Homeಮುಖಪುಟ‘ಆದಿಮ ಆವಾಸಸ್ಥಾನ': ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

‘ಆದಿಮ ಆವಾಸಸ್ಥಾನ’: ಗ್ರೇಟ್ ನಿಕೋಬಾರ್ ಯೋಜನೆ ತಡೆಯುವಂತೆ ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ ಅಧಿಕಾರಿಗಳು

ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸಲು ಸರ್ಕಾರಕ್ಕೆ ಸೂಚಿಸುವಂತೆ ಆಗ್ರಹಿಸಿದ ಪತ್ರ

- Advertisement -
- Advertisement -

ಗ್ರೇಟ್ ನಿಕೋಬಾರ್ ದ್ವೀಪದಲ್ಲಿ 72,000 ಕೋಟಿ ರೂಪಾಯಿಗಳ ಬೃಹತ್ ಯೋಜನೆಯನ್ನು ತಕ್ಷಣವೇ ನಿಲ್ಲಿಸುವಂತೆ ಒಕ್ಕೂಟ ಸರ್ಕಾರಕ್ಕೆ ಸಲಹೆ ನೀಡುವಂತೆ 87 ಮಾಜಿ ಅಧಿಕಾರಿಗಳ ಗುಂಪು ಭಾನುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದೆ. ಈ ಯೋಜನೆಯು ಸ್ಥಳೀಯ ಸಮುದಾಯಗಳ ಭವಿಷ್ಯದ ಮೇಲೆ ಮತ್ತು ದ್ವೀಪದ ಪರಿಸರ ವ್ಯವಸ್ಥೆಯ ಬಗ್ಗೆ ಗಂಭೀರ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಅಡಿಯಲ್ಲಿ ಬರುವ ನೀತಿ ಆಯೋಗದ ನಿರ್ದೇಶನದ ಪ್ರಕಾರ, 35,000 ಕೋಟಿ ರೂಪಾಯಿಗಳ ಗ್ರೇಟ್ ನಿಕೋಬಾರ್ ಯೋಜನೆಯು 160 ಚದರ ಕಿಲೋಮೀಟರ್‌ಗಿಂತಲೂ ಹೆಚ್ಚು ಭೂಮಿಯಲ್ಲಿ 130 ಚದರ ಕಿಮೀ ಪ್ರಾಥಮಿಕ ಅರಣ್ಯ ಸೇರಿದಂತೆ ಟ್ರಾನ್ಸ್-ಶಿಪ್‌ಮೆಂಟ್ ಬಂದರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರ, ಟೌನ್‌ಶಿಪ್ ಮತ್ತು  ಪ್ರವಾಸೋದ್ಯಮ ಮೂಲಸೌಕರ್ಯಗಳ ನಿರ್ಮಾಣವನ್ನು ಒಳಗೊಂಡಿರುತ್ತದೆ. ನವೆಂಬರ್ 4 ರಂದು ಅಂತಿಮ ಪರಿಸರ ಅನುಮತಿಯನ್ನು ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತ ಸರ್ಕಾರವು ದೇಶದ ಅತ್ಯಂತ ಪ್ರಾಚೀನ ಆವಾಸಸ್ಥಾನಗಳಲ್ಲಿ ಒಂದನ್ನು ನಾಶಮಾಡಲು ಸಿದ್ಧವಾಗಿದೆ. ಇದು ವಿವಿಧ ಅಪರೂಪದ ಮತ್ತು ಸ್ಥಳೀಯ ಪ್ರಭೇದಗಳಿಗೆ ನೆಲೆಯಾಗಿದೆ. ಜೊತೆಗೆ ಅತ್ಯಂತ ದುರ್ಬಲ ಬುಡಕಟ್ಟು ಸಮುದಾಯವಾದ ಗ್ರೇಟ್ ನಿಕೋಬಾರ್‌ನ ಶಾಂಪೆನ್ಸ್‌ನ ನೆಲೆಯಾಗಿದೆ” ಎಂದು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. .

ಶಾಂಪೆನ್ ಬುಡಕಟ್ಟು ಸಮುದಾಯವನ್ನು ಸರ್ಕಾರವು “ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪು” ಎಂದು ಪಟ್ಟಿಮಾಡಿದೆ. ಈ ಸಮುದಾಯವು ಕೃಷಿ-ಪೂರ್ವ ಮಟ್ಟದ ತಂತ್ರಜ್ಞಾನ, ಕಡಿಮೆ ಮಟ್ಟದ ಸಾಕ್ಷರತೆ ಮತ್ತು ಕ್ಷೀಣಿಸುತ್ತಿರುವ ಅಥವಾ ನಿಶ್ಚಲವಾಗಿರುವ ಜನಸಂಖ್ಯೆಯಿಂದ ಕೂಡಿದೆ. ಶಾಂಪೆನ್ಸ್‌ ಸಮುದಾಯದ ಪ್ರದೇಶಕ್ಕೆ ಹೊರಗಿನವರು ಪದೇ ಪದೇ ಆಕ್ರಮಣ ಮಾಡಿದ್ದಾರೆ ಎಂದು ಪತ್ರದಲ್ಲಿ ಮಾಜಿ ಅಧಿಕಾರಿಗಳು  ಹೇಳಿದ್ದಾರೆ.

“ಪರಿಶಿಷ್ಟ ಬುಡಕಟ್ಟುಗಳ ರಾಷ್ಟ್ರೀಯ ಆಯೋಗಕ್ಕೆ ಈ ವಿಷಯದ ಬಗ್ಗೆ ತಿಳಿದಿದೆ. ಜೊತೆಗೆ ಅಂತಹ ಹೇರಿಕೆಗಳನ್ನು ತಡೆಯಲು ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯ ಬಗ್ಗೆ ಗಮನ ಹರಿಸುವ ಬದಲು, ಸರ್ಕಾರವು ಈಗ ಆ ಸಮುದಾಯದ ಮೇಲೆ ದೊಡ್ಡ ಹೇರಿಕೆಯನ್ನು ಮಾಡಲು ಸಿದ್ಧವಾಗಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಗ್ರೇಟ್ ನಿಕೋಬಾರ್‌ನ ಸುಮಾರು 853 ಚದರ ಕಿ.ಮೀ ಪ್ರದೇಶವನ್ನು ಅಂಡಮಾನ್ ಮತ್ತು ನಿಕೋಬಾರ್ ಪ್ರೊಟೆಕ್ಷನ್ ಆಫ್ ಅಬೊರಿಜಿನಲ್ ಟ್ರೈಬ್ಸ್ ರೆಗ್ಯುಲೇಶನ್-1956 ರ ಅಡಿಯಲ್ಲಿ, ‘ಬುಡಕಟ್ಟು ಮೀಸಲು’ ಎಂದು ಗೊತ್ತುಪಡಿಸಲಾಗಿದೆ. ಈ ಭೂಮಿ ಸಮುದಾಯದ ವಿಶೇಷ ಬಳಕೆಗೆ ಮೀಸಲಾಗಿದೆ ಮತ್ತು ಈ ಪ್ರದೇಶಕ್ಕೆ ಆಡಳಿತದ ಸ್ಪಷ್ಟ ಅನುಮತಿಯಿಲ್ಲದೆ ಪ್ರವೇಶಿಸಲು ಸಾಧ್ಯವಿಲ್ಲ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಹರ್ಯಾಣದಲ್ಲಿ ಪರಿಹಾರ ಅರಣ್ಯೀಕರಣ ಸೇರಿದಂತೆ ಕೆಲವು ಷರತ್ತುಗಳೊಂದಿಗೆ ನೀಡಿದ ಪರಿಸರ ಮತ್ತು ಕರಾವಳಿ ನಿಯಂತ್ರಣ ವಲಯದ ಅನುಮತಿಯ ಬಗ್ಗೆ ಕೂಡಾ ಮಾಜಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತದ ಅರಣ್ಯ ಸಂರಕ್ಷಣಾ ಕಾನೂನಿನ ಅಡಿಯಲ್ಲಿ, ಅಭಿವೃದ್ಧಿ ಅಥವಾ ಕೈಗಾರಿಕಾ ಯೋಜನೆಗಳಿಗಾಗಿ ಅರಣ್ಯಗಳನ್ನು ತೆರವುಗೊಳಿಸುವಾಗ, ಪರಿಸರ ನಷ್ಟವನ್ನು ಸರಿದೂಗಿಸಲು ಅರಣ್ಯೇತರ ಭೂಮಿಯ ಸಮಾನ ಪ್ರದೇಶದಲ್ಲಿ ಮರಗಳನ್ನು ನೆಡಬೇಕಾಗಿದೆ.

“ಗ್ರೇಟ್ ನಿಕೋಬಾರ್‌ನ ಪ್ರಾಚೀನ ಕಾಡುಗಳನ್ನು ಹರಿಯಾಣದಲ್ಲಿ ನೆಡುವ ಕಾಡುಗಳೊಂದಿಗೆ ಬದಲಾಯಿಸುವ ಕಲ್ಪನೆಯು ದೊಡ್ಡ ದುರಂತವಾಗಿದ್ದು, ಹಾಸ್ಯಾಸ್ಪದವಾಗಿದೆ. ಗ್ರೇಟ್‌ ನಿಕೋಬಾರ್‌ನ ಸುಮಾರು 13,075 ಎಕರೆ ಶ್ರೀಮಂತ, ನಿತ್ಯಹರಿದ್ವರ್ಣ, ಮಳೆಕಾಡುಗಳು ಅಸಾಧಾರಣ ಸಸ್ಯ ಮತ್ತು ಪ್ರಾಣಿ ಪ್ರಭೇದಗಳಿಂದ ತುಂಬಿವೆ. ಅದನ್ನು ಹರಿಯಾಣದ ಒಣ ಪ್ರದೇಶವಾದ ಅರಾವಳಿ ಬೆಟ್ಟಗಳಲ್ಲಿ ಹೊಸದಾಗಿ ನೆಟ್ಟು ಮರಗಳಿಗೆ ಪರಿಹಾರವನ್ನು ನೀಡಲಾಗುತ್ತದೆ” ಎಂದು ಪತ್ರದಲ್ಲಿ ಆಶ್ಚರ್ಯವ್ಯಕ್ತಪಡಿಸಲಾಗಿದೆ.

ಪತ್ರದಲ್ಲಿ, ಮಾಜಿ ಚುನಾವಣಾ ಆಯುಕ್ತ ಎಸ್‌.ವೈ. ಖುರೈಶಿ, ಮಾಜಿ ಮುಖ್ಯ ಮಾಹಿತಿ ಆಯುಕ್ತ ವಜಾಹತ್ ಹಬೀಬುಲ್ಲಾ, ಭಾರತೀಯ ಆಡಳಿತ ಸೇವೆಗಳ ಮಾಜಿ ಅಧಿಕಾರಿಗಳಾದ ಹರ್ಷ್ ಮಂದರ್, ಜೂಲಿಯೊ ರಿಬೇರೊ ಮತ್ತು ಅರುಣಾ ರಾಯ್ ಸೇರಿದಂತೆ ಅನೇಕ ನಿವೃತ್ತ ನಾಗರಿಕ ಅಧಿಕಾರಿಗಳು ಸಹಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಅರಣ್ಯ ಭೂಮಿಯ ಅಕ್ರಮ ಡಿ-ನೋಟಿಫಿಕೇಶನ್; ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳ ವಿರುದ್ಧ ಪರಿಸರ ಸಚಿವಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...