಸಮಾನ ಪ್ರದೇಶದಲ್ಲಿ ಮರಗಳನ್ನು ನೆಡಬೇಕಾಗಿದೆ.

“ಗ್ರೇಟ್ ನಿಕೋಬಾರ್‌ನ ಪ್ರಾಚೀನ ಕಾಡುಗಳನ್ನು ಹರಿಯಾಣದಲ್ಲಿ ನೆಡುವ ಕಾಡುಗಳೊಂದಿಗೆ ಬದಲಾಯಿಸುವ ಕಲ್ಪನೆಯು ದೊಡ್ಡ ದುರಂತವಾಗಿದ್ದು, ಹಾಸ್ಯಾಸ್ಪದವಾಗಿದೆ. ಗ್ರೇಟ್‌ ನಿಕೋಬಾರ್‌ನ ಸುಮಾರು 13,075 ಎಕರೆ ಶ್ರೀಮಂತ, ನಿತ್ಯಹರಿದ್ವರ್ಣ, ಮಳೆಕಾಡುಗಳು ಅಸಾಧಾರಣ ಸಸ್ಯ ಮತ್ತು ಪ್ರಾಣಿ ಪ್ರಭೇದಗಳಿಂದ ತುಂಬಿವೆ. ಅದನ್ನು ಹರಿಯಾಣದ ಒಣ ಪ್ರದೇಶವಾದ ಅರಾವಳಿ ಬೆಟ್ಟಗಳಲ್ಲಿ ಹೊಸದಾಗಿ ನೆಟ್ಟು ಮರಗಳಿಗೆ ಪರಿಹಾರವನ್ನು ನೀಡಲಾಗುತ್ತದೆ” ಎಂದು ಪತ್ರದಲ್ಲಿ ಆಶ್ಚರ್ಯವ್ಯಕ್ತಪಡಿಸಲಾಗಿದೆ.

ಪತ್ರದಲ್ಲಿ, ಮಾಜಿ ಚುನಾವಣಾ ಆಯುಕ್ತ ಎಸ್‌.ವೈ. ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಭಾರತೀಯ ಆಡಳಿತ ಸೇವೆಗಳ ಮಾಜಿ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ಅರುಣಾ ರಾಯ್ ಸೇರಿದಂತೆ ಅನೇಕ ನಿವೃತ್ತ ನಾಗರಿಕ ಅಧಿಕಾರಿಗಳು ಸಹಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...